Homeಮುಖಪುಟಜಸ್ಟ್ ಆಸ್ಕಿಂಗ್: Pegasus ಗೂಢಚರ್ಯೆಯ ಅಸಲಿ ಕ್ರೋನಾಲಜಿಯನ್ನು ತಿಳಿಯೋಣವೇ?

ಜಸ್ಟ್ ಆಸ್ಕಿಂಗ್: Pegasus ಗೂಢಚರ್ಯೆಯ ಅಸಲಿ ಕ್ರೋನಾಲಜಿಯನ್ನು ತಿಳಿಯೋಣವೇ?

- Advertisement -
- Advertisement -

ಮೋದಿ ಸರ್ಕಾರವು ಇಸ್ರೇಲಿನ Pegasus ಸೈಬರ್ ಗೂಢಚರ್ಯೆ ಉಪಕರಣವನ್ನು ಬಳಸಿಕೊಂಡು ಭಾರತೀಯ ಪತ್ರಕರ್ತರ ಮೇಲೆ, ವಿರೋಧ ಪಕ್ಷಗಳಮೇಲೆ ಹಾಗು ಸರ್ಕಾರದ ಬೆದರಿಕೆಗೆ ಬಗ್ಗದ ಅಧಿಕಾರಿಗಳು ಮತ್ತು ವಿದ್ವಾಂಸರ ಮೇಲೆ ಹಲವಾರು ವರ್ಷಗಳಿಂದ ಗೂಢಚರ್ಯೆ ಮಾಡುತ್ತಿರುವುದು ಇದೀಗ ಬಯಲಾಗಿಯಷ್ಟೇ..

ಆದರೇನಂತೆ… ಮೋದಿ ಸರ್ಕಾರ ಮಾಮೂಲಿನಂತೆ ಇವೆಲ್ಲಾ ವಿದೇಶಿ ಶಕ್ತಿಗಳ ಜೊತೆಸೇರಿ ಸ್ಥಳೀಯ ವಿರೋಧ ಪಕ್ಷಗಳು ದೇಶದ ವಿರುದ್ಧ ನಡೆಸುತ್ತಿರುವ ಕುತಂತ್ರ ಎಂಬ ಕ್ರೋನಾಲಜಿ ಕಟ್ಟುತ್ತಿದೆ…

ಅಮಿತ್ ಷಾ ಅವರಂತೂ, ಈ ಭಾರತದ ಸಂಸತ್ತು ಸಮಾವೇಶಗೊಳ್ಳುವ ಹಿಂದಿನ ದಿನವೇ ಈ ವರದಿ ಬಿಡುಗಡೆಯಾಗಿರುವ ಹಿಂದಿನ ಕ್ರೋನಾಲಜಿ ಅರ್ಥಮಾಡಿಕೊಳ್ಳಿ ಎಂದು ಸಂಚು ಕಥನ ಹೆಣೆಯಲು ಮುಂದಾಗಿದ್ದಾರೆ…

ಗೃಹಮಂತ್ರಿಗಳು ಇಷ್ಟೆಲ್ಲಾ ಹೇಳಿದ ಮೇಲೆ ಅಸಲೀ ಕ್ರೋನಾಲಜಿಯನ್ನೇ ನೋಡಿಬಿಡೋಣ …

ಗೃಹಮಂತ್ರಿಗಳೇ … ಕ್ರೋನಾಲಜಿ ಹೀಗಿದೆ:

– ಮೊದಲನೆಯದಾಗಿ ಈ ಜಗತ್ತಿನ ಹತ್ತು ದೇಶಗಳ 16 ಮಾಧ್ಯಮ ಸಂಸ್ಥೆಗಳ 80 ಪತ್ರಕರ್ತರು ಜೊತೆಗೂಡಿ ಸಿದ್ಧಪಡಿಸಿದ ಈ ತನಿಖಾ ವರದಿ ಜಗತ್ತಿನಾದ್ಯಂತ ಏಕಕಾಲದಲ್ಲಿ ಜುಲೈ 18 ರಂದು ಬಿಡುಗಡೆಯಾಗಿದೆ.

ಮತ್ತು ಇದು ಭಾರತವನ್ನು ಒಳಗೊಂಡಂತೆ ಇತರ ಹತ್ತು ದೇಶಗಳ ಸರ್ಕಾರ ಗಳು ಪೆಗಾಸಸ್ ಅನ್ನು ಹೇಗೆ ದುರ್ಬಳಕೆ ಮಾಡಿಕೊಂಡಿರಬಹುದು ಎಂಬ ವಿವರಗಳನ್ನು ಕೊಡುತ್ತದೆ. ಕೇವಲ ಭಾರತದ್ದಲ್ಲ…

ಈ ವರದಿಯ ಪ್ರಾಥಮಿಕ ಕಂತು ಸ್ಪಷ್ಟಪಡಿಸುತ್ತಿರುವಂತೆ ಪೆಗಾಸಸ್ ಬಳಿ ಜಗತ್ತಿನ 20 ಬೇರೆಬೇರೆ ದೇಶಗಳಲ್ಲಿ ವಾಸವಾಗಿರುವ 50,000 ಜನರ ಫೋನ್ ನಂಬರ್ಗಳು ಉದ್ದೇಶಿತ ಗೂಢಚರ್ಯೆ ಪಟ್ಟಿಯಲ್ಲಿತ್ತು.

ಅದರಲ್ಲಿ 1000 ನಂಬರ್ ಗಳು ಭಾರತಕ್ಕೆ ಸೇರಿದ್ದವಾಗಿದ್ದರೆ 15,000 ಮೆಕ್ಸಿಕೋಗೆ ಸೇರಿದ್ದವು. ಮೆಕ್ಸಿಕೋಗೆ ಸಂಬಂಧಪಟ್ಟ ವಿವರಗಳು ಸಹಾ ಜುಲೈ 18ರಂದೇ ಜಾಗತೀಕವಾಗಿ ಬಿಡುಗಡೆಯಾಗಿದೆ.

ಹಾಗೆಯೇ ಅಜರ್ಬೈಜಾನ್ ಬಹರೈನ್, ಸೌದಿ ಅರೇಬಿಯಾ, ಹಂಗೇರಿ, ಮೆಕ್ಸಿಕೋ ಇನ್ನಿತರ ಹತ್ತು ದೇಶಗಳಲ್ಲಿ ಅಲ್ಲಿನ ಸರ್ಕಾರಗಳು ಹೇಗೆ ತನ್ನ ಭಿನ್ನಮತೀಯರ ಮೇಲೆ ಬೇಹುಗಾರಿಕೆ ನಡೆಸಿದೆ ಎಂದು ಈ ವರದಿ ಬಯಲು ಮಾಡಿದೆ.

ಭಾರತವನ್ನು ಬಿಟ್ಟರೆ ಬೇರೆ ಯಾವ ದೇಶದಲ್ಲೂ ಸಂಸತ್ ಅಧಿವೇಶನ ಇರಲಿಲ್ಲ… ಜಗತ್ತು ಎಂದರೆ ಭಾರತವೇ ಅಲ್ಲ ಅಲ್ಲವೇ ಗೃಹ ಮಂತ್ರಿಗಳೇ..??

– ಇನ್ನು ಕೆಲವು ಅಸಲಿ ಕ್ರೋನಾಲಜಿಗಳು ಹೀಗಿವೆ..:

– ಸೌದಿ ಅರೇಬಿಯಾದ ಸಾಮ್ರಾಟರಿಗೆ ತಲೆನೋವಾಗಿದ್ದ ಜಮಾಲ್ ಕಶೊಗಿ ಎಂಬ ಪತ್ರಕರ್ತನ ಪ್ರೇಯಸಿಯ ಫೋನಿನಲ್ಲಿ ಪೆಗಾಸಸ್ ಸ್ಪೈವೇರ್ ಕೂಡಿಸಿದ ನಾಲ್ಕೇ ದಿನಗಳಲ್ಲಿ ಕಶೋಗಿ ಟರ್ಕಿಯ ಸೌದಿ ಅರೇಬಿಯಾದ ರಾಯಭಾರ ಕಚೇರಿಯಲ್ಲಿ 2018ರ ಅಕ್ಟೊಬರ್ ನಲ್ಲಿ ಹೆಣವಾಗುತ್ತಾನೆ..
ಇದು ಅಸಲಿ ಕ್ರೋನಾಲಜಿ

– ಮೆಕ್ಸಿಕೋದ ಸಿಸಿಲಿಯೋ ಪಿನೆಡಾ ಎಂಬ ಪತ್ರಕರ್ತ 2017ರಲ್ಲಿ ಮೆಕ್ಸಿಕೋದ ಬೀದಿಯಲ್ಲಿ ಕೊಲೆಯಾಗಿದ್ದ. ಕಾರಣ ಆಡಳಿತಾರೂಢ ಸರ್ಕಾರಕ್ಕೂ ಡ್ರಗ್ ಮಾಫಿಯಾಗಳಿಗೂ ಇದ್ದ ಸಂಬಂಧಗಳ ಬಗ್ಗೆ ಆತ ಬರೆಯಲು ಶುರು ಮಾಡಿದ್ದ. ಮರು ವರ್ಷ ಚುನಾವಣೆಯಿತ್ತು. ಆತನು ಸಾಯುವ ಕೆಲವು ವಾರಗಳ ಮುನ್ನ ಆತನ ಫೋನಿನಲ್ಲಿ, ಹಾಗೂ ಆತನ ಆಪ್ತರ ಫೋನುಗಳಲ್ಲಿ ಪೆಗಾಸಸ್ ಸ್ಪೈವೇರ್ ಸ್ಥಾಪಿಸಲಾಗಿತ್ತು. ಇದು ಅಸಲಿ ಕ್ರೋನಾಲಜಿ

– ಭಾರತದಲ್ಲಿ…

– indian Express ನ ಸುಶಾಂತ್ ಸಿಂಗ್ ಅವರು 2017 ರಿಂದ ರಫೇಲ್ ಯುದ್ಧ ವಿಮಾನ ಹಗರಣದ ಬಗ್ಗೆ ತನಿಖಾ ಲೇಖನ ಬರೆಯಲು ಪ್ರಾರಂಭಿಸುತ್ತಾರೆ. 2018ರ ಪ್ರಾರಂಭದಿಂದಲೇ ಅವರ ಫೋನಿನಲ್ಲಿ ಪೆಗಾಸಸ್ ಪತ್ತೆಯಾಗಿದೆ.

– 2019ರ ಚುನಾವಣೆಯಲ್ಲಿ ಭಾರತದ ಚುನಾವಣಾ ಆಯೋಗದ ಹಿರಿಯ ಸದಸ್ಯರಾಗಿದ್ದ ಅಶೋಕ್ ಲಾವಾಸಾ ಅವರು ಮೋದಿಯವರ ಚುನಾವಣಾ ಭಾಷಣಗಳ ಬಗೆ ತೀವ್ರವಾದ ತಕರಾರು ಎತ್ತುತ್ತಾರೆ. ಅದರ ಮರು ತಿಂಗಳಿಂದಲೇ ಅವರ ಹೆಸರು ಪೆಗಾಸಸ್ ನ ಸಂಭಾವ್ಯ ಗೂಢಚರ್ಯೆ ಪಟ್ಟಿ ಸೇರಿಕೊಳ್ಳುತ್ತದೆ.

– ಮೋದಿ ಕ್ಯಾಬಿನೆಟ್ಟಿನ ಹಾಲಿ ಮಂತ್ರಿ ಒರಿಸ್ಸಾದ ಅಷ್ವಿನಿ ವೈಷ್ಣವ್ ಅವರು ಅಧಿಕಾರಿಯಾಗಿದ್ದಾಗ ವಾಜಪೇಯಿಯವರ ಆಪ್ತ ಸಹಾಯಕನಾಗಿದ್ದರೂ ಬಿಜು ಜನತಾ ದಾಳಕ್ಕೆ ಆಪ್ತರಾಗಿದ್ದವರು. 2017ರಿಂದಲೇ ಅವರ ಫೋನ್ ನಂಬರ್ ಸಂಭಾವ್ಯ ಪೆಗಾಸಸ್ ಗೂಢಚರ್ಯೆ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಅದಾದ ಮರುವರ್ಷದಲ್ಲೆ ಅವರು ಬಿಜೆಪಿ ಸೇರಿಕೊಳ್ಳುತ್ತಾರೆ.

-ಮಾಜಿ ಮುಖ್ಯ ನ್ಯಾಯಾಧೀಶ ಹಾಲಿ ಬಿಜೆಪಿ ನಾಮನಿರ್ದೇಶಿತ ರಾಜ್ಯ ಸಭಾ ಸದಸ್ಯ ರಂಜನ್ ಗೊಗೋಯ್ ಅವರು ತನ್ನ ಜೊತೆ ಅನುಚಿತವಾಗಿ ನಡೆದುಕೊಂಡಿದ್ದಾರೆಂದು ಮಹಿಳಾ ಉದ್ಯೋಗಿಯೊಬ್ಬರು ದೂರು ನೀಡಿದ ಮರು ವಾರದಿಂದಲೇ ಆಕೆಯ ಹಾಗೂ ಆಕೆಯ ಸಂಬಂಧಿಕರ ಹೆಸರುಗಳು ಪೆಗಾಸಸ್ ಪಟ್ಟಿ ಸೇರಿಕೊಳ್ಳುತ್ತದೆ.

ಆ ನಂತರ ಗೊಗೋಯ್ ಕೊಟ್ಟ ತೀರ್ಪು ಗಳೆಲ್ಲ ಮೋದಿ ಸರ್ಕಾರದ ಪರವೇ.

ಈ ಕ್ರೋನಾಲಜಿಯನ್ನು ಹೇಗೆ ಅರ್ಥಮಾಡಿಕೊಳ್ಳುವುದು ಅಮಿತ್ ಷಾ ಅವರೇ?????

  • ಶಿವಸುಂದರ್‌

ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....