Homeಮುಖಪುಟರಾಷ್ಟೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಜಸ್ಟಿಸ್‌ ಅರುಣ್‌ ಮಿಶ್ರಾ ನೇಮಕ

ರಾಷ್ಟೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಜಸ್ಟಿಸ್‌ ಅರುಣ್‌ ಮಿಶ್ರಾ ನೇಮಕ

ಎಸ್‌ಸಿ ಎಸ್ಟಿ ವರ್ಗದಿಂದ ಅಧ್ಯಕ್ಷ ಅಥವಾ ಸದಸ್ಯರು ಯಾಕಿಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ

- Advertisement -
- Advertisement -

ಸುಪ್ರೀಂ ಕೋರ್ಟ್‌ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್‌ ಅರುಣ್‌ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜಸ್ಟಿಸ್‌ ಅರುಣ ಮಿಶ್ರಾ 2020ರ ಸೆಪ್ಟೆಂಬರ್‌ 3 ರಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದರು.

ಜಸ್ಟಿಸ್‌ ಅರುಣ್‌ ಮಿಶ್ರಾ 2014 ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಈ ಹಿಂದೆ ಅವರು ರಾಜಸ್ಥಾನ ಮತ್ತು ಕಲ್ಕತ್ತಾ ಹೈಕೋರ್ಟ್‌ ಗಳ ಮುಖ್ಯನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು. ಜಸ್ಟಿಸ್‌ ಮಿಶ್ರಾ ಅವರ ಈಗಿನ ಹೊಸ ಹುದ್ದೆಯ ಅಧಿಕಾರಾವಧಿಯು 5 ವರ್ಷದ್ದಾಗಿದು 2026 ರಲ್ಲಿ ನಿವೃತ್ತರಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಸಭೆಯ ಉಪಾಧ್ಯಕ್ಷ ಹರಿವಂಶ, ಲೋಕಸಭೆ ಸ್ಪೀಕರ್‌ ಓಮ್‌ ಬಿರ್ಲಾ ರಾಜ್ಯ ಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನೊಳಗೊಂಡ ಉನ್ನತ ಸಮಿತಿಯು ಅರುಣ್‌ ಮಿಶ್ರಾ ಅವರನ್ನು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಜಸ್ಟಿಸ್‌ ಅರುಣ್‌ ಮಿಶ್ರಾ ಆಯ್ಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು ಯಾರಾದರೂ ಎಸ್‌ಸಿ, ಎಸ್ಟಿ ಸಮುದಾಯದಿಂದ ಬಂದವರನ್ನು ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಮಾಡುವಂತೆ ಮನವಿ ಮಾಡಿದ್ದಾರೆ. ಅಥವಾ ಎಸ್‌ಸಿ ಸ್ಟಿ ಸಮುದಾಯದವರೊಬ್ಬರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸದಸ್ಯರನ್ನಾಗಿ ನೇಮಿಸುವಂತೆ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮನವಿ ಮಾಡಿದ್ದಾರೆ. ದೇಶದಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಇತ್ತೀಚಿನ ವರ್ಷಗಳಲ್ಲಿ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಆ ಸಂಬಂಧ ಹೆಚ್ಚು ಹೆಚ್ಚು ಪ್ರಕರಣಗಳು ಮಾನವ ಹಕ್ಕು ಆಯೋಗದ ಮುಂದೆ ಬರುತ್ತಿವೆ ಹಾಗಾಗಿ ಎಸ್‌ಸಿ ಎಸ್ಟಿ ಸಮುದಾಯದವರು ಆಯೋಗದಲ್ಲಿದ್ದರೆ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೂಲಗಳು ಹೇಳುವಂತೆ ಮಲ್ಲಿಕಾರ್ಜುನ ಖರ್ಗೆಯವರು ಸಮಿತಿಯ ಸಭೆಗೂ ಮೊದಲು ಪ್ರಧಾನಿಯವರಿಗೆ ಈ ಸಂಬಂಧ ಪತ್ರವನ್ನು ಬರೆದಿದ್ದಾರೆ. ನಿಯಮಾವಳಿಗಳಲ್ಲಿ ಅವಕಾಶವಿಲ್ಲ ಅಥವಾ ನಿಯಮಾವಳಿಗಳು ಎಸ್‌ಸಿ ಎಸ್ಟಿ ವರ್ಗದವರನ್ನು ಮಾನವ ಹಕ್ಕುಗಳ ಆಯೋಗಕ್ಕೆ ಸದಸ್ಯರನ್ನಾಗಿ ಆಯ್ಕೆ ಮಾಡಿ ಎಂದು ಹೇಳುವುದಿಲ್ಲ ಎಂಬ ಒಂದೇ ಕಾರಣಕ್ಕೆ ದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಎಸ್‌ಸಿ ಎಸ್ಟಿ ಸಮುದಾಯದವರೊಬ್ಬರನ್ನು ಆಯೋಗಕ್ಕೆ ಸದಸ್ಯರನ್ನಾಗಿ ಆಯ್ಕೆ ಮಾಡಿ ಎಂದು ಖರ್ಗೆಯವರು ತಮ್ಮ ಪತ್ರದಲ್ಲಿ ಸಮಿತಿಯ ಅಧ್ಯಕ್ಷರಾದ ಪ್ರಧಾನಿಯವರಲ್ಲಿ ಮನವಿ ಮಾಡಿದ್ದರು.

ಕಳೆದ ಡಿಸೆಂಬರ್‌ ನಲ್ಲಿ ಮಾಜಿ ಸಿಜೆಐ ಹೆಚ್‌ ಎಲ್‌ ದತ್ತು ಅವರ ನಿವೃತಿಯ ನಂತರ 6 ತಿಂಗಳುಗಳಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆ ಖಾಲಿಯಾಗಿಯೇ ಉಳಿದಿತ್ತು. ಜೊತೆಗೆ ಆಯೋಗದ ಸದಸ್ಯರ ಹುದ್ದೆಗಳು ದೀರ್ಘಾವಧಿಯಿಂದ ತೆರವಾಗಿಯೇ ಉಳಿದಿವೆ. ಹಿಂದೆ ಮಾರ್ಚ್‌ ನಲ್ಲಿ ಮಾಜಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಮತ್ತು ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಜಸ್ಟಿಸ್‌ ಪ್ರಫುಲ್ಲ ಪಂತ್‌ ರಾಷ್ಟ್ರೀಯ ಆಯೋಗದಲ್ಲಿ ಖಾಲಿಯಾಗಿಯೇ ಉಳಿದಿರುವ ಅಧ್ಯಕ್ಷ ಮತ್ತು ಸದಸ್ಯರ ಹುದ್ದೆ ಕುರಿತು ಸರ್ಕಾರವನ್ನು ಪ್ರಶ್ನೆ ಮಾಡಿದ್ದರು.

ರಾಜ್ಯ ಮಾನವ ಹಕ್ಕುಗಳ ಆಯೋಗಗಳೂ ಕೂಡ ಸದಸ್ಯರು ಮತ್ತು ಅಧ್ಯಕ್ಷರಿಲ್ಲದೇ ಸ್ಥಗಿತ ಗೊಂಡಿವೆ. ಈ ವಿಷಯವನ್ನು ಜಸ್ಟಿಸ್‌ ಪ್ರಫುಲ್ಲ ಪಂತ್‌ ಅತ್ಯಂತ ಕಳವಳಕಾರಿ ಅಂಶ ಎಂದು ಮಾರ್ಚ್‌ ನಲ್ಲಿ ಹೇಳಿಕೆ ನೀಡಿದ್ದರು. ಅನೇಕ ರಾಜ್ಯಗಳಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗಳು ಅಧ್ಯಕ್ಷರು ಮತ್ತು ಅಗತ್ಯ ಸಂಖ್ಯೆಯ ಸದಸ್ಯರಿಲ್ಲದೇ ಕಾರ್ಯಾಚರಣೆಯನ್ನು ನಿಲ್ಲಿಸಿವೆ. ಉದಾಹರಣೆಗೆ ಮಹರಾಷ್ಟ್ರದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ 2018 ರಿಂದ ಈಚೆಗೆ ಪೂರ್ಣಾವಧಿಯ ಅಧ್ಯಕ್ಷರ ನೇಮಕವಾಗಿಲ್ಲ. ಇದರಿಂದಾಗಿ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಹೆಚ್ಚು ಹೆಚ್ಚು ಪ್ರಕರಣಗಳು ಹೈಕೋರ್ಟ್‌ ಮೆಟ್ಟಿಲೇರವಂತಾಗಿದೆ. ಮಹರಾಷ್ಟ್ರದ ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ಕೊರತೆಯಿಂದ ಕಳೆದ ವರ್ಷ ಕೋವಿಡ್‌ ಮೊದಲ ಅಲೆಯ ಸಮಯದಲ್ಲಿ ವಲಸೆ ಕಾರ್ಮಿಕರ ಸಮಸ್ಯೆಯು ಉದ್ಭವಿಸಿತು. ಮಹರಾಷ್ಟ್ರವಲ್ಲದೇ ಇನ್ನೂ ಅನೇಕ ರಾಜ್ಯಗಳಲ್ಲಿ ಸದಸ್ಯರ ಮತ್ತು ಅಧ್ಯಕ್ಷರ ಅನುಪಸ್ಥಿತಿಯಿಂದ ಮಾನವಹಕ್ಕು ಆಯೋಗದ ಕಾರ್ಯಾಚರಣೆಗೆ ಹಿನ್ನಡೆಯಾಗಿದೆ.


ಇದನ್ನೂ ಓದಿ: ದೇವೇಗೌಡರು ಪ್ರಧಾನಿಯಾಗಿ 25 ವ‍ರ್ಷದ ಸಂದರ್ಭದಲ್ಲಿ ಒಕ್ಕೂಟ ವ್ಯವಸ್ಥೆಯ ಸ್ಥಿತಿಗತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...