Homeಮುಖಪುಟಜಸ್ಟ್ ಆಸ್ಕಿಂಗ್: Pegasus ಗೂಢಚರ್ಯೆಯ ಅಸಲಿ ಕ್ರೋನಾಲಜಿಯನ್ನು ತಿಳಿಯೋಣವೇ?

ಜಸ್ಟ್ ಆಸ್ಕಿಂಗ್: Pegasus ಗೂಢಚರ್ಯೆಯ ಅಸಲಿ ಕ್ರೋನಾಲಜಿಯನ್ನು ತಿಳಿಯೋಣವೇ?

- Advertisement -
- Advertisement -

ಮೋದಿ ಸರ್ಕಾರವು ಇಸ್ರೇಲಿನ Pegasus ಸೈಬರ್ ಗೂಢಚರ್ಯೆ ಉಪಕರಣವನ್ನು ಬಳಸಿಕೊಂಡು ಭಾರತೀಯ ಪತ್ರಕರ್ತರ ಮೇಲೆ, ವಿರೋಧ ಪಕ್ಷಗಳಮೇಲೆ ಹಾಗು ಸರ್ಕಾರದ ಬೆದರಿಕೆಗೆ ಬಗ್ಗದ ಅಧಿಕಾರಿಗಳು ಮತ್ತು ವಿದ್ವಾಂಸರ ಮೇಲೆ ಹಲವಾರು ವರ್ಷಗಳಿಂದ ಗೂಢಚರ್ಯೆ ಮಾಡುತ್ತಿರುವುದು ಇದೀಗ ಬಯಲಾಗಿಯಷ್ಟೇ..

ಆದರೇನಂತೆ… ಮೋದಿ ಸರ್ಕಾರ ಮಾಮೂಲಿನಂತೆ ಇವೆಲ್ಲಾ ವಿದೇಶಿ ಶಕ್ತಿಗಳ ಜೊತೆಸೇರಿ ಸ್ಥಳೀಯ ವಿರೋಧ ಪಕ್ಷಗಳು ದೇಶದ ವಿರುದ್ಧ ನಡೆಸುತ್ತಿರುವ ಕುತಂತ್ರ ಎಂಬ ಕ್ರೋನಾಲಜಿ ಕಟ್ಟುತ್ತಿದೆ…

ಅಮಿತ್ ಷಾ ಅವರಂತೂ, ಈ ಭಾರತದ ಸಂಸತ್ತು ಸಮಾವೇಶಗೊಳ್ಳುವ ಹಿಂದಿನ ದಿನವೇ ಈ ವರದಿ ಬಿಡುಗಡೆಯಾಗಿರುವ ಹಿಂದಿನ ಕ್ರೋನಾಲಜಿ ಅರ್ಥಮಾಡಿಕೊಳ್ಳಿ ಎಂದು ಸಂಚು ಕಥನ ಹೆಣೆಯಲು ಮುಂದಾಗಿದ್ದಾರೆ…

ಗೃಹಮಂತ್ರಿಗಳು ಇಷ್ಟೆಲ್ಲಾ ಹೇಳಿದ ಮೇಲೆ ಅಸಲೀ ಕ್ರೋನಾಲಜಿಯನ್ನೇ ನೋಡಿಬಿಡೋಣ …

ಗೃಹಮಂತ್ರಿಗಳೇ … ಕ್ರೋನಾಲಜಿ ಹೀಗಿದೆ:

– ಮೊದಲನೆಯದಾಗಿ ಈ ಜಗತ್ತಿನ ಹತ್ತು ದೇಶಗಳ 16 ಮಾಧ್ಯಮ ಸಂಸ್ಥೆಗಳ 80 ಪತ್ರಕರ್ತರು ಜೊತೆಗೂಡಿ ಸಿದ್ಧಪಡಿಸಿದ ಈ ತನಿಖಾ ವರದಿ ಜಗತ್ತಿನಾದ್ಯಂತ ಏಕಕಾಲದಲ್ಲಿ ಜುಲೈ 18 ರಂದು ಬಿಡುಗಡೆಯಾಗಿದೆ.

ಮತ್ತು ಇದು ಭಾರತವನ್ನು ಒಳಗೊಂಡಂತೆ ಇತರ ಹತ್ತು ದೇಶಗಳ ಸರ್ಕಾರ ಗಳು ಪೆಗಾಸಸ್ ಅನ್ನು ಹೇಗೆ ದುರ್ಬಳಕೆ ಮಾಡಿಕೊಂಡಿರಬಹುದು ಎಂಬ ವಿವರಗಳನ್ನು ಕೊಡುತ್ತದೆ. ಕೇವಲ ಭಾರತದ್ದಲ್ಲ…

ಈ ವರದಿಯ ಪ್ರಾಥಮಿಕ ಕಂತು ಸ್ಪಷ್ಟಪಡಿಸುತ್ತಿರುವಂತೆ ಪೆಗಾಸಸ್ ಬಳಿ ಜಗತ್ತಿನ 20 ಬೇರೆಬೇರೆ ದೇಶಗಳಲ್ಲಿ ವಾಸವಾಗಿರುವ 50,000 ಜನರ ಫೋನ್ ನಂಬರ್ಗಳು ಉದ್ದೇಶಿತ ಗೂಢಚರ್ಯೆ ಪಟ್ಟಿಯಲ್ಲಿತ್ತು.

ಅದರಲ್ಲಿ 1000 ನಂಬರ್ ಗಳು ಭಾರತಕ್ಕೆ ಸೇರಿದ್ದವಾಗಿದ್ದರೆ 15,000 ಮೆಕ್ಸಿಕೋಗೆ ಸೇರಿದ್ದವು. ಮೆಕ್ಸಿಕೋಗೆ ಸಂಬಂಧಪಟ್ಟ ವಿವರಗಳು ಸಹಾ ಜುಲೈ 18ರಂದೇ ಜಾಗತೀಕವಾಗಿ ಬಿಡುಗಡೆಯಾಗಿದೆ.

ಹಾಗೆಯೇ ಅಜರ್ಬೈಜಾನ್ ಬಹರೈನ್, ಸೌದಿ ಅರೇಬಿಯಾ, ಹಂಗೇರಿ, ಮೆಕ್ಸಿಕೋ ಇನ್ನಿತರ ಹತ್ತು ದೇಶಗಳಲ್ಲಿ ಅಲ್ಲಿನ ಸರ್ಕಾರಗಳು ಹೇಗೆ ತನ್ನ ಭಿನ್ನಮತೀಯರ ಮೇಲೆ ಬೇಹುಗಾರಿಕೆ ನಡೆಸಿದೆ ಎಂದು ಈ ವರದಿ ಬಯಲು ಮಾಡಿದೆ.

ಭಾರತವನ್ನು ಬಿಟ್ಟರೆ ಬೇರೆ ಯಾವ ದೇಶದಲ್ಲೂ ಸಂಸತ್ ಅಧಿವೇಶನ ಇರಲಿಲ್ಲ… ಜಗತ್ತು ಎಂದರೆ ಭಾರತವೇ ಅಲ್ಲ ಅಲ್ಲವೇ ಗೃಹ ಮಂತ್ರಿಗಳೇ..??

– ಇನ್ನು ಕೆಲವು ಅಸಲಿ ಕ್ರೋನಾಲಜಿಗಳು ಹೀಗಿವೆ..:

– ಸೌದಿ ಅರೇಬಿಯಾದ ಸಾಮ್ರಾಟರಿಗೆ ತಲೆನೋವಾಗಿದ್ದ ಜಮಾಲ್ ಕಶೊಗಿ ಎಂಬ ಪತ್ರಕರ್ತನ ಪ್ರೇಯಸಿಯ ಫೋನಿನಲ್ಲಿ ಪೆಗಾಸಸ್ ಸ್ಪೈವೇರ್ ಕೂಡಿಸಿದ ನಾಲ್ಕೇ ದಿನಗಳಲ್ಲಿ ಕಶೋಗಿ ಟರ್ಕಿಯ ಸೌದಿ ಅರೇಬಿಯಾದ ರಾಯಭಾರ ಕಚೇರಿಯಲ್ಲಿ 2018ರ ಅಕ್ಟೊಬರ್ ನಲ್ಲಿ ಹೆಣವಾಗುತ್ತಾನೆ..
ಇದು ಅಸಲಿ ಕ್ರೋನಾಲಜಿ

– ಮೆಕ್ಸಿಕೋದ ಸಿಸಿಲಿಯೋ ಪಿನೆಡಾ ಎಂಬ ಪತ್ರಕರ್ತ 2017ರಲ್ಲಿ ಮೆಕ್ಸಿಕೋದ ಬೀದಿಯಲ್ಲಿ ಕೊಲೆಯಾಗಿದ್ದ. ಕಾರಣ ಆಡಳಿತಾರೂಢ ಸರ್ಕಾರಕ್ಕೂ ಡ್ರಗ್ ಮಾಫಿಯಾಗಳಿಗೂ ಇದ್ದ ಸಂಬಂಧಗಳ ಬಗ್ಗೆ ಆತ ಬರೆಯಲು ಶುರು ಮಾಡಿದ್ದ. ಮರು ವರ್ಷ ಚುನಾವಣೆಯಿತ್ತು. ಆತನು ಸಾಯುವ ಕೆಲವು ವಾರಗಳ ಮುನ್ನ ಆತನ ಫೋನಿನಲ್ಲಿ, ಹಾಗೂ ಆತನ ಆಪ್ತರ ಫೋನುಗಳಲ್ಲಿ ಪೆಗಾಸಸ್ ಸ್ಪೈವೇರ್ ಸ್ಥಾಪಿಸಲಾಗಿತ್ತು. ಇದು ಅಸಲಿ ಕ್ರೋನಾಲಜಿ

– ಭಾರತದಲ್ಲಿ…

– indian Express ನ ಸುಶಾಂತ್ ಸಿಂಗ್ ಅವರು 2017 ರಿಂದ ರಫೇಲ್ ಯುದ್ಧ ವಿಮಾನ ಹಗರಣದ ಬಗ್ಗೆ ತನಿಖಾ ಲೇಖನ ಬರೆಯಲು ಪ್ರಾರಂಭಿಸುತ್ತಾರೆ. 2018ರ ಪ್ರಾರಂಭದಿಂದಲೇ ಅವರ ಫೋನಿನಲ್ಲಿ ಪೆಗಾಸಸ್ ಪತ್ತೆಯಾಗಿದೆ.

– 2019ರ ಚುನಾವಣೆಯಲ್ಲಿ ಭಾರತದ ಚುನಾವಣಾ ಆಯೋಗದ ಹಿರಿಯ ಸದಸ್ಯರಾಗಿದ್ದ ಅಶೋಕ್ ಲಾವಾಸಾ ಅವರು ಮೋದಿಯವರ ಚುನಾವಣಾ ಭಾಷಣಗಳ ಬಗೆ ತೀವ್ರವಾದ ತಕರಾರು ಎತ್ತುತ್ತಾರೆ. ಅದರ ಮರು ತಿಂಗಳಿಂದಲೇ ಅವರ ಹೆಸರು ಪೆಗಾಸಸ್ ನ ಸಂಭಾವ್ಯ ಗೂಢಚರ್ಯೆ ಪಟ್ಟಿ ಸೇರಿಕೊಳ್ಳುತ್ತದೆ.

– ಮೋದಿ ಕ್ಯಾಬಿನೆಟ್ಟಿನ ಹಾಲಿ ಮಂತ್ರಿ ಒರಿಸ್ಸಾದ ಅಷ್ವಿನಿ ವೈಷ್ಣವ್ ಅವರು ಅಧಿಕಾರಿಯಾಗಿದ್ದಾಗ ವಾಜಪೇಯಿಯವರ ಆಪ್ತ ಸಹಾಯಕನಾಗಿದ್ದರೂ ಬಿಜು ಜನತಾ ದಾಳಕ್ಕೆ ಆಪ್ತರಾಗಿದ್ದವರು. 2017ರಿಂದಲೇ ಅವರ ಫೋನ್ ನಂಬರ್ ಸಂಭಾವ್ಯ ಪೆಗಾಸಸ್ ಗೂಢಚರ್ಯೆ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಅದಾದ ಮರುವರ್ಷದಲ್ಲೆ ಅವರು ಬಿಜೆಪಿ ಸೇರಿಕೊಳ್ಳುತ್ತಾರೆ.

-ಮಾಜಿ ಮುಖ್ಯ ನ್ಯಾಯಾಧೀಶ ಹಾಲಿ ಬಿಜೆಪಿ ನಾಮನಿರ್ದೇಶಿತ ರಾಜ್ಯ ಸಭಾ ಸದಸ್ಯ ರಂಜನ್ ಗೊಗೋಯ್ ಅವರು ತನ್ನ ಜೊತೆ ಅನುಚಿತವಾಗಿ ನಡೆದುಕೊಂಡಿದ್ದಾರೆಂದು ಮಹಿಳಾ ಉದ್ಯೋಗಿಯೊಬ್ಬರು ದೂರು ನೀಡಿದ ಮರು ವಾರದಿಂದಲೇ ಆಕೆಯ ಹಾಗೂ ಆಕೆಯ ಸಂಬಂಧಿಕರ ಹೆಸರುಗಳು ಪೆಗಾಸಸ್ ಪಟ್ಟಿ ಸೇರಿಕೊಳ್ಳುತ್ತದೆ.

ಆ ನಂತರ ಗೊಗೋಯ್ ಕೊಟ್ಟ ತೀರ್ಪು ಗಳೆಲ್ಲ ಮೋದಿ ಸರ್ಕಾರದ ಪರವೇ.

ಈ ಕ್ರೋನಾಲಜಿಯನ್ನು ಹೇಗೆ ಅರ್ಥಮಾಡಿಕೊಳ್ಳುವುದು ಅಮಿತ್ ಷಾ ಅವರೇ?????

  • ಶಿವಸುಂದರ್‌

ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....