Homeರಾಷ್ಟ್ರೀಯ‘ಒಂದೇ ವ್ಯತ್ಯಾಸ... ನನ್ನ ಧರ್ಮ, ನನ್ನ ಹೆಸರು’ - ನ್ಯಾಯಾಲಯದಲ್ಲಿ ಪತ್ರಕರ್ತ ಮೊಹಮ್ಮದ್ ಜುಬೇರ್‌

‘ಒಂದೇ ವ್ಯತ್ಯಾಸ… ನನ್ನ ಧರ್ಮ, ನನ್ನ ಹೆಸರು’ – ನ್ಯಾಯಾಲಯದಲ್ಲಿ ಪತ್ರಕರ್ತ ಮೊಹಮ್ಮದ್ ಜುಬೇರ್‌

- Advertisement -
- Advertisement -

ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983 ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ತನ್ನನ್ನು ಬಂಧಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್‌ ಜುಬೇರ್‌‌ ಅವರು ನ್ಯಾಯಾಲಯಕ್ಕೆ ಮಂಗಳವಾರ ತಿಳಿಸಿದ್ದಾರೆ.

ಜುಬೇರ್‌‌ ಅವರು ಈ ಟ್ವೀಟ್ ಅನ್ನು 2018 ರಲ್ಲಿ ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅನಾಮಧೇಯ ಟ್ವಿಟರ್‌ ಖಾತೆಯೊಂದು ದೆಹಲಿ ಪೊಲೀಸರಿಗೆ ದೂರಿಕೊಂಡಿತ್ತು. ಇದರ ನಂತರ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೇರ್‌ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ ಖ್ಯಾತ ವಕೀಲೆ ವೃಂದಾ ಗ್ರೋವರ್‌‌, “ಇದೇ ರೀತಿಯ ಟ್ವೀಟ್‌ಅನ್ನು ಅನೇಕರು ಮಾಡಿದ್ದಾರೆ. ಆದರೆ ಆ ಖಾತೆ ಮತ್ತು ನನ್ನ ನಡುವಿನ ಏಕೈಕ ವ್ಯತ್ಯಾಸವೆಂದರೆ ನನ್ನ ಧರ್ಮ, ನನ್ನ ಹೆಸರು ಮತ್ತು ನನ್ನ ವೃತ್ತಿ” ಎಂದು ಜುಬೇರ್ ಮುಸ್ಲಿಂ ಮತ್ತು ಪತ್ರಕರ್ತ ಎಂದು ಉಲ್ಲೇಖಿಸಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಿಸಿ ಸೆ ನಾ ಕೆಹನಾ’: ಮೊಹಮ್ಮದ್ ಜುಬೇರ್‌ ಬಂಧನಕ್ಕೆ ಕಾರಣವಾದ ಹಳೆಯ ಹಿಂದಿ ಸಿನಿಮಾ ದೃಶ್ಯ!

ಜುಬೈರ್ ಅವರು ಟ್ವೀಟ್ ಮಾಡಿದ್ದ ಚಿತ್ರ, 1983ರ ಹೃಷಿಕೇಶ್ ಮುಖರ್ಜಿ ಅವರ ‘ಕಿಸಿ ಸೆ ನಾ ಕೆಹನಾ’ ಚಲನಚಿತ್ರದ ಸ್ಕ್ರೀನ್‌ ಶಾರ್ಟ್ ಆಗಿದೆ. ಅವರು ಮಾಡಿದ್ದ ಟ್ವೀಟ್‌ನಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸುವ ಚಿತ್ರಣವಿದೆ.

ಈ ಚಿತ್ರವನ್ನು ಜುಬೇರ್ ಎಡಿಟ್‌ ಮಾಡಿದ್ದಾರೆ ಎಂಬ ಪೊಲೀಸರ ಹೇಳಿಕೆಯನ್ನು ಅವರ ವಕೀಲರು ತಳ್ಳಿಹಾಕಿದ್ದು, ‘ಇದರಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಅಥವಾ ದ್ವೇಷವನ್ನು ಉತ್ತೇಜಿಸುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಹೇಳಿದ್ದಾರೆ.

“ಅದು ಪೂಜಾ ಸ್ಥಳವಲ್ಲ, ಇದು ಹನಿಮೂನ್‌ ಮೇಲೆ ಮಾಡಲಾಗಿರುವ ತಮಾಷೆಯಾಗಿದೆ…ಇಡೀ ಪ್ರಕರಣವು ಅಸಂಬದ್ಧತೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

ಜುಬೇರ್‌ಗೆ ಜಾಮೀನು ನೀಡುವಂತೆ ವಾದ ಮಂಡಿಸಿದ ಅವರು, “ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಟ್ವೀಟ್‌ನಿಂದಾಗಿ 2018ರಿಂದ 2022 ರ ನಡುವೆ ಏನಾದರೂ ನಡೆಯಿತೆ?… ನನ್ನ ಕಕ್ಷಿದಾರ ತಾನು ಮಾಡುವ ಕೆಲಸದಿಂದಾಗಿ ಗುರಿಯಾಗಿದ್ದಾರೆ. ಅವರು ಶಕ್ತಿಶಾಲಿ ಜನರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕಿರುಕುಳಕ್ಕೆ ಒಳಪಡಿಸಬಾರದು” ಎಂದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಜುಬೇರ್‌ ‘ಜನಪ್ರಿಯತೆಗಾಗಿ ಫ್ಯಾಕ್ಟ್‌ಚೆಕ್’ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಹೇಳಿದ್ದು, ಅವರ ವಿರುದ್ಧ ದಾಖಲಾಗಿರುವ ಇತರ ಎಫ್‌ಐಆರ್‌ಗಳನ್ನು ಉಲ್ಲೇಖಿಸಿ ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಆದರೆ ನ್ಯಾಯಾಲಯವು ಅವರನ್ನು ಮತ್ತೇ ನಾಲ್ಕು ದಿನಗಳ ಕಾಲ ವಶಕ್ಕೆ ನೀಡಿದೆ.

“ಇದು ಅಪರಾಧದ ಮುಂದುವರಿಕೆಯಾಗಿದ್ದು, ಹನುಮಂತನನ್ನು ಪ್ರಾರ್ಥಿಸಿ, ಕೋತಿಗಳು ನಿಮಗೆ ತೊಂದರೆ ನೀಡುವುದಿಲ್ಲ” ಎಂದು ಜುಬೇರ್ ಟ್ವೀಟ್ ಮಾಡಿದ್ದಾರೆ ಎಂದು ಪೋಲೀಸರ ವಕೀಲರು ವಾದಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಜುಬೇರ್‌ ಪರ ವಕೀಲರು, “ಅದ ಮುಖ್ಯಮಂತ್ರಿಯೊಬ್ಬರ (ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್) ಹೇಳಿಕೆಯಾಗಿದ್ದು, ಅದನ್ನು ಜುಬೇರ್‌ ಪುನರುಚ್ಚರಿಸಿದ್ದರು” ಎಂದು ಹೇಳಿದ್ದಾರೆ.

ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ವೀಡಿಯೊವನ್ನು ಜುಬೇರ್‌ ಎತ್ತಿ ತೋರಿಸಿದ್ದರು. ಇದಾಗಿ ಕೆಲವು ದಿನಗಳ ನಂತರ ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಡ್ಯೂಟಿ ಮ್ಯಾಜಿಸ್ಟ್ರೇಟ್ ನಿನ್ನೆ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

2020 ರ ಪ್ರಕರಣದಲ್ಲಿ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಎಂದು ಅವರ ವಕೀಲರು ಒತ್ತಿಹೇಳಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಈಗಾಗಲೇ ಬಂಧನದ ವಿರುದ್ಧ ರಕ್ಷಣೆ ನೀಡಿದೆ. ಆದರೆ ಪೊಲೀಸ್ ಅಧಿಕಾರಿಯ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

2017 ರಲ್ಲಿ ಲಾಭರಹಿತವಾಗಿ ಸ್ಥಾಪಿತವಾದ ಆಲ್ಟ್ ನ್ಯೂಸ್ ವಿಶ್ವದ ಅತ್ಯಂತ ಪ್ರಮುಖವಾದ ಫ್ಯಾಕ್ಟ್‌‌ಚೆಕ್‌ ಔಟ್‌ಲೆಟ್‌ಗಳಲ್ಲಿ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂದು ರಾಜಸ್ತಾನದ ಕನಯ್ಯಲಾಲ್ ಅವರ ಹತ್ಯೆಯ ವಿಡಿಯೋವನ್ನು ಯಾರೂ ಶೇರ್ ಮಾಡಬೇಡಿ ಗಲಭೆ ಆಗತ್ತೆ , ಶೇರ್ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಅಂತಿವೆ ಸರಕಾರಗಳು. ಹಾಗೇ ಹಿಂದೆ ನೂಪುರ ಶರ್ಮಾ ಕೊಟ್ಟಿರುವ ಹೇಳಿಕೆಯ ವಿಡಿಯೋವನ್ನು ಇಡೀ ಪ್ರಪಂಚಕ್ಕೆ ಗೊತ್ತಾಗಿ ಪ್ರಚಾರವಾಗಿ ಇಡೀ ಜಗತ್ತೇ ಭಾರತದ ವಿರುದ್ಧ ಪ್ರತಿಭಟನೆ ಗಲಭೆ ಆಗುವಂತೆ ಪ್ರೇರೇಪಿಸಿದ್ದು ಕೂಡಾ ಈ ಆಲ್ಟ್ ನ್ಯೂಸ್ ಅಂದಮೇಲೆ ಇವರ ಮೇಲೂ ಕೇಸ್ ಆಗ್ಲೇಬೇಕಲ್ವಾ…… ರಾಜಸ್ತಾನದ ಟೈಲರ್ ಕೊಲೆಗೆ ಪರೋಕ್ಷ ಕಾರಣ ಈ ಜುಬೈರ್ ಆಗೋದಿಲ್ವಾ….. ನೂಪುರ್ ಶರ್ಮಾ ವಿಚಾರ ಇಷ್ಟೊಂದು ದೊಡ್ಡದಾದ ಕಾರಣ ನಿನ್ನೆಯ ಪ್ರತೀಕಾರಕ್ಕೆ ಕಾರಣ ಅಲ್ವಾ…..

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...