Homeಮುಖಪುಟನಿವೃತ್ತಿಯಾದ ನ್ಯಾಯಮೂರ್ತಿ ಅರುಣ್ ಮಿಶ್ರಾರವರ 5 ವಿವಾದಿತ ಪ್ರಕರಣಗಳು

ನಿವೃತ್ತಿಯಾದ ನ್ಯಾಯಮೂರ್ತಿ ಅರುಣ್ ಮಿಶ್ರಾರವರ 5 ವಿವಾದಿತ ಪ್ರಕರಣಗಳು

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಅದಾನಿಯಂತಹ ಕಾರ್ಪೊರೇಟ್‌ ಕಂಪನಿಗಳ ಕುರಿತು ದಾಖಲಾದ ಸುಮಾರು 7 ಪ್ರಕರಣಗಳಲ್ಲಿಯೂ ಅದಾನಿ ಪರ ತೀರ್ಪಿದ್ದಾರೆ. 

- Advertisement -
- Advertisement -

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾ ಇಂದು (ಸೆಪ್ಟೆಂಬರ್ 2) ಸುಪ್ರೀಂಕೋರ್ಟ್‌ನಿಂದ ನಿವೃತ್ತರಾಗಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ನಡೆದ ಹಲವು ಘಟನೆಗಳಿಂದ ಅವರು ವಿವಾದಿತ ನ್ಯಾಯಾಧೀಶರಲ್ಲಿ ಒಬ್ಬರಾಗಿದ್ದಾರೆ.

ಜುಲೈ 2014ರಲ್ಲಿ ಸುಪ್ರೀಂಕೋರ್ಟ್‌‌ಗೆ ಏರಿದ ನಂತರ ಅವರ ಅಧಿಕಾರಾವಧಿಯಲ್ಲಿ ನಡೆದ ಘಟನೆಗಳು ಮಿಶ್ರಾರನ್ನು ಇತಿಹಾಸದಲ್ಲಿ ನೆನಪಿಡಬೇಕಾದ ವಿವಾದಿತ ನ್ಯಾಯಾಧೀಶರಲ್ಲಿ ಒಬ್ಬರಾಗಿ ಮಾಡಿದೆ. ನ್ಯಾಯಮೂರ್ತಿಯಾಗಿ ತಮ್ಮ ಕೊನೆಯ ದಿನಗಳಲ್ಲೂ ಸಹ ಅವರ ನ್ಯಾಯಪೀಠದ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಮತ್ತು ಎಜಿಆರ್ ಪ್ರಕರಣಗಳು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿದ್ದವು.

ಮಿಶ್ರಾರವರು ಭಾರತದ ಏಳು ಮುಖ್ಯ ನ್ಯಾಯಮೂರ್ತಿಗಳ ಕೆಳಗೆ ಆರು ವರ್ಷಗಳ ಕಾಲ ಹೈ ಪ್ರೋಫೈಲ್ ಕೇಸ್‌ಗಳಲ್ಲಿ, ರಾಜಕೀಯ ಸೂಕ್ಷ್ಮತೆ ಇರುವ ಪ್ರಕರಣಗಳನ್ನು ವಿಚಾರಣೆ ನಡೆಸಿದ್ದರು. ಅವರು ಕಿರಿಯ ನ್ಯಾಯಾಧೀಶರಾದರೂ ಸಹ ಈ ಎಲ್ಲಾ ಪ್ರಕರಣಗಳು ಅವರಿಗೆ ಒಲಿದುಬಂದಿದ್ದವು. ಇದು ನ್ಯಾಯಮೂರ್ತಿ ಮಿಶ್ರಾ ಅವರಿಗಷ್ಟೇ ಅಲ್ಲ, ಅವರಿಗೆ ಪ್ರಕರಣಗಳನ್ನು ನಿಯೋಜಿಸುತ್ತಿದ್ದ ಸಿಜೆಐಗಳ ಬಗ್ಗೆಯೂ ಗಂಭೀರ ಟೀಕೆಗೆ ಕಾರಣವಾಯಿತು.

2018 ರ ಜನವರಿಯಲ್ಲಿ ರಾಜಕೀಯವಾಗಿ ಸೂಕ್ಷ್ಮ ಪ್ರಕರಣಗಳನ್ನು ‘ಆದ್ಯತೆಯ ಪೀಠಗಳಿಗೆ(ಅರುಣ್‌ ಮಿಶ್ರಾ)’ ನಿಯೋಜಿಸುವ ಬಗ್ಗೆ ನಾಲ್ವರು ನ್ಯಾಯಾಧೀಶರು ಪತ್ರಿಕಾಗೋಷ್ಟಿ ನಡೆಸಿ, ಹೆಸರು ಹೇಳದೆಯೇ ನ್ಯಾಯಮೂರ್ತಿ ಅರುಣ್ ಮಿಶ್ರಾ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆ ದಿನವೇ ಮಿಶ್ರಾ ಆದ್ಯತೆ ಪೀಠದಲ್ಲಿ ನ್ಯಾಯಮೂರ್ತಿ ಲೋಯಾ ಅವರ ಪ್ರಕರಣದ ವಿಚಾರಣೆ ನಡೆಸಬೇಕಿತ್ತು. ಪತ್ರಿಕಾಗೋಷ್ಠಿಯ ನಂತರ ನ್ಯಾಯಮೂರ್ತಿ ಮಿಶ್ರಾ ಅವರನ್ನು ಆ ಪ್ರಕರಣದ ವಿಚಾರಣೆಯಿಂದ ಕೈಬಿಡಲಾಯ್ತು.

ನ್ಯಾಯಮೂರ್ತಿ ಮಿಶ್ರಾ ಅವರು ಭಾಗಿಯಾಗಿದ್ದ ಕೆಲವು ವಿವಾದಾತ್ಮಕ ಪ್ರಕರಣಗಳು ಮತ್ತು ತೀರ್ಪುಗಳ ನೋಟ ಇಲ್ಲಿದೆ, ಇದು ಸುಪ್ರೀಂ ಕೋರ್ಟ್‌ನಲ್ಲಿ ಅವರ ವಿವಾದಾತ್ಮಕ ಹಾದಿಯನ್ನು ವ್ಯಾಖ್ಯಾನಿಸುತ್ತದೆ.

1. ಸಹರಾ-ಬಿರ್ಲಾ ಡೈರಿಸ್ ಪ್ರಕರಣ- 2017

ಆದಾಯ ತೆರಿಗೆ ಇಲಾಖೆ ಮತ್ತು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಅಧಿಕಾರಿಗಳು 2013 ರಲ್ಲಿ ಆದಿತ್ಯ ಬಿರ್ಲಾ ಸಮೂಹದ ಕಚೇರಿಗಳ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡ ದಾಖಲೆಗಳಲ್ಲಿ ವಿವಿಧ ರಾಜಕಾರಣಿಗಳಿಗೆ ಕೋಟಿ ಕೋಟಿ ರೂ ಪಾವತಿ ಮಾಡಿರುವುದು ಕಂಡುಬರುತ್ತದೆ. ಅಂದಿನ ಗುಜರಾತ್ ಮುಖ್ಯಮಂತ್ರಿ ಮತ್ತು ಹಾಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ 25 ಕೋಟಿ ರೂ.ಪಾವತಿ ಮಾಡಿರುವ ದಾಖಲೆ ಇರುತ್ತದೆ. ಆದರೆ ಯಾವುದೇ ತನಿಖೆ ನಡೆಯುವುದಿಲ್ಲ.

ಹೀಗಾಗಿ 2015ರಲ್ಲಿ ಎನ್‌ಜಿಒ ಕಾಮನ್ ಕಾಸ್, ಸಹಾರಾ-ಬಿರ್ಲಾ ದಾಖಲೆಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆ ಈ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸಿಲ್ಲ, ಇದರ ಬಗ್ಗೆ ತನಿಖೆಯಾಗಬೇಕು ಎಂದು ಕೋರಿಕೊಂಡಿತ್ತು.

ವಿವಾದ ಶುರುವಾಗಿದ್ದು, 2017 ರ ಜನವರಿ ತೀರ್ಪಿನಲ್ಲಿ, ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಅಮಿತವ್ ರಾಯ್ ಅವರ ನ್ಯಾಯಪೀಠವು ಕಾಮನ್ ಕಾಸ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತು. ಉನ್ನತ ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳನ್ನು ‘ಸಡಿಲ ದಾಖಲೆಗಳ’ ಆಧಾರದ ಮೇಲೆ ತನಿಖೆಗೆ ಒಳಪಡಿಸಲಾಗುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸಹಾರಾ-ಬಿರ್ಲಾ ದಾಖಲೆಗಳ ಬಗ್ಗೆ ಆದಾಯ ತೆರಿಗೆ ಇಲಾಖೆಯಿಂದ ತನಿಖೆಗೆ ಕೆ.ವಿ.ಚೌದರಿ ಮುಂದಾಗಿದ್ದರು. ಅವರನ್ನು ಜೂನ್ 2015 ರಲ್ಲಿ ಮುಖ್ಯ ವಿಜಿಲೆನ್ಸ್ ಆಯುಕ್ತರನ್ನಾಗಿ ನೇಮಿಸಲಾಯಿತು. ಅವರ ವಿರುದ್ಧ ಹಲವಾರು ಭ್ರಷ್ಟಾಚಾರದ ಆರೋಪಗಳಿಂದಾಗಿ ಕಾಮನ್ ಕಾಸ್ ಅವರನ್ನು ಸಿವಿಸಿ ಆಗಿ ನೇಮಕ ಮಾಡುವುದನ್ನು ಪ್ರಶ್ನಿಸಿದ್ದರು. ಕಾಮನ್ ಕಾಸ್ ಸಲ್ಲಿಸಿದ್ದ ಈ ಅರ್ಜಿಯನ್ನೂ ಸಹ ಜುಲೈ 2018 ರಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನ್ಯಾಯಪೀಠ ವಜಾಗೊಳಿಸಿತ್ತು.

2. ಭೂಸ್ವಾಧೀನ ಪ್ರಕರಣ

ಭೂಸ್ವಾಧೀನ ಪ್ರಕರಣವು ಅದರ ಮೂಲದಿಂದ ಅಂತಿಮ ನಿರ್ಣಯದವರೆಗೆ, ನ್ಯಾಯಮೂರ್ತಿ ಮಿಶ್ರಾ ಅವರು ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ಕಂಡುಬಂದಿದ್ದಾರೆ. 23 ಅಕ್ಟೋಬರ್ 2019 ರಂದು, 2013 ರ ಭೂಸ್ವಾಧೀನ ಕಾಯ್ದೆಗೆ ಸಂಬಂಧಿಸಿದ ಹಿಂದಿನ ಎರಡು ತೀರ್ಪುಗಳಲ್ಲಿ ಯಾವುದು ಸರಿಯಾಗಿದೆ ಎಂದು ನಿರ್ಧರಿಸಲು ಐದು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ಮಿಶ್ರಾ ಸಹ ಇದ್ದರು. ಆದರೆ 2018ರಲ್ಲಿಯೂ ಅದೇ ವಿಚಾರಕ್ಕೆ ಅವರು ಮತ್ತೆ ನ್ಯಾಯಧೀಶರಾಗಿದ್ದರು. ಈ ಪೀಠ 2020ರಲ್ಲಿ 2018ರ ತೀರ್ಪನ್ನೇ ಎತ್ತಿ ಹಿಡಿಯುತ್ತದೆ.

2013 ರ ಕಾಯಿದೆಯ ಸೆಕ್ಷನ್ 24 (2)ರ ಪ್ರಕಾರ ಐದು ವರ್ಷಗಳೊಳಗೆ ಭೂಮಾಲೀಕರಿಗೆ ‘ಪರಿಹಾರವನ್ನು ಪಾವತಿಸದಿದ್ದರೆ’ ಹಳೆಯ ಭೂಸ್ವಾಧೀನ ಕಾಯ್ದೆ 1894 ರ ಅಡಿಯಲ್ಲಿ ಪ್ರಾರಂಭಿಸಲಾದ ಭೂಸ್ವಾಧೀನ ಪ್ರಕ್ರಿಯೆಗಳು ಮಾನ್ಯತೆ ಕಳೆದುಕೊಳ್ಳುತ್ತವೆ ಎಂದು ತೀರ್ಪು ವಿವರಿಸುತ್ತದೆ.

3. ಹರೇನ್ ಪಾಂಡ್ಯ ಮರ್ಡರ್ ಮಿಸ್ಟರಿ

ಗುಜರಾತ್ ಮಾಜಿ ಗೃಹ ಸಚಿವ ಹರೇನ್ ಪಾಂಡ್ಯ ಅವರನ್ನು ಮಾರ್ಚ್ 26, 2003 ರಂದು ಅಹಮದಾಬಾದ್‌ನಲ್ಲಿ ಅನುಮಾನಾಸ್ಪದವಾಗಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಪಾಂಡ್ಯ ಗುಜರಾತ್‌ನಲ್ಲಿ ಮೋದಿಗೆ ಪರ್ಯಾಯವಾಗಿ ಬೆಳೆಯುತ್ತಿದ್ದವರು ಮಾತ್ರ ಮೋದಿ ಮಾತು ಕೇಳುತ್ತಿರಲಿಲ್ಲ ಎನ್ನಲಾಗುತ್ತಿದೆ. ಹಾಗಾಗಿ ಅವರ ಕೊಲೆ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಇದ್ದಾರೆ ಎಂದು ಆರೋಪಿಸಿದ್ದರು. ಆದರೆ 2002 ರ ಗೋಧ್ರಾ ಗಲಭೆಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಂಡ್ಯನನ್ನು ಕೊಲ್ಲಲಾಯಿತು ಎಂದು ಸಿಬಿಐ ತನ್ನ ವರದಿಯಲ್ಲಿ ತಿಳಿಸಿತ್ತು. ಅದರ ಆಧಾರದಲ್ಲಿ ವಿಶೇಷ ನ್ಯಾಯಾಲಯ ಸಬರಮತಿ ಜೈಲಿನೊಳಗೆ ಸಾರ್ವಜನಿಕರು ಮತ್ತು ಮಾಧ್ಯಮಗಳನ್ನು ಬಿಟ್ಟುಕೊಳ್ಳದೇ ವಿಚಾರಣೆ ನಡೆಸಿ 12 ಮುಸ್ಲಿಂ ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ಇದನ್ನು ವಿರೋಧಿಸಿ ಹೈಕೋರ್ಟ್ ಮೆಟ್ಟೆಲೇರಿದಾಗ ಆಗಸ್ಟ್ 2011 ರಲ್ಲಿ, ಗುಜರಾತ್ ಹೈಕೋರ್ಟ್ ಕೊಲೆ ಆರೋಪದ 12 ಆರೋಪಿಗಳನ್ನು ಖುಲಾಸೆಗೊಳಿಸಿತು ಮಾತ್ರವಲ್ಲ ತನಿಖೆಯಲ್ಲಿ ನ್ಯೂನತೆಗಳಿವೆ, ಸಾಕ್ಷಿಗಳಿಲ್ಲ ಎಂದು ತಿಳಿಸಿತ್ತು.

2011 ರ ಆಗಸ್ಟ್ ತೀರ್ಪಿನ ನಂತರ ಸಿಬಿಐ ಮತ್ತು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದೆ. 2018 ರ ಅಕ್ಟೋಬರ್‌ನಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಇಬ್ಬರು ನ್ಯಾಯಾಧೀಶರ ಪೀಠಕ್ಕೆ ಮೇಲ್ಮನವಿ ನೀಡಲಾಯಿತು.

ಗುಜರಾತ್ ಮಾಜಿ ಗೃಹ ಸಚಿವ ಹರೇನ್ ಪಾಂಡ್ಯ ಅವರ ಕೊಲೆ ಪ್ರಕರಣದಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವು 2019 ರ ಜುಲೈ 5 ರಂದು ಅದೇ 12 ಜನರನ್ನು ಶಿಕ್ಷೆಗೊಳಪಡಿಸಿತ್ತು. ಕೊಲೆಯ ಹಿಂದೆ ಬೇರೆಯವರು ಇದ್ದಾರೆ ಎಂಬುದನ್ನು ನಿರಾಕರಿಸಿತು.

ಇದನ್ನು ಪ್ರಶ್ನಿಸಿ ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ (ಸಿಪಿಐಎಲ್) ಎಂಬ ಎನ್‌ಜಿಒ ನ್ಯಾಯಂಗ ನೇತೃತವದಲ್ಲಿ ಹೊಸ ತನಿಖೆ ನಡೆಯಬೇಕು ಎಂದು ಸಲ್ಲಿಸಿದ್ದ ಪಿಐಎಲ್‌ ಅನ್ನು ಮಿಶ್ರಾ ನೇತೃತ್ವದ ನ್ಯಾಯಪೀಠವು ವಜಾಗೊಳಿಸಿ, ಅರ್ಜಿ ಸಲ್ಲಿಸಿದ್ದಕ್ಕೆ ಸಿಪಿಐಎಲ್‌ಗೆ ಪೀಠವು 50,000 ರೂ. ದಂಡ ವಿಧಿಸಿತ್ತು.

2003 ರಿಂದ ಗುಜರಾತ್‌ನಲ್ಲಿ ನಡೆದ ಎನ್‌ಕೌಂಟರ್ ಹತ್ಯೆಗಳ ಬಗ್ಗೆ ಹೊಸ ಸಂಗತಿಗಳು ಹೊರಬಿದ್ದಿದ್ದರಿಂದ ಸಿಪಿಐಎಲ್ ಪರ ಹಾಜರಾದ ಪ್ರಶಾಂತ್ ಭೂಷಣ್ ಅವರು ಪಾಂಡ್ಯ ಹತ್ಯೆ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಬೇಕೆಂದು ಕೋರಿದ್ದರು.

4. ಇಬ್ಬರು ಸಿಜೆಐಗಳ ರಕ್ಷಣೆ

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಇಬ್ಬರು ಮಾಜಿ ಸಿಜೆಐಗಳ ಘನತೆ ಮತ್ತು ಖ್ಯಾತಿಯನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಪೀಠಗಳ ಭಾಗವಾಗಿದ್ದರು.

ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಲಂಚ ನೀಡುವ ಮೂಲಕ ಅನುಕೂಲಕರ ತೀರ್ಪು ಪಡೆಯಲು ಪ್ರಯತ್ನಿಸುತ್ತಿದ್ದ ವೈದ್ಯಕೀಯ ಕಾಲೇಜಿನ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿತ್ತು. ಈ ಬಗ್ಗೆ ನ್ಯಾಯಾಂಗದ ನೇತೃತ್ವದಲ್ಲಿ ಸ್ವಂತಂತ್ರ ತನಿಖೆಯಾಗಬೇಕೆಂದು ಹಿರಿಯ ವಕೀಲೆ ಕಾಮಿನಿ ಜೈಸ್ವಾಲ್ ನೇತೃತ್ವದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ 14 ನವೆಂಬರ್ 2017 ರಂದು, ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ಒಳಗೊಂಡ ಮೂವರು ನ್ಯಾಯಾಧೀಶರ ನ್ಯಾಯಪೀಠವು ಈ ಅರ್ಜಿಯನ್ನು ವಜಾಗೊಳಿಸಿತು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ 1 ಡಿಸೆಂಬರ್ 2017 ರಂದು, ಕ್ಯಾಂಪೇನ್ ಫಾರ್ ಜ್ಯುಡಿಶಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (ಸಿಜೆಎಆರ್) ಸಲ್ಲಿಸಿದ ಮತ್ತೊಂದು ಪಿಐಎಲ್ ಅನ್ನು ಅದೇ ತ್ರಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಆರ್.ಕೆ. ಅಗ್ರವಾಲ್, ಎ.ಎಂ.ಖಾನ್ವಿಲ್ಕರ್ ಮತ್ತು ಅರುಣ್ ಮಿಶ್ರಾ ಪೀಠವು ವಜಾಗೊಳಿಸಿತು. ಜೊತೆಗೆ ಸಿಜೆಎಆರ್‌ಗೆ 25 ಲಕ್ಷ ರೂ. ದಂಡ ವಿಧಿಸಿತ್ತು.

ಲೈಂಗಿಕ ಕಿರುಕುಳ ಆರೋಪ

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಏಪ್ರಿಲ್ 19ರ ಶುಕ್ರವಾರ ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದರು.

ಇನ್ನು 20 ಏಪ್ರಿಲ್ 2019 ರಂದು ಸಿಜೆಐ ರಂಜನ್ ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಸ್ಥಾಪಿಸಲಾದ ವಿಶೇಷ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರಾ ಕೂಡ ಅದರ ಭಾಗವಾಗಿದ್ದರು. ಸಿಜೆಐ ಗೊಗೊಯ್, ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ, ವಿಶೇಷ ನ್ಯಾಯಪೀಠದ ಮುಖ್ಯಸ್ಥರಾಗಿದ್ದರು, ಆದರೆ ಅವರ ಪಾಲ್ಗೊಳ್ಳುವಿಕೆಯನ್ನು ನಂತರ ದಾಖಲೆಯಿಂದ ಅಳಿಸಲಾಗಿದೆ.

ನ್ಯಾಯಮೂರ್ತಿ ಮಿಶ್ರಾ ಅವರು ಮೂರು ನ್ಯಾಯಾಧೀಶರ ಪೀಠವನ್ನು ವಹಿಸಿಕೊಂಡರು, ಇದು ಸಿಜೆಐಗೆ ಬ್ಲ್ಯಾಕ್ ಮೇಲ್ ಮಾಡಲು ದೊಡ್ಡ ಪಿತೂರಿ ಎಂದು ಆಕೆಯ ವಿರುದ್ಧ ತೀರ್ಪಿತ್ತರು. ಸಿಜೆಐ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳು ನ್ಯಾಯಾಂಗವನ್ನು ಅಸ್ಥಿರಗೊಳಿಸುವ ದೊಡ್ಡ ಕಥಾವಸ್ತುವಿನ ಭಾಗವಾಗಿದೆ ಎಂದು ಪ್ರತಿಪಾದಿಸಿದ ಮಿಶ್ರಾರವರು ಆಕೆಯ ವಕೀಲ ಉತ್ಸವ್ ಬೈನ್ಸ್ ನೋಟಿಸ್ ನೀಡಿದರು. ನಂತರ ಈ ಬಗ್ಗೆ ವಿವರವಾದ ವರದಿ ಸಲ್ಲಿಸಲು ನಿವೃತ್ತ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ಅವರನ್ನು ನಿಯೋಜಿಸಲಾಯಿತು.

ವಿವಾದ ಏನು?

ವೈದ್ಯಕೀಯ ಕಾಲೇಜು ಲಂಚ ಪ್ರಕರಣವು ಅಂದಿನ ಸಿಜೆಐ ದೀಪಕ್ ಮಿಶ್ರಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದೆ. ಆರೋಪಿ ಸ್ಥಾನದಲ್ಲಿದ್ದ ದೀಪಕ್‌ ಮಿಶ್ರಾರವರಿಗೆ ಯಾವ ನ್ಯಾಯಾಧೀಶರು ಈ ಪ್ರಕರಣವನ್ನು ಆಲಿಸುತ್ತಾರೆ ಎಂಬುದನ್ನು ನಿರ್ಧರಿಸುವ ಹಕ್ಕು ಅವರಿಗೆ ಇತ್ತು. ಅವರು ಅದನ್ನು ಅರುಣ್ ಮಿಶ್ರಾರವರಿಗೆ ನೇಮಿಸಿದರು. ಅರುಣ್ ಮಿಶ್ರಾ ಅರ್ಜಿ ವಜಾಗೊಳಿಸಿ ದೀಪಕ್‌ ಮಿಶ್ರಾಗೆ ಸಹಾಯ ಮಾಡಿದರು ಎಂಬ ಆರೋಪವಿದೆ.

ಸಿಜೆಐ ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ನಿವೃತ್ತ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ಅವರು ತಮ್ಮ ವರದಿಯನ್ನು 2019 ರ ಸೆಪ್ಟೆಂಬರ್ ಅಂತ್ಯದಲ್ಲಿ ಮೊಹರು ಮಾಡಿದ ಕವರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದರು. ಆದರೆ ಈ ವರದಿಯ ಬಗ್ಗೆ ಇಲ್ಲಿಯವರೆಗೆ ಯಾವುದೇ ವಿಚಾರಣೆ ನಡೆದಿಲ್ಲ. 2019 ರ ಏಪ್ರಿಲ್‌ನಿಂದ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ವಿಶೇಷ ನ್ಯಾಯಪೀಠದ ವಿಚಾರಣೆ ಕೂಡ ನಡೆಸುತ್ತಿಲ್ಲ.

ಲೈಂಗಿಕ ಕಿರುಕುಳ ಆರೋಪಗಳನ್ನು ಮಾಡಿದ್ದ ಸುಪ್ರೀಂ ಕೋರ್ಟ್ ಆ ಮಹಿಳಾ ಉದ್ಯೋಗಿಯನ್ನು 2020 ರ ಜನವರಿಯಲ್ಲಿ ಪುನಃ ನೇಮಿಸಲಾಯಿತು. ಆಕೆಯ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಕೈಬಿಡಲಾಯಿತು. ನಂತರ ಮಾರ್ಚ್ 2020 ರಲ್ಲಿ ಸಿಜೆಐ ಗೊಗೊಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಯಿತು.

5. 100% ಬುಡಕಟ್ಟು ಮೀಸಲಾತಿ ತೀರ್ಪು

ಈ ವರ್ಷ ಏಪ್ರಿಲ್ 22 ರಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಆಂಧ್ರಪ್ರದೇಶ ಸರ್ಕಾರವು 2000 ನಿಗದಿತ ಪ್ರದೇಶಗಳಲ್ಲಿ ಶಾಲಾ ಶಿಕ್ಷಕರ ಹುದ್ದೆಗೆ ನಿಗದಿತ ಬುಡಕಟ್ಟು ಅಭ್ಯರ್ಥಿಗಳಿಗೆ 100 ಪ್ರತಿಶತ ಮೀಸಲಾತಿ ಒದಗಿಸುವ ಸರ್ಕಾರಿ ಆದೇಶವನ್ನು ರದ್ದುಗೊಳಿಸಿತು. ಆಂಧ್ರ ಪ್ರದೇಶ ಮತ್ತು ತೆಲಂಗಾಣ ಎರಡರಲ್ಲೂ ಈ ಆದೇಶವನ್ನು ಅನುಸರಿಸಲಾಗುತ್ತಿದೆ.

ಸರ್ಕಾರದ ಆದೇಶವು ಅನಿಯಂತ್ರಿತವಾಗಿದೆ ಮತ್ತು ಸಂವಿಧಾನದ ಅಡಿಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ಸಂವಿಧಾನ ಪೀಠವು ಅಭಿಪ್ರಾಯಪಟ್ಟಿದೆ. 1992ರ ಇಂದಿರಾ ಸಾಹ್ನಿ ತೀರ್ಪನ್ನು ಉಲ್ಲೇಖಿಸಿದ ನ್ಯಾಯಪೀಠ, ಮೀಸಲಾತಿ ಕುರಿತು ಶೇಕಡಾ 50ರಷ್ಟು ಕೋಟಾ ಅನ್ವಯಿಸುತ್ತದೆ ಎಂದು ಪುನರುಚ್ಚರಿಸಿತು. ಈ ತೀರ್ಪು ಬುಡಕಟ್ಟು ಸಮುದಾಯ ಮತ್ತು ಬುಡಕಟ್ಟು ಹಕ್ಕುಗಳ ಕಾರ್ಯಕರ್ತರಿಂದ ತೀವ್ರ ಟೀಕೆಗೆ ಗುರಿಯಾಯಿತು.

ವಿವಾದ ಏನು?

ಬುಡಕಟ್ಟು ಗುಂಪುಗಳ ಪ್ರಕಾರ, ನಿಗದಿತ ಪ್ರದೇಶಗಳಲ್ಲಿ ಉಳಿದುಕೊಂಡಿರುವ ಜನರು ದೇಶದ ಇತರ ಭಾಗಗಳಲ್ಲಿ ವಾಸಿಸುವ ಜನರಿಂದ ವಿಭಿನ್ನ ಅಗತ್ಯಗಳನ್ನು ಹೊಂದಿರುತ್ತಾರೆ. ಈ ಆದೇಶವು ಬುಡಕಟ್ಟು ಜನಾಂಗದವರ ಹಕ್ಕುಗಳನ್ನು ರಕ್ಷಿಸುವ ಭಾರತದ ಸಂವಿಧಾನದ 5 ನೇ ವಿಧಿಯನ್ನು ಉಲ್ಲಂಘಿಸಿದೆ ಎಂದು ಅವರು ವಾದಿಸಿದರು.

ನಿಗದಿತ ಬುಡಕಟ್ಟು ಪ್ರದೇಶಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು ರಾಜ್ಯ ಸರ್ಕಾರಕ್ಕೆ ಆಡಳಿತಾತ್ಮಕ ಸಮಸ್ಯೆಯೂ ಇದೆ. ಹಾಗಾಗಿಯೇ ಅವರಿಗೆ 100 ಮೀಸಲಾತಿ ನೀಡುತ್ತಿದ್ದರು.

ಬಿಜೆಪಿಯೊಂದಿಗೆ ಅರುಣ್ ಮಿಶ್ರಾ ಸಂಬಂಧ

ಇವುಗಳು ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ವಿವಾದಿತ ಪ್ರಕರಣಗಳಾದರೆ, ಇತ್ತ ನ್ಯಾಯಮೂರ್ತಿಗಳು ಬಿಜೆಪಿ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದರು, ಒಂದು ಪಕ್ಷದ ಕಡೆ ಒಲವಿದ್ದವರಾಗಿದ್ದರು ಎಂಬ ಆರೋಪಗಳು ಇವೆ. ಹಾಗಾದರೆ ಬಿಜೆಪಿ ಮತ್ತು ಮಿಶ್ರಾ ನಡುವಿನ ಸಂಬಂಧದ ಕುರಿತು ಕೆಲ ಮಾಹಿತಿಗಳು ಇಲ್ಲಿವೆ.

2014 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರನ್ನಾಗಿಸಿತು. ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದ ಹಲವಾರು ವಿವಾದಾತ್ಮಕ ತೀರ್ಪುಗಳಲ್ಲಿ ಅವರು ಭಾಗಿಯಾಗಿದ್ದಾರೆ.

2002 ರ ಗುಜರಾತ್‌ನಲ್ಲಿ ಹಿಂಸಾಚಾರ ನಡೆಯಲು ಅವಕಾಶ ನೀಡುವಂತೆ ಅಂದಿನ ಗುಜರಾತ್ ಮುಖ್ಯಮಂತ್ರಿ ಮೋದಿಯವರು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಂಜೀವ್ ಭಟ್ ಆರೋಪಿಸಿದ್ದರು. ಆದರೆ 2015 ರಲ್ಲಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠದ ಭಾಗವಾಗಿದ್ದರು ಅರುಣ್ ಮಿಶ್ರಾ.

2017 ರಲ್ಲಿ, ನ್ಯಾಯಮೂರ್ತಿ ಮಿಶ್ರಾ ಅವರು ಸಹರಾ-ಬಿರ್ಲಾ ಡೈರಿಸ್ ಪ್ರಕರಣದ ಅರ್ಜಿಯನ್ನು ವಜಾಗೊಳಿಸಿದರು. ಇದರಲ್ಲಿ ಸಹರಾ ಸಮೂಹದ ಹಿರಿಯ ಕಾರ್ಯನಿರ್ವಾಹಕರಿಂದ 25 ಕೋಟಿ ರೂಪಾಯಿಗಳನ್ನು ಆಗಿನ ಗುಜರಾತ್ ಸಿಎಂ ಮೋದಿಯವರಿಗೆ ಪಾವತಿಸಲಾಗಿದೆ ಎಂದು ದಾಖಲಾಗಿತ್ತು.

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಅದಾನಿಯಂತಹ ಕಾರ್ಪೊರೇಟ್‌ ಕಂಪನಿಗಳ ಕುರಿತು ದಾಖಲಾದ ಸುಮಾರು 7 ಪ್ರಕರಣಗಳಲ್ಲಿಯೂ ಅದಾನಿ ಪರ ತೀರ್ಪಿದ್ದಾರೆ.

ನ್ಯಾಯಾಧೀಶರಾದವರು ಸಂವಿಧಾನಕ್ಕೆ ಬದ್ಧರಾಗಿರುವುದನ್ನು ಬಿಟ್ಟು ಸರ್ಕಾರಕ್ಕೆ ಬದ್ಧರಾಗಿದ್ದರೇ ಯಾವುದೇ ತೊಂದರೆ, ಸಮಸ್ಯೆಗಳು ಅವರ ಬಳಿ ಸುಳಿಯುವುದಿಲ್ಲ ಎಂಬುದಕ್ಕೆ ಅರುಣ್ ಮಿಶ್ರಾ ಉದಾಹರಣೆಯಾಗಬಲ್ಲರು ಎಂದು ಹಲವರು ಆರೋಪಿಸಿದ್ದಾರೆ.


ಇದನ್ನೂ ಓದಿ: Justice Arun Mishra Helps Adani Profits For Seventh Time in a Row

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...