Homeಮುಖಪುಟಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಇಡೀ ದೇಶಕ್ಕೆ ವ್ಯಾಕ್ಸಿನ್ ಮತ್ತು ಪಡಿತರ ನೀಡಲು ಬೇಕಿರುವ ಹಣದ ಮೂರು ಪಟ್ಟನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ... ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

- Advertisement -
- Advertisement -

2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಬಡವರಿಗೆ ಉಚಿತ ಪಡಿತರ ನೀಡಲು ಬಳಸಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದರು. ಇದು ಸುಳ್ಳು ಲೆಕ್ಕ ಎಂದು ಕನ್ನಡ ಖ್ಯಾತ ಚಿಂತಕ ಶಿವಸುಂದರ್ ತಮ್ಮ ಜಸ್ಟ್ ಆಸ್ಕಿಂಗ್ ಲೇಖನದಲ್ಲಿ ನಿರೂಪಿಸಿದ್ದಾರೆ. ಅದನ್ನು ನಾನುಗೌರಿ ಓದುಗರಿಗಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಪೆಟ್ರೋಲ್ ಬೆಲೆ ಏರಿಸಿ ಸಂಗ್ರಹಿಸಿದ 3.4 ಲಕ್ಷ ಕೋಟಿಗೆ ಸುಳ್ಳು ಲೆಕ್ಕ ಕೊಡುತ್ತಿರುವ ಮೋದಿ ಸರ್ಕಾರ..”

ಮೋದಿ ಸರ್ಕಾರದ ಹೊಸ ಪೆಟ್ರೋಲಿಯಂ ಮಂತ್ರಿ ಹರದೀಪ್ ಪುರಿ ಯವರು 2020-21 ನೇ ಸಾಲಿನಲೀ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿ ಜನರಿಂದ ಹೆಚ್ಚುವರಿಯಾಗಿ 3.4 ಲಕ್ಷ ಕೋಟಿ ರೂ. ಗಳನ್ನೂ ಸಂಗ್ರಹಿಸಲಾಗಿದೆ ಎಂದು ಮೊನ್ನೆ ಒಪ್ಪಿಕೊಂಡಿದ್ದಾರೆ.

ಆದರೆ ಅದರ ದೊಡ್ಡ ಭಾಗವನ್ನು ಜನರಿಗೆ ಉಚಿತ ವ್ಯಾಕ್ಸಿನ್ ಕೊಡಲು ಹಾಗು 2020 ರ ಏಪ್ರಿಲ್- ನವಂಬರ್ ಹಾಗು 2021 ರ ಮೇ-ಜೂನ್, ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ವ್ಯಯ ಮಾಡಲಾಗಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ…

ಇದನ್ನೂ ಓದಿ : ಪೆಟ್ರೋಲಿಯಂ ಸೆಸ್‌ನ 3.4 ಲಕ್ಷ ಕೋಟಿ ರೂಗಳನ್ನು ಉಚಿತ ಲಸಿಕೆ, ಪಡಿತರಕ್ಕಾಗಿ ಬಳಸಲಾಗಿದೆ: ಸಚಿವ ಹರ್ದೀಪ್ ಪುರಿ

ಈ ಹೇಳಿಕೆಯ ಮೂಲಕ ಮೋದಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ ಬಂದಿದೆ… :

ಮೊದಲಿಗೆ- ವ್ಯಾಕ್ಸಿನ್ ಉಚಿತವಾಗೇನೂ ಕೊಡುತ್ತಿಲ್ಲ..

ಮೋದಿ ಸರ್ಕಾರವು ಬಡ-ಮಧ್ಯಮ ವರ್ಗದ ಜನರಿಂದ ಸುಲಿದ ತೆರಿಗೆಯಿಂದ ಜನರಿಗೆ ವ್ಯಾಕ್ಸಿನ್-ಪಡಿತರ ಕೊಡುತ್ತಿದೆಯೇ ವಿನಾ, ಶ್ರೀಮಂತರಿಗೆ ತೆರಿಗೆ ಹಾಕುವ ಮೂಲಕವೋ, ಅಥವಾ ಸರ್ಕಾರದ ದುಂದು ವೆಚ್ಚಗಳನ್ನೋ ಕಡಿಮೆ ಮಾಡುವುದರಿಂದಲ್ಲ.

ಅರ್ಥಾತ್ ಸರ್ಕಾರ ಬಡವರಿಗೆ ಅವರಿಂದ ಸಂಗ್ರಹಿಸಿದ ಹಣದಿಂದಲೇ ವ್ಯಾಕ್ಸಿನ್- ಪಡಿತರ ಕೊಡುತ್ತಿದೆಯೇ ವಿನಾ ಉಚಿತವಾಗಿಯಲ್ಲ… ಆದ್ದರಿಂದ ಮೊದಲು ಉಚಿತ ವ್ಯಾಕ್ಸಿನ್, ಉಚಿತ ಪಡಿತರ ಎನ್ನುವ ಜನವಂಚಕ ಪ್ರಚಾರವನ್ನು ನಿಲ್ಲಿಸಬೇಕು…

ಎರಡನೆಯದಾಗಿ- ಉಳಿದ ಮೂರು ಕೋಟಿಗೆ ಲೆಕ್ಕವೆಲ್ಲಿ?
ಸರ್ಕಾರದ ಅಧಿಕೃತ ಹೇಳಿಕೆಯ ಪ್ರಕಾರ ಜುಲೈ 29 ರವರೆಗೆ ಕೇವಲ 45 ಕೋಟಿ ವ್ಯಾಕ್ಸಿನ್ ಗಳನ್ನೂ ಜನರಿಗೆ ನೀಡಿದೆ.

ಅದರ ಒಟ್ಟಾರೆ ಸರಾಸರಿ ಬೆಲೆ ವ್ಯಾಕ್ಸಿನ್ ಒಂದಕ್ಕೆ 500 ರೂ. ಎಂದಿಟ್ಟುಕೊಂಡರೂ ಈವರೆಗೆ ಸರ್ಕಾರ ಈ ಬಾಬತ್ತಿನಲ್ಲಿ ವೆಚ್ಚ ಮಾಡಿರುವುದು ಕೇವಲ 23,000 ಕೋಟಿ ರೂ. ಮಾತ್ರ ಎಂದಾಯಿತು!

ಅಂದರೆ ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿಯ ಶೇ. 6.7 ಭಾಗ ಮಾತ್ರ… ಉಳಿದದ್ದೇನಾಯ್ತು?

ವ್ಯಾಕ್ಸಿನ್ ಗಾಗಿ ಎಂದೇ 2021ರ ಬಜೆಟ್ಟಿನಲ್ಲಿ ಪೆಟ್ರೋಲ್ ತೆರಿಗೆಯನ್ನು ಹೊರತುಪಡಿಸಿ 66,000 ಕೋಟಿಗಳನ್ನು ಎತ್ತಿಡಲಾಗಿತ್ತು…

ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ ಹಣದಲ್ಲಿ ವ್ಯಾಕ್ಸಿನ್ ಕೊಡುತ್ತಿರುವುದಾದರೆ, ಅದಕ್ಕೆ ಮುಂಚೆಯೇ ಬಜೆಟ್ನಲ್ಲಿ ಎತ್ತಿಟ್ಟಿದ್ದ ವ್ಯಾಕ್ಸಿನ್ ಹಣದ ಲೆಕ್ಕವೇನು?

– 2020 ಮತ್ತು 2021 ರಲ್ಲಿ ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ಆದ ಖರ್ಚೆಷ್ಟು? 1.2 ಲಕ್ಷ ಕೋಟಿ ರೂಪಾಯಿಗಳು.

ಆದರೆ ಇದೆಲ್ಲವೂ ವಿಶೇಷ ಅಥವಾ ಹೆಚ್ಚುವರಿ ವೆಚ್ಚವಲ್ಲ.

2013 ರಲ್ಲಿ ಆಹಾರ ಭದ್ರತಾ ಕಾಯಿದೆ ಜಾರಿಯಾದ ಮೇಲೆ ಈ ದೇಶದ 83 ಕೋಟಿ ಜನರಿಗೆ ಪ್ರತಿವರ್ಷ ರಿಯಾಯತಿ ದರದಲ್ಲಿ ಆಹಾರ ಪಡಿತರವನ್ನು ಒದಗಿಸಲು ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಪ್ರತಿವರ್ಷ ಕೇಂದ್ರ ಬಜೆಟ್ಟಿನಿಂದ ಹಣವನ್ನು ಒದಗಿಸಲಾಗುತ್ತದೆ. ಅದರ ಭಾಗವಾಗಿಯೇ 2020ರಲ್ಲೇ ಈ ಬಾಬತ್ತಿಗೆ ಕೇಂದ್ರ ಬಜೆಟ್ಟಿನಲ್ಲಿ 1.15 ಲಕ್ಷ ಕೋಟಿ ಎತ್ತಿಡಲಾಗಿತ್ತು.!

ಹೀಗಾಗಿ ಈ ಬಾರಿ ಕೋವಿಡ್ ನಿಂದಾಗಿ ಬಜೆಟ್ಟಿನಲ್ಲಿ ಎತ್ತಿಟ್ಟ ಹಣದ ಜೊತೆಗೆ ಸರ್ಕಾರಕ್ಕೆ ಹೆಚ್ಚೆಂದರೆ 15,000 ಕೋಟಿ ಖರ್ಚಾಗಿರಬಹುದು ..

ಅಂದರೆ … ವ್ಯಾಕ್ಸಿನ್ ಗಾಗಿ 25,000 ಕೋಟಿ

ಪಡಿತರಕ್ಕಾಗಿ 15,000 ಕೋಟಿ

ಒಟ್ಟು 40,000 ಕೋಟಿ …

ಪೆಟ್ರೋಲ್ ತೆರಿಗೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿ ಯಲ್ಲಿ 40,000 ಕೋಟಿ ಕಳೆದರೆ ಉಳಿದ 3 ಲಕ್ಷ ಕೋಟಿ ಗಳ ಲೆಕ್ಕ???

– ಇನ್ನು ಭಾರತದ ಎಲ್ಲಾ ಜನರಿಗೆ ಬೇಕಿರುವ, ಮುಂದಿನ ವರ್ಷದ ಕೊನೆಯ ವೇಳೆಗೆ ಹಾಕಬಹುದಾದ, 200 ಕೋಟಿ ವ್ಯಾಕ್ಸಿನ್ ಗಳಿಗೆ ವೆಚ್ಚವಾಗುವುದು 1 ಲಕ್ಷ ಕೋಟಿ …

ಅದನ್ನೂ ಈಗಲೇ ಸೇರಿಸಿಬಿಟ್ಟರೂ ಸರ್ಕಾರಕ್ಕೆ ಒಟ್ಟಾರೆ ಯಾಗಿ ಮುಂದಿನ ಎರಡು ವರ್ಷಗಳಿಗೆ ಕೋವಿಡ್ ಹೆಚ್ಚುವರಿಯಾಗಿ ವೆಚ್ಚವಾಗುವುದು 1.15 ಲಕ್ಷ ಕೋಟಿ ಮಾತ್ರ..

ಕಳೆದ ಒಂದು ವರ್ಷದಲ್ಲಿ ಜನರಿಂದ ಸುಲಿದಿರುವ 3.4 ಲಕ್ಷ ಕೋಟಿಯಲ್ಲಿ 1.15 ಲಕ್ಷ ಕೋಟಿ ತೆಗೆದರೂ ಸರ್ಕಾರ ಕೋವಿಡ್ ಹೆಸರಲ್ಲಿ 2.25 ಲಕ್ಷ ಕೋಟಿ ರೂ. ಗಳು ಲೆಕ್ಕ ಕೊಡದ ಸುಲಿಗೆ ಎಂದಾಯಿತು..ಅಲ್ಲವೇ?

ಮೂರನೆಯದಾಗಿ: ಈಗಲಾದರೂ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾಗಬೇಕಲ್ಲವೇ?

ಏನಿಲ್ಲವೆಂದರೂ ಇಡೀ ದೇಶಕ್ಕೆ ವ್ಯಾಕ್ಸಿನ್ ಹಾಕಲು ಬೇಕಿರುವ ಹಣದ ಮೂರು ಪಟ್ಟು… ಹಾಗು ಪಡಿತರಕ್ಕೆ ಬೇಕಿರುವ ಮೂರು ಪಟ್ಟು ಹಣವನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ… ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

ಆದ್ದರಿಂದ… ಜನರ ಬಲಗೈಯನಲ್ಲಿರುವುದನ್ನು ಕಸಿದೂ ಎಡಗೈಗೆ ಕೊಟ್ಟು ಉಚಿತವಾಗಿ ಕೊಡಲಾಗುತ್ತಿದೆ ಎಂದು ಪ್ರಚಾರ ಮಾಡಿಕೊಳ್ಳುವುದು ಐಪಿಸ್ ಸೆಕ್ಷನ್ 415-420 ರ ಕಲಮುಗಳಡಿ ಮೋಸ, ವಂಚನೆ ಎಂಬ ಅಪರಾಧವಲ್ಲವೇ?

ವ್ಯಾಕ್ಸಿನ್ ಹೆಸರಿನಲ್ಲಿ ಅಗತ್ಯಕ್ಕಿಂತ ಮೂರು ಪಟ್ಟು ಹಣವನ್ನು ಸಂಗ್ರಹಿಸಿ ತಪ್ಪು ಲೆಕ್ಕವನ್ನು ನೀಡುವುದು ದೇಶದ್ರೋಹವಲ್ಲವೇ? ಸರ್ಕಾರಿ ಅಧಿಕಾರದ ದುರುಪಯೋಗವಲ್ಲವೇ?

ಕೋವಿಡ್ ಸಂಕಷ್ಟದಲ್ಲಿಯೂ ಬಡ-ಮಧ್ಯಮ ವರ್ಗದವರಿಂದ ಸುಲಿದ 3.4+0.60= 4ಲಕ್ಷ ಕೋಟಿ ಗುಳುಂ ಮಾಡಿರುವುದು ಭ್ರಷ್ಟಾಚಾರವಲ್ಲವೇ?

– ಶಿವಸುಂದರ್


ಇದನ್ನೂ ಓದಿ; ಪೆಗಾಸಸ್ ಹಗರಣ: ಗುರುವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣದ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...