Homeಮುಖಪುಟಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್ ಉದಮ್ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ ವಿವರಿಸಿದ್ದಾರೆ.

- Advertisement -
- Advertisement -

ಸಿನಿಮಾ ಕ್ಷೇತ್ರದ ಪ್ರತಿಷ್ಠತ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಗೆ ಭಾರತದಿಂದ ತಮಿಳಿನ ಕೂಜಂಗಲ್‌ ಸಿನಿಮಾವನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಕ್ಕಿ ಕೌಶಲ್‌ ನಟನೆಯ ಸರ್ದಾರ್‌ ಉಧಮ್ ಸಿನಿಮಾವು ಇತ್ತು. ಆದರೆ ಈ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ವಿವರಿಸಿರುವ ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ, ’ಈ ಸಿನಿಮಾವು ಬ್ರಿಟಿಷರ ಮೇಲಿನ ನಮ್ಮ ದ್ವೇಷವನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷದ ಆಸ್ಕರ್‌ ಪ್ರಶಸ್ತಿಗೆ ಸಿನಿಮಾಗಳ ಅಧಿಕೃತ ಪ್ರವೇಶವನ್ನು ನಿರ್ಧರಿಸಿದ ಜ್ಯೂರಿ ಸದಸ್ಯರಾದ ಇಂದ್ರದೀಪ್‌ ದಾಸ್‌ಗುಪ್ತ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ, ’ಸರ್ದಾರ್ ಉಧಮ್’ ಸಿನಿಮಾದಲ್ಲಿ ಜಲಿಯನ್‌ ವಾಲಾಬಾಗ್‌ ಘಟನೆಯೂ ದೀರ್ಘವಾಗಿದ್ದು, ಹೆಚ್ಚು ಎಳೆಯಲಾಗಿದೆ. ಭಾರತೀಯ ಸ್ವಾತಂತ್ಯ್ರ ಹೋರಾಟದ ಅಸಾಧಾರಣ ನಾಯಕನ ಮೇಲೆ ಅದ್ದೂರಿ ಚಿತ್ರ ನಿರ್ಮಿಸುವುದು ಪ್ರಾಮಾಣಿಕ ಪ್ರಯತ್ನ. ಆದರೆ ಈ ಪ್ರಕ್ರಿಯೆಯಲ್ಲಿ ಮತ್ತೆ ಬ್ರಿಟಿಷರ ಮೇಲೆ ನಮ್ಮ ದ್ವೇಷವನ್ನು ಬಿಂಬಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ ದ್ವೇಷವನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಸರ್ದಾರ್ ಉಧಮ್ ಸಿನಿಮಾ; ಪ್ರಭುತ್ವದ ಹಿಂಸೆಗೆ ಪ್ರತಿಯಾಗಿ ಕ್ರಾಂತಿಕಾರಿ ಮಾರ್ಗ ತುಳಿದ ಯುವಕನ ಕಥೆ


ಉಧಮ್ ಸಿಂಗ್‌ ಸಿನಿಮಾ ಬಗ್ಗೆ ಮಾತನಾಡಿರುವ ಅವರು ಚಿತ್ರದ ಛಾಯಾಗ್ರಹಣಣವನ್ನೂ ಶ್ಲಾಘಿಸಿದ್ದು, ‘ಸಿನಿಮಾ ನಿರ್ಮಾಣವು ಅಂತರಾಷ್ಟ್ರೀಯ ಗುಣಮಟ್ಟಕೆ ಅನುಗುಣವಾಗಿದೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಧಮ್ ಸಿನಿಮಾ ಪ್ರೇಮಿಗಳು ಸತ್ಯ ಯಾವಾಗಲೂ ಕಹಿಯಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಜ್ಯೂರಿಯ ಮತ್ತೊಬ್ಬ ಸದಸ್ಯರಾದ ಸುಮಿತ್‌ ಬಸು ಮಾತನಾಡಿ, ’ಉಧಮ್ ಸಿನಿಮಾದಲ್ಲಿನ ಛಾಯಾಗ್ರಹಣ, ಸಂಕಲನ, ಧ್ವನಿ ವಿನ್ಯಾಸ ಮತ್ತು ಆ ಕಾಲಘಟ್ಟದ ಚಿತ್ರಣ ಸೇರಿದಂತೆ ಸಿನಿಮಾದ ಗುಣಮಟ್ಟಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟ ಪಟ್ಟಿದ್ದಾರೆ. ಈ ಸಿನಿಮಾವೂ ದೀರ್ಘವಾಗಿರುವುದೇ ಸಮಸ್ಯೆ ಎಂದು ನಾನು ಭಾವಿಸಿದೆ. ಈ ಸಿನಿಮಾವು ತುಂಬಾ ತಡವಾದ ಕ್ಲೈಮ್ಯಾಕ್ಸ್‌ ಹೊಂದಿದ್ದು, ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಹುತಾತ್ಮರಾದ ನೋವನ್ನು ಅನುಭವಿಸಲು ವೀಕ್ಷಕನಿಗೆ ಸಾಕಷ್ಟು ಸಮಯ ಬೇಕಾಗುತ್ತದೆ’ ಎಂದಿದ್ದಾರೆ.

ಶೂಜಿತ್‌ ಸಿರ್ಕಾರ್‌ ನಿರ್ದೇಶನದ ಸರ್ದಾರ್‌ ಉಧಮ್‌ ಸಿನಿಮಾವು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಮೈಕೇಲ್‌ ಓ ಡಯರ್‌ನನ್ನು ಕೊಂದ ಸ್ವಾತಂತ್ಯ್ರ ಹೋರಾಟಗಾರ ಸರ್ದಾರ್‌ ಉದಾಮ್‌ ಸಿಂಗ್‌ ಅವರ ಜೀವನ ಮತ್ತು ಹೋರಾಟಗಳನ್ನು ಚಿತ್ರಿಸಿದೆ. ಲಂಡನ್‌ನ ಕ್ಯಾಕ್ಸ್‌ಟನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಈಸ್ಟ್‌ ಇಂಡಿಯಾ ಅಸೋಸಿಯೇಷನ್‌ ಮತ್ತು ಸೆಂಟ್ರಲ್‌ ಏಷ್ಯನ್‌ ಸೊಸೈಟಿಯ ಜಂಟಿ ಸಭೆಯಲ್ಲಿ ಉದಮ್ ಸಿಂಗ್ ಡಯರ್‌ಗೆ ಗುಂಡು ಹಾರಿಸಿದ್ದರು.

ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಸಿನಿಮಾವನ್ನು ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಆಯ್ಕೆ ಮಾಡುತ್ತದೆ. ಈ ವರ್ಷ 15 ಸದಸ್ಯರಿರುವ ಜ್ಯೂರಿಗೆ ಚಲನಚಿತ್ರ ನಿರ್ಮಾಪಕ ಶಾಜಿ ಎನ್. ಕರುಣ್‌ ನೇತೃತ್ವ ವಹಿಸಿದ್ದರು. 94ನೇ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಯಲ್ಲಿ ಸ್ಫರ್ಧಿಸಲು ಭಾರತದಿಂದ ತಮಿಳು ಭಾಷೆಯ ’ಕೂಜಂಗಲ್‌ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಮಲಯಾಳಂನ ‘ನಾಯಟ್ಟು’, ವಿದ್ಯಾ ಬಾಲನ್​ ನಟನೆಯ ‘ಶೇರ್ನಿ’, ಯೋಗಿ ಬಾಬು ಅಭಿನಯದ ತಮಿಳಿನ ‘ಮಂಡೆಲಾ’ ‘ಕೂಜಂಗಲ್’, ಅಸ್ಸಾಮಿ ಭಾಷೆಯ ‘ಬ್ರಿಡ್ಜ್​’, ಗುಜರಾತಿಯ ‘ಚೆಲ್ಲೋ ಶೋ’ ಸೇರಿದಂತೆ ಒಟ್ಟು 14 ಸಿನಿಮಾಗಳು ಸ್ಪರ್ಧೆಯಲ್ಲಿದ್ದವು.


ಇದನ್ನೂ ಓದಿ: ಸರ್ದಾರ್ ಉಧಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...