Homeಮುಖಪುಟಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್ ಉದಮ್ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ ವಿವರಿಸಿದ್ದಾರೆ.

- Advertisement -
- Advertisement -

ಸಿನಿಮಾ ಕ್ಷೇತ್ರದ ಪ್ರತಿಷ್ಠತ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಗೆ ಭಾರತದಿಂದ ತಮಿಳಿನ ಕೂಜಂಗಲ್‌ ಸಿನಿಮಾವನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಕ್ಕಿ ಕೌಶಲ್‌ ನಟನೆಯ ಸರ್ದಾರ್‌ ಉಧಮ್ ಸಿನಿಮಾವು ಇತ್ತು. ಆದರೆ ಈ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ವಿವರಿಸಿರುವ ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ, ’ಈ ಸಿನಿಮಾವು ಬ್ರಿಟಿಷರ ಮೇಲಿನ ನಮ್ಮ ದ್ವೇಷವನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷದ ಆಸ್ಕರ್‌ ಪ್ರಶಸ್ತಿಗೆ ಸಿನಿಮಾಗಳ ಅಧಿಕೃತ ಪ್ರವೇಶವನ್ನು ನಿರ್ಧರಿಸಿದ ಜ್ಯೂರಿ ಸದಸ್ಯರಾದ ಇಂದ್ರದೀಪ್‌ ದಾಸ್‌ಗುಪ್ತ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ, ’ಸರ್ದಾರ್ ಉಧಮ್’ ಸಿನಿಮಾದಲ್ಲಿ ಜಲಿಯನ್‌ ವಾಲಾಬಾಗ್‌ ಘಟನೆಯೂ ದೀರ್ಘವಾಗಿದ್ದು, ಹೆಚ್ಚು ಎಳೆಯಲಾಗಿದೆ. ಭಾರತೀಯ ಸ್ವಾತಂತ್ಯ್ರ ಹೋರಾಟದ ಅಸಾಧಾರಣ ನಾಯಕನ ಮೇಲೆ ಅದ್ದೂರಿ ಚಿತ್ರ ನಿರ್ಮಿಸುವುದು ಪ್ರಾಮಾಣಿಕ ಪ್ರಯತ್ನ. ಆದರೆ ಈ ಪ್ರಕ್ರಿಯೆಯಲ್ಲಿ ಮತ್ತೆ ಬ್ರಿಟಿಷರ ಮೇಲೆ ನಮ್ಮ ದ್ವೇಷವನ್ನು ಬಿಂಬಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ ದ್ವೇಷವನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಸರ್ದಾರ್ ಉಧಮ್ ಸಿನಿಮಾ; ಪ್ರಭುತ್ವದ ಹಿಂಸೆಗೆ ಪ್ರತಿಯಾಗಿ ಕ್ರಾಂತಿಕಾರಿ ಮಾರ್ಗ ತುಳಿದ ಯುವಕನ ಕಥೆ


ಉಧಮ್ ಸಿಂಗ್‌ ಸಿನಿಮಾ ಬಗ್ಗೆ ಮಾತನಾಡಿರುವ ಅವರು ಚಿತ್ರದ ಛಾಯಾಗ್ರಹಣಣವನ್ನೂ ಶ್ಲಾಘಿಸಿದ್ದು, ‘ಸಿನಿಮಾ ನಿರ್ಮಾಣವು ಅಂತರಾಷ್ಟ್ರೀಯ ಗುಣಮಟ್ಟಕೆ ಅನುಗುಣವಾಗಿದೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಧಮ್ ಸಿನಿಮಾ ಪ್ರೇಮಿಗಳು ಸತ್ಯ ಯಾವಾಗಲೂ ಕಹಿಯಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಜ್ಯೂರಿಯ ಮತ್ತೊಬ್ಬ ಸದಸ್ಯರಾದ ಸುಮಿತ್‌ ಬಸು ಮಾತನಾಡಿ, ’ಉಧಮ್ ಸಿನಿಮಾದಲ್ಲಿನ ಛಾಯಾಗ್ರಹಣ, ಸಂಕಲನ, ಧ್ವನಿ ವಿನ್ಯಾಸ ಮತ್ತು ಆ ಕಾಲಘಟ್ಟದ ಚಿತ್ರಣ ಸೇರಿದಂತೆ ಸಿನಿಮಾದ ಗುಣಮಟ್ಟಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟ ಪಟ್ಟಿದ್ದಾರೆ. ಈ ಸಿನಿಮಾವೂ ದೀರ್ಘವಾಗಿರುವುದೇ ಸಮಸ್ಯೆ ಎಂದು ನಾನು ಭಾವಿಸಿದೆ. ಈ ಸಿನಿಮಾವು ತುಂಬಾ ತಡವಾದ ಕ್ಲೈಮ್ಯಾಕ್ಸ್‌ ಹೊಂದಿದ್ದು, ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಹುತಾತ್ಮರಾದ ನೋವನ್ನು ಅನುಭವಿಸಲು ವೀಕ್ಷಕನಿಗೆ ಸಾಕಷ್ಟು ಸಮಯ ಬೇಕಾಗುತ್ತದೆ’ ಎಂದಿದ್ದಾರೆ.

ಶೂಜಿತ್‌ ಸಿರ್ಕಾರ್‌ ನಿರ್ದೇಶನದ ಸರ್ದಾರ್‌ ಉಧಮ್‌ ಸಿನಿಮಾವು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಮೈಕೇಲ್‌ ಓ ಡಯರ್‌ನನ್ನು ಕೊಂದ ಸ್ವಾತಂತ್ಯ್ರ ಹೋರಾಟಗಾರ ಸರ್ದಾರ್‌ ಉದಾಮ್‌ ಸಿಂಗ್‌ ಅವರ ಜೀವನ ಮತ್ತು ಹೋರಾಟಗಳನ್ನು ಚಿತ್ರಿಸಿದೆ. ಲಂಡನ್‌ನ ಕ್ಯಾಕ್ಸ್‌ಟನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಈಸ್ಟ್‌ ಇಂಡಿಯಾ ಅಸೋಸಿಯೇಷನ್‌ ಮತ್ತು ಸೆಂಟ್ರಲ್‌ ಏಷ್ಯನ್‌ ಸೊಸೈಟಿಯ ಜಂಟಿ ಸಭೆಯಲ್ಲಿ ಉದಮ್ ಸಿಂಗ್ ಡಯರ್‌ಗೆ ಗುಂಡು ಹಾರಿಸಿದ್ದರು.

ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಸಿನಿಮಾವನ್ನು ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಆಯ್ಕೆ ಮಾಡುತ್ತದೆ. ಈ ವರ್ಷ 15 ಸದಸ್ಯರಿರುವ ಜ್ಯೂರಿಗೆ ಚಲನಚಿತ್ರ ನಿರ್ಮಾಪಕ ಶಾಜಿ ಎನ್. ಕರುಣ್‌ ನೇತೃತ್ವ ವಹಿಸಿದ್ದರು. 94ನೇ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಯಲ್ಲಿ ಸ್ಫರ್ಧಿಸಲು ಭಾರತದಿಂದ ತಮಿಳು ಭಾಷೆಯ ’ಕೂಜಂಗಲ್‌ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಮಲಯಾಳಂನ ‘ನಾಯಟ್ಟು’, ವಿದ್ಯಾ ಬಾಲನ್​ ನಟನೆಯ ‘ಶೇರ್ನಿ’, ಯೋಗಿ ಬಾಬು ಅಭಿನಯದ ತಮಿಳಿನ ‘ಮಂಡೆಲಾ’ ‘ಕೂಜಂಗಲ್’, ಅಸ್ಸಾಮಿ ಭಾಷೆಯ ‘ಬ್ರಿಡ್ಜ್​’, ಗುಜರಾತಿಯ ‘ಚೆಲ್ಲೋ ಶೋ’ ಸೇರಿದಂತೆ ಒಟ್ಟು 14 ಸಿನಿಮಾಗಳು ಸ್ಪರ್ಧೆಯಲ್ಲಿದ್ದವು.


ಇದನ್ನೂ ಓದಿ: ಸರ್ದಾರ್ ಉಧಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...