Homeಮುಖಪುಟಲಸಿಕೆಯಿಲ್ಲದೆ ಕೇವಲ ಹಬ್ಬದ ಸೋಗು; ಪಿಎಂ ಕೇರ್ಸ್ ಎಲ್ಲಿ ಹೋಯಿತು: ರಾಹುಲ್ ಗಾಂಧಿ ಆಕ್ರೋಶ

ಲಸಿಕೆಯಿಲ್ಲದೆ ಕೇವಲ ಹಬ್ಬದ ಸೋಗು; ಪಿಎಂ ಕೇರ್ಸ್ ಎಲ್ಲಿ ಹೋಯಿತು: ರಾಹುಲ್ ಗಾಂಧಿ ಆಕ್ರೋಶ

- Advertisement -
- Advertisement -

ಆಸ್ಪತ್ರೆಯಲ್ಲಿ ಪರೀಕ್ಷೆ, ಹಾಸಿಗೆ, ವೆಂಟಿಲೇಟರ್, ಆಮ್ಲಜನಕ, ಲಸಿಕೆ ಇದು ಯಾವುದೂ ಇಲ್ಲ, ಆದರೆ ಕೇವಲ ಹಬ್ಬದ ಸೋಗಷ್ಟೇ ಇದೆ, ಪಿಎಂ ಕೇರ್ಸ್ ಎಲ್ಲಿ ಹೋಯಿತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ, ಕೊರೊನಾ ವಿರುದ್ದ ಹೆಚ್ಚಿನ ಪ್ರಮಾಣದಲ್ಲಿ, ಹೆಚ್ಚಿನ ಜನರು ಲಸಿಕೆ ಪಡೆದುಕೊಳ್ಳುವುದನ್ನು ಉತ್ತೇಜಿಸಲು ಬೇಕಾಗಿ ಎಪ್ರಿಲ್ 11 ರಿಂದ 14 ರ ವರೆಗೆ ‘ಟಿಕಾ ಉತ್ಸವ್’(ಲಸಿಕೆ ಉತ್ಸವ) ಆಚರಿಸುವಂತೆ ಕರೆ ನೀಡಿದ್ದರು. ಆದರೆ ಇದು ಘೋಷಣೆ ಮಾಡುವುದಕ್ಕಿಂತ ಮುಂಚಿನಿಂದಲೇ ಹಲವು ರಾಜ್ಯಗಳು ತಮ್ಮಲ್ಲಿ ಲಸಿಕೆ ಕೊರತೆಯಿದೆ ಎಂದು ಕೇಂದ್ರದ ಬಳಿ ಆತಂಕ ತೋಡಿಕೊಂಡಿದ್ದವು. ಆದರೆ ಪ್ರಧಾನಿ ಮೋದಿ ಇದರ ಬಗ್ಗೆ ಇದುವರೆಗೂ ಯಾವುದೆ ಮಾತುಗಳನ್ನು ಹೇಳಿಲ್ಲ.

ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ಅಷ್ಟೇ ಅಲ್ಲದೆ, ದೇಶದಾದ್ಯಂತ ದೈನಂದಿನ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಸರಿಯಾದ ಚಿಕಿತ್ಸೆಗಳಿಲ್ಲದೆ ಪರದಾಡುತ್ತಿರುವುದು ದೇಶದಾತ್ಯಂತ ವರದಿಯಾಗುತ್ತಿದೆ. ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಟ್ವೀಟ್‌ನಲ್ಲಿ, “ಆಸ್ಪತ್ರೆಯಲ್ಲಿ ಯಾವುದೇ ಪರೀಕ್ಷೆಗಳಿಲ್ಲ, ಹಾಸಿಗೆಗಳಿಲ್ಲ, ಯಾವುದೇ ವೆಂಟಿಲೇಟರ್‌ಗಳು ಇಲ್ಲ, ಆಮ್ಲಜನಕವಿಲ್ಲ, ಲಸಿಕೆ ಕೂಡ ಇಲ್ಲ,  ಕೇವಲ ಹಬ್ಬದ ಸೋಗು ಮಾತ್ರ. ಪಿಎಂಕೇರ್ಸ್ ಎಲ್ಲಿ ಹೋಯಿತು?” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಪ್ರಧಾನಿ ‘ಉತ್ಸವ’ ಆಚರಿಸುವಂತೆ ಕರೆ ನೀಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಉಂಟು ಮಾಡಿತ್ತು. ದೇಶದಾದ್ಯಂತ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದೆ. ಸೋಂಕಿನಿಂದಾಗಿ ಸಾವು ನೋವುಗಳು ಕೂಡಾ ಹೆಚ್ಚುತ್ತಿದೆ. ಈ ಹೊತ್ತಿನಲ್ಲಿ ಪ್ರಧಾನಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶ್ನಿಸಿದ್ದರು.

ಲಸಿಕೆ ಉತ್ಸವಕ್ಕೆ ಕರೆ ನೀಡಿರುವ ಪ್ರಧಾನಿ ಮೋದಿ, ಪಂಜಾಬ್, ಮಹಾರಾಷ್ಟ್ರ, ಒರಿಸ್ಸಾ, ಬಿಹಾರ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳು ಲಸಿಕೆ ಕೊರತೆಯ ಹೇಳಿದ್ದರೂ, ಅದರ ಬಗ್ಗೆ ಗಮನ ಹರಿಸದೆ ಲಸಿಕೆ ಕೊರತೆಯ ಸಮಯದಲ್ಲಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಕೂಡಾ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಮತ್ತೆ ಶುರುವಾಯಿತು ವಲಸೆ: ಊರುಗಳಿಗೆ ತೆರಳಲು ಮುಂಬೈ ರೈಲು ನಿಲ್ದಾಣದಲ್ಲಿ ಜಮಾಯಿಸಿದ ಸಾವಿರಾರು ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...