Homeಮುಖಪುಟಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್ ಉದಮ್ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ ವಿವರಿಸಿದ್ದಾರೆ.

- Advertisement -
- Advertisement -

ಸಿನಿಮಾ ಕ್ಷೇತ್ರದ ಪ್ರತಿಷ್ಠತ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಗೆ ಭಾರತದಿಂದ ತಮಿಳಿನ ಕೂಜಂಗಲ್‌ ಸಿನಿಮಾವನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಕ್ಕಿ ಕೌಶಲ್‌ ನಟನೆಯ ಸರ್ದಾರ್‌ ಉಧಮ್ ಸಿನಿಮಾವು ಇತ್ತು. ಆದರೆ ಈ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ವಿವರಿಸಿರುವ ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ, ’ಈ ಸಿನಿಮಾವು ಬ್ರಿಟಿಷರ ಮೇಲಿನ ನಮ್ಮ ದ್ವೇಷವನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷದ ಆಸ್ಕರ್‌ ಪ್ರಶಸ್ತಿಗೆ ಸಿನಿಮಾಗಳ ಅಧಿಕೃತ ಪ್ರವೇಶವನ್ನು ನಿರ್ಧರಿಸಿದ ಜ್ಯೂರಿ ಸದಸ್ಯರಾದ ಇಂದ್ರದೀಪ್‌ ದಾಸ್‌ಗುಪ್ತ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ, ’ಸರ್ದಾರ್ ಉಧಮ್’ ಸಿನಿಮಾದಲ್ಲಿ ಜಲಿಯನ್‌ ವಾಲಾಬಾಗ್‌ ಘಟನೆಯೂ ದೀರ್ಘವಾಗಿದ್ದು, ಹೆಚ್ಚು ಎಳೆಯಲಾಗಿದೆ. ಭಾರತೀಯ ಸ್ವಾತಂತ್ಯ್ರ ಹೋರಾಟದ ಅಸಾಧಾರಣ ನಾಯಕನ ಮೇಲೆ ಅದ್ದೂರಿ ಚಿತ್ರ ನಿರ್ಮಿಸುವುದು ಪ್ರಾಮಾಣಿಕ ಪ್ರಯತ್ನ. ಆದರೆ ಈ ಪ್ರಕ್ರಿಯೆಯಲ್ಲಿ ಮತ್ತೆ ಬ್ರಿಟಿಷರ ಮೇಲೆ ನಮ್ಮ ದ್ವೇಷವನ್ನು ಬಿಂಬಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ ದ್ವೇಷವನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಸರ್ದಾರ್ ಉಧಮ್ ಸಿನಿಮಾ; ಪ್ರಭುತ್ವದ ಹಿಂಸೆಗೆ ಪ್ರತಿಯಾಗಿ ಕ್ರಾಂತಿಕಾರಿ ಮಾರ್ಗ ತುಳಿದ ಯುವಕನ ಕಥೆ


ಉಧಮ್ ಸಿಂಗ್‌ ಸಿನಿಮಾ ಬಗ್ಗೆ ಮಾತನಾಡಿರುವ ಅವರು ಚಿತ್ರದ ಛಾಯಾಗ್ರಹಣಣವನ್ನೂ ಶ್ಲಾಘಿಸಿದ್ದು, ‘ಸಿನಿಮಾ ನಿರ್ಮಾಣವು ಅಂತರಾಷ್ಟ್ರೀಯ ಗುಣಮಟ್ಟಕೆ ಅನುಗುಣವಾಗಿದೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಧಮ್ ಸಿನಿಮಾ ಪ್ರೇಮಿಗಳು ಸತ್ಯ ಯಾವಾಗಲೂ ಕಹಿಯಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಜ್ಯೂರಿಯ ಮತ್ತೊಬ್ಬ ಸದಸ್ಯರಾದ ಸುಮಿತ್‌ ಬಸು ಮಾತನಾಡಿ, ’ಉಧಮ್ ಸಿನಿಮಾದಲ್ಲಿನ ಛಾಯಾಗ್ರಹಣ, ಸಂಕಲನ, ಧ್ವನಿ ವಿನ್ಯಾಸ ಮತ್ತು ಆ ಕಾಲಘಟ್ಟದ ಚಿತ್ರಣ ಸೇರಿದಂತೆ ಸಿನಿಮಾದ ಗುಣಮಟ್ಟಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟ ಪಟ್ಟಿದ್ದಾರೆ. ಈ ಸಿನಿಮಾವೂ ದೀರ್ಘವಾಗಿರುವುದೇ ಸಮಸ್ಯೆ ಎಂದು ನಾನು ಭಾವಿಸಿದೆ. ಈ ಸಿನಿಮಾವು ತುಂಬಾ ತಡವಾದ ಕ್ಲೈಮ್ಯಾಕ್ಸ್‌ ಹೊಂದಿದ್ದು, ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಹುತಾತ್ಮರಾದ ನೋವನ್ನು ಅನುಭವಿಸಲು ವೀಕ್ಷಕನಿಗೆ ಸಾಕಷ್ಟು ಸಮಯ ಬೇಕಾಗುತ್ತದೆ’ ಎಂದಿದ್ದಾರೆ.

ಶೂಜಿತ್‌ ಸಿರ್ಕಾರ್‌ ನಿರ್ದೇಶನದ ಸರ್ದಾರ್‌ ಉಧಮ್‌ ಸಿನಿಮಾವು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಮೈಕೇಲ್‌ ಓ ಡಯರ್‌ನನ್ನು ಕೊಂದ ಸ್ವಾತಂತ್ಯ್ರ ಹೋರಾಟಗಾರ ಸರ್ದಾರ್‌ ಉದಾಮ್‌ ಸಿಂಗ್‌ ಅವರ ಜೀವನ ಮತ್ತು ಹೋರಾಟಗಳನ್ನು ಚಿತ್ರಿಸಿದೆ. ಲಂಡನ್‌ನ ಕ್ಯಾಕ್ಸ್‌ಟನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಈಸ್ಟ್‌ ಇಂಡಿಯಾ ಅಸೋಸಿಯೇಷನ್‌ ಮತ್ತು ಸೆಂಟ್ರಲ್‌ ಏಷ್ಯನ್‌ ಸೊಸೈಟಿಯ ಜಂಟಿ ಸಭೆಯಲ್ಲಿ ಉದಮ್ ಸಿಂಗ್ ಡಯರ್‌ಗೆ ಗುಂಡು ಹಾರಿಸಿದ್ದರು.

ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಸಿನಿಮಾವನ್ನು ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಆಯ್ಕೆ ಮಾಡುತ್ತದೆ. ಈ ವರ್ಷ 15 ಸದಸ್ಯರಿರುವ ಜ್ಯೂರಿಗೆ ಚಲನಚಿತ್ರ ನಿರ್ಮಾಪಕ ಶಾಜಿ ಎನ್. ಕರುಣ್‌ ನೇತೃತ್ವ ವಹಿಸಿದ್ದರು. 94ನೇ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಯಲ್ಲಿ ಸ್ಫರ್ಧಿಸಲು ಭಾರತದಿಂದ ತಮಿಳು ಭಾಷೆಯ ’ಕೂಜಂಗಲ್‌ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಮಲಯಾಳಂನ ‘ನಾಯಟ್ಟು’, ವಿದ್ಯಾ ಬಾಲನ್​ ನಟನೆಯ ‘ಶೇರ್ನಿ’, ಯೋಗಿ ಬಾಬು ಅಭಿನಯದ ತಮಿಳಿನ ‘ಮಂಡೆಲಾ’ ‘ಕೂಜಂಗಲ್’, ಅಸ್ಸಾಮಿ ಭಾಷೆಯ ‘ಬ್ರಿಡ್ಜ್​’, ಗುಜರಾತಿಯ ‘ಚೆಲ್ಲೋ ಶೋ’ ಸೇರಿದಂತೆ ಒಟ್ಟು 14 ಸಿನಿಮಾಗಳು ಸ್ಪರ್ಧೆಯಲ್ಲಿದ್ದವು.


ಇದನ್ನೂ ಓದಿ: ಸರ್ದಾರ್ ಉಧಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....