Homeಮುಖಪುಟಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್ ಉದಮ್ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ ವಿವರಿಸಿದ್ದಾರೆ.

- Advertisement -
- Advertisement -

ಸಿನಿಮಾ ಕ್ಷೇತ್ರದ ಪ್ರತಿಷ್ಠತ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಗೆ ಭಾರತದಿಂದ ತಮಿಳಿನ ಕೂಜಂಗಲ್‌ ಸಿನಿಮಾವನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಕ್ಕಿ ಕೌಶಲ್‌ ನಟನೆಯ ಸರ್ದಾರ್‌ ಉಧಮ್ ಸಿನಿಮಾವು ಇತ್ತು. ಆದರೆ ಈ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ವಿವರಿಸಿರುವ ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ, ’ಈ ಸಿನಿಮಾವು ಬ್ರಿಟಿಷರ ಮೇಲಿನ ನಮ್ಮ ದ್ವೇಷವನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷದ ಆಸ್ಕರ್‌ ಪ್ರಶಸ್ತಿಗೆ ಸಿನಿಮಾಗಳ ಅಧಿಕೃತ ಪ್ರವೇಶವನ್ನು ನಿರ್ಧರಿಸಿದ ಜ್ಯೂರಿ ಸದಸ್ಯರಾದ ಇಂದ್ರದೀಪ್‌ ದಾಸ್‌ಗುಪ್ತ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ, ’ಸರ್ದಾರ್ ಉಧಮ್’ ಸಿನಿಮಾದಲ್ಲಿ ಜಲಿಯನ್‌ ವಾಲಾಬಾಗ್‌ ಘಟನೆಯೂ ದೀರ್ಘವಾಗಿದ್ದು, ಹೆಚ್ಚು ಎಳೆಯಲಾಗಿದೆ. ಭಾರತೀಯ ಸ್ವಾತಂತ್ಯ್ರ ಹೋರಾಟದ ಅಸಾಧಾರಣ ನಾಯಕನ ಮೇಲೆ ಅದ್ದೂರಿ ಚಿತ್ರ ನಿರ್ಮಿಸುವುದು ಪ್ರಾಮಾಣಿಕ ಪ್ರಯತ್ನ. ಆದರೆ ಈ ಪ್ರಕ್ರಿಯೆಯಲ್ಲಿ ಮತ್ತೆ ಬ್ರಿಟಿಷರ ಮೇಲೆ ನಮ್ಮ ದ್ವೇಷವನ್ನು ಬಿಂಬಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ ದ್ವೇಷವನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಸರ್ದಾರ್ ಉಧಮ್ ಸಿನಿಮಾ; ಪ್ರಭುತ್ವದ ಹಿಂಸೆಗೆ ಪ್ರತಿಯಾಗಿ ಕ್ರಾಂತಿಕಾರಿ ಮಾರ್ಗ ತುಳಿದ ಯುವಕನ ಕಥೆ


ಉಧಮ್ ಸಿಂಗ್‌ ಸಿನಿಮಾ ಬಗ್ಗೆ ಮಾತನಾಡಿರುವ ಅವರು ಚಿತ್ರದ ಛಾಯಾಗ್ರಹಣಣವನ್ನೂ ಶ್ಲಾಘಿಸಿದ್ದು, ‘ಸಿನಿಮಾ ನಿರ್ಮಾಣವು ಅಂತರಾಷ್ಟ್ರೀಯ ಗುಣಮಟ್ಟಕೆ ಅನುಗುಣವಾಗಿದೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಧಮ್ ಸಿನಿಮಾ ಪ್ರೇಮಿಗಳು ಸತ್ಯ ಯಾವಾಗಲೂ ಕಹಿಯಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಜ್ಯೂರಿಯ ಮತ್ತೊಬ್ಬ ಸದಸ್ಯರಾದ ಸುಮಿತ್‌ ಬಸು ಮಾತನಾಡಿ, ’ಉಧಮ್ ಸಿನಿಮಾದಲ್ಲಿನ ಛಾಯಾಗ್ರಹಣ, ಸಂಕಲನ, ಧ್ವನಿ ವಿನ್ಯಾಸ ಮತ್ತು ಆ ಕಾಲಘಟ್ಟದ ಚಿತ್ರಣ ಸೇರಿದಂತೆ ಸಿನಿಮಾದ ಗುಣಮಟ್ಟಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟ ಪಟ್ಟಿದ್ದಾರೆ. ಈ ಸಿನಿಮಾವೂ ದೀರ್ಘವಾಗಿರುವುದೇ ಸಮಸ್ಯೆ ಎಂದು ನಾನು ಭಾವಿಸಿದೆ. ಈ ಸಿನಿಮಾವು ತುಂಬಾ ತಡವಾದ ಕ್ಲೈಮ್ಯಾಕ್ಸ್‌ ಹೊಂದಿದ್ದು, ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಹುತಾತ್ಮರಾದ ನೋವನ್ನು ಅನುಭವಿಸಲು ವೀಕ್ಷಕನಿಗೆ ಸಾಕಷ್ಟು ಸಮಯ ಬೇಕಾಗುತ್ತದೆ’ ಎಂದಿದ್ದಾರೆ.

ಶೂಜಿತ್‌ ಸಿರ್ಕಾರ್‌ ನಿರ್ದೇಶನದ ಸರ್ದಾರ್‌ ಉಧಮ್‌ ಸಿನಿಮಾವು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಮೈಕೇಲ್‌ ಓ ಡಯರ್‌ನನ್ನು ಕೊಂದ ಸ್ವಾತಂತ್ಯ್ರ ಹೋರಾಟಗಾರ ಸರ್ದಾರ್‌ ಉದಾಮ್‌ ಸಿಂಗ್‌ ಅವರ ಜೀವನ ಮತ್ತು ಹೋರಾಟಗಳನ್ನು ಚಿತ್ರಿಸಿದೆ. ಲಂಡನ್‌ನ ಕ್ಯಾಕ್ಸ್‌ಟನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಈಸ್ಟ್‌ ಇಂಡಿಯಾ ಅಸೋಸಿಯೇಷನ್‌ ಮತ್ತು ಸೆಂಟ್ರಲ್‌ ಏಷ್ಯನ್‌ ಸೊಸೈಟಿಯ ಜಂಟಿ ಸಭೆಯಲ್ಲಿ ಉದಮ್ ಸಿಂಗ್ ಡಯರ್‌ಗೆ ಗುಂಡು ಹಾರಿಸಿದ್ದರು.

ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಸಿನಿಮಾವನ್ನು ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಆಯ್ಕೆ ಮಾಡುತ್ತದೆ. ಈ ವರ್ಷ 15 ಸದಸ್ಯರಿರುವ ಜ್ಯೂರಿಗೆ ಚಲನಚಿತ್ರ ನಿರ್ಮಾಪಕ ಶಾಜಿ ಎನ್. ಕರುಣ್‌ ನೇತೃತ್ವ ವಹಿಸಿದ್ದರು. 94ನೇ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಯಲ್ಲಿ ಸ್ಫರ್ಧಿಸಲು ಭಾರತದಿಂದ ತಮಿಳು ಭಾಷೆಯ ’ಕೂಜಂಗಲ್‌ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಮಲಯಾಳಂನ ‘ನಾಯಟ್ಟು’, ವಿದ್ಯಾ ಬಾಲನ್​ ನಟನೆಯ ‘ಶೇರ್ನಿ’, ಯೋಗಿ ಬಾಬು ಅಭಿನಯದ ತಮಿಳಿನ ‘ಮಂಡೆಲಾ’ ‘ಕೂಜಂಗಲ್’, ಅಸ್ಸಾಮಿ ಭಾಷೆಯ ‘ಬ್ರಿಡ್ಜ್​’, ಗುಜರಾತಿಯ ‘ಚೆಲ್ಲೋ ಶೋ’ ಸೇರಿದಂತೆ ಒಟ್ಟು 14 ಸಿನಿಮಾಗಳು ಸ್ಪರ್ಧೆಯಲ್ಲಿದ್ದವು.


ಇದನ್ನೂ ಓದಿ: ಸರ್ದಾರ್ ಉಧಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...