Homeಮುಖಪುಟಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್ ಉದಮ್ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ ವಿವರಿಸಿದ್ದಾರೆ.

- Advertisement -
- Advertisement -

ಸಿನಿಮಾ ಕ್ಷೇತ್ರದ ಪ್ರತಿಷ್ಠತ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಗೆ ಭಾರತದಿಂದ ತಮಿಳಿನ ಕೂಜಂಗಲ್‌ ಸಿನಿಮಾವನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಕ್ಕಿ ಕೌಶಲ್‌ ನಟನೆಯ ಸರ್ದಾರ್‌ ಉಧಮ್ ಸಿನಿಮಾವು ಇತ್ತು. ಆದರೆ ಈ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ವಿವರಿಸಿರುವ ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ, ’ಈ ಸಿನಿಮಾವು ಬ್ರಿಟಿಷರ ಮೇಲಿನ ನಮ್ಮ ದ್ವೇಷವನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷದ ಆಸ್ಕರ್‌ ಪ್ರಶಸ್ತಿಗೆ ಸಿನಿಮಾಗಳ ಅಧಿಕೃತ ಪ್ರವೇಶವನ್ನು ನಿರ್ಧರಿಸಿದ ಜ್ಯೂರಿ ಸದಸ್ಯರಾದ ಇಂದ್ರದೀಪ್‌ ದಾಸ್‌ಗುಪ್ತ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ, ’ಸರ್ದಾರ್ ಉಧಮ್’ ಸಿನಿಮಾದಲ್ಲಿ ಜಲಿಯನ್‌ ವಾಲಾಬಾಗ್‌ ಘಟನೆಯೂ ದೀರ್ಘವಾಗಿದ್ದು, ಹೆಚ್ಚು ಎಳೆಯಲಾಗಿದೆ. ಭಾರತೀಯ ಸ್ವಾತಂತ್ಯ್ರ ಹೋರಾಟದ ಅಸಾಧಾರಣ ನಾಯಕನ ಮೇಲೆ ಅದ್ದೂರಿ ಚಿತ್ರ ನಿರ್ಮಿಸುವುದು ಪ್ರಾಮಾಣಿಕ ಪ್ರಯತ್ನ. ಆದರೆ ಈ ಪ್ರಕ್ರಿಯೆಯಲ್ಲಿ ಮತ್ತೆ ಬ್ರಿಟಿಷರ ಮೇಲೆ ನಮ್ಮ ದ್ವೇಷವನ್ನು ಬಿಂಬಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ ದ್ವೇಷವನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಸರ್ದಾರ್ ಉಧಮ್ ಸಿನಿಮಾ; ಪ್ರಭುತ್ವದ ಹಿಂಸೆಗೆ ಪ್ರತಿಯಾಗಿ ಕ್ರಾಂತಿಕಾರಿ ಮಾರ್ಗ ತುಳಿದ ಯುವಕನ ಕಥೆ


ಉಧಮ್ ಸಿಂಗ್‌ ಸಿನಿಮಾ ಬಗ್ಗೆ ಮಾತನಾಡಿರುವ ಅವರು ಚಿತ್ರದ ಛಾಯಾಗ್ರಹಣಣವನ್ನೂ ಶ್ಲಾಘಿಸಿದ್ದು, ‘ಸಿನಿಮಾ ನಿರ್ಮಾಣವು ಅಂತರಾಷ್ಟ್ರೀಯ ಗುಣಮಟ್ಟಕೆ ಅನುಗುಣವಾಗಿದೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಧಮ್ ಸಿನಿಮಾ ಪ್ರೇಮಿಗಳು ಸತ್ಯ ಯಾವಾಗಲೂ ಕಹಿಯಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಜ್ಯೂರಿಯ ಮತ್ತೊಬ್ಬ ಸದಸ್ಯರಾದ ಸುಮಿತ್‌ ಬಸು ಮಾತನಾಡಿ, ’ಉಧಮ್ ಸಿನಿಮಾದಲ್ಲಿನ ಛಾಯಾಗ್ರಹಣ, ಸಂಕಲನ, ಧ್ವನಿ ವಿನ್ಯಾಸ ಮತ್ತು ಆ ಕಾಲಘಟ್ಟದ ಚಿತ್ರಣ ಸೇರಿದಂತೆ ಸಿನಿಮಾದ ಗುಣಮಟ್ಟಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟ ಪಟ್ಟಿದ್ದಾರೆ. ಈ ಸಿನಿಮಾವೂ ದೀರ್ಘವಾಗಿರುವುದೇ ಸಮಸ್ಯೆ ಎಂದು ನಾನು ಭಾವಿಸಿದೆ. ಈ ಸಿನಿಮಾವು ತುಂಬಾ ತಡವಾದ ಕ್ಲೈಮ್ಯಾಕ್ಸ್‌ ಹೊಂದಿದ್ದು, ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಹುತಾತ್ಮರಾದ ನೋವನ್ನು ಅನುಭವಿಸಲು ವೀಕ್ಷಕನಿಗೆ ಸಾಕಷ್ಟು ಸಮಯ ಬೇಕಾಗುತ್ತದೆ’ ಎಂದಿದ್ದಾರೆ.

ಶೂಜಿತ್‌ ಸಿರ್ಕಾರ್‌ ನಿರ್ದೇಶನದ ಸರ್ದಾರ್‌ ಉಧಮ್‌ ಸಿನಿಮಾವು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಮೈಕೇಲ್‌ ಓ ಡಯರ್‌ನನ್ನು ಕೊಂದ ಸ್ವಾತಂತ್ಯ್ರ ಹೋರಾಟಗಾರ ಸರ್ದಾರ್‌ ಉದಾಮ್‌ ಸಿಂಗ್‌ ಅವರ ಜೀವನ ಮತ್ತು ಹೋರಾಟಗಳನ್ನು ಚಿತ್ರಿಸಿದೆ. ಲಂಡನ್‌ನ ಕ್ಯಾಕ್ಸ್‌ಟನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಈಸ್ಟ್‌ ಇಂಡಿಯಾ ಅಸೋಸಿಯೇಷನ್‌ ಮತ್ತು ಸೆಂಟ್ರಲ್‌ ಏಷ್ಯನ್‌ ಸೊಸೈಟಿಯ ಜಂಟಿ ಸಭೆಯಲ್ಲಿ ಉದಮ್ ಸಿಂಗ್ ಡಯರ್‌ಗೆ ಗುಂಡು ಹಾರಿಸಿದ್ದರು.

ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಸಿನಿಮಾವನ್ನು ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಆಯ್ಕೆ ಮಾಡುತ್ತದೆ. ಈ ವರ್ಷ 15 ಸದಸ್ಯರಿರುವ ಜ್ಯೂರಿಗೆ ಚಲನಚಿತ್ರ ನಿರ್ಮಾಪಕ ಶಾಜಿ ಎನ್. ಕರುಣ್‌ ನೇತೃತ್ವ ವಹಿಸಿದ್ದರು. 94ನೇ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಯಲ್ಲಿ ಸ್ಫರ್ಧಿಸಲು ಭಾರತದಿಂದ ತಮಿಳು ಭಾಷೆಯ ’ಕೂಜಂಗಲ್‌ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಮಲಯಾಳಂನ ‘ನಾಯಟ್ಟು’, ವಿದ್ಯಾ ಬಾಲನ್​ ನಟನೆಯ ‘ಶೇರ್ನಿ’, ಯೋಗಿ ಬಾಬು ಅಭಿನಯದ ತಮಿಳಿನ ‘ಮಂಡೆಲಾ’ ‘ಕೂಜಂಗಲ್’, ಅಸ್ಸಾಮಿ ಭಾಷೆಯ ‘ಬ್ರಿಡ್ಜ್​’, ಗುಜರಾತಿಯ ‘ಚೆಲ್ಲೋ ಶೋ’ ಸೇರಿದಂತೆ ಒಟ್ಟು 14 ಸಿನಿಮಾಗಳು ಸ್ಪರ್ಧೆಯಲ್ಲಿದ್ದವು.


ಇದನ್ನೂ ಓದಿ: ಸರ್ದಾರ್ ಉಧಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...