Homeಮುಖಪುಟ'ಸ್ವಲ್ಪ ತಾಳ್ಮೆಯಿಂದಿರಿ, ನಿರೀಕ್ಷಿಸಿ..'; ನಿತೀಶ್‌ ಜತೆಗಿನ ವಿಮಾನ ಪ್ರಯಾಣದ ಕುರಿತು ತೇಜಸ್ವಿ ಪ್ರತಿಕ್ರಿಯೆ

‘ಸ್ವಲ್ಪ ತಾಳ್ಮೆಯಿಂದಿರಿ, ನಿರೀಕ್ಷಿಸಿ..’; ನಿತೀಶ್‌ ಜತೆಗಿನ ವಿಮಾನ ಪ್ರಯಾಣದ ಕುರಿತು ತೇಜಸ್ವಿ ಪ್ರತಿಕ್ರಿಯೆ

- Advertisement -
- Advertisement -

ಒಂದೆ ವಿಮಾನದಲ್ಲಿ ಪ್ರತಿಸ್ಪರ್ಧಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಿಂದ ದೆಹಲಿಗೆ ಪ್ರಯಾಣಿಸಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್, ಜೆಡಿ-ಯು ಮುಖ್ಯಸ್ಥರೊಂದಿಗಿನ ಮಾತುಕತೆಗೆ ಸಂಬಂಧಿಸಿದ ಪ್ರಶ್ನೆಗೆ ‘ಸ್ವಲ್ಪ ತಾಳ್ಮೆಯಿಂದಿರಿ’ ಎಂದು ಸುದ್ದಿಗಾರರಿಗೆ ತಿಳಿಸಿದರು. ನಂತರ, ಅವರು ಇಂಡಿಯಾ ಬ್ಲಾಕ್‌ ನಾಯಕರನ್ನು ಭೇಟಿಯಾಗಲು ತೆರಳಿದರು.

“ಸ್ವಲ್ಪ ತಾಳ್ಮೆಯಿಂದಿರಿ; ನಿರೀಕ್ಷಿಸಿ,ವೀಕ್ಷಿಸಿ” ಎಂದು ಅವರು ಸುದ್ದಿಗಾರರಿಗೆ ಹೇಳಿದರು, “ನಾವು ಪರಸ್ಪರ ಶುಭಾಶಯ ಕೋರಿದ್ದೇವೆ. ಬಾಕಿ ಕ್ಯಾ ಹೋತಾ ಹೈ, ಆಗೇ ದೇಖ್ತೇ ದೇಖ್ತೆ ರಹಿಯೇ” ಎಂದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಗೆ ತೇಜಸ್ವಿ ಯಾದವ್, “ಸ್ವಲ್ಪ ತಾಳ್ಮೆಯಿಂದಿರಿ, ಏನಾಗುತ್ತದೆ ಕಾದು ನೋಡಿ…” ಎಂದು ಹೇಳಿದರು.

ಒಂದೆ ವಿಮಾನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ದೆಹಲಿ ತಲುಪಿದಾಗ, ನಾನು ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ಬಂದಿದ್ದೇನೆ, ಸಂಜೆ 6 ಗಂಟೆಗೆ ಸಭೆ ಇದೆ, ಸಭೆಯಲ್ಲಿ ಎಲ್ಲರ ಅಭಿಪ್ರಾಯ ಏನು ಎಂದು ನೋಡೋಣ ಎಂದು ಹೇಳಿದರು.

“ದೇಶದಲ್ಲಿ ದೌರ್ಜನ್ಯದ ವಿರುದ್ಧ ಮತದಾನ ಮಾಡಲಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು ಮತದಾನ ಮಾಡಲಾಗಿದೆ. ‘ಜನತಾ ಮಾಲಿಕ್’ ಎಂದು ನಾನು ಭಾವಿಸುತ್ತೇನೆ. ಇಂದು ಸಂಜೆ ಸಭೆಯ ನಂತರ ಏನು ನಿರ್ಧರಿಸುತ್ತದೆ ಎಂದು ನೋಡೋಣ” ಎಂದು ಅವರು ಹೇಳಿದರು.

ನಿತೀಶ್ ಕುಮಾರ್ ನಡೆಯತ್ತ ಎಲ್ಲರ ಚಿತ್ತ:

ಪಕ್ಷಗಳನ್ನು ಬದಲಾಯಿಸುವ ಕುಮಾರ್ ಅವರ ದಾಖಲೆಯನ್ನು ಪರಿಗಣಿಸಿ, ಅವರು ಇಂಡಿಯಾ ಬ್ಲಾಕ್‌ಗೆ ಸೇರಬಹುದು ಎಂಬ ಊಹಾಪೋಹ ಹೆಚ್ಚಾಗಿದೆ. ಇಂದು ಬೆಳಗ್ಗೆ ಪಟ್ನಾದಿಂದ ದೆಹಲಿಗೆ ಒಂದೆ ವಿಮಾನದಲ್ಲಿ ನಿತೀಶ್ ಕುಮಾರ್ ಅವರು ತೇಜಸ್ವಿ ಯಾದವ್ ಅವರೊಂದಿಗೆ ಪ್ರಯಾಣಿಸಿದ ನಂತರ ಊಹಾಪೋಹಗಳು ಮತ್ತಷ್ಟು ಬಲಗೊಂಡವು.

ಈ ಮಧ್ಯೆ, ಲೋಕಸಭಾ ಚುನಾವಣಾ ಫಲಿತಾಂಶಗಳು ಪ್ರಕಟವಾದ ಒಂದು ದಿನದ ನಂತರ ಎನ್‌ಡಿಎ ಮತ್ತು ಇಂಡಿಯಾ ಬ್ಲಾಕ್ ಸಭೆಗಳು ನವದೆಹಲಿಯಲ್ಲಿ ನಡೆಯಲಿವೆ. ಇದರಲ್ಲಿ ಭಾರತೀಯ ಜನತಾ ಪಕ್ಷವು ತನ್ನದೇ ಆದ ಬಹುಮತವನ್ನು ಸಾಧಿಸಲು ವಿಫಲವಾಗಿದೆ. 543 ಸ್ಥಾನಗಳ ಪೈಕಿ 240ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದ್ದು, 2019ಕ್ಕೆ ಹೋಲಿಸಿದರೆ 60ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಂಡಿದೆ.

ಇದನ್ನೂ ಓದಿ; ಜೈಲಿನಿಂದಲೆ ಚುನಾವಣೆ ಗೆದ್ದ ಇಬ್ಬರು ಅಭ್ಯರ್ಥಿಗಳು; ಪ್ರಮಾಣ ವಚನ ಸ್ವೀಕರಿಸುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...