Homeರಾಷ್ಟ್ರೀಯ‘ಒಂದೇ ವ್ಯತ್ಯಾಸ... ನನ್ನ ಧರ್ಮ, ನನ್ನ ಹೆಸರು’ - ನ್ಯಾಯಾಲಯದಲ್ಲಿ ಪತ್ರಕರ್ತ ಮೊಹಮ್ಮದ್ ಜುಬೇರ್‌

‘ಒಂದೇ ವ್ಯತ್ಯಾಸ… ನನ್ನ ಧರ್ಮ, ನನ್ನ ಹೆಸರು’ – ನ್ಯಾಯಾಲಯದಲ್ಲಿ ಪತ್ರಕರ್ತ ಮೊಹಮ್ಮದ್ ಜುಬೇರ್‌

- Advertisement -
- Advertisement -

ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983 ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ತನ್ನನ್ನು ಬಂಧಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್‌ ಜುಬೇರ್‌‌ ಅವರು ನ್ಯಾಯಾಲಯಕ್ಕೆ ಮಂಗಳವಾರ ತಿಳಿಸಿದ್ದಾರೆ.

ಜುಬೇರ್‌‌ ಅವರು ಈ ಟ್ವೀಟ್ ಅನ್ನು 2018 ರಲ್ಲಿ ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅನಾಮಧೇಯ ಟ್ವಿಟರ್‌ ಖಾತೆಯೊಂದು ದೆಹಲಿ ಪೊಲೀಸರಿಗೆ ದೂರಿಕೊಂಡಿತ್ತು. ಇದರ ನಂತರ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೇರ್‌ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ ಖ್ಯಾತ ವಕೀಲೆ ವೃಂದಾ ಗ್ರೋವರ್‌‌, “ಇದೇ ರೀತಿಯ ಟ್ವೀಟ್‌ಅನ್ನು ಅನೇಕರು ಮಾಡಿದ್ದಾರೆ. ಆದರೆ ಆ ಖಾತೆ ಮತ್ತು ನನ್ನ ನಡುವಿನ ಏಕೈಕ ವ್ಯತ್ಯಾಸವೆಂದರೆ ನನ್ನ ಧರ್ಮ, ನನ್ನ ಹೆಸರು ಮತ್ತು ನನ್ನ ವೃತ್ತಿ” ಎಂದು ಜುಬೇರ್ ಮುಸ್ಲಿಂ ಮತ್ತು ಪತ್ರಕರ್ತ ಎಂದು ಉಲ್ಲೇಖಿಸಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಿಸಿ ಸೆ ನಾ ಕೆಹನಾ’: ಮೊಹಮ್ಮದ್ ಜುಬೇರ್‌ ಬಂಧನಕ್ಕೆ ಕಾರಣವಾದ ಹಳೆಯ ಹಿಂದಿ ಸಿನಿಮಾ ದೃಶ್ಯ!

ಜುಬೈರ್ ಅವರು ಟ್ವೀಟ್ ಮಾಡಿದ್ದ ಚಿತ್ರ, 1983ರ ಹೃಷಿಕೇಶ್ ಮುಖರ್ಜಿ ಅವರ ‘ಕಿಸಿ ಸೆ ನಾ ಕೆಹನಾ’ ಚಲನಚಿತ್ರದ ಸ್ಕ್ರೀನ್‌ ಶಾರ್ಟ್ ಆಗಿದೆ. ಅವರು ಮಾಡಿದ್ದ ಟ್ವೀಟ್‌ನಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸುವ ಚಿತ್ರಣವಿದೆ.

ಈ ಚಿತ್ರವನ್ನು ಜುಬೇರ್ ಎಡಿಟ್‌ ಮಾಡಿದ್ದಾರೆ ಎಂಬ ಪೊಲೀಸರ ಹೇಳಿಕೆಯನ್ನು ಅವರ ವಕೀಲರು ತಳ್ಳಿಹಾಕಿದ್ದು, ‘ಇದರಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಅಥವಾ ದ್ವೇಷವನ್ನು ಉತ್ತೇಜಿಸುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಹೇಳಿದ್ದಾರೆ.

“ಅದು ಪೂಜಾ ಸ್ಥಳವಲ್ಲ, ಇದು ಹನಿಮೂನ್‌ ಮೇಲೆ ಮಾಡಲಾಗಿರುವ ತಮಾಷೆಯಾಗಿದೆ…ಇಡೀ ಪ್ರಕರಣವು ಅಸಂಬದ್ಧತೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

ಜುಬೇರ್‌ಗೆ ಜಾಮೀನು ನೀಡುವಂತೆ ವಾದ ಮಂಡಿಸಿದ ಅವರು, “ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಟ್ವೀಟ್‌ನಿಂದಾಗಿ 2018ರಿಂದ 2022 ರ ನಡುವೆ ಏನಾದರೂ ನಡೆಯಿತೆ?… ನನ್ನ ಕಕ್ಷಿದಾರ ತಾನು ಮಾಡುವ ಕೆಲಸದಿಂದಾಗಿ ಗುರಿಯಾಗಿದ್ದಾರೆ. ಅವರು ಶಕ್ತಿಶಾಲಿ ಜನರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕಿರುಕುಳಕ್ಕೆ ಒಳಪಡಿಸಬಾರದು” ಎಂದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಜುಬೇರ್‌ ‘ಜನಪ್ರಿಯತೆಗಾಗಿ ಫ್ಯಾಕ್ಟ್‌ಚೆಕ್’ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಹೇಳಿದ್ದು, ಅವರ ವಿರುದ್ಧ ದಾಖಲಾಗಿರುವ ಇತರ ಎಫ್‌ಐಆರ್‌ಗಳನ್ನು ಉಲ್ಲೇಖಿಸಿ ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಆದರೆ ನ್ಯಾಯಾಲಯವು ಅವರನ್ನು ಮತ್ತೇ ನಾಲ್ಕು ದಿನಗಳ ಕಾಲ ವಶಕ್ಕೆ ನೀಡಿದೆ.

“ಇದು ಅಪರಾಧದ ಮುಂದುವರಿಕೆಯಾಗಿದ್ದು, ಹನುಮಂತನನ್ನು ಪ್ರಾರ್ಥಿಸಿ, ಕೋತಿಗಳು ನಿಮಗೆ ತೊಂದರೆ ನೀಡುವುದಿಲ್ಲ” ಎಂದು ಜುಬೇರ್ ಟ್ವೀಟ್ ಮಾಡಿದ್ದಾರೆ ಎಂದು ಪೋಲೀಸರ ವಕೀಲರು ವಾದಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಜುಬೇರ್‌ ಪರ ವಕೀಲರು, “ಅದ ಮುಖ್ಯಮಂತ್ರಿಯೊಬ್ಬರ (ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್) ಹೇಳಿಕೆಯಾಗಿದ್ದು, ಅದನ್ನು ಜುಬೇರ್‌ ಪುನರುಚ್ಚರಿಸಿದ್ದರು” ಎಂದು ಹೇಳಿದ್ದಾರೆ.

ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ವೀಡಿಯೊವನ್ನು ಜುಬೇರ್‌ ಎತ್ತಿ ತೋರಿಸಿದ್ದರು. ಇದಾಗಿ ಕೆಲವು ದಿನಗಳ ನಂತರ ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಡ್ಯೂಟಿ ಮ್ಯಾಜಿಸ್ಟ್ರೇಟ್ ನಿನ್ನೆ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

2020 ರ ಪ್ರಕರಣದಲ್ಲಿ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಎಂದು ಅವರ ವಕೀಲರು ಒತ್ತಿಹೇಳಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಈಗಾಗಲೇ ಬಂಧನದ ವಿರುದ್ಧ ರಕ್ಷಣೆ ನೀಡಿದೆ. ಆದರೆ ಪೊಲೀಸ್ ಅಧಿಕಾರಿಯ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

2017 ರಲ್ಲಿ ಲಾಭರಹಿತವಾಗಿ ಸ್ಥಾಪಿತವಾದ ಆಲ್ಟ್ ನ್ಯೂಸ್ ವಿಶ್ವದ ಅತ್ಯಂತ ಪ್ರಮುಖವಾದ ಫ್ಯಾಕ್ಟ್‌‌ಚೆಕ್‌ ಔಟ್‌ಲೆಟ್‌ಗಳಲ್ಲಿ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂದು ರಾಜಸ್ತಾನದ ಕನಯ್ಯಲಾಲ್ ಅವರ ಹತ್ಯೆಯ ವಿಡಿಯೋವನ್ನು ಯಾರೂ ಶೇರ್ ಮಾಡಬೇಡಿ ಗಲಭೆ ಆಗತ್ತೆ , ಶೇರ್ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಅಂತಿವೆ ಸರಕಾರಗಳು. ಹಾಗೇ ಹಿಂದೆ ನೂಪುರ ಶರ್ಮಾ ಕೊಟ್ಟಿರುವ ಹೇಳಿಕೆಯ ವಿಡಿಯೋವನ್ನು ಇಡೀ ಪ್ರಪಂಚಕ್ಕೆ ಗೊತ್ತಾಗಿ ಪ್ರಚಾರವಾಗಿ ಇಡೀ ಜಗತ್ತೇ ಭಾರತದ ವಿರುದ್ಧ ಪ್ರತಿಭಟನೆ ಗಲಭೆ ಆಗುವಂತೆ ಪ್ರೇರೇಪಿಸಿದ್ದು ಕೂಡಾ ಈ ಆಲ್ಟ್ ನ್ಯೂಸ್ ಅಂದಮೇಲೆ ಇವರ ಮೇಲೂ ಕೇಸ್ ಆಗ್ಲೇಬೇಕಲ್ವಾ…… ರಾಜಸ್ತಾನದ ಟೈಲರ್ ಕೊಲೆಗೆ ಪರೋಕ್ಷ ಕಾರಣ ಈ ಜುಬೈರ್ ಆಗೋದಿಲ್ವಾ….. ನೂಪುರ್ ಶರ್ಮಾ ವಿಚಾರ ಇಷ್ಟೊಂದು ದೊಡ್ಡದಾದ ಕಾರಣ ನಿನ್ನೆಯ ಪ್ರತೀಕಾರಕ್ಕೆ ಕಾರಣ ಅಲ್ವಾ…..

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....