Homeಮುಖಪುಟಮುಖ್ಯಮಂತ್ರಿ ಜೊತೆ ಸಭೆ ನಡೆಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ ಶಾಸಕನಿಗೆ ಕೊರೊನಾ ಪಾಸಿಟಿವ್‌!

ಮುಖ್ಯಮಂತ್ರಿ ಜೊತೆ ಸಭೆ ನಡೆಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ ಶಾಸಕನಿಗೆ ಕೊರೊನಾ ಪಾಸಿಟಿವ್‌!

- Advertisement -
- Advertisement -

ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಇತರ ಇಬ್ಬರು ಮಂತ್ರಿಗಳೊಂದಿಗಿನ ಸಭೆಯಲ್ಲಿ ಭಾಗವಹಿಸಿದ ನಂತರ ಗುಜರಾತ್ ಶಾಸಕರೊಬ್ಬರು ಕೊರೋನಾ ವೈರಸ್ ಪರೀಕ್ಷೆಯಲ್ಲಿ ಪಾಸಿಟಿವ್‌ ಆಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲಾ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು, ಅಲ್ಲಿ ಇತರ ಶಾಸಕರು ಮತ್ತು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಮಾಲ್‌ಪುರ-ಖಾದಿಯಾದ ಶಾಸಕರಾದ ಇವರು ಹಲವಾರು ದಿನಗಳಿಂದ ಅಧಿಕ ತಾಪಮಾನವನ್ನು ಹೊಂದಿದ್ದ ಕಾರಣ ತಮ್ಮ ಮಾದರಿಗಳನ್ನು ಪರೀಕ್ಷೆಗೆ ನೀಡಿದ್ದರು.

ಆದರೆ ಪರೀಕ್ಷೆಯ ಫಲಿತಾಂಶಗಳು ಬರುವ ಮೊದಲೇ ಅವರು ಇಬ್ಬರು ಕಾಂಗ್ರೆಸ್‌ ಶಾಸಕರೊಂದಿಗೆ ಸಿಎಂ ಜೊತೆ ಸಭೆ ಮತ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎನ್ನಲಾಗಿದೆ. ತದನಂತರ ಅವರು ಕೊರೊನಾ ಪಾಸಿಟಿವ್‌ ಆಗಿದ್ದಾರೆ ಎಂದು ತಿಳಿದುಬಂದಿದ್ದು, ಪ್ರಸ್ತುತ ಅವರನ್ನು COVID-19 ರೋಗಿಗಳ ಚಿಕಿತ್ಸೆಗೆ ಮೀಸಲಾಗಿರುವ ಗಾಂಧಿನಗರದ ಎಸ್‌ವಿಪಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಶಾಸಕರು ಈ ಮೊದಲು ಎಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆಡಳಿತವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅವರೊಂದಿಗೆ ಹತ್ತಿರದ ಸಂಪರ್ಕ ಬಂದವರನ್ನೆಲ್ಲಾ ಹೋಮ್‌ ಕ್ವಾರಂಟೈನ್‌ ಮಾಡುವುದು, ಪರೀಕ್ಷೆಗೆ ಒಳಪಡಿಸುವುದು ಅಗತ್ಯವಾಗಿದೆ.

ಇಂದು ಬೆಳಿಗ್ಗೆ ನಡೆದ ಮುಖ್ಯಮಂತ್ರಿಯವರ ಭೇಟಿಯ ವೀಡಿಯೊಗಳನ್ನು ನೋಡಿದಾಗ ಅವರು ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಿದ್ದಾರೆ ಎಂಬುದು ಕಾಣುತ್ತದೆ. ಸಿಎಂ ಕನಿಷ್ಠ ಒಂದು ಮೀಟರ್ ಅಂತರದಲ್ಲಿ ಕುಳಿತುಕೊಂಡಿದ್ದಾರೆ. ಮುಖ್ಯಮಂತ್ರಿಯಲ್ಲದೆ, ಸಭೆಯಲ್ಲಿ ಆರೋಗ್ಯ ಮತ್ತು ಗೃಹ ರಾಜ್ಯ ಸಚಿವರು ಭಾಗವಹಿಸಿದ್ದರು.

ಗುಜರಾತ್‌ನಲ್ಲಿ ಇದುವರೆಗೆ 617 ಕೊರೋನಾವೈರಸ್ ಪ್ರಕರಣಗಳಿದ್ದು, ಅವರಲ್ಲಿ 55 ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು 26 ಮಂದಿ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿ: ಜನರು ರೊಚ್ಚಿಗೇಳುವ ಸಾಧ್ಯತೆ: ಪೊಲೀಸ್ ಮಹಾನಿರ್ದೇಶಕರ ಮುನ್ನೆಚ್ಚರಿಕೆಯ ನೋಟಿಸ್


ಎನ್‌ಡಿಟಿವಿಯ ಪ್ರಣಯ್ ರಾಯ್ ವಿಶ್ಲೇಷಿಸಿದ ರಾಜ್ಯ ದತ್ತಾಂಶದ ಪ್ರಕಾರ ರಾಜ್ಯದಲ್ಲಿ ಲಾಕ್‌ಡೌನ್ ವೈರಸ್ ಅನ್ನು ನಿಧಾನಗೊಳಿಸಿಲ್ಲ ಎಂದು ತೋರಿಸಿದೆ. ಆದರೂ ಇತರ ರಾಜ್ಯಗಳು ಇದನ್ನು ಹತೋಟಿಯಲ್ಲಿಡಲು ಮತ್ತು ಸೋಂಕಿನ ಹರಡುವಿಕೆಯನ್ನು ತಡೆಯುವಲ್ಲಿ ಯಶಸ್ವಿಯಾಗಿದೆ.

ಗುಜರಾತ್, ನೆರೆಯ ಮಹಾರಾಷ್ಟ್ರದ ಜೊತೆಗೆ, ಅತಿ ಹೆಚ್ಚು ಸೋಂಕಿನ ಪ್ರಮಾಣವನ್ನು ಹೊಂದಿದೆ. ಅಲ್ಲಿ ಸರಿಸುಮಾರು ಎರಡು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....