Homeಮುಖಪುಟಅಯೋಧ್ಯೆ ತೀರ್ಪಿನ ಭಾಗವಾಗಿದ್ದ ಜಸ್ಟಿಸ್ ಅಬ್ದುಲ್‌ ನಜೀರ್‌ ಆಂಧ್ರ ರಾಜ್ಯಪಾಲರಾಗಿ ನೇಮಕ

ಅಯೋಧ್ಯೆ ತೀರ್ಪಿನ ಭಾಗವಾಗಿದ್ದ ಜಸ್ಟಿಸ್ ಅಬ್ದುಲ್‌ ನಜೀರ್‌ ಆಂಧ್ರ ರಾಜ್ಯಪಾಲರಾಗಿ ನೇಮಕ

- Advertisement -
- Advertisement -

ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಸಂವಿಧಾನ ಪೀಠದ ಭಾಗವಾಗಿದ್ದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಪ್ರಸ್ತುತ ರಾಜ್ಯಪಾಲರಾಗಿರುವ ಬಿಸ್ವಭೂಷಣ ಹರಿಚಂದನ್ ಅವರ ಸ್ಥಾನವನ್ನು ಅಬ್ದುಲ್‌ ನಜೀರ್‌‌ ತುಂಬಲಿದ್ದಾರೆ. ನ್ಯಾಯಮೂರ್ತಿ ನಜೀರ್ ಈ ವರ್ಷ ಜನವರಿ 4 ರಂದು ನಿವೃತ್ತರಾದರು. ಫೆಬ್ರವರಿ 12 ರ ಭಾನುವಾರದಂದು ರಾಜ್ಯಪಾಲರಾಗಿ ನೇಮಕಗೊಂಡ ಆರು ಹೊಸ ಮುಖಗಳಲ್ಲಿ ನಾಲ್ವರು ಬಿಜೆಪಿ ನಾಯಕರು ಸಹ ಸೇರಿದ್ದಾರೆ.

ಜನವರಿ 5, 1958 ರಂದು ಜನಿಸಿದ ನ್ಯಾಯಮೂರ್ತಿ ನಜೀರ್ ಅವರು 1983 ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು. ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲಿ ವೃತ್ತಿ ಮಾಡಿದರು, ಅಲ್ಲಿಯೇ 2003 ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 2004 ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. 2017 ರಲ್ಲಿ ಬಡ್ತಿ ಪಡೆದ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾದರು.

ಬಾಬರಿ ಮಸೀದಿಯ ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದ ಅಯೋಧ್ಯೆ ತೀರ್ಪು, ಒಂಬತ್ತು ನ್ಯಾಯಾಧೀಶರ ಪೀಠವು ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕೆಂದು ಎತ್ತಿ ಹಿಡಿದ ಕೆ.ಎಸ್.ಪುಟ್ಟಸ್ವಾಮಿ ಪ್ರಕರಣ ಸೇರಿದಂತೆ ಹಲವಾರು ಪ್ರಮುಖ ತೀರ್ಪುಗಳಲ್ಲಿ ಅವರು ಭಾಗಿಯಾಗಿದ್ದಾರೆ. ನೋಟು ರದ್ದತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಸರ್ಕಾರ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಆ ಪೀಠದಲ್ಲಿಯೂ ಜಸ್ಟೀಸ್ ನಸೀರ್‌ ಇದ್ದರು.

ಬಿಜೆಪಿ ನಾಯಕರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ, ಸಿಪಿ ರಾಧಾಕೃಷ್ಣನ್, ಶಿವ ಪ್ರತಾಪ್ ಶುಕ್ಲಾ ಮತ್ತು ರಾಜಸ್ಥಾನದ ವಿರೋಧ ಪಕ್ಷದ ನಾಯಕರಾಗಿರುವ ಗುಲಾಬ್ ಚಂದ್ ಕಟಾರಿಯಾ ಅವರನ್ನು ಕ್ರಮವಾಗಿ ಸಿಕ್ಕಿಂ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಅಸ್ಸಾಂನ ರಾಜ್ಯಪಾಲರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಕೋಶ್ಯಾರಿ ಅವರ ಜಾಗಕ್ಕೆ ಜಾರ್ಖಂಡ್ ಗವರ್ನರ್ ರಮೇಶ್ ಬೈಸ್ ನೇಮಕವಾಗಿದ್ದಾರೆ. ಮಾಥುರ್ ಅವರ ಸ್ಥಾನಕ್ಕೆ ಅರುಣಾಚಲ ಪ್ರದೇಶದ ಗವರ್ನರ್ ಬ್ರಿಗ್ ಬಿಡಿ ಮಿಶ್ರಾ (ನಿವೃತ್ತ) ಅವರು ಬರಲಿದ್ದಾರೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ಮತ್ತು ಲೆಫ್ಟಿನೆಂಟ್ ಜನರಲ್ ಕೆಟಿ ಪರ್ನಾಯಕ್ (ನಿವೃತ್ತ) ಅವರನ್ನು ಅರುಣಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಧಿಕಾರ ಬೇಕಾ? ಆದರ್ಶ ಬೇಕಾ?

    ಕೊನೆಗೂ ಅಧಿಕಾರಿವೇ ಗೆಲ್ಲುತ್ತೆ ಎನ್ನುವುದಕ್ಕೆ ಇದೊಂದು ನಿದರ್ಶನ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...