Homeಮುಖಪುಟಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಇಡೀ ದೇಶಕ್ಕೆ ವ್ಯಾಕ್ಸಿನ್ ಮತ್ತು ಪಡಿತರ ನೀಡಲು ಬೇಕಿರುವ ಹಣದ ಮೂರು ಪಟ್ಟನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ... ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

- Advertisement -
- Advertisement -

2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಬಡವರಿಗೆ ಉಚಿತ ಪಡಿತರ ನೀಡಲು ಬಳಸಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದರು. ಇದು ಸುಳ್ಳು ಲೆಕ್ಕ ಎಂದು ಕನ್ನಡ ಖ್ಯಾತ ಚಿಂತಕ ಶಿವಸುಂದರ್ ತಮ್ಮ ಜಸ್ಟ್ ಆಸ್ಕಿಂಗ್ ಲೇಖನದಲ್ಲಿ ನಿರೂಪಿಸಿದ್ದಾರೆ. ಅದನ್ನು ನಾನುಗೌರಿ ಓದುಗರಿಗಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಪೆಟ್ರೋಲ್ ಬೆಲೆ ಏರಿಸಿ ಸಂಗ್ರಹಿಸಿದ 3.4 ಲಕ್ಷ ಕೋಟಿಗೆ ಸುಳ್ಳು ಲೆಕ್ಕ ಕೊಡುತ್ತಿರುವ ಮೋದಿ ಸರ್ಕಾರ..”

ಮೋದಿ ಸರ್ಕಾರದ ಹೊಸ ಪೆಟ್ರೋಲಿಯಂ ಮಂತ್ರಿ ಹರದೀಪ್ ಪುರಿ ಯವರು 2020-21 ನೇ ಸಾಲಿನಲೀ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿ ಜನರಿಂದ ಹೆಚ್ಚುವರಿಯಾಗಿ 3.4 ಲಕ್ಷ ಕೋಟಿ ರೂ. ಗಳನ್ನೂ ಸಂಗ್ರಹಿಸಲಾಗಿದೆ ಎಂದು ಮೊನ್ನೆ ಒಪ್ಪಿಕೊಂಡಿದ್ದಾರೆ.

ಆದರೆ ಅದರ ದೊಡ್ಡ ಭಾಗವನ್ನು ಜನರಿಗೆ ಉಚಿತ ವ್ಯಾಕ್ಸಿನ್ ಕೊಡಲು ಹಾಗು 2020 ರ ಏಪ್ರಿಲ್- ನವಂಬರ್ ಹಾಗು 2021 ರ ಮೇ-ಜೂನ್, ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ವ್ಯಯ ಮಾಡಲಾಗಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ…

ಇದನ್ನೂ ಓದಿ : ಪೆಟ್ರೋಲಿಯಂ ಸೆಸ್‌ನ 3.4 ಲಕ್ಷ ಕೋಟಿ ರೂಗಳನ್ನು ಉಚಿತ ಲಸಿಕೆ, ಪಡಿತರಕ್ಕಾಗಿ ಬಳಸಲಾಗಿದೆ: ಸಚಿವ ಹರ್ದೀಪ್ ಪುರಿ

ಈ ಹೇಳಿಕೆಯ ಮೂಲಕ ಮೋದಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ ಬಂದಿದೆ… :

ಮೊದಲಿಗೆ- ವ್ಯಾಕ್ಸಿನ್ ಉಚಿತವಾಗೇನೂ ಕೊಡುತ್ತಿಲ್ಲ..

ಮೋದಿ ಸರ್ಕಾರವು ಬಡ-ಮಧ್ಯಮ ವರ್ಗದ ಜನರಿಂದ ಸುಲಿದ ತೆರಿಗೆಯಿಂದ ಜನರಿಗೆ ವ್ಯಾಕ್ಸಿನ್-ಪಡಿತರ ಕೊಡುತ್ತಿದೆಯೇ ವಿನಾ, ಶ್ರೀಮಂತರಿಗೆ ತೆರಿಗೆ ಹಾಕುವ ಮೂಲಕವೋ, ಅಥವಾ ಸರ್ಕಾರದ ದುಂದು ವೆಚ್ಚಗಳನ್ನೋ ಕಡಿಮೆ ಮಾಡುವುದರಿಂದಲ್ಲ.

ಅರ್ಥಾತ್ ಸರ್ಕಾರ ಬಡವರಿಗೆ ಅವರಿಂದ ಸಂಗ್ರಹಿಸಿದ ಹಣದಿಂದಲೇ ವ್ಯಾಕ್ಸಿನ್- ಪಡಿತರ ಕೊಡುತ್ತಿದೆಯೇ ವಿನಾ ಉಚಿತವಾಗಿಯಲ್ಲ… ಆದ್ದರಿಂದ ಮೊದಲು ಉಚಿತ ವ್ಯಾಕ್ಸಿನ್, ಉಚಿತ ಪಡಿತರ ಎನ್ನುವ ಜನವಂಚಕ ಪ್ರಚಾರವನ್ನು ನಿಲ್ಲಿಸಬೇಕು…

ಎರಡನೆಯದಾಗಿ- ಉಳಿದ ಮೂರು ಕೋಟಿಗೆ ಲೆಕ್ಕವೆಲ್ಲಿ?
ಸರ್ಕಾರದ ಅಧಿಕೃತ ಹೇಳಿಕೆಯ ಪ್ರಕಾರ ಜುಲೈ 29 ರವರೆಗೆ ಕೇವಲ 45 ಕೋಟಿ ವ್ಯಾಕ್ಸಿನ್ ಗಳನ್ನೂ ಜನರಿಗೆ ನೀಡಿದೆ.

ಅದರ ಒಟ್ಟಾರೆ ಸರಾಸರಿ ಬೆಲೆ ವ್ಯಾಕ್ಸಿನ್ ಒಂದಕ್ಕೆ 500 ರೂ. ಎಂದಿಟ್ಟುಕೊಂಡರೂ ಈವರೆಗೆ ಸರ್ಕಾರ ಈ ಬಾಬತ್ತಿನಲ್ಲಿ ವೆಚ್ಚ ಮಾಡಿರುವುದು ಕೇವಲ 23,000 ಕೋಟಿ ರೂ. ಮಾತ್ರ ಎಂದಾಯಿತು!

ಅಂದರೆ ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿಯ ಶೇ. 6.7 ಭಾಗ ಮಾತ್ರ… ಉಳಿದದ್ದೇನಾಯ್ತು?

ವ್ಯಾಕ್ಸಿನ್ ಗಾಗಿ ಎಂದೇ 2021ರ ಬಜೆಟ್ಟಿನಲ್ಲಿ ಪೆಟ್ರೋಲ್ ತೆರಿಗೆಯನ್ನು ಹೊರತುಪಡಿಸಿ 66,000 ಕೋಟಿಗಳನ್ನು ಎತ್ತಿಡಲಾಗಿತ್ತು…

ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ ಹಣದಲ್ಲಿ ವ್ಯಾಕ್ಸಿನ್ ಕೊಡುತ್ತಿರುವುದಾದರೆ, ಅದಕ್ಕೆ ಮುಂಚೆಯೇ ಬಜೆಟ್ನಲ್ಲಿ ಎತ್ತಿಟ್ಟಿದ್ದ ವ್ಯಾಕ್ಸಿನ್ ಹಣದ ಲೆಕ್ಕವೇನು?

– 2020 ಮತ್ತು 2021 ರಲ್ಲಿ ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ಆದ ಖರ್ಚೆಷ್ಟು? 1.2 ಲಕ್ಷ ಕೋಟಿ ರೂಪಾಯಿಗಳು.

ಆದರೆ ಇದೆಲ್ಲವೂ ವಿಶೇಷ ಅಥವಾ ಹೆಚ್ಚುವರಿ ವೆಚ್ಚವಲ್ಲ.

2013 ರಲ್ಲಿ ಆಹಾರ ಭದ್ರತಾ ಕಾಯಿದೆ ಜಾರಿಯಾದ ಮೇಲೆ ಈ ದೇಶದ 83 ಕೋಟಿ ಜನರಿಗೆ ಪ್ರತಿವರ್ಷ ರಿಯಾಯತಿ ದರದಲ್ಲಿ ಆಹಾರ ಪಡಿತರವನ್ನು ಒದಗಿಸಲು ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಪ್ರತಿವರ್ಷ ಕೇಂದ್ರ ಬಜೆಟ್ಟಿನಿಂದ ಹಣವನ್ನು ಒದಗಿಸಲಾಗುತ್ತದೆ. ಅದರ ಭಾಗವಾಗಿಯೇ 2020ರಲ್ಲೇ ಈ ಬಾಬತ್ತಿಗೆ ಕೇಂದ್ರ ಬಜೆಟ್ಟಿನಲ್ಲಿ 1.15 ಲಕ್ಷ ಕೋಟಿ ಎತ್ತಿಡಲಾಗಿತ್ತು.!

ಹೀಗಾಗಿ ಈ ಬಾರಿ ಕೋವಿಡ್ ನಿಂದಾಗಿ ಬಜೆಟ್ಟಿನಲ್ಲಿ ಎತ್ತಿಟ್ಟ ಹಣದ ಜೊತೆಗೆ ಸರ್ಕಾರಕ್ಕೆ ಹೆಚ್ಚೆಂದರೆ 15,000 ಕೋಟಿ ಖರ್ಚಾಗಿರಬಹುದು ..

ಅಂದರೆ … ವ್ಯಾಕ್ಸಿನ್ ಗಾಗಿ 25,000 ಕೋಟಿ

ಪಡಿತರಕ್ಕಾಗಿ 15,000 ಕೋಟಿ

ಒಟ್ಟು 40,000 ಕೋಟಿ …

ಪೆಟ್ರೋಲ್ ತೆರಿಗೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿ ಯಲ್ಲಿ 40,000 ಕೋಟಿ ಕಳೆದರೆ ಉಳಿದ 3 ಲಕ್ಷ ಕೋಟಿ ಗಳ ಲೆಕ್ಕ???

– ಇನ್ನು ಭಾರತದ ಎಲ್ಲಾ ಜನರಿಗೆ ಬೇಕಿರುವ, ಮುಂದಿನ ವರ್ಷದ ಕೊನೆಯ ವೇಳೆಗೆ ಹಾಕಬಹುದಾದ, 200 ಕೋಟಿ ವ್ಯಾಕ್ಸಿನ್ ಗಳಿಗೆ ವೆಚ್ಚವಾಗುವುದು 1 ಲಕ್ಷ ಕೋಟಿ …

ಅದನ್ನೂ ಈಗಲೇ ಸೇರಿಸಿಬಿಟ್ಟರೂ ಸರ್ಕಾರಕ್ಕೆ ಒಟ್ಟಾರೆ ಯಾಗಿ ಮುಂದಿನ ಎರಡು ವರ್ಷಗಳಿಗೆ ಕೋವಿಡ್ ಹೆಚ್ಚುವರಿಯಾಗಿ ವೆಚ್ಚವಾಗುವುದು 1.15 ಲಕ್ಷ ಕೋಟಿ ಮಾತ್ರ..

ಕಳೆದ ಒಂದು ವರ್ಷದಲ್ಲಿ ಜನರಿಂದ ಸುಲಿದಿರುವ 3.4 ಲಕ್ಷ ಕೋಟಿಯಲ್ಲಿ 1.15 ಲಕ್ಷ ಕೋಟಿ ತೆಗೆದರೂ ಸರ್ಕಾರ ಕೋವಿಡ್ ಹೆಸರಲ್ಲಿ 2.25 ಲಕ್ಷ ಕೋಟಿ ರೂ. ಗಳು ಲೆಕ್ಕ ಕೊಡದ ಸುಲಿಗೆ ಎಂದಾಯಿತು..ಅಲ್ಲವೇ?

ಮೂರನೆಯದಾಗಿ: ಈಗಲಾದರೂ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾಗಬೇಕಲ್ಲವೇ?

ಏನಿಲ್ಲವೆಂದರೂ ಇಡೀ ದೇಶಕ್ಕೆ ವ್ಯಾಕ್ಸಿನ್ ಹಾಕಲು ಬೇಕಿರುವ ಹಣದ ಮೂರು ಪಟ್ಟು… ಹಾಗು ಪಡಿತರಕ್ಕೆ ಬೇಕಿರುವ ಮೂರು ಪಟ್ಟು ಹಣವನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ… ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

ಆದ್ದರಿಂದ… ಜನರ ಬಲಗೈಯನಲ್ಲಿರುವುದನ್ನು ಕಸಿದೂ ಎಡಗೈಗೆ ಕೊಟ್ಟು ಉಚಿತವಾಗಿ ಕೊಡಲಾಗುತ್ತಿದೆ ಎಂದು ಪ್ರಚಾರ ಮಾಡಿಕೊಳ್ಳುವುದು ಐಪಿಸ್ ಸೆಕ್ಷನ್ 415-420 ರ ಕಲಮುಗಳಡಿ ಮೋಸ, ವಂಚನೆ ಎಂಬ ಅಪರಾಧವಲ್ಲವೇ?

ವ್ಯಾಕ್ಸಿನ್ ಹೆಸರಿನಲ್ಲಿ ಅಗತ್ಯಕ್ಕಿಂತ ಮೂರು ಪಟ್ಟು ಹಣವನ್ನು ಸಂಗ್ರಹಿಸಿ ತಪ್ಪು ಲೆಕ್ಕವನ್ನು ನೀಡುವುದು ದೇಶದ್ರೋಹವಲ್ಲವೇ? ಸರ್ಕಾರಿ ಅಧಿಕಾರದ ದುರುಪಯೋಗವಲ್ಲವೇ?

ಕೋವಿಡ್ ಸಂಕಷ್ಟದಲ್ಲಿಯೂ ಬಡ-ಮಧ್ಯಮ ವರ್ಗದವರಿಂದ ಸುಲಿದ 3.4+0.60= 4ಲಕ್ಷ ಕೋಟಿ ಗುಳುಂ ಮಾಡಿರುವುದು ಭ್ರಷ್ಟಾಚಾರವಲ್ಲವೇ?

– ಶಿವಸುಂದರ್


ಇದನ್ನೂ ಓದಿ; ಪೆಗಾಸಸ್ ಹಗರಣ: ಗುರುವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...