Homeರಾಷ್ಟ್ರೀಯ‘ಒಂದೇ ವ್ಯತ್ಯಾಸ... ನನ್ನ ಧರ್ಮ, ನನ್ನ ಹೆಸರು’ - ನ್ಯಾಯಾಲಯದಲ್ಲಿ ಪತ್ರಕರ್ತ ಮೊಹಮ್ಮದ್ ಜುಬೇರ್‌

‘ಒಂದೇ ವ್ಯತ್ಯಾಸ… ನನ್ನ ಧರ್ಮ, ನನ್ನ ಹೆಸರು’ – ನ್ಯಾಯಾಲಯದಲ್ಲಿ ಪತ್ರಕರ್ತ ಮೊಹಮ್ಮದ್ ಜುಬೇರ್‌

- Advertisement -
- Advertisement -

ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983 ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ತನ್ನನ್ನು ಬಂಧಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್‌ ಜುಬೇರ್‌‌ ಅವರು ನ್ಯಾಯಾಲಯಕ್ಕೆ ಮಂಗಳವಾರ ತಿಳಿಸಿದ್ದಾರೆ.

ಜುಬೇರ್‌‌ ಅವರು ಈ ಟ್ವೀಟ್ ಅನ್ನು 2018 ರಲ್ಲಿ ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅನಾಮಧೇಯ ಟ್ವಿಟರ್‌ ಖಾತೆಯೊಂದು ದೆಹಲಿ ಪೊಲೀಸರಿಗೆ ದೂರಿಕೊಂಡಿತ್ತು. ಇದರ ನಂತರ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೇರ್‌ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ ಖ್ಯಾತ ವಕೀಲೆ ವೃಂದಾ ಗ್ರೋವರ್‌‌, “ಇದೇ ರೀತಿಯ ಟ್ವೀಟ್‌ಅನ್ನು ಅನೇಕರು ಮಾಡಿದ್ದಾರೆ. ಆದರೆ ಆ ಖಾತೆ ಮತ್ತು ನನ್ನ ನಡುವಿನ ಏಕೈಕ ವ್ಯತ್ಯಾಸವೆಂದರೆ ನನ್ನ ಧರ್ಮ, ನನ್ನ ಹೆಸರು ಮತ್ತು ನನ್ನ ವೃತ್ತಿ” ಎಂದು ಜುಬೇರ್ ಮುಸ್ಲಿಂ ಮತ್ತು ಪತ್ರಕರ್ತ ಎಂದು ಉಲ್ಲೇಖಿಸಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಿಸಿ ಸೆ ನಾ ಕೆಹನಾ’: ಮೊಹಮ್ಮದ್ ಜುಬೇರ್‌ ಬಂಧನಕ್ಕೆ ಕಾರಣವಾದ ಹಳೆಯ ಹಿಂದಿ ಸಿನಿಮಾ ದೃಶ್ಯ!

ಜುಬೈರ್ ಅವರು ಟ್ವೀಟ್ ಮಾಡಿದ್ದ ಚಿತ್ರ, 1983ರ ಹೃಷಿಕೇಶ್ ಮುಖರ್ಜಿ ಅವರ ‘ಕಿಸಿ ಸೆ ನಾ ಕೆಹನಾ’ ಚಲನಚಿತ್ರದ ಸ್ಕ್ರೀನ್‌ ಶಾರ್ಟ್ ಆಗಿದೆ. ಅವರು ಮಾಡಿದ್ದ ಟ್ವೀಟ್‌ನಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸುವ ಚಿತ್ರಣವಿದೆ.

ಈ ಚಿತ್ರವನ್ನು ಜುಬೇರ್ ಎಡಿಟ್‌ ಮಾಡಿದ್ದಾರೆ ಎಂಬ ಪೊಲೀಸರ ಹೇಳಿಕೆಯನ್ನು ಅವರ ವಕೀಲರು ತಳ್ಳಿಹಾಕಿದ್ದು, ‘ಇದರಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಅಥವಾ ದ್ವೇಷವನ್ನು ಉತ್ತೇಜಿಸುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಹೇಳಿದ್ದಾರೆ.

“ಅದು ಪೂಜಾ ಸ್ಥಳವಲ್ಲ, ಇದು ಹನಿಮೂನ್‌ ಮೇಲೆ ಮಾಡಲಾಗಿರುವ ತಮಾಷೆಯಾಗಿದೆ…ಇಡೀ ಪ್ರಕರಣವು ಅಸಂಬದ್ಧತೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

ಜುಬೇರ್‌ಗೆ ಜಾಮೀನು ನೀಡುವಂತೆ ವಾದ ಮಂಡಿಸಿದ ಅವರು, “ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಟ್ವೀಟ್‌ನಿಂದಾಗಿ 2018ರಿಂದ 2022 ರ ನಡುವೆ ಏನಾದರೂ ನಡೆಯಿತೆ?… ನನ್ನ ಕಕ್ಷಿದಾರ ತಾನು ಮಾಡುವ ಕೆಲಸದಿಂದಾಗಿ ಗುರಿಯಾಗಿದ್ದಾರೆ. ಅವರು ಶಕ್ತಿಶಾಲಿ ಜನರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕಿರುಕುಳಕ್ಕೆ ಒಳಪಡಿಸಬಾರದು” ಎಂದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಜುಬೇರ್‌ ‘ಜನಪ್ರಿಯತೆಗಾಗಿ ಫ್ಯಾಕ್ಟ್‌ಚೆಕ್’ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಹೇಳಿದ್ದು, ಅವರ ವಿರುದ್ಧ ದಾಖಲಾಗಿರುವ ಇತರ ಎಫ್‌ಐಆರ್‌ಗಳನ್ನು ಉಲ್ಲೇಖಿಸಿ ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಆದರೆ ನ್ಯಾಯಾಲಯವು ಅವರನ್ನು ಮತ್ತೇ ನಾಲ್ಕು ದಿನಗಳ ಕಾಲ ವಶಕ್ಕೆ ನೀಡಿದೆ.

“ಇದು ಅಪರಾಧದ ಮುಂದುವರಿಕೆಯಾಗಿದ್ದು, ಹನುಮಂತನನ್ನು ಪ್ರಾರ್ಥಿಸಿ, ಕೋತಿಗಳು ನಿಮಗೆ ತೊಂದರೆ ನೀಡುವುದಿಲ್ಲ” ಎಂದು ಜುಬೇರ್ ಟ್ವೀಟ್ ಮಾಡಿದ್ದಾರೆ ಎಂದು ಪೋಲೀಸರ ವಕೀಲರು ವಾದಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಜುಬೇರ್‌ ಪರ ವಕೀಲರು, “ಅದ ಮುಖ್ಯಮಂತ್ರಿಯೊಬ್ಬರ (ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್) ಹೇಳಿಕೆಯಾಗಿದ್ದು, ಅದನ್ನು ಜುಬೇರ್‌ ಪುನರುಚ್ಚರಿಸಿದ್ದರು” ಎಂದು ಹೇಳಿದ್ದಾರೆ.

ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ವೀಡಿಯೊವನ್ನು ಜುಬೇರ್‌ ಎತ್ತಿ ತೋರಿಸಿದ್ದರು. ಇದಾಗಿ ಕೆಲವು ದಿನಗಳ ನಂತರ ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಡ್ಯೂಟಿ ಮ್ಯಾಜಿಸ್ಟ್ರೇಟ್ ನಿನ್ನೆ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

2020 ರ ಪ್ರಕರಣದಲ್ಲಿ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಎಂದು ಅವರ ವಕೀಲರು ಒತ್ತಿಹೇಳಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಈಗಾಗಲೇ ಬಂಧನದ ವಿರುದ್ಧ ರಕ್ಷಣೆ ನೀಡಿದೆ. ಆದರೆ ಪೊಲೀಸ್ ಅಧಿಕಾರಿಯ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

2017 ರಲ್ಲಿ ಲಾಭರಹಿತವಾಗಿ ಸ್ಥಾಪಿತವಾದ ಆಲ್ಟ್ ನ್ಯೂಸ್ ವಿಶ್ವದ ಅತ್ಯಂತ ಪ್ರಮುಖವಾದ ಫ್ಯಾಕ್ಟ್‌‌ಚೆಕ್‌ ಔಟ್‌ಲೆಟ್‌ಗಳಲ್ಲಿ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂದು ರಾಜಸ್ತಾನದ ಕನಯ್ಯಲಾಲ್ ಅವರ ಹತ್ಯೆಯ ವಿಡಿಯೋವನ್ನು ಯಾರೂ ಶೇರ್ ಮಾಡಬೇಡಿ ಗಲಭೆ ಆಗತ್ತೆ , ಶೇರ್ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಅಂತಿವೆ ಸರಕಾರಗಳು. ಹಾಗೇ ಹಿಂದೆ ನೂಪುರ ಶರ್ಮಾ ಕೊಟ್ಟಿರುವ ಹೇಳಿಕೆಯ ವಿಡಿಯೋವನ್ನು ಇಡೀ ಪ್ರಪಂಚಕ್ಕೆ ಗೊತ್ತಾಗಿ ಪ್ರಚಾರವಾಗಿ ಇಡೀ ಜಗತ್ತೇ ಭಾರತದ ವಿರುದ್ಧ ಪ್ರತಿಭಟನೆ ಗಲಭೆ ಆಗುವಂತೆ ಪ್ರೇರೇಪಿಸಿದ್ದು ಕೂಡಾ ಈ ಆಲ್ಟ್ ನ್ಯೂಸ್ ಅಂದಮೇಲೆ ಇವರ ಮೇಲೂ ಕೇಸ್ ಆಗ್ಲೇಬೇಕಲ್ವಾ…… ರಾಜಸ್ತಾನದ ಟೈಲರ್ ಕೊಲೆಗೆ ಪರೋಕ್ಷ ಕಾರಣ ಈ ಜುಬೈರ್ ಆಗೋದಿಲ್ವಾ….. ನೂಪುರ್ ಶರ್ಮಾ ವಿಚಾರ ಇಷ್ಟೊಂದು ದೊಡ್ಡದಾದ ಕಾರಣ ನಿನ್ನೆಯ ಪ್ರತೀಕಾರಕ್ಕೆ ಕಾರಣ ಅಲ್ವಾ…..

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...