Homeಮುಖಪುಟಅಯೋಧ್ಯೆ ತೀರ್ಪಿನ ಭಾಗವಾಗಿದ್ದ ಜಸ್ಟಿಸ್ ಅಬ್ದುಲ್‌ ನಜೀರ್‌ ಆಂಧ್ರ ರಾಜ್ಯಪಾಲರಾಗಿ ನೇಮಕ

ಅಯೋಧ್ಯೆ ತೀರ್ಪಿನ ಭಾಗವಾಗಿದ್ದ ಜಸ್ಟಿಸ್ ಅಬ್ದುಲ್‌ ನಜೀರ್‌ ಆಂಧ್ರ ರಾಜ್ಯಪಾಲರಾಗಿ ನೇಮಕ

- Advertisement -
- Advertisement -

ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಸಂವಿಧಾನ ಪೀಠದ ಭಾಗವಾಗಿದ್ದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಪ್ರಸ್ತುತ ರಾಜ್ಯಪಾಲರಾಗಿರುವ ಬಿಸ್ವಭೂಷಣ ಹರಿಚಂದನ್ ಅವರ ಸ್ಥಾನವನ್ನು ಅಬ್ದುಲ್‌ ನಜೀರ್‌‌ ತುಂಬಲಿದ್ದಾರೆ. ನ್ಯಾಯಮೂರ್ತಿ ನಜೀರ್ ಈ ವರ್ಷ ಜನವರಿ 4 ರಂದು ನಿವೃತ್ತರಾದರು. ಫೆಬ್ರವರಿ 12 ರ ಭಾನುವಾರದಂದು ರಾಜ್ಯಪಾಲರಾಗಿ ನೇಮಕಗೊಂಡ ಆರು ಹೊಸ ಮುಖಗಳಲ್ಲಿ ನಾಲ್ವರು ಬಿಜೆಪಿ ನಾಯಕರು ಸಹ ಸೇರಿದ್ದಾರೆ.

ಜನವರಿ 5, 1958 ರಂದು ಜನಿಸಿದ ನ್ಯಾಯಮೂರ್ತಿ ನಜೀರ್ ಅವರು 1983 ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು. ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲಿ ವೃತ್ತಿ ಮಾಡಿದರು, ಅಲ್ಲಿಯೇ 2003 ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 2004 ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. 2017 ರಲ್ಲಿ ಬಡ್ತಿ ಪಡೆದ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾದರು.

ಬಾಬರಿ ಮಸೀದಿಯ ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದ ಅಯೋಧ್ಯೆ ತೀರ್ಪು, ಒಂಬತ್ತು ನ್ಯಾಯಾಧೀಶರ ಪೀಠವು ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕೆಂದು ಎತ್ತಿ ಹಿಡಿದ ಕೆ.ಎಸ್.ಪುಟ್ಟಸ್ವಾಮಿ ಪ್ರಕರಣ ಸೇರಿದಂತೆ ಹಲವಾರು ಪ್ರಮುಖ ತೀರ್ಪುಗಳಲ್ಲಿ ಅವರು ಭಾಗಿಯಾಗಿದ್ದಾರೆ. ನೋಟು ರದ್ದತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಸರ್ಕಾರ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಆ ಪೀಠದಲ್ಲಿಯೂ ಜಸ್ಟೀಸ್ ನಸೀರ್‌ ಇದ್ದರು.

ಬಿಜೆಪಿ ನಾಯಕರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ, ಸಿಪಿ ರಾಧಾಕೃಷ್ಣನ್, ಶಿವ ಪ್ರತಾಪ್ ಶುಕ್ಲಾ ಮತ್ತು ರಾಜಸ್ಥಾನದ ವಿರೋಧ ಪಕ್ಷದ ನಾಯಕರಾಗಿರುವ ಗುಲಾಬ್ ಚಂದ್ ಕಟಾರಿಯಾ ಅವರನ್ನು ಕ್ರಮವಾಗಿ ಸಿಕ್ಕಿಂ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಅಸ್ಸಾಂನ ರಾಜ್ಯಪಾಲರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಕೋಶ್ಯಾರಿ ಅವರ ಜಾಗಕ್ಕೆ ಜಾರ್ಖಂಡ್ ಗವರ್ನರ್ ರಮೇಶ್ ಬೈಸ್ ನೇಮಕವಾಗಿದ್ದಾರೆ. ಮಾಥುರ್ ಅವರ ಸ್ಥಾನಕ್ಕೆ ಅರುಣಾಚಲ ಪ್ರದೇಶದ ಗವರ್ನರ್ ಬ್ರಿಗ್ ಬಿಡಿ ಮಿಶ್ರಾ (ನಿವೃತ್ತ) ಅವರು ಬರಲಿದ್ದಾರೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ಮತ್ತು ಲೆಫ್ಟಿನೆಂಟ್ ಜನರಲ್ ಕೆಟಿ ಪರ್ನಾಯಕ್ (ನಿವೃತ್ತ) ಅವರನ್ನು ಅರುಣಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಧಿಕಾರ ಬೇಕಾ? ಆದರ್ಶ ಬೇಕಾ?

    ಕೊನೆಗೂ ಅಧಿಕಾರಿವೇ ಗೆಲ್ಲುತ್ತೆ ಎನ್ನುವುದಕ್ಕೆ ಇದೊಂದು ನಿದರ್ಶನ.

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...