Homeಮುಖಪುಟಜಸ್ಟ್ ಆಸ್ಕಿಂಗ್: Pegasus ಗೂಢಚರ್ಯೆಯ ಅಸಲಿ ಕ್ರೋನಾಲಜಿಯನ್ನು ತಿಳಿಯೋಣವೇ?

ಜಸ್ಟ್ ಆಸ್ಕಿಂಗ್: Pegasus ಗೂಢಚರ್ಯೆಯ ಅಸಲಿ ಕ್ರೋನಾಲಜಿಯನ್ನು ತಿಳಿಯೋಣವೇ?

- Advertisement -
- Advertisement -

ಮೋದಿ ಸರ್ಕಾರವು ಇಸ್ರೇಲಿನ Pegasus ಸೈಬರ್ ಗೂಢಚರ್ಯೆ ಉಪಕರಣವನ್ನು ಬಳಸಿಕೊಂಡು ಭಾರತೀಯ ಪತ್ರಕರ್ತರ ಮೇಲೆ, ವಿರೋಧ ಪಕ್ಷಗಳಮೇಲೆ ಹಾಗು ಸರ್ಕಾರದ ಬೆದರಿಕೆಗೆ ಬಗ್ಗದ ಅಧಿಕಾರಿಗಳು ಮತ್ತು ವಿದ್ವಾಂಸರ ಮೇಲೆ ಹಲವಾರು ವರ್ಷಗಳಿಂದ ಗೂಢಚರ್ಯೆ ಮಾಡುತ್ತಿರುವುದು ಇದೀಗ ಬಯಲಾಗಿಯಷ್ಟೇ..

ಆದರೇನಂತೆ… ಮೋದಿ ಸರ್ಕಾರ ಮಾಮೂಲಿನಂತೆ ಇವೆಲ್ಲಾ ವಿದೇಶಿ ಶಕ್ತಿಗಳ ಜೊತೆಸೇರಿ ಸ್ಥಳೀಯ ವಿರೋಧ ಪಕ್ಷಗಳು ದೇಶದ ವಿರುದ್ಧ ನಡೆಸುತ್ತಿರುವ ಕುತಂತ್ರ ಎಂಬ ಕ್ರೋನಾಲಜಿ ಕಟ್ಟುತ್ತಿದೆ…

ಅಮಿತ್ ಷಾ ಅವರಂತೂ, ಈ ಭಾರತದ ಸಂಸತ್ತು ಸಮಾವೇಶಗೊಳ್ಳುವ ಹಿಂದಿನ ದಿನವೇ ಈ ವರದಿ ಬಿಡುಗಡೆಯಾಗಿರುವ ಹಿಂದಿನ ಕ್ರೋನಾಲಜಿ ಅರ್ಥಮಾಡಿಕೊಳ್ಳಿ ಎಂದು ಸಂಚು ಕಥನ ಹೆಣೆಯಲು ಮುಂದಾಗಿದ್ದಾರೆ…

ಗೃಹಮಂತ್ರಿಗಳು ಇಷ್ಟೆಲ್ಲಾ ಹೇಳಿದ ಮೇಲೆ ಅಸಲೀ ಕ್ರೋನಾಲಜಿಯನ್ನೇ ನೋಡಿಬಿಡೋಣ …

ಗೃಹಮಂತ್ರಿಗಳೇ … ಕ್ರೋನಾಲಜಿ ಹೀಗಿದೆ:

– ಮೊದಲನೆಯದಾಗಿ ಈ ಜಗತ್ತಿನ ಹತ್ತು ದೇಶಗಳ 16 ಮಾಧ್ಯಮ ಸಂಸ್ಥೆಗಳ 80 ಪತ್ರಕರ್ತರು ಜೊತೆಗೂಡಿ ಸಿದ್ಧಪಡಿಸಿದ ಈ ತನಿಖಾ ವರದಿ ಜಗತ್ತಿನಾದ್ಯಂತ ಏಕಕಾಲದಲ್ಲಿ ಜುಲೈ 18 ರಂದು ಬಿಡುಗಡೆಯಾಗಿದೆ.

ಮತ್ತು ಇದು ಭಾರತವನ್ನು ಒಳಗೊಂಡಂತೆ ಇತರ ಹತ್ತು ದೇಶಗಳ ಸರ್ಕಾರ ಗಳು ಪೆಗಾಸಸ್ ಅನ್ನು ಹೇಗೆ ದುರ್ಬಳಕೆ ಮಾಡಿಕೊಂಡಿರಬಹುದು ಎಂಬ ವಿವರಗಳನ್ನು ಕೊಡುತ್ತದೆ. ಕೇವಲ ಭಾರತದ್ದಲ್ಲ…

ಈ ವರದಿಯ ಪ್ರಾಥಮಿಕ ಕಂತು ಸ್ಪಷ್ಟಪಡಿಸುತ್ತಿರುವಂತೆ ಪೆಗಾಸಸ್ ಬಳಿ ಜಗತ್ತಿನ 20 ಬೇರೆಬೇರೆ ದೇಶಗಳಲ್ಲಿ ವಾಸವಾಗಿರುವ 50,000 ಜನರ ಫೋನ್ ನಂಬರ್ಗಳು ಉದ್ದೇಶಿತ ಗೂಢಚರ್ಯೆ ಪಟ್ಟಿಯಲ್ಲಿತ್ತು.

ಅದರಲ್ಲಿ 1000 ನಂಬರ್ ಗಳು ಭಾರತಕ್ಕೆ ಸೇರಿದ್ದವಾಗಿದ್ದರೆ 15,000 ಮೆಕ್ಸಿಕೋಗೆ ಸೇರಿದ್ದವು. ಮೆಕ್ಸಿಕೋಗೆ ಸಂಬಂಧಪಟ್ಟ ವಿವರಗಳು ಸಹಾ ಜುಲೈ 18ರಂದೇ ಜಾಗತೀಕವಾಗಿ ಬಿಡುಗಡೆಯಾಗಿದೆ.

ಹಾಗೆಯೇ ಅಜರ್ಬೈಜಾನ್ ಬಹರೈನ್, ಸೌದಿ ಅರೇಬಿಯಾ, ಹಂಗೇರಿ, ಮೆಕ್ಸಿಕೋ ಇನ್ನಿತರ ಹತ್ತು ದೇಶಗಳಲ್ಲಿ ಅಲ್ಲಿನ ಸರ್ಕಾರಗಳು ಹೇಗೆ ತನ್ನ ಭಿನ್ನಮತೀಯರ ಮೇಲೆ ಬೇಹುಗಾರಿಕೆ ನಡೆಸಿದೆ ಎಂದು ಈ ವರದಿ ಬಯಲು ಮಾಡಿದೆ.

ಭಾರತವನ್ನು ಬಿಟ್ಟರೆ ಬೇರೆ ಯಾವ ದೇಶದಲ್ಲೂ ಸಂಸತ್ ಅಧಿವೇಶನ ಇರಲಿಲ್ಲ… ಜಗತ್ತು ಎಂದರೆ ಭಾರತವೇ ಅಲ್ಲ ಅಲ್ಲವೇ ಗೃಹ ಮಂತ್ರಿಗಳೇ..??

– ಇನ್ನು ಕೆಲವು ಅಸಲಿ ಕ್ರೋನಾಲಜಿಗಳು ಹೀಗಿವೆ..:

– ಸೌದಿ ಅರೇಬಿಯಾದ ಸಾಮ್ರಾಟರಿಗೆ ತಲೆನೋವಾಗಿದ್ದ ಜಮಾಲ್ ಕಶೊಗಿ ಎಂಬ ಪತ್ರಕರ್ತನ ಪ್ರೇಯಸಿಯ ಫೋನಿನಲ್ಲಿ ಪೆಗಾಸಸ್ ಸ್ಪೈವೇರ್ ಕೂಡಿಸಿದ ನಾಲ್ಕೇ ದಿನಗಳಲ್ಲಿ ಕಶೋಗಿ ಟರ್ಕಿಯ ಸೌದಿ ಅರೇಬಿಯಾದ ರಾಯಭಾರ ಕಚೇರಿಯಲ್ಲಿ 2018ರ ಅಕ್ಟೊಬರ್ ನಲ್ಲಿ ಹೆಣವಾಗುತ್ತಾನೆ..
ಇದು ಅಸಲಿ ಕ್ರೋನಾಲಜಿ

– ಮೆಕ್ಸಿಕೋದ ಸಿಸಿಲಿಯೋ ಪಿನೆಡಾ ಎಂಬ ಪತ್ರಕರ್ತ 2017ರಲ್ಲಿ ಮೆಕ್ಸಿಕೋದ ಬೀದಿಯಲ್ಲಿ ಕೊಲೆಯಾಗಿದ್ದ. ಕಾರಣ ಆಡಳಿತಾರೂಢ ಸರ್ಕಾರಕ್ಕೂ ಡ್ರಗ್ ಮಾಫಿಯಾಗಳಿಗೂ ಇದ್ದ ಸಂಬಂಧಗಳ ಬಗ್ಗೆ ಆತ ಬರೆಯಲು ಶುರು ಮಾಡಿದ್ದ. ಮರು ವರ್ಷ ಚುನಾವಣೆಯಿತ್ತು. ಆತನು ಸಾಯುವ ಕೆಲವು ವಾರಗಳ ಮುನ್ನ ಆತನ ಫೋನಿನಲ್ಲಿ, ಹಾಗೂ ಆತನ ಆಪ್ತರ ಫೋನುಗಳಲ್ಲಿ ಪೆಗಾಸಸ್ ಸ್ಪೈವೇರ್ ಸ್ಥಾಪಿಸಲಾಗಿತ್ತು. ಇದು ಅಸಲಿ ಕ್ರೋನಾಲಜಿ

– ಭಾರತದಲ್ಲಿ…

– indian Express ನ ಸುಶಾಂತ್ ಸಿಂಗ್ ಅವರು 2017 ರಿಂದ ರಫೇಲ್ ಯುದ್ಧ ವಿಮಾನ ಹಗರಣದ ಬಗ್ಗೆ ತನಿಖಾ ಲೇಖನ ಬರೆಯಲು ಪ್ರಾರಂಭಿಸುತ್ತಾರೆ. 2018ರ ಪ್ರಾರಂಭದಿಂದಲೇ ಅವರ ಫೋನಿನಲ್ಲಿ ಪೆಗಾಸಸ್ ಪತ್ತೆಯಾಗಿದೆ.

– 2019ರ ಚುನಾವಣೆಯಲ್ಲಿ ಭಾರತದ ಚುನಾವಣಾ ಆಯೋಗದ ಹಿರಿಯ ಸದಸ್ಯರಾಗಿದ್ದ ಅಶೋಕ್ ಲಾವಾಸಾ ಅವರು ಮೋದಿಯವರ ಚುನಾವಣಾ ಭಾಷಣಗಳ ಬಗೆ ತೀವ್ರವಾದ ತಕರಾರು ಎತ್ತುತ್ತಾರೆ. ಅದರ ಮರು ತಿಂಗಳಿಂದಲೇ ಅವರ ಹೆಸರು ಪೆಗಾಸಸ್ ನ ಸಂಭಾವ್ಯ ಗೂಢಚರ್ಯೆ ಪಟ್ಟಿ ಸೇರಿಕೊಳ್ಳುತ್ತದೆ.

– ಮೋದಿ ಕ್ಯಾಬಿನೆಟ್ಟಿನ ಹಾಲಿ ಮಂತ್ರಿ ಒರಿಸ್ಸಾದ ಅಷ್ವಿನಿ ವೈಷ್ಣವ್ ಅವರು ಅಧಿಕಾರಿಯಾಗಿದ್ದಾಗ ವಾಜಪೇಯಿಯವರ ಆಪ್ತ ಸಹಾಯಕನಾಗಿದ್ದರೂ ಬಿಜು ಜನತಾ ದಾಳಕ್ಕೆ ಆಪ್ತರಾಗಿದ್ದವರು. 2017ರಿಂದಲೇ ಅವರ ಫೋನ್ ನಂಬರ್ ಸಂಭಾವ್ಯ ಪೆಗಾಸಸ್ ಗೂಢಚರ್ಯೆ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಅದಾದ ಮರುವರ್ಷದಲ್ಲೆ ಅವರು ಬಿಜೆಪಿ ಸೇರಿಕೊಳ್ಳುತ್ತಾರೆ.

-ಮಾಜಿ ಮುಖ್ಯ ನ್ಯಾಯಾಧೀಶ ಹಾಲಿ ಬಿಜೆಪಿ ನಾಮನಿರ್ದೇಶಿತ ರಾಜ್ಯ ಸಭಾ ಸದಸ್ಯ ರಂಜನ್ ಗೊಗೋಯ್ ಅವರು ತನ್ನ ಜೊತೆ ಅನುಚಿತವಾಗಿ ನಡೆದುಕೊಂಡಿದ್ದಾರೆಂದು ಮಹಿಳಾ ಉದ್ಯೋಗಿಯೊಬ್ಬರು ದೂರು ನೀಡಿದ ಮರು ವಾರದಿಂದಲೇ ಆಕೆಯ ಹಾಗೂ ಆಕೆಯ ಸಂಬಂಧಿಕರ ಹೆಸರುಗಳು ಪೆಗಾಸಸ್ ಪಟ್ಟಿ ಸೇರಿಕೊಳ್ಳುತ್ತದೆ.

ಆ ನಂತರ ಗೊಗೋಯ್ ಕೊಟ್ಟ ತೀರ್ಪು ಗಳೆಲ್ಲ ಮೋದಿ ಸರ್ಕಾರದ ಪರವೇ.

ಈ ಕ್ರೋನಾಲಜಿಯನ್ನು ಹೇಗೆ ಅರ್ಥಮಾಡಿಕೊಳ್ಳುವುದು ಅಮಿತ್ ಷಾ ಅವರೇ?????

  • ಶಿವಸುಂದರ್‌

ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...