Homeಮುಖಪುಟಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಇಡೀ ದೇಶಕ್ಕೆ ವ್ಯಾಕ್ಸಿನ್ ಮತ್ತು ಪಡಿತರ ನೀಡಲು ಬೇಕಿರುವ ಹಣದ ಮೂರು ಪಟ್ಟನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ... ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

- Advertisement -
- Advertisement -

2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಬಡವರಿಗೆ ಉಚಿತ ಪಡಿತರ ನೀಡಲು ಬಳಸಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದರು. ಇದು ಸುಳ್ಳು ಲೆಕ್ಕ ಎಂದು ಕನ್ನಡ ಖ್ಯಾತ ಚಿಂತಕ ಶಿವಸುಂದರ್ ತಮ್ಮ ಜಸ್ಟ್ ಆಸ್ಕಿಂಗ್ ಲೇಖನದಲ್ಲಿ ನಿರೂಪಿಸಿದ್ದಾರೆ. ಅದನ್ನು ನಾನುಗೌರಿ ಓದುಗರಿಗಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಪೆಟ್ರೋಲ್ ಬೆಲೆ ಏರಿಸಿ ಸಂಗ್ರಹಿಸಿದ 3.4 ಲಕ್ಷ ಕೋಟಿಗೆ ಸುಳ್ಳು ಲೆಕ್ಕ ಕೊಡುತ್ತಿರುವ ಮೋದಿ ಸರ್ಕಾರ..”

ಮೋದಿ ಸರ್ಕಾರದ ಹೊಸ ಪೆಟ್ರೋಲಿಯಂ ಮಂತ್ರಿ ಹರದೀಪ್ ಪುರಿ ಯವರು 2020-21 ನೇ ಸಾಲಿನಲೀ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿ ಜನರಿಂದ ಹೆಚ್ಚುವರಿಯಾಗಿ 3.4 ಲಕ್ಷ ಕೋಟಿ ರೂ. ಗಳನ್ನೂ ಸಂಗ್ರಹಿಸಲಾಗಿದೆ ಎಂದು ಮೊನ್ನೆ ಒಪ್ಪಿಕೊಂಡಿದ್ದಾರೆ.

ಆದರೆ ಅದರ ದೊಡ್ಡ ಭಾಗವನ್ನು ಜನರಿಗೆ ಉಚಿತ ವ್ಯಾಕ್ಸಿನ್ ಕೊಡಲು ಹಾಗು 2020 ರ ಏಪ್ರಿಲ್- ನವಂಬರ್ ಹಾಗು 2021 ರ ಮೇ-ಜೂನ್, ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ವ್ಯಯ ಮಾಡಲಾಗಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ…

ಇದನ್ನೂ ಓದಿ : ಪೆಟ್ರೋಲಿಯಂ ಸೆಸ್‌ನ 3.4 ಲಕ್ಷ ಕೋಟಿ ರೂಗಳನ್ನು ಉಚಿತ ಲಸಿಕೆ, ಪಡಿತರಕ್ಕಾಗಿ ಬಳಸಲಾಗಿದೆ: ಸಚಿವ ಹರ್ದೀಪ್ ಪುರಿ

ಈ ಹೇಳಿಕೆಯ ಮೂಲಕ ಮೋದಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ ಬಂದಿದೆ… :

ಮೊದಲಿಗೆ- ವ್ಯಾಕ್ಸಿನ್ ಉಚಿತವಾಗೇನೂ ಕೊಡುತ್ತಿಲ್ಲ..

ಮೋದಿ ಸರ್ಕಾರವು ಬಡ-ಮಧ್ಯಮ ವರ್ಗದ ಜನರಿಂದ ಸುಲಿದ ತೆರಿಗೆಯಿಂದ ಜನರಿಗೆ ವ್ಯಾಕ್ಸಿನ್-ಪಡಿತರ ಕೊಡುತ್ತಿದೆಯೇ ವಿನಾ, ಶ್ರೀಮಂತರಿಗೆ ತೆರಿಗೆ ಹಾಕುವ ಮೂಲಕವೋ, ಅಥವಾ ಸರ್ಕಾರದ ದುಂದು ವೆಚ್ಚಗಳನ್ನೋ ಕಡಿಮೆ ಮಾಡುವುದರಿಂದಲ್ಲ.

ಅರ್ಥಾತ್ ಸರ್ಕಾರ ಬಡವರಿಗೆ ಅವರಿಂದ ಸಂಗ್ರಹಿಸಿದ ಹಣದಿಂದಲೇ ವ್ಯಾಕ್ಸಿನ್- ಪಡಿತರ ಕೊಡುತ್ತಿದೆಯೇ ವಿನಾ ಉಚಿತವಾಗಿಯಲ್ಲ… ಆದ್ದರಿಂದ ಮೊದಲು ಉಚಿತ ವ್ಯಾಕ್ಸಿನ್, ಉಚಿತ ಪಡಿತರ ಎನ್ನುವ ಜನವಂಚಕ ಪ್ರಚಾರವನ್ನು ನಿಲ್ಲಿಸಬೇಕು…

ಎರಡನೆಯದಾಗಿ- ಉಳಿದ ಮೂರು ಕೋಟಿಗೆ ಲೆಕ್ಕವೆಲ್ಲಿ?
ಸರ್ಕಾರದ ಅಧಿಕೃತ ಹೇಳಿಕೆಯ ಪ್ರಕಾರ ಜುಲೈ 29 ರವರೆಗೆ ಕೇವಲ 45 ಕೋಟಿ ವ್ಯಾಕ್ಸಿನ್ ಗಳನ್ನೂ ಜನರಿಗೆ ನೀಡಿದೆ.

ಅದರ ಒಟ್ಟಾರೆ ಸರಾಸರಿ ಬೆಲೆ ವ್ಯಾಕ್ಸಿನ್ ಒಂದಕ್ಕೆ 500 ರೂ. ಎಂದಿಟ್ಟುಕೊಂಡರೂ ಈವರೆಗೆ ಸರ್ಕಾರ ಈ ಬಾಬತ್ತಿನಲ್ಲಿ ವೆಚ್ಚ ಮಾಡಿರುವುದು ಕೇವಲ 23,000 ಕೋಟಿ ರೂ. ಮಾತ್ರ ಎಂದಾಯಿತು!

ಅಂದರೆ ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿಯ ಶೇ. 6.7 ಭಾಗ ಮಾತ್ರ… ಉಳಿದದ್ದೇನಾಯ್ತು?

ವ್ಯಾಕ್ಸಿನ್ ಗಾಗಿ ಎಂದೇ 2021ರ ಬಜೆಟ್ಟಿನಲ್ಲಿ ಪೆಟ್ರೋಲ್ ತೆರಿಗೆಯನ್ನು ಹೊರತುಪಡಿಸಿ 66,000 ಕೋಟಿಗಳನ್ನು ಎತ್ತಿಡಲಾಗಿತ್ತು…

ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ ಹಣದಲ್ಲಿ ವ್ಯಾಕ್ಸಿನ್ ಕೊಡುತ್ತಿರುವುದಾದರೆ, ಅದಕ್ಕೆ ಮುಂಚೆಯೇ ಬಜೆಟ್ನಲ್ಲಿ ಎತ್ತಿಟ್ಟಿದ್ದ ವ್ಯಾಕ್ಸಿನ್ ಹಣದ ಲೆಕ್ಕವೇನು?

– 2020 ಮತ್ತು 2021 ರಲ್ಲಿ ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ಆದ ಖರ್ಚೆಷ್ಟು? 1.2 ಲಕ್ಷ ಕೋಟಿ ರೂಪಾಯಿಗಳು.

ಆದರೆ ಇದೆಲ್ಲವೂ ವಿಶೇಷ ಅಥವಾ ಹೆಚ್ಚುವರಿ ವೆಚ್ಚವಲ್ಲ.

2013 ರಲ್ಲಿ ಆಹಾರ ಭದ್ರತಾ ಕಾಯಿದೆ ಜಾರಿಯಾದ ಮೇಲೆ ಈ ದೇಶದ 83 ಕೋಟಿ ಜನರಿಗೆ ಪ್ರತಿವರ್ಷ ರಿಯಾಯತಿ ದರದಲ್ಲಿ ಆಹಾರ ಪಡಿತರವನ್ನು ಒದಗಿಸಲು ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಪ್ರತಿವರ್ಷ ಕೇಂದ್ರ ಬಜೆಟ್ಟಿನಿಂದ ಹಣವನ್ನು ಒದಗಿಸಲಾಗುತ್ತದೆ. ಅದರ ಭಾಗವಾಗಿಯೇ 2020ರಲ್ಲೇ ಈ ಬಾಬತ್ತಿಗೆ ಕೇಂದ್ರ ಬಜೆಟ್ಟಿನಲ್ಲಿ 1.15 ಲಕ್ಷ ಕೋಟಿ ಎತ್ತಿಡಲಾಗಿತ್ತು.!

ಹೀಗಾಗಿ ಈ ಬಾರಿ ಕೋವಿಡ್ ನಿಂದಾಗಿ ಬಜೆಟ್ಟಿನಲ್ಲಿ ಎತ್ತಿಟ್ಟ ಹಣದ ಜೊತೆಗೆ ಸರ್ಕಾರಕ್ಕೆ ಹೆಚ್ಚೆಂದರೆ 15,000 ಕೋಟಿ ಖರ್ಚಾಗಿರಬಹುದು ..

ಅಂದರೆ … ವ್ಯಾಕ್ಸಿನ್ ಗಾಗಿ 25,000 ಕೋಟಿ

ಪಡಿತರಕ್ಕಾಗಿ 15,000 ಕೋಟಿ

ಒಟ್ಟು 40,000 ಕೋಟಿ …

ಪೆಟ್ರೋಲ್ ತೆರಿಗೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿ ಯಲ್ಲಿ 40,000 ಕೋಟಿ ಕಳೆದರೆ ಉಳಿದ 3 ಲಕ್ಷ ಕೋಟಿ ಗಳ ಲೆಕ್ಕ???

– ಇನ್ನು ಭಾರತದ ಎಲ್ಲಾ ಜನರಿಗೆ ಬೇಕಿರುವ, ಮುಂದಿನ ವರ್ಷದ ಕೊನೆಯ ವೇಳೆಗೆ ಹಾಕಬಹುದಾದ, 200 ಕೋಟಿ ವ್ಯಾಕ್ಸಿನ್ ಗಳಿಗೆ ವೆಚ್ಚವಾಗುವುದು 1 ಲಕ್ಷ ಕೋಟಿ …

ಅದನ್ನೂ ಈಗಲೇ ಸೇರಿಸಿಬಿಟ್ಟರೂ ಸರ್ಕಾರಕ್ಕೆ ಒಟ್ಟಾರೆ ಯಾಗಿ ಮುಂದಿನ ಎರಡು ವರ್ಷಗಳಿಗೆ ಕೋವಿಡ್ ಹೆಚ್ಚುವರಿಯಾಗಿ ವೆಚ್ಚವಾಗುವುದು 1.15 ಲಕ್ಷ ಕೋಟಿ ಮಾತ್ರ..

ಕಳೆದ ಒಂದು ವರ್ಷದಲ್ಲಿ ಜನರಿಂದ ಸುಲಿದಿರುವ 3.4 ಲಕ್ಷ ಕೋಟಿಯಲ್ಲಿ 1.15 ಲಕ್ಷ ಕೋಟಿ ತೆಗೆದರೂ ಸರ್ಕಾರ ಕೋವಿಡ್ ಹೆಸರಲ್ಲಿ 2.25 ಲಕ್ಷ ಕೋಟಿ ರೂ. ಗಳು ಲೆಕ್ಕ ಕೊಡದ ಸುಲಿಗೆ ಎಂದಾಯಿತು..ಅಲ್ಲವೇ?

ಮೂರನೆಯದಾಗಿ: ಈಗಲಾದರೂ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾಗಬೇಕಲ್ಲವೇ?

ಏನಿಲ್ಲವೆಂದರೂ ಇಡೀ ದೇಶಕ್ಕೆ ವ್ಯಾಕ್ಸಿನ್ ಹಾಕಲು ಬೇಕಿರುವ ಹಣದ ಮೂರು ಪಟ್ಟು… ಹಾಗು ಪಡಿತರಕ್ಕೆ ಬೇಕಿರುವ ಮೂರು ಪಟ್ಟು ಹಣವನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ… ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

ಆದ್ದರಿಂದ… ಜನರ ಬಲಗೈಯನಲ್ಲಿರುವುದನ್ನು ಕಸಿದೂ ಎಡಗೈಗೆ ಕೊಟ್ಟು ಉಚಿತವಾಗಿ ಕೊಡಲಾಗುತ್ತಿದೆ ಎಂದು ಪ್ರಚಾರ ಮಾಡಿಕೊಳ್ಳುವುದು ಐಪಿಸ್ ಸೆಕ್ಷನ್ 415-420 ರ ಕಲಮುಗಳಡಿ ಮೋಸ, ವಂಚನೆ ಎಂಬ ಅಪರಾಧವಲ್ಲವೇ?

ವ್ಯಾಕ್ಸಿನ್ ಹೆಸರಿನಲ್ಲಿ ಅಗತ್ಯಕ್ಕಿಂತ ಮೂರು ಪಟ್ಟು ಹಣವನ್ನು ಸಂಗ್ರಹಿಸಿ ತಪ್ಪು ಲೆಕ್ಕವನ್ನು ನೀಡುವುದು ದೇಶದ್ರೋಹವಲ್ಲವೇ? ಸರ್ಕಾರಿ ಅಧಿಕಾರದ ದುರುಪಯೋಗವಲ್ಲವೇ?

ಕೋವಿಡ್ ಸಂಕಷ್ಟದಲ್ಲಿಯೂ ಬಡ-ಮಧ್ಯಮ ವರ್ಗದವರಿಂದ ಸುಲಿದ 3.4+0.60= 4ಲಕ್ಷ ಕೋಟಿ ಗುಳುಂ ಮಾಡಿರುವುದು ಭ್ರಷ್ಟಾಚಾರವಲ್ಲವೇ?

– ಶಿವಸುಂದರ್


ಇದನ್ನೂ ಓದಿ; ಪೆಗಾಸಸ್ ಹಗರಣ: ಗುರುವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....