Homeಕರ್ನಾಟಕಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಪರಿಹಾರ ಪರಿಗಣಿಸಬಾರದು ಎಂದೇನಿಲ್ಲ : ಹೈಕೋರ್ಟ್‌

ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಪರಿಹಾರ ಪರಿಗಣಿಸಬಾರದು ಎಂದೇನಿಲ್ಲ : ಹೈಕೋರ್ಟ್‌

ಮಾಹಿತಿ ಆಯುಕ್ತರ ನೇಮಕ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ

- Advertisement -
- Advertisement -

ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ ಎಂದು ಹೈಕೋರ್ಟ್ ಇಂದು (ಫೆ.4) ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಶೋಧನಾ ಸಮಿತಿ ರಚಿಸದೇ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಗೆ ನಿವೃತ್ತ ಐಎಎಸ್‌ ಅಧಿಕಾರಿ ಆತಿಶ್‌ ಮೋಹನ್‌ ಪ್ರಸಾದ್‌ ಮತ್ತು ಮಾಹಿತಿ ಆಯುಕ್ತರನ್ನಾಗಿ ಕೆ‌. ರಾಮನ್, ಡಾ. ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ. ಬದ್ರುದ್ದೀನ್ ಮತ್ತು ಬಿ.ಆರ್ ಮಮತಾ ಅವರನ್ನು ನೇಮಕ ಮಾಡಿರುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಬೆಂಗಳೂರಿನ ಮಲ್ಲಿಕಾರ್ಜುನ ರಾಜು ಎಂಬವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್‌ ದೇವದಾಸ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ಅರ್ಜಿದಾರರ ಪರ ಹಾಜರಿದ್ದ ವಕೀಲ ಅಶೋಕ್‌ ಪಾಟೀಲ್‌ ವಾದ ಮಂಡಿಸಿ, “ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್‌ 15 (3)ರ ಅನ್ವಯ ಮುಖ್ಯಮಂತ್ರಿ, ವಿಪಕ್ಷ ನಾಯಕ ಹಾಗೂ ಒಬ್ಬ ಸಂಪುಟ ದರ್ಜೆಯ ಸಚಿವರ ನೇತೃತ್ವದ ಸಮಿತಿಯು ನಾಮನಿರ್ದೇಶನ ಮಾಡಿದವರನ್ನು ರಾಜ್ಯಪಾಲರು ನೇಮಕ ಮಾಡುತ್ತಾರೆ. ಹುದ್ದೆಗೆ ನೂರಾರು ಅರ್ಜಿಗಳು ಬರುವುದರಿಂದ ಸಿಎಂ ನೇತೃತ್ವದ ಸಮಿತಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗದು. ಅದಕ್ಕಾಗಿ ಶೋಧನಾ ಸಮಿತಿಯನ್ನು ರಚಿಸಬೇಕು. ಪ್ರತಿಯೊಬ್ಬ ಅರ್ಜಿದಾರರ ಅರ್ಹತೆ ಆಧರಿಸಿ ಶೋಧನಾ ಸಮಿತಿಯು ಹೆಸರುಗಳನ್ನು ಅಂತಿಮಗೊಳಿಸುತ್ತದೆ. ರಾಜ್ಯದಲ್ಲಿ ಈ ಪ್ರಕ್ರಿಯೆ ನಡೆದಿಲ್ಲ” ಎಂದು ಆರೋಪಿಸಿದ್ದಾರೆ.

“ಭಾರದ್ವಾಜ್‌ ವರ್ಸಸ್‌ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶಗಳ ಪ್ರಕಾರ, ಪ್ರತಿಯೊಂದು ರಾಜ್ಯವೂ ಶೋಧನಾ ಸಮಿತಿ ರಚಿಸಬೇಕು. ಸಲ್ಲಿಕೆಯಾಗುವ ಅರ್ಜಿಗಳನ್ನು ಶೋಧನಾ ಸಮಿತಿಯು ಪರಿಶೀಲಿಸಿ, ಶಿಫಾರಸ್ಸು ಮಾಡಬೇಕು. ಈ ನಿಯಮ ಪಾಲನೆಯಾಗಿಲ್ಲ” ಎಂದು ದೂರಿದ್ದಾರೆ.

ಮುಂದುವರಿದು, “ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಆಶಿತ್‌ ಮೋಹನ್‌ ಪ್ರಸಾದ್‌ ಅವರು, ಆ ಹುದ್ದೆಗೆ ಅರ್ಜಿಯನ್ನೇ ಹಾಕಿರಲಿಲ್ಲ. ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಹಾಕಿದ್ದರು. ಇದನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು “ಶೋಧನಾ ಸಮಿತಿ/ ಆಯ್ಕೆ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ನೀಡಿದ ಹೆಸರುಗಳನ್ನು ಮುಖ್ಯಮಂತ್ರಿ ನೇತೃತ್ವದ ಸಮಿತಿಯು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ. ಆ ಬಳಿಕ ನೇಮಕಾತಿ ಪ್ರಕ್ರಿಯೆ ನಡೆದಿದೆ” ಎಂದು ತಿಳಿಸಿದ್ದಾರೆ.

“ಇಂದು (ಫೆ.4) ಸಂಜೆ 5 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಲಾಗಿದೆ. 2025ರ ಜನವರಿ 7ರಂದು ಸುಪ್ರೀಂ ಕೋರ್ಟ್‌ ತನ್ನ ನಿರ್ದೇಶನಗಳನ್ನು ರಾಜ್ಯ ಸರ್ಕಾರಗಳು ಪಾಲಿಸದಿರುವ ಕುರಿತಾದ ಅಹವಾಲುಗಳನ್ನು ಮುಂದಿನ ವಿಚಾರಣೆಯಲ್ಲಿ ಆಲಿಸುವುದಾಗಿ ತಿಳಿಸಿದೆ. ಈ ನೆಲೆಯಲ್ಲಿ ಅರ್ಜಿದಾರರನ್ನು ಸುಪ್ರೀಂ ಕೋರ್ಟ್‌ಗೆ ಸಂಪರ್ಕಿಸಲು ಆದೇಶಿಸಬೇಕು” ಎಂದು ಕೋರಿದ್ದಾರೆ.

ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಆತಿಶ್‌ ಮೋಹನ್‌ ಪ್ರಸಾದ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ. ನೇಮಕಾತಿಯು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಹೇಳಿದೆ.

ವಾದ-ಪ್ರತಿವಾದಗಳನ್ನು ಅಲಿಸಿರುವ ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ.

ಸೌಜನ್ಯ : ಬಾರ್ & ಬೆಂಚ್

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...