Homeಮುಖಪುಟಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್ ಉದಮ್ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ ವಿವರಿಸಿದ್ದಾರೆ.

- Advertisement -
- Advertisement -

ಸಿನಿಮಾ ಕ್ಷೇತ್ರದ ಪ್ರತಿಷ್ಠತ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಗೆ ಭಾರತದಿಂದ ತಮಿಳಿನ ಕೂಜಂಗಲ್‌ ಸಿನಿಮಾವನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಕ್ಕಿ ಕೌಶಲ್‌ ನಟನೆಯ ಸರ್ದಾರ್‌ ಉಧಮ್ ಸಿನಿಮಾವು ಇತ್ತು. ಆದರೆ ಈ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ವಿವರಿಸಿರುವ ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ, ’ಈ ಸಿನಿಮಾವು ಬ್ರಿಟಿಷರ ಮೇಲಿನ ನಮ್ಮ ದ್ವೇಷವನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷದ ಆಸ್ಕರ್‌ ಪ್ರಶಸ್ತಿಗೆ ಸಿನಿಮಾಗಳ ಅಧಿಕೃತ ಪ್ರವೇಶವನ್ನು ನಿರ್ಧರಿಸಿದ ಜ್ಯೂರಿ ಸದಸ್ಯರಾದ ಇಂದ್ರದೀಪ್‌ ದಾಸ್‌ಗುಪ್ತ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ, ’ಸರ್ದಾರ್ ಉಧಮ್’ ಸಿನಿಮಾದಲ್ಲಿ ಜಲಿಯನ್‌ ವಾಲಾಬಾಗ್‌ ಘಟನೆಯೂ ದೀರ್ಘವಾಗಿದ್ದು, ಹೆಚ್ಚು ಎಳೆಯಲಾಗಿದೆ. ಭಾರತೀಯ ಸ್ವಾತಂತ್ಯ್ರ ಹೋರಾಟದ ಅಸಾಧಾರಣ ನಾಯಕನ ಮೇಲೆ ಅದ್ದೂರಿ ಚಿತ್ರ ನಿರ್ಮಿಸುವುದು ಪ್ರಾಮಾಣಿಕ ಪ್ರಯತ್ನ. ಆದರೆ ಈ ಪ್ರಕ್ರಿಯೆಯಲ್ಲಿ ಮತ್ತೆ ಬ್ರಿಟಿಷರ ಮೇಲೆ ನಮ್ಮ ದ್ವೇಷವನ್ನು ಬಿಂಬಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ ದ್ವೇಷವನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಸರ್ದಾರ್ ಉಧಮ್ ಸಿನಿಮಾ; ಪ್ರಭುತ್ವದ ಹಿಂಸೆಗೆ ಪ್ರತಿಯಾಗಿ ಕ್ರಾಂತಿಕಾರಿ ಮಾರ್ಗ ತುಳಿದ ಯುವಕನ ಕಥೆ


ಉಧಮ್ ಸಿಂಗ್‌ ಸಿನಿಮಾ ಬಗ್ಗೆ ಮಾತನಾಡಿರುವ ಅವರು ಚಿತ್ರದ ಛಾಯಾಗ್ರಹಣಣವನ್ನೂ ಶ್ಲಾಘಿಸಿದ್ದು, ‘ಸಿನಿಮಾ ನಿರ್ಮಾಣವು ಅಂತರಾಷ್ಟ್ರೀಯ ಗುಣಮಟ್ಟಕೆ ಅನುಗುಣವಾಗಿದೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಧಮ್ ಸಿನಿಮಾ ಪ್ರೇಮಿಗಳು ಸತ್ಯ ಯಾವಾಗಲೂ ಕಹಿಯಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಜ್ಯೂರಿಯ ಮತ್ತೊಬ್ಬ ಸದಸ್ಯರಾದ ಸುಮಿತ್‌ ಬಸು ಮಾತನಾಡಿ, ’ಉಧಮ್ ಸಿನಿಮಾದಲ್ಲಿನ ಛಾಯಾಗ್ರಹಣ, ಸಂಕಲನ, ಧ್ವನಿ ವಿನ್ಯಾಸ ಮತ್ತು ಆ ಕಾಲಘಟ್ಟದ ಚಿತ್ರಣ ಸೇರಿದಂತೆ ಸಿನಿಮಾದ ಗುಣಮಟ್ಟಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟ ಪಟ್ಟಿದ್ದಾರೆ. ಈ ಸಿನಿಮಾವೂ ದೀರ್ಘವಾಗಿರುವುದೇ ಸಮಸ್ಯೆ ಎಂದು ನಾನು ಭಾವಿಸಿದೆ. ಈ ಸಿನಿಮಾವು ತುಂಬಾ ತಡವಾದ ಕ್ಲೈಮ್ಯಾಕ್ಸ್‌ ಹೊಂದಿದ್ದು, ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಹುತಾತ್ಮರಾದ ನೋವನ್ನು ಅನುಭವಿಸಲು ವೀಕ್ಷಕನಿಗೆ ಸಾಕಷ್ಟು ಸಮಯ ಬೇಕಾಗುತ್ತದೆ’ ಎಂದಿದ್ದಾರೆ.

ಶೂಜಿತ್‌ ಸಿರ್ಕಾರ್‌ ನಿರ್ದೇಶನದ ಸರ್ದಾರ್‌ ಉಧಮ್‌ ಸಿನಿಮಾವು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಮೈಕೇಲ್‌ ಓ ಡಯರ್‌ನನ್ನು ಕೊಂದ ಸ್ವಾತಂತ್ಯ್ರ ಹೋರಾಟಗಾರ ಸರ್ದಾರ್‌ ಉದಾಮ್‌ ಸಿಂಗ್‌ ಅವರ ಜೀವನ ಮತ್ತು ಹೋರಾಟಗಳನ್ನು ಚಿತ್ರಿಸಿದೆ. ಲಂಡನ್‌ನ ಕ್ಯಾಕ್ಸ್‌ಟನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಈಸ್ಟ್‌ ಇಂಡಿಯಾ ಅಸೋಸಿಯೇಷನ್‌ ಮತ್ತು ಸೆಂಟ್ರಲ್‌ ಏಷ್ಯನ್‌ ಸೊಸೈಟಿಯ ಜಂಟಿ ಸಭೆಯಲ್ಲಿ ಉದಮ್ ಸಿಂಗ್ ಡಯರ್‌ಗೆ ಗುಂಡು ಹಾರಿಸಿದ್ದರು.

ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಸಿನಿಮಾವನ್ನು ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಆಯ್ಕೆ ಮಾಡುತ್ತದೆ. ಈ ವರ್ಷ 15 ಸದಸ್ಯರಿರುವ ಜ್ಯೂರಿಗೆ ಚಲನಚಿತ್ರ ನಿರ್ಮಾಪಕ ಶಾಜಿ ಎನ್. ಕರುಣ್‌ ನೇತೃತ್ವ ವಹಿಸಿದ್ದರು. 94ನೇ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಯಲ್ಲಿ ಸ್ಫರ್ಧಿಸಲು ಭಾರತದಿಂದ ತಮಿಳು ಭಾಷೆಯ ’ಕೂಜಂಗಲ್‌ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಮಲಯಾಳಂನ ‘ನಾಯಟ್ಟು’, ವಿದ್ಯಾ ಬಾಲನ್​ ನಟನೆಯ ‘ಶೇರ್ನಿ’, ಯೋಗಿ ಬಾಬು ಅಭಿನಯದ ತಮಿಳಿನ ‘ಮಂಡೆಲಾ’ ‘ಕೂಜಂಗಲ್’, ಅಸ್ಸಾಮಿ ಭಾಷೆಯ ‘ಬ್ರಿಡ್ಜ್​’, ಗುಜರಾತಿಯ ‘ಚೆಲ್ಲೋ ಶೋ’ ಸೇರಿದಂತೆ ಒಟ್ಟು 14 ಸಿನಿಮಾಗಳು ಸ್ಪರ್ಧೆಯಲ್ಲಿದ್ದವು.


ಇದನ್ನೂ ಓದಿ: ಸರ್ದಾರ್ ಉಧಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...