Homeಮುಖಪುಟಮುಖ್ಯಮಂತ್ರಿ ಜೊತೆ ಸಭೆ ನಡೆಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ ಶಾಸಕನಿಗೆ ಕೊರೊನಾ ಪಾಸಿಟಿವ್‌!

ಮುಖ್ಯಮಂತ್ರಿ ಜೊತೆ ಸಭೆ ನಡೆಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ ಶಾಸಕನಿಗೆ ಕೊರೊನಾ ಪಾಸಿಟಿವ್‌!

- Advertisement -
- Advertisement -

ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಇತರ ಇಬ್ಬರು ಮಂತ್ರಿಗಳೊಂದಿಗಿನ ಸಭೆಯಲ್ಲಿ ಭಾಗವಹಿಸಿದ ನಂತರ ಗುಜರಾತ್ ಶಾಸಕರೊಬ್ಬರು ಕೊರೋನಾ ವೈರಸ್ ಪರೀಕ್ಷೆಯಲ್ಲಿ ಪಾಸಿಟಿವ್‌ ಆಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲಾ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು, ಅಲ್ಲಿ ಇತರ ಶಾಸಕರು ಮತ್ತು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಮಾಲ್‌ಪುರ-ಖಾದಿಯಾದ ಶಾಸಕರಾದ ಇವರು ಹಲವಾರು ದಿನಗಳಿಂದ ಅಧಿಕ ತಾಪಮಾನವನ್ನು ಹೊಂದಿದ್ದ ಕಾರಣ ತಮ್ಮ ಮಾದರಿಗಳನ್ನು ಪರೀಕ್ಷೆಗೆ ನೀಡಿದ್ದರು.

ಆದರೆ ಪರೀಕ್ಷೆಯ ಫಲಿತಾಂಶಗಳು ಬರುವ ಮೊದಲೇ ಅವರು ಇಬ್ಬರು ಕಾಂಗ್ರೆಸ್‌ ಶಾಸಕರೊಂದಿಗೆ ಸಿಎಂ ಜೊತೆ ಸಭೆ ಮತ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎನ್ನಲಾಗಿದೆ. ತದನಂತರ ಅವರು ಕೊರೊನಾ ಪಾಸಿಟಿವ್‌ ಆಗಿದ್ದಾರೆ ಎಂದು ತಿಳಿದುಬಂದಿದ್ದು, ಪ್ರಸ್ತುತ ಅವರನ್ನು COVID-19 ರೋಗಿಗಳ ಚಿಕಿತ್ಸೆಗೆ ಮೀಸಲಾಗಿರುವ ಗಾಂಧಿನಗರದ ಎಸ್‌ವಿಪಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಶಾಸಕರು ಈ ಮೊದಲು ಎಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆಡಳಿತವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅವರೊಂದಿಗೆ ಹತ್ತಿರದ ಸಂಪರ್ಕ ಬಂದವರನ್ನೆಲ್ಲಾ ಹೋಮ್‌ ಕ್ವಾರಂಟೈನ್‌ ಮಾಡುವುದು, ಪರೀಕ್ಷೆಗೆ ಒಳಪಡಿಸುವುದು ಅಗತ್ಯವಾಗಿದೆ.

ಇಂದು ಬೆಳಿಗ್ಗೆ ನಡೆದ ಮುಖ್ಯಮಂತ್ರಿಯವರ ಭೇಟಿಯ ವೀಡಿಯೊಗಳನ್ನು ನೋಡಿದಾಗ ಅವರು ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಿದ್ದಾರೆ ಎಂಬುದು ಕಾಣುತ್ತದೆ. ಸಿಎಂ ಕನಿಷ್ಠ ಒಂದು ಮೀಟರ್ ಅಂತರದಲ್ಲಿ ಕುಳಿತುಕೊಂಡಿದ್ದಾರೆ. ಮುಖ್ಯಮಂತ್ರಿಯಲ್ಲದೆ, ಸಭೆಯಲ್ಲಿ ಆರೋಗ್ಯ ಮತ್ತು ಗೃಹ ರಾಜ್ಯ ಸಚಿವರು ಭಾಗವಹಿಸಿದ್ದರು.

ಗುಜರಾತ್‌ನಲ್ಲಿ ಇದುವರೆಗೆ 617 ಕೊರೋನಾವೈರಸ್ ಪ್ರಕರಣಗಳಿದ್ದು, ಅವರಲ್ಲಿ 55 ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು 26 ಮಂದಿ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿ: ಜನರು ರೊಚ್ಚಿಗೇಳುವ ಸಾಧ್ಯತೆ: ಪೊಲೀಸ್ ಮಹಾನಿರ್ದೇಶಕರ ಮುನ್ನೆಚ್ಚರಿಕೆಯ ನೋಟಿಸ್


ಎನ್‌ಡಿಟಿವಿಯ ಪ್ರಣಯ್ ರಾಯ್ ವಿಶ್ಲೇಷಿಸಿದ ರಾಜ್ಯ ದತ್ತಾಂಶದ ಪ್ರಕಾರ ರಾಜ್ಯದಲ್ಲಿ ಲಾಕ್‌ಡೌನ್ ವೈರಸ್ ಅನ್ನು ನಿಧಾನಗೊಳಿಸಿಲ್ಲ ಎಂದು ತೋರಿಸಿದೆ. ಆದರೂ ಇತರ ರಾಜ್ಯಗಳು ಇದನ್ನು ಹತೋಟಿಯಲ್ಲಿಡಲು ಮತ್ತು ಸೋಂಕಿನ ಹರಡುವಿಕೆಯನ್ನು ತಡೆಯುವಲ್ಲಿ ಯಶಸ್ವಿಯಾಗಿದೆ.

ಗುಜರಾತ್, ನೆರೆಯ ಮಹಾರಾಷ್ಟ್ರದ ಜೊತೆಗೆ, ಅತಿ ಹೆಚ್ಚು ಸೋಂಕಿನ ಪ್ರಮಾಣವನ್ನು ಹೊಂದಿದೆ. ಅಲ್ಲಿ ಸರಿಸುಮಾರು ಎರಡು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...