Homeಮುಖಪುಟಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್ ಉದಮ್ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ ವಿವರಿಸಿದ್ದಾರೆ.

- Advertisement -
- Advertisement -

ಸಿನಿಮಾ ಕ್ಷೇತ್ರದ ಪ್ರತಿಷ್ಠತ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಗೆ ಭಾರತದಿಂದ ತಮಿಳಿನ ಕೂಜಂಗಲ್‌ ಸಿನಿಮಾವನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಕ್ಕಿ ಕೌಶಲ್‌ ನಟನೆಯ ಸರ್ದಾರ್‌ ಉಧಮ್ ಸಿನಿಮಾವು ಇತ್ತು. ಆದರೆ ಈ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ವಿವರಿಸಿರುವ ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ, ’ಈ ಸಿನಿಮಾವು ಬ್ರಿಟಿಷರ ಮೇಲಿನ ನಮ್ಮ ದ್ವೇಷವನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷದ ಆಸ್ಕರ್‌ ಪ್ರಶಸ್ತಿಗೆ ಸಿನಿಮಾಗಳ ಅಧಿಕೃತ ಪ್ರವೇಶವನ್ನು ನಿರ್ಧರಿಸಿದ ಜ್ಯೂರಿ ಸದಸ್ಯರಾದ ಇಂದ್ರದೀಪ್‌ ದಾಸ್‌ಗುಪ್ತ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ, ’ಸರ್ದಾರ್ ಉಧಮ್’ ಸಿನಿಮಾದಲ್ಲಿ ಜಲಿಯನ್‌ ವಾಲಾಬಾಗ್‌ ಘಟನೆಯೂ ದೀರ್ಘವಾಗಿದ್ದು, ಹೆಚ್ಚು ಎಳೆಯಲಾಗಿದೆ. ಭಾರತೀಯ ಸ್ವಾತಂತ್ಯ್ರ ಹೋರಾಟದ ಅಸಾಧಾರಣ ನಾಯಕನ ಮೇಲೆ ಅದ್ದೂರಿ ಚಿತ್ರ ನಿರ್ಮಿಸುವುದು ಪ್ರಾಮಾಣಿಕ ಪ್ರಯತ್ನ. ಆದರೆ ಈ ಪ್ರಕ್ರಿಯೆಯಲ್ಲಿ ಮತ್ತೆ ಬ್ರಿಟಿಷರ ಮೇಲೆ ನಮ್ಮ ದ್ವೇಷವನ್ನು ಬಿಂಬಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ ದ್ವೇಷವನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಸರ್ದಾರ್ ಉಧಮ್ ಸಿನಿಮಾ; ಪ್ರಭುತ್ವದ ಹಿಂಸೆಗೆ ಪ್ರತಿಯಾಗಿ ಕ್ರಾಂತಿಕಾರಿ ಮಾರ್ಗ ತುಳಿದ ಯುವಕನ ಕಥೆ


ಉಧಮ್ ಸಿಂಗ್‌ ಸಿನಿಮಾ ಬಗ್ಗೆ ಮಾತನಾಡಿರುವ ಅವರು ಚಿತ್ರದ ಛಾಯಾಗ್ರಹಣಣವನ್ನೂ ಶ್ಲಾಘಿಸಿದ್ದು, ‘ಸಿನಿಮಾ ನಿರ್ಮಾಣವು ಅಂತರಾಷ್ಟ್ರೀಯ ಗುಣಮಟ್ಟಕೆ ಅನುಗುಣವಾಗಿದೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಧಮ್ ಸಿನಿಮಾ ಪ್ರೇಮಿಗಳು ಸತ್ಯ ಯಾವಾಗಲೂ ಕಹಿಯಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಜ್ಯೂರಿಯ ಮತ್ತೊಬ್ಬ ಸದಸ್ಯರಾದ ಸುಮಿತ್‌ ಬಸು ಮಾತನಾಡಿ, ’ಉಧಮ್ ಸಿನಿಮಾದಲ್ಲಿನ ಛಾಯಾಗ್ರಹಣ, ಸಂಕಲನ, ಧ್ವನಿ ವಿನ್ಯಾಸ ಮತ್ತು ಆ ಕಾಲಘಟ್ಟದ ಚಿತ್ರಣ ಸೇರಿದಂತೆ ಸಿನಿಮಾದ ಗುಣಮಟ್ಟಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟ ಪಟ್ಟಿದ್ದಾರೆ. ಈ ಸಿನಿಮಾವೂ ದೀರ್ಘವಾಗಿರುವುದೇ ಸಮಸ್ಯೆ ಎಂದು ನಾನು ಭಾವಿಸಿದೆ. ಈ ಸಿನಿಮಾವು ತುಂಬಾ ತಡವಾದ ಕ್ಲೈಮ್ಯಾಕ್ಸ್‌ ಹೊಂದಿದ್ದು, ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಹುತಾತ್ಮರಾದ ನೋವನ್ನು ಅನುಭವಿಸಲು ವೀಕ್ಷಕನಿಗೆ ಸಾಕಷ್ಟು ಸಮಯ ಬೇಕಾಗುತ್ತದೆ’ ಎಂದಿದ್ದಾರೆ.

ಶೂಜಿತ್‌ ಸಿರ್ಕಾರ್‌ ನಿರ್ದೇಶನದ ಸರ್ದಾರ್‌ ಉಧಮ್‌ ಸಿನಿಮಾವು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಮೈಕೇಲ್‌ ಓ ಡಯರ್‌ನನ್ನು ಕೊಂದ ಸ್ವಾತಂತ್ಯ್ರ ಹೋರಾಟಗಾರ ಸರ್ದಾರ್‌ ಉದಾಮ್‌ ಸಿಂಗ್‌ ಅವರ ಜೀವನ ಮತ್ತು ಹೋರಾಟಗಳನ್ನು ಚಿತ್ರಿಸಿದೆ. ಲಂಡನ್‌ನ ಕ್ಯಾಕ್ಸ್‌ಟನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಈಸ್ಟ್‌ ಇಂಡಿಯಾ ಅಸೋಸಿಯೇಷನ್‌ ಮತ್ತು ಸೆಂಟ್ರಲ್‌ ಏಷ್ಯನ್‌ ಸೊಸೈಟಿಯ ಜಂಟಿ ಸಭೆಯಲ್ಲಿ ಉದಮ್ ಸಿಂಗ್ ಡಯರ್‌ಗೆ ಗುಂಡು ಹಾರಿಸಿದ್ದರು.

ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಸಿನಿಮಾವನ್ನು ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಆಯ್ಕೆ ಮಾಡುತ್ತದೆ. ಈ ವರ್ಷ 15 ಸದಸ್ಯರಿರುವ ಜ್ಯೂರಿಗೆ ಚಲನಚಿತ್ರ ನಿರ್ಮಾಪಕ ಶಾಜಿ ಎನ್. ಕರುಣ್‌ ನೇತೃತ್ವ ವಹಿಸಿದ್ದರು. 94ನೇ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಯಲ್ಲಿ ಸ್ಫರ್ಧಿಸಲು ಭಾರತದಿಂದ ತಮಿಳು ಭಾಷೆಯ ’ಕೂಜಂಗಲ್‌ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಮಲಯಾಳಂನ ‘ನಾಯಟ್ಟು’, ವಿದ್ಯಾ ಬಾಲನ್​ ನಟನೆಯ ‘ಶೇರ್ನಿ’, ಯೋಗಿ ಬಾಬು ಅಭಿನಯದ ತಮಿಳಿನ ‘ಮಂಡೆಲಾ’ ‘ಕೂಜಂಗಲ್’, ಅಸ್ಸಾಮಿ ಭಾಷೆಯ ‘ಬ್ರಿಡ್ಜ್​’, ಗುಜರಾತಿಯ ‘ಚೆಲ್ಲೋ ಶೋ’ ಸೇರಿದಂತೆ ಒಟ್ಟು 14 ಸಿನಿಮಾಗಳು ಸ್ಪರ್ಧೆಯಲ್ಲಿದ್ದವು.


ಇದನ್ನೂ ಓದಿ: ಸರ್ದಾರ್ ಉಧಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...