Homeಕರ್ನಾಟಕಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಪರಿಹಾರ ಪರಿಗಣಿಸಬಾರದು ಎಂದೇನಿಲ್ಲ : ಹೈಕೋರ್ಟ್‌

ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಪರಿಹಾರ ಪರಿಗಣಿಸಬಾರದು ಎಂದೇನಿಲ್ಲ : ಹೈಕೋರ್ಟ್‌

ಮಾಹಿತಿ ಆಯುಕ್ತರ ನೇಮಕ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ

- Advertisement -
- Advertisement -

ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ ಎಂದು ಹೈಕೋರ್ಟ್ ಇಂದು (ಫೆ.4) ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಶೋಧನಾ ಸಮಿತಿ ರಚಿಸದೇ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಗೆ ನಿವೃತ್ತ ಐಎಎಸ್‌ ಅಧಿಕಾರಿ ಆತಿಶ್‌ ಮೋಹನ್‌ ಪ್ರಸಾದ್‌ ಮತ್ತು ಮಾಹಿತಿ ಆಯುಕ್ತರನ್ನಾಗಿ ಕೆ‌. ರಾಮನ್, ಡಾ. ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ. ಬದ್ರುದ್ದೀನ್ ಮತ್ತು ಬಿ.ಆರ್ ಮಮತಾ ಅವರನ್ನು ನೇಮಕ ಮಾಡಿರುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಬೆಂಗಳೂರಿನ ಮಲ್ಲಿಕಾರ್ಜುನ ರಾಜು ಎಂಬವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್‌ ದೇವದಾಸ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ಅರ್ಜಿದಾರರ ಪರ ಹಾಜರಿದ್ದ ವಕೀಲ ಅಶೋಕ್‌ ಪಾಟೀಲ್‌ ವಾದ ಮಂಡಿಸಿ, “ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್‌ 15 (3)ರ ಅನ್ವಯ ಮುಖ್ಯಮಂತ್ರಿ, ವಿಪಕ್ಷ ನಾಯಕ ಹಾಗೂ ಒಬ್ಬ ಸಂಪುಟ ದರ್ಜೆಯ ಸಚಿವರ ನೇತೃತ್ವದ ಸಮಿತಿಯು ನಾಮನಿರ್ದೇಶನ ಮಾಡಿದವರನ್ನು ರಾಜ್ಯಪಾಲರು ನೇಮಕ ಮಾಡುತ್ತಾರೆ. ಹುದ್ದೆಗೆ ನೂರಾರು ಅರ್ಜಿಗಳು ಬರುವುದರಿಂದ ಸಿಎಂ ನೇತೃತ್ವದ ಸಮಿತಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗದು. ಅದಕ್ಕಾಗಿ ಶೋಧನಾ ಸಮಿತಿಯನ್ನು ರಚಿಸಬೇಕು. ಪ್ರತಿಯೊಬ್ಬ ಅರ್ಜಿದಾರರ ಅರ್ಹತೆ ಆಧರಿಸಿ ಶೋಧನಾ ಸಮಿತಿಯು ಹೆಸರುಗಳನ್ನು ಅಂತಿಮಗೊಳಿಸುತ್ತದೆ. ರಾಜ್ಯದಲ್ಲಿ ಈ ಪ್ರಕ್ರಿಯೆ ನಡೆದಿಲ್ಲ” ಎಂದು ಆರೋಪಿಸಿದ್ದಾರೆ.

“ಭಾರದ್ವಾಜ್‌ ವರ್ಸಸ್‌ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶಗಳ ಪ್ರಕಾರ, ಪ್ರತಿಯೊಂದು ರಾಜ್ಯವೂ ಶೋಧನಾ ಸಮಿತಿ ರಚಿಸಬೇಕು. ಸಲ್ಲಿಕೆಯಾಗುವ ಅರ್ಜಿಗಳನ್ನು ಶೋಧನಾ ಸಮಿತಿಯು ಪರಿಶೀಲಿಸಿ, ಶಿಫಾರಸ್ಸು ಮಾಡಬೇಕು. ಈ ನಿಯಮ ಪಾಲನೆಯಾಗಿಲ್ಲ” ಎಂದು ದೂರಿದ್ದಾರೆ.

ಮುಂದುವರಿದು, “ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಆಶಿತ್‌ ಮೋಹನ್‌ ಪ್ರಸಾದ್‌ ಅವರು, ಆ ಹುದ್ದೆಗೆ ಅರ್ಜಿಯನ್ನೇ ಹಾಕಿರಲಿಲ್ಲ. ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಹಾಕಿದ್ದರು. ಇದನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು “ಶೋಧನಾ ಸಮಿತಿ/ ಆಯ್ಕೆ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ನೀಡಿದ ಹೆಸರುಗಳನ್ನು ಮುಖ್ಯಮಂತ್ರಿ ನೇತೃತ್ವದ ಸಮಿತಿಯು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ. ಆ ಬಳಿಕ ನೇಮಕಾತಿ ಪ್ರಕ್ರಿಯೆ ನಡೆದಿದೆ” ಎಂದು ತಿಳಿಸಿದ್ದಾರೆ.

“ಇಂದು (ಫೆ.4) ಸಂಜೆ 5 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಲಾಗಿದೆ. 2025ರ ಜನವರಿ 7ರಂದು ಸುಪ್ರೀಂ ಕೋರ್ಟ್‌ ತನ್ನ ನಿರ್ದೇಶನಗಳನ್ನು ರಾಜ್ಯ ಸರ್ಕಾರಗಳು ಪಾಲಿಸದಿರುವ ಕುರಿತಾದ ಅಹವಾಲುಗಳನ್ನು ಮುಂದಿನ ವಿಚಾರಣೆಯಲ್ಲಿ ಆಲಿಸುವುದಾಗಿ ತಿಳಿಸಿದೆ. ಈ ನೆಲೆಯಲ್ಲಿ ಅರ್ಜಿದಾರರನ್ನು ಸುಪ್ರೀಂ ಕೋರ್ಟ್‌ಗೆ ಸಂಪರ್ಕಿಸಲು ಆದೇಶಿಸಬೇಕು” ಎಂದು ಕೋರಿದ್ದಾರೆ.

ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಆತಿಶ್‌ ಮೋಹನ್‌ ಪ್ರಸಾದ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ. ನೇಮಕಾತಿಯು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಹೇಳಿದೆ.

ವಾದ-ಪ್ರತಿವಾದಗಳನ್ನು ಅಲಿಸಿರುವ ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ.

ಸೌಜನ್ಯ : ಬಾರ್ & ಬೆಂಚ್

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...