Homeಮುಖಪುಟಜಸ್ಟ್ ಆಸ್ಕಿಂಗ್: Pegasus ಗೂಢಚರ್ಯೆಯ ಅಸಲಿ ಕ್ರೋನಾಲಜಿಯನ್ನು ತಿಳಿಯೋಣವೇ?

ಜಸ್ಟ್ ಆಸ್ಕಿಂಗ್: Pegasus ಗೂಢಚರ್ಯೆಯ ಅಸಲಿ ಕ್ರೋನಾಲಜಿಯನ್ನು ತಿಳಿಯೋಣವೇ?

- Advertisement -
- Advertisement -

ಮೋದಿ ಸರ್ಕಾರವು ಇಸ್ರೇಲಿನ Pegasus ಸೈಬರ್ ಗೂಢಚರ್ಯೆ ಉಪಕರಣವನ್ನು ಬಳಸಿಕೊಂಡು ಭಾರತೀಯ ಪತ್ರಕರ್ತರ ಮೇಲೆ, ವಿರೋಧ ಪಕ್ಷಗಳಮೇಲೆ ಹಾಗು ಸರ್ಕಾರದ ಬೆದರಿಕೆಗೆ ಬಗ್ಗದ ಅಧಿಕಾರಿಗಳು ಮತ್ತು ವಿದ್ವಾಂಸರ ಮೇಲೆ ಹಲವಾರು ವರ್ಷಗಳಿಂದ ಗೂಢಚರ್ಯೆ ಮಾಡುತ್ತಿರುವುದು ಇದೀಗ ಬಯಲಾಗಿಯಷ್ಟೇ..

ಆದರೇನಂತೆ… ಮೋದಿ ಸರ್ಕಾರ ಮಾಮೂಲಿನಂತೆ ಇವೆಲ್ಲಾ ವಿದೇಶಿ ಶಕ್ತಿಗಳ ಜೊತೆಸೇರಿ ಸ್ಥಳೀಯ ವಿರೋಧ ಪಕ್ಷಗಳು ದೇಶದ ವಿರುದ್ಧ ನಡೆಸುತ್ತಿರುವ ಕುತಂತ್ರ ಎಂಬ ಕ್ರೋನಾಲಜಿ ಕಟ್ಟುತ್ತಿದೆ…

ಅಮಿತ್ ಷಾ ಅವರಂತೂ, ಈ ಭಾರತದ ಸಂಸತ್ತು ಸಮಾವೇಶಗೊಳ್ಳುವ ಹಿಂದಿನ ದಿನವೇ ಈ ವರದಿ ಬಿಡುಗಡೆಯಾಗಿರುವ ಹಿಂದಿನ ಕ್ರೋನಾಲಜಿ ಅರ್ಥಮಾಡಿಕೊಳ್ಳಿ ಎಂದು ಸಂಚು ಕಥನ ಹೆಣೆಯಲು ಮುಂದಾಗಿದ್ದಾರೆ…

ಗೃಹಮಂತ್ರಿಗಳು ಇಷ್ಟೆಲ್ಲಾ ಹೇಳಿದ ಮೇಲೆ ಅಸಲೀ ಕ್ರೋನಾಲಜಿಯನ್ನೇ ನೋಡಿಬಿಡೋಣ …

ಗೃಹಮಂತ್ರಿಗಳೇ … ಕ್ರೋನಾಲಜಿ ಹೀಗಿದೆ:

– ಮೊದಲನೆಯದಾಗಿ ಈ ಜಗತ್ತಿನ ಹತ್ತು ದೇಶಗಳ 16 ಮಾಧ್ಯಮ ಸಂಸ್ಥೆಗಳ 80 ಪತ್ರಕರ್ತರು ಜೊತೆಗೂಡಿ ಸಿದ್ಧಪಡಿಸಿದ ಈ ತನಿಖಾ ವರದಿ ಜಗತ್ತಿನಾದ್ಯಂತ ಏಕಕಾಲದಲ್ಲಿ ಜುಲೈ 18 ರಂದು ಬಿಡುಗಡೆಯಾಗಿದೆ.

ಮತ್ತು ಇದು ಭಾರತವನ್ನು ಒಳಗೊಂಡಂತೆ ಇತರ ಹತ್ತು ದೇಶಗಳ ಸರ್ಕಾರ ಗಳು ಪೆಗಾಸಸ್ ಅನ್ನು ಹೇಗೆ ದುರ್ಬಳಕೆ ಮಾಡಿಕೊಂಡಿರಬಹುದು ಎಂಬ ವಿವರಗಳನ್ನು ಕೊಡುತ್ತದೆ. ಕೇವಲ ಭಾರತದ್ದಲ್ಲ…

ಈ ವರದಿಯ ಪ್ರಾಥಮಿಕ ಕಂತು ಸ್ಪಷ್ಟಪಡಿಸುತ್ತಿರುವಂತೆ ಪೆಗಾಸಸ್ ಬಳಿ ಜಗತ್ತಿನ 20 ಬೇರೆಬೇರೆ ದೇಶಗಳಲ್ಲಿ ವಾಸವಾಗಿರುವ 50,000 ಜನರ ಫೋನ್ ನಂಬರ್ಗಳು ಉದ್ದೇಶಿತ ಗೂಢಚರ್ಯೆ ಪಟ್ಟಿಯಲ್ಲಿತ್ತು.

ಅದರಲ್ಲಿ 1000 ನಂಬರ್ ಗಳು ಭಾರತಕ್ಕೆ ಸೇರಿದ್ದವಾಗಿದ್ದರೆ 15,000 ಮೆಕ್ಸಿಕೋಗೆ ಸೇರಿದ್ದವು. ಮೆಕ್ಸಿಕೋಗೆ ಸಂಬಂಧಪಟ್ಟ ವಿವರಗಳು ಸಹಾ ಜುಲೈ 18ರಂದೇ ಜಾಗತೀಕವಾಗಿ ಬಿಡುಗಡೆಯಾಗಿದೆ.

ಹಾಗೆಯೇ ಅಜರ್ಬೈಜಾನ್ ಬಹರೈನ್, ಸೌದಿ ಅರೇಬಿಯಾ, ಹಂಗೇರಿ, ಮೆಕ್ಸಿಕೋ ಇನ್ನಿತರ ಹತ್ತು ದೇಶಗಳಲ್ಲಿ ಅಲ್ಲಿನ ಸರ್ಕಾರಗಳು ಹೇಗೆ ತನ್ನ ಭಿನ್ನಮತೀಯರ ಮೇಲೆ ಬೇಹುಗಾರಿಕೆ ನಡೆಸಿದೆ ಎಂದು ಈ ವರದಿ ಬಯಲು ಮಾಡಿದೆ.

ಭಾರತವನ್ನು ಬಿಟ್ಟರೆ ಬೇರೆ ಯಾವ ದೇಶದಲ್ಲೂ ಸಂಸತ್ ಅಧಿವೇಶನ ಇರಲಿಲ್ಲ… ಜಗತ್ತು ಎಂದರೆ ಭಾರತವೇ ಅಲ್ಲ ಅಲ್ಲವೇ ಗೃಹ ಮಂತ್ರಿಗಳೇ..??

– ಇನ್ನು ಕೆಲವು ಅಸಲಿ ಕ್ರೋನಾಲಜಿಗಳು ಹೀಗಿವೆ..:

– ಸೌದಿ ಅರೇಬಿಯಾದ ಸಾಮ್ರಾಟರಿಗೆ ತಲೆನೋವಾಗಿದ್ದ ಜಮಾಲ್ ಕಶೊಗಿ ಎಂಬ ಪತ್ರಕರ್ತನ ಪ್ರೇಯಸಿಯ ಫೋನಿನಲ್ಲಿ ಪೆಗಾಸಸ್ ಸ್ಪೈವೇರ್ ಕೂಡಿಸಿದ ನಾಲ್ಕೇ ದಿನಗಳಲ್ಲಿ ಕಶೋಗಿ ಟರ್ಕಿಯ ಸೌದಿ ಅರೇಬಿಯಾದ ರಾಯಭಾರ ಕಚೇರಿಯಲ್ಲಿ 2018ರ ಅಕ್ಟೊಬರ್ ನಲ್ಲಿ ಹೆಣವಾಗುತ್ತಾನೆ..
ಇದು ಅಸಲಿ ಕ್ರೋನಾಲಜಿ

– ಮೆಕ್ಸಿಕೋದ ಸಿಸಿಲಿಯೋ ಪಿನೆಡಾ ಎಂಬ ಪತ್ರಕರ್ತ 2017ರಲ್ಲಿ ಮೆಕ್ಸಿಕೋದ ಬೀದಿಯಲ್ಲಿ ಕೊಲೆಯಾಗಿದ್ದ. ಕಾರಣ ಆಡಳಿತಾರೂಢ ಸರ್ಕಾರಕ್ಕೂ ಡ್ರಗ್ ಮಾಫಿಯಾಗಳಿಗೂ ಇದ್ದ ಸಂಬಂಧಗಳ ಬಗ್ಗೆ ಆತ ಬರೆಯಲು ಶುರು ಮಾಡಿದ್ದ. ಮರು ವರ್ಷ ಚುನಾವಣೆಯಿತ್ತು. ಆತನು ಸಾಯುವ ಕೆಲವು ವಾರಗಳ ಮುನ್ನ ಆತನ ಫೋನಿನಲ್ಲಿ, ಹಾಗೂ ಆತನ ಆಪ್ತರ ಫೋನುಗಳಲ್ಲಿ ಪೆಗಾಸಸ್ ಸ್ಪೈವೇರ್ ಸ್ಥಾಪಿಸಲಾಗಿತ್ತು. ಇದು ಅಸಲಿ ಕ್ರೋನಾಲಜಿ

– ಭಾರತದಲ್ಲಿ…

– indian Express ನ ಸುಶಾಂತ್ ಸಿಂಗ್ ಅವರು 2017 ರಿಂದ ರಫೇಲ್ ಯುದ್ಧ ವಿಮಾನ ಹಗರಣದ ಬಗ್ಗೆ ತನಿಖಾ ಲೇಖನ ಬರೆಯಲು ಪ್ರಾರಂಭಿಸುತ್ತಾರೆ. 2018ರ ಪ್ರಾರಂಭದಿಂದಲೇ ಅವರ ಫೋನಿನಲ್ಲಿ ಪೆಗಾಸಸ್ ಪತ್ತೆಯಾಗಿದೆ.

– 2019ರ ಚುನಾವಣೆಯಲ್ಲಿ ಭಾರತದ ಚುನಾವಣಾ ಆಯೋಗದ ಹಿರಿಯ ಸದಸ್ಯರಾಗಿದ್ದ ಅಶೋಕ್ ಲಾವಾಸಾ ಅವರು ಮೋದಿಯವರ ಚುನಾವಣಾ ಭಾಷಣಗಳ ಬಗೆ ತೀವ್ರವಾದ ತಕರಾರು ಎತ್ತುತ್ತಾರೆ. ಅದರ ಮರು ತಿಂಗಳಿಂದಲೇ ಅವರ ಹೆಸರು ಪೆಗಾಸಸ್ ನ ಸಂಭಾವ್ಯ ಗೂಢಚರ್ಯೆ ಪಟ್ಟಿ ಸೇರಿಕೊಳ್ಳುತ್ತದೆ.

– ಮೋದಿ ಕ್ಯಾಬಿನೆಟ್ಟಿನ ಹಾಲಿ ಮಂತ್ರಿ ಒರಿಸ್ಸಾದ ಅಷ್ವಿನಿ ವೈಷ್ಣವ್ ಅವರು ಅಧಿಕಾರಿಯಾಗಿದ್ದಾಗ ವಾಜಪೇಯಿಯವರ ಆಪ್ತ ಸಹಾಯಕನಾಗಿದ್ದರೂ ಬಿಜು ಜನತಾ ದಾಳಕ್ಕೆ ಆಪ್ತರಾಗಿದ್ದವರು. 2017ರಿಂದಲೇ ಅವರ ಫೋನ್ ನಂಬರ್ ಸಂಭಾವ್ಯ ಪೆಗಾಸಸ್ ಗೂಢಚರ್ಯೆ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಅದಾದ ಮರುವರ್ಷದಲ್ಲೆ ಅವರು ಬಿಜೆಪಿ ಸೇರಿಕೊಳ್ಳುತ್ತಾರೆ.

-ಮಾಜಿ ಮುಖ್ಯ ನ್ಯಾಯಾಧೀಶ ಹಾಲಿ ಬಿಜೆಪಿ ನಾಮನಿರ್ದೇಶಿತ ರಾಜ್ಯ ಸಭಾ ಸದಸ್ಯ ರಂಜನ್ ಗೊಗೋಯ್ ಅವರು ತನ್ನ ಜೊತೆ ಅನುಚಿತವಾಗಿ ನಡೆದುಕೊಂಡಿದ್ದಾರೆಂದು ಮಹಿಳಾ ಉದ್ಯೋಗಿಯೊಬ್ಬರು ದೂರು ನೀಡಿದ ಮರು ವಾರದಿಂದಲೇ ಆಕೆಯ ಹಾಗೂ ಆಕೆಯ ಸಂಬಂಧಿಕರ ಹೆಸರುಗಳು ಪೆಗಾಸಸ್ ಪಟ್ಟಿ ಸೇರಿಕೊಳ್ಳುತ್ತದೆ.

ಆ ನಂತರ ಗೊಗೋಯ್ ಕೊಟ್ಟ ತೀರ್ಪು ಗಳೆಲ್ಲ ಮೋದಿ ಸರ್ಕಾರದ ಪರವೇ.

ಈ ಕ್ರೋನಾಲಜಿಯನ್ನು ಹೇಗೆ ಅರ್ಥಮಾಡಿಕೊಳ್ಳುವುದು ಅಮಿತ್ ಷಾ ಅವರೇ?????

  • ಶಿವಸುಂದರ್‌

ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...