Homeಮುಖಪುಟಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಇಡೀ ದೇಶಕ್ಕೆ ವ್ಯಾಕ್ಸಿನ್ ಮತ್ತು ಪಡಿತರ ನೀಡಲು ಬೇಕಿರುವ ಹಣದ ಮೂರು ಪಟ್ಟನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ... ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

- Advertisement -
- Advertisement -

2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಬಡವರಿಗೆ ಉಚಿತ ಪಡಿತರ ನೀಡಲು ಬಳಸಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದರು. ಇದು ಸುಳ್ಳು ಲೆಕ್ಕ ಎಂದು ಕನ್ನಡ ಖ್ಯಾತ ಚಿಂತಕ ಶಿವಸುಂದರ್ ತಮ್ಮ ಜಸ್ಟ್ ಆಸ್ಕಿಂಗ್ ಲೇಖನದಲ್ಲಿ ನಿರೂಪಿಸಿದ್ದಾರೆ. ಅದನ್ನು ನಾನುಗೌರಿ ಓದುಗರಿಗಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಪೆಟ್ರೋಲ್ ಬೆಲೆ ಏರಿಸಿ ಸಂಗ್ರಹಿಸಿದ 3.4 ಲಕ್ಷ ಕೋಟಿಗೆ ಸುಳ್ಳು ಲೆಕ್ಕ ಕೊಡುತ್ತಿರುವ ಮೋದಿ ಸರ್ಕಾರ..”

ಮೋದಿ ಸರ್ಕಾರದ ಹೊಸ ಪೆಟ್ರೋಲಿಯಂ ಮಂತ್ರಿ ಹರದೀಪ್ ಪುರಿ ಯವರು 2020-21 ನೇ ಸಾಲಿನಲೀ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿ ಜನರಿಂದ ಹೆಚ್ಚುವರಿಯಾಗಿ 3.4 ಲಕ್ಷ ಕೋಟಿ ರೂ. ಗಳನ್ನೂ ಸಂಗ್ರಹಿಸಲಾಗಿದೆ ಎಂದು ಮೊನ್ನೆ ಒಪ್ಪಿಕೊಂಡಿದ್ದಾರೆ.

ಆದರೆ ಅದರ ದೊಡ್ಡ ಭಾಗವನ್ನು ಜನರಿಗೆ ಉಚಿತ ವ್ಯಾಕ್ಸಿನ್ ಕೊಡಲು ಹಾಗು 2020 ರ ಏಪ್ರಿಲ್- ನವಂಬರ್ ಹಾಗು 2021 ರ ಮೇ-ಜೂನ್, ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ವ್ಯಯ ಮಾಡಲಾಗಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ…

ಇದನ್ನೂ ಓದಿ : ಪೆಟ್ರೋಲಿಯಂ ಸೆಸ್‌ನ 3.4 ಲಕ್ಷ ಕೋಟಿ ರೂಗಳನ್ನು ಉಚಿತ ಲಸಿಕೆ, ಪಡಿತರಕ್ಕಾಗಿ ಬಳಸಲಾಗಿದೆ: ಸಚಿವ ಹರ್ದೀಪ್ ಪುರಿ

ಈ ಹೇಳಿಕೆಯ ಮೂಲಕ ಮೋದಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ ಬಂದಿದೆ… :

ಮೊದಲಿಗೆ- ವ್ಯಾಕ್ಸಿನ್ ಉಚಿತವಾಗೇನೂ ಕೊಡುತ್ತಿಲ್ಲ..

ಮೋದಿ ಸರ್ಕಾರವು ಬಡ-ಮಧ್ಯಮ ವರ್ಗದ ಜನರಿಂದ ಸುಲಿದ ತೆರಿಗೆಯಿಂದ ಜನರಿಗೆ ವ್ಯಾಕ್ಸಿನ್-ಪಡಿತರ ಕೊಡುತ್ತಿದೆಯೇ ವಿನಾ, ಶ್ರೀಮಂತರಿಗೆ ತೆರಿಗೆ ಹಾಕುವ ಮೂಲಕವೋ, ಅಥವಾ ಸರ್ಕಾರದ ದುಂದು ವೆಚ್ಚಗಳನ್ನೋ ಕಡಿಮೆ ಮಾಡುವುದರಿಂದಲ್ಲ.

ಅರ್ಥಾತ್ ಸರ್ಕಾರ ಬಡವರಿಗೆ ಅವರಿಂದ ಸಂಗ್ರಹಿಸಿದ ಹಣದಿಂದಲೇ ವ್ಯಾಕ್ಸಿನ್- ಪಡಿತರ ಕೊಡುತ್ತಿದೆಯೇ ವಿನಾ ಉಚಿತವಾಗಿಯಲ್ಲ… ಆದ್ದರಿಂದ ಮೊದಲು ಉಚಿತ ವ್ಯಾಕ್ಸಿನ್, ಉಚಿತ ಪಡಿತರ ಎನ್ನುವ ಜನವಂಚಕ ಪ್ರಚಾರವನ್ನು ನಿಲ್ಲಿಸಬೇಕು…

ಎರಡನೆಯದಾಗಿ- ಉಳಿದ ಮೂರು ಕೋಟಿಗೆ ಲೆಕ್ಕವೆಲ್ಲಿ?
ಸರ್ಕಾರದ ಅಧಿಕೃತ ಹೇಳಿಕೆಯ ಪ್ರಕಾರ ಜುಲೈ 29 ರವರೆಗೆ ಕೇವಲ 45 ಕೋಟಿ ವ್ಯಾಕ್ಸಿನ್ ಗಳನ್ನೂ ಜನರಿಗೆ ನೀಡಿದೆ.

ಅದರ ಒಟ್ಟಾರೆ ಸರಾಸರಿ ಬೆಲೆ ವ್ಯಾಕ್ಸಿನ್ ಒಂದಕ್ಕೆ 500 ರೂ. ಎಂದಿಟ್ಟುಕೊಂಡರೂ ಈವರೆಗೆ ಸರ್ಕಾರ ಈ ಬಾಬತ್ತಿನಲ್ಲಿ ವೆಚ್ಚ ಮಾಡಿರುವುದು ಕೇವಲ 23,000 ಕೋಟಿ ರೂ. ಮಾತ್ರ ಎಂದಾಯಿತು!

ಅಂದರೆ ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿಯ ಶೇ. 6.7 ಭಾಗ ಮಾತ್ರ… ಉಳಿದದ್ದೇನಾಯ್ತು?

ವ್ಯಾಕ್ಸಿನ್ ಗಾಗಿ ಎಂದೇ 2021ರ ಬಜೆಟ್ಟಿನಲ್ಲಿ ಪೆಟ್ರೋಲ್ ತೆರಿಗೆಯನ್ನು ಹೊರತುಪಡಿಸಿ 66,000 ಕೋಟಿಗಳನ್ನು ಎತ್ತಿಡಲಾಗಿತ್ತು…

ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ ಹಣದಲ್ಲಿ ವ್ಯಾಕ್ಸಿನ್ ಕೊಡುತ್ತಿರುವುದಾದರೆ, ಅದಕ್ಕೆ ಮುಂಚೆಯೇ ಬಜೆಟ್ನಲ್ಲಿ ಎತ್ತಿಟ್ಟಿದ್ದ ವ್ಯಾಕ್ಸಿನ್ ಹಣದ ಲೆಕ್ಕವೇನು?

– 2020 ಮತ್ತು 2021 ರಲ್ಲಿ ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ಆದ ಖರ್ಚೆಷ್ಟು? 1.2 ಲಕ್ಷ ಕೋಟಿ ರೂಪಾಯಿಗಳು.

ಆದರೆ ಇದೆಲ್ಲವೂ ವಿಶೇಷ ಅಥವಾ ಹೆಚ್ಚುವರಿ ವೆಚ್ಚವಲ್ಲ.

2013 ರಲ್ಲಿ ಆಹಾರ ಭದ್ರತಾ ಕಾಯಿದೆ ಜಾರಿಯಾದ ಮೇಲೆ ಈ ದೇಶದ 83 ಕೋಟಿ ಜನರಿಗೆ ಪ್ರತಿವರ್ಷ ರಿಯಾಯತಿ ದರದಲ್ಲಿ ಆಹಾರ ಪಡಿತರವನ್ನು ಒದಗಿಸಲು ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಪ್ರತಿವರ್ಷ ಕೇಂದ್ರ ಬಜೆಟ್ಟಿನಿಂದ ಹಣವನ್ನು ಒದಗಿಸಲಾಗುತ್ತದೆ. ಅದರ ಭಾಗವಾಗಿಯೇ 2020ರಲ್ಲೇ ಈ ಬಾಬತ್ತಿಗೆ ಕೇಂದ್ರ ಬಜೆಟ್ಟಿನಲ್ಲಿ 1.15 ಲಕ್ಷ ಕೋಟಿ ಎತ್ತಿಡಲಾಗಿತ್ತು.!

ಹೀಗಾಗಿ ಈ ಬಾರಿ ಕೋವಿಡ್ ನಿಂದಾಗಿ ಬಜೆಟ್ಟಿನಲ್ಲಿ ಎತ್ತಿಟ್ಟ ಹಣದ ಜೊತೆಗೆ ಸರ್ಕಾರಕ್ಕೆ ಹೆಚ್ಚೆಂದರೆ 15,000 ಕೋಟಿ ಖರ್ಚಾಗಿರಬಹುದು ..

ಅಂದರೆ … ವ್ಯಾಕ್ಸಿನ್ ಗಾಗಿ 25,000 ಕೋಟಿ

ಪಡಿತರಕ್ಕಾಗಿ 15,000 ಕೋಟಿ

ಒಟ್ಟು 40,000 ಕೋಟಿ …

ಪೆಟ್ರೋಲ್ ತೆರಿಗೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿ ಯಲ್ಲಿ 40,000 ಕೋಟಿ ಕಳೆದರೆ ಉಳಿದ 3 ಲಕ್ಷ ಕೋಟಿ ಗಳ ಲೆಕ್ಕ???

– ಇನ್ನು ಭಾರತದ ಎಲ್ಲಾ ಜನರಿಗೆ ಬೇಕಿರುವ, ಮುಂದಿನ ವರ್ಷದ ಕೊನೆಯ ವೇಳೆಗೆ ಹಾಕಬಹುದಾದ, 200 ಕೋಟಿ ವ್ಯಾಕ್ಸಿನ್ ಗಳಿಗೆ ವೆಚ್ಚವಾಗುವುದು 1 ಲಕ್ಷ ಕೋಟಿ …

ಅದನ್ನೂ ಈಗಲೇ ಸೇರಿಸಿಬಿಟ್ಟರೂ ಸರ್ಕಾರಕ್ಕೆ ಒಟ್ಟಾರೆ ಯಾಗಿ ಮುಂದಿನ ಎರಡು ವರ್ಷಗಳಿಗೆ ಕೋವಿಡ್ ಹೆಚ್ಚುವರಿಯಾಗಿ ವೆಚ್ಚವಾಗುವುದು 1.15 ಲಕ್ಷ ಕೋಟಿ ಮಾತ್ರ..

ಕಳೆದ ಒಂದು ವರ್ಷದಲ್ಲಿ ಜನರಿಂದ ಸುಲಿದಿರುವ 3.4 ಲಕ್ಷ ಕೋಟಿಯಲ್ಲಿ 1.15 ಲಕ್ಷ ಕೋಟಿ ತೆಗೆದರೂ ಸರ್ಕಾರ ಕೋವಿಡ್ ಹೆಸರಲ್ಲಿ 2.25 ಲಕ್ಷ ಕೋಟಿ ರೂ. ಗಳು ಲೆಕ್ಕ ಕೊಡದ ಸುಲಿಗೆ ಎಂದಾಯಿತು..ಅಲ್ಲವೇ?

ಮೂರನೆಯದಾಗಿ: ಈಗಲಾದರೂ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾಗಬೇಕಲ್ಲವೇ?

ಏನಿಲ್ಲವೆಂದರೂ ಇಡೀ ದೇಶಕ್ಕೆ ವ್ಯಾಕ್ಸಿನ್ ಹಾಕಲು ಬೇಕಿರುವ ಹಣದ ಮೂರು ಪಟ್ಟು… ಹಾಗು ಪಡಿತರಕ್ಕೆ ಬೇಕಿರುವ ಮೂರು ಪಟ್ಟು ಹಣವನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ… ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

ಆದ್ದರಿಂದ… ಜನರ ಬಲಗೈಯನಲ್ಲಿರುವುದನ್ನು ಕಸಿದೂ ಎಡಗೈಗೆ ಕೊಟ್ಟು ಉಚಿತವಾಗಿ ಕೊಡಲಾಗುತ್ತಿದೆ ಎಂದು ಪ್ರಚಾರ ಮಾಡಿಕೊಳ್ಳುವುದು ಐಪಿಸ್ ಸೆಕ್ಷನ್ 415-420 ರ ಕಲಮುಗಳಡಿ ಮೋಸ, ವಂಚನೆ ಎಂಬ ಅಪರಾಧವಲ್ಲವೇ?

ವ್ಯಾಕ್ಸಿನ್ ಹೆಸರಿನಲ್ಲಿ ಅಗತ್ಯಕ್ಕಿಂತ ಮೂರು ಪಟ್ಟು ಹಣವನ್ನು ಸಂಗ್ರಹಿಸಿ ತಪ್ಪು ಲೆಕ್ಕವನ್ನು ನೀಡುವುದು ದೇಶದ್ರೋಹವಲ್ಲವೇ? ಸರ್ಕಾರಿ ಅಧಿಕಾರದ ದುರುಪಯೋಗವಲ್ಲವೇ?

ಕೋವಿಡ್ ಸಂಕಷ್ಟದಲ್ಲಿಯೂ ಬಡ-ಮಧ್ಯಮ ವರ್ಗದವರಿಂದ ಸುಲಿದ 3.4+0.60= 4ಲಕ್ಷ ಕೋಟಿ ಗುಳುಂ ಮಾಡಿರುವುದು ಭ್ರಷ್ಟಾಚಾರವಲ್ಲವೇ?

– ಶಿವಸುಂದರ್


ಇದನ್ನೂ ಓದಿ; ಪೆಗಾಸಸ್ ಹಗರಣ: ಗುರುವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...