Homeಮುಖಪುಟಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಇಡೀ ದೇಶಕ್ಕೆ ವ್ಯಾಕ್ಸಿನ್ ಮತ್ತು ಪಡಿತರ ನೀಡಲು ಬೇಕಿರುವ ಹಣದ ಮೂರು ಪಟ್ಟನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ... ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

- Advertisement -
- Advertisement -

2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಬಡವರಿಗೆ ಉಚಿತ ಪಡಿತರ ನೀಡಲು ಬಳಸಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದರು. ಇದು ಸುಳ್ಳು ಲೆಕ್ಕ ಎಂದು ಕನ್ನಡ ಖ್ಯಾತ ಚಿಂತಕ ಶಿವಸುಂದರ್ ತಮ್ಮ ಜಸ್ಟ್ ಆಸ್ಕಿಂಗ್ ಲೇಖನದಲ್ಲಿ ನಿರೂಪಿಸಿದ್ದಾರೆ. ಅದನ್ನು ನಾನುಗೌರಿ ಓದುಗರಿಗಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಪೆಟ್ರೋಲ್ ಬೆಲೆ ಏರಿಸಿ ಸಂಗ್ರಹಿಸಿದ 3.4 ಲಕ್ಷ ಕೋಟಿಗೆ ಸುಳ್ಳು ಲೆಕ್ಕ ಕೊಡುತ್ತಿರುವ ಮೋದಿ ಸರ್ಕಾರ..”

ಮೋದಿ ಸರ್ಕಾರದ ಹೊಸ ಪೆಟ್ರೋಲಿಯಂ ಮಂತ್ರಿ ಹರದೀಪ್ ಪುರಿ ಯವರು 2020-21 ನೇ ಸಾಲಿನಲೀ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿ ಜನರಿಂದ ಹೆಚ್ಚುವರಿಯಾಗಿ 3.4 ಲಕ್ಷ ಕೋಟಿ ರೂ. ಗಳನ್ನೂ ಸಂಗ್ರಹಿಸಲಾಗಿದೆ ಎಂದು ಮೊನ್ನೆ ಒಪ್ಪಿಕೊಂಡಿದ್ದಾರೆ.

ಆದರೆ ಅದರ ದೊಡ್ಡ ಭಾಗವನ್ನು ಜನರಿಗೆ ಉಚಿತ ವ್ಯಾಕ್ಸಿನ್ ಕೊಡಲು ಹಾಗು 2020 ರ ಏಪ್ರಿಲ್- ನವಂಬರ್ ಹಾಗು 2021 ರ ಮೇ-ಜೂನ್, ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ವ್ಯಯ ಮಾಡಲಾಗಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ…

ಇದನ್ನೂ ಓದಿ : ಪೆಟ್ರೋಲಿಯಂ ಸೆಸ್‌ನ 3.4 ಲಕ್ಷ ಕೋಟಿ ರೂಗಳನ್ನು ಉಚಿತ ಲಸಿಕೆ, ಪಡಿತರಕ್ಕಾಗಿ ಬಳಸಲಾಗಿದೆ: ಸಚಿವ ಹರ್ದೀಪ್ ಪುರಿ

ಈ ಹೇಳಿಕೆಯ ಮೂಲಕ ಮೋದಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ ಬಂದಿದೆ… :

ಮೊದಲಿಗೆ- ವ್ಯಾಕ್ಸಿನ್ ಉಚಿತವಾಗೇನೂ ಕೊಡುತ್ತಿಲ್ಲ..

ಮೋದಿ ಸರ್ಕಾರವು ಬಡ-ಮಧ್ಯಮ ವರ್ಗದ ಜನರಿಂದ ಸುಲಿದ ತೆರಿಗೆಯಿಂದ ಜನರಿಗೆ ವ್ಯಾಕ್ಸಿನ್-ಪಡಿತರ ಕೊಡುತ್ತಿದೆಯೇ ವಿನಾ, ಶ್ರೀಮಂತರಿಗೆ ತೆರಿಗೆ ಹಾಕುವ ಮೂಲಕವೋ, ಅಥವಾ ಸರ್ಕಾರದ ದುಂದು ವೆಚ್ಚಗಳನ್ನೋ ಕಡಿಮೆ ಮಾಡುವುದರಿಂದಲ್ಲ.

ಅರ್ಥಾತ್ ಸರ್ಕಾರ ಬಡವರಿಗೆ ಅವರಿಂದ ಸಂಗ್ರಹಿಸಿದ ಹಣದಿಂದಲೇ ವ್ಯಾಕ್ಸಿನ್- ಪಡಿತರ ಕೊಡುತ್ತಿದೆಯೇ ವಿನಾ ಉಚಿತವಾಗಿಯಲ್ಲ… ಆದ್ದರಿಂದ ಮೊದಲು ಉಚಿತ ವ್ಯಾಕ್ಸಿನ್, ಉಚಿತ ಪಡಿತರ ಎನ್ನುವ ಜನವಂಚಕ ಪ್ರಚಾರವನ್ನು ನಿಲ್ಲಿಸಬೇಕು…

ಎರಡನೆಯದಾಗಿ- ಉಳಿದ ಮೂರು ಕೋಟಿಗೆ ಲೆಕ್ಕವೆಲ್ಲಿ?
ಸರ್ಕಾರದ ಅಧಿಕೃತ ಹೇಳಿಕೆಯ ಪ್ರಕಾರ ಜುಲೈ 29 ರವರೆಗೆ ಕೇವಲ 45 ಕೋಟಿ ವ್ಯಾಕ್ಸಿನ್ ಗಳನ್ನೂ ಜನರಿಗೆ ನೀಡಿದೆ.

ಅದರ ಒಟ್ಟಾರೆ ಸರಾಸರಿ ಬೆಲೆ ವ್ಯಾಕ್ಸಿನ್ ಒಂದಕ್ಕೆ 500 ರೂ. ಎಂದಿಟ್ಟುಕೊಂಡರೂ ಈವರೆಗೆ ಸರ್ಕಾರ ಈ ಬಾಬತ್ತಿನಲ್ಲಿ ವೆಚ್ಚ ಮಾಡಿರುವುದು ಕೇವಲ 23,000 ಕೋಟಿ ರೂ. ಮಾತ್ರ ಎಂದಾಯಿತು!

ಅಂದರೆ ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿಯ ಶೇ. 6.7 ಭಾಗ ಮಾತ್ರ… ಉಳಿದದ್ದೇನಾಯ್ತು?

ವ್ಯಾಕ್ಸಿನ್ ಗಾಗಿ ಎಂದೇ 2021ರ ಬಜೆಟ್ಟಿನಲ್ಲಿ ಪೆಟ್ರೋಲ್ ತೆರಿಗೆಯನ್ನು ಹೊರತುಪಡಿಸಿ 66,000 ಕೋಟಿಗಳನ್ನು ಎತ್ತಿಡಲಾಗಿತ್ತು…

ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ ಹಣದಲ್ಲಿ ವ್ಯಾಕ್ಸಿನ್ ಕೊಡುತ್ತಿರುವುದಾದರೆ, ಅದಕ್ಕೆ ಮುಂಚೆಯೇ ಬಜೆಟ್ನಲ್ಲಿ ಎತ್ತಿಟ್ಟಿದ್ದ ವ್ಯಾಕ್ಸಿನ್ ಹಣದ ಲೆಕ್ಕವೇನು?

– 2020 ಮತ್ತು 2021 ರಲ್ಲಿ ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ಆದ ಖರ್ಚೆಷ್ಟು? 1.2 ಲಕ್ಷ ಕೋಟಿ ರೂಪಾಯಿಗಳು.

ಆದರೆ ಇದೆಲ್ಲವೂ ವಿಶೇಷ ಅಥವಾ ಹೆಚ್ಚುವರಿ ವೆಚ್ಚವಲ್ಲ.

2013 ರಲ್ಲಿ ಆಹಾರ ಭದ್ರತಾ ಕಾಯಿದೆ ಜಾರಿಯಾದ ಮೇಲೆ ಈ ದೇಶದ 83 ಕೋಟಿ ಜನರಿಗೆ ಪ್ರತಿವರ್ಷ ರಿಯಾಯತಿ ದರದಲ್ಲಿ ಆಹಾರ ಪಡಿತರವನ್ನು ಒದಗಿಸಲು ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಪ್ರತಿವರ್ಷ ಕೇಂದ್ರ ಬಜೆಟ್ಟಿನಿಂದ ಹಣವನ್ನು ಒದಗಿಸಲಾಗುತ್ತದೆ. ಅದರ ಭಾಗವಾಗಿಯೇ 2020ರಲ್ಲೇ ಈ ಬಾಬತ್ತಿಗೆ ಕೇಂದ್ರ ಬಜೆಟ್ಟಿನಲ್ಲಿ 1.15 ಲಕ್ಷ ಕೋಟಿ ಎತ್ತಿಡಲಾಗಿತ್ತು.!

ಹೀಗಾಗಿ ಈ ಬಾರಿ ಕೋವಿಡ್ ನಿಂದಾಗಿ ಬಜೆಟ್ಟಿನಲ್ಲಿ ಎತ್ತಿಟ್ಟ ಹಣದ ಜೊತೆಗೆ ಸರ್ಕಾರಕ್ಕೆ ಹೆಚ್ಚೆಂದರೆ 15,000 ಕೋಟಿ ಖರ್ಚಾಗಿರಬಹುದು ..

ಅಂದರೆ … ವ್ಯಾಕ್ಸಿನ್ ಗಾಗಿ 25,000 ಕೋಟಿ

ಪಡಿತರಕ್ಕಾಗಿ 15,000 ಕೋಟಿ

ಒಟ್ಟು 40,000 ಕೋಟಿ …

ಪೆಟ್ರೋಲ್ ತೆರಿಗೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿ ಯಲ್ಲಿ 40,000 ಕೋಟಿ ಕಳೆದರೆ ಉಳಿದ 3 ಲಕ್ಷ ಕೋಟಿ ಗಳ ಲೆಕ್ಕ???

– ಇನ್ನು ಭಾರತದ ಎಲ್ಲಾ ಜನರಿಗೆ ಬೇಕಿರುವ, ಮುಂದಿನ ವರ್ಷದ ಕೊನೆಯ ವೇಳೆಗೆ ಹಾಕಬಹುದಾದ, 200 ಕೋಟಿ ವ್ಯಾಕ್ಸಿನ್ ಗಳಿಗೆ ವೆಚ್ಚವಾಗುವುದು 1 ಲಕ್ಷ ಕೋಟಿ …

ಅದನ್ನೂ ಈಗಲೇ ಸೇರಿಸಿಬಿಟ್ಟರೂ ಸರ್ಕಾರಕ್ಕೆ ಒಟ್ಟಾರೆ ಯಾಗಿ ಮುಂದಿನ ಎರಡು ವರ್ಷಗಳಿಗೆ ಕೋವಿಡ್ ಹೆಚ್ಚುವರಿಯಾಗಿ ವೆಚ್ಚವಾಗುವುದು 1.15 ಲಕ್ಷ ಕೋಟಿ ಮಾತ್ರ..

ಕಳೆದ ಒಂದು ವರ್ಷದಲ್ಲಿ ಜನರಿಂದ ಸುಲಿದಿರುವ 3.4 ಲಕ್ಷ ಕೋಟಿಯಲ್ಲಿ 1.15 ಲಕ್ಷ ಕೋಟಿ ತೆಗೆದರೂ ಸರ್ಕಾರ ಕೋವಿಡ್ ಹೆಸರಲ್ಲಿ 2.25 ಲಕ್ಷ ಕೋಟಿ ರೂ. ಗಳು ಲೆಕ್ಕ ಕೊಡದ ಸುಲಿಗೆ ಎಂದಾಯಿತು..ಅಲ್ಲವೇ?

ಮೂರನೆಯದಾಗಿ: ಈಗಲಾದರೂ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾಗಬೇಕಲ್ಲವೇ?

ಏನಿಲ್ಲವೆಂದರೂ ಇಡೀ ದೇಶಕ್ಕೆ ವ್ಯಾಕ್ಸಿನ್ ಹಾಕಲು ಬೇಕಿರುವ ಹಣದ ಮೂರು ಪಟ್ಟು… ಹಾಗು ಪಡಿತರಕ್ಕೆ ಬೇಕಿರುವ ಮೂರು ಪಟ್ಟು ಹಣವನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ… ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

ಆದ್ದರಿಂದ… ಜನರ ಬಲಗೈಯನಲ್ಲಿರುವುದನ್ನು ಕಸಿದೂ ಎಡಗೈಗೆ ಕೊಟ್ಟು ಉಚಿತವಾಗಿ ಕೊಡಲಾಗುತ್ತಿದೆ ಎಂದು ಪ್ರಚಾರ ಮಾಡಿಕೊಳ್ಳುವುದು ಐಪಿಸ್ ಸೆಕ್ಷನ್ 415-420 ರ ಕಲಮುಗಳಡಿ ಮೋಸ, ವಂಚನೆ ಎಂಬ ಅಪರಾಧವಲ್ಲವೇ?

ವ್ಯಾಕ್ಸಿನ್ ಹೆಸರಿನಲ್ಲಿ ಅಗತ್ಯಕ್ಕಿಂತ ಮೂರು ಪಟ್ಟು ಹಣವನ್ನು ಸಂಗ್ರಹಿಸಿ ತಪ್ಪು ಲೆಕ್ಕವನ್ನು ನೀಡುವುದು ದೇಶದ್ರೋಹವಲ್ಲವೇ? ಸರ್ಕಾರಿ ಅಧಿಕಾರದ ದುರುಪಯೋಗವಲ್ಲವೇ?

ಕೋವಿಡ್ ಸಂಕಷ್ಟದಲ್ಲಿಯೂ ಬಡ-ಮಧ್ಯಮ ವರ್ಗದವರಿಂದ ಸುಲಿದ 3.4+0.60= 4ಲಕ್ಷ ಕೋಟಿ ಗುಳುಂ ಮಾಡಿರುವುದು ಭ್ರಷ್ಟಾಚಾರವಲ್ಲವೇ?

– ಶಿವಸುಂದರ್


ಇದನ್ನೂ ಓದಿ; ಪೆಗಾಸಸ್ ಹಗರಣ: ಗುರುವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...