Homeಬಹುಜನ ಭಾರತಬಹುಜನ ಭಾರತ: ಇತಿಹಾಸದ ಕಟಕಟೆಯಲ್ಲಿ ಅರುಣ್ ಮಿಶ್ರ ಎಂಬ ನ್ಯಾಯಮೂರ್ತಿ

ಬಹುಜನ ಭಾರತ: ಇತಿಹಾಸದ ಕಟಕಟೆಯಲ್ಲಿ ಅರುಣ್ ಮಿಶ್ರ ಎಂಬ ನ್ಯಾಯಮೂರ್ತಿ

ಭಾರತದ ಸರ್ವೋಚ್ಚ ನ್ಯಾಯಾಲಯದ ಕಾರ್ಯವೈಖರಿ ಈಗಿನಷ್ಟು ಟೀಕೆ ಟಿಪ್ಪಣಿಗೆ ಗುರಿಯಾಗಿರುವಷ್ಟು ಕಳೆದ ಎಪ್ಪತ್ತು ವರ್ಷಗಳ ಅಸ್ತಿತ್ವದಲ್ಲಿ ಹಿಂದೆಂದೂ ಆಗಿರಲಿಲ್ಲ.

- Advertisement -
- Advertisement -

ಮೊನ್ನೆ ಆಗಸ್ಟ್ 31ರಂದು ರಾಜಸ್ತಾನದಲ್ಲಿನ ಅದಾನಿ ವಿದ್ಯುಚ್ಛಕ್ತಿ ಉತ್ಪಾದನಾ ಸ್ಥಾವರಕ್ಕೆ 8000 ಕೋಟಿ ರುಪಾಯಿಯ ಪರಿಹಾರ ನೀಡುವಂತೆ ಸುಪ್ರೀಮ್ ಕೋರ್ಟು ಆದೇಶ ನೀಡಿತು. ಸಂಬಂಧಪಟ್ಟ ನ್ಯಾಯಪೀಠದ ನೇತೃತ್ವ ವಹಿಸಿದ್ದವರು ನ್ಯಾಯಮೂರ್ತಿ ಅರುಣ್ ಮಿಶ್ರ.

ವಿದ್ಯುಚ್ಛಕ್ತಿ ದರಗಳ ಏರಿಕೆಯ ಮುಖಾಂತರ ಸಾವಿರಾರು ಕೋಟಿ ರುಪಾಯಿಗಳ ಈ ಮೊತ್ತವನ್ನು ಚುಕ್ತಾ ಮಾಡುವವರು ರಾಜಸ್ತಾನದ ಜೈಪುರ, ಜೋಧಪುರ ಹಾಗೂ ಅಜ್ಮೇರಿನ ಜನಸಾಮಾನ್ಯರು.

ಮಿಶ್ರ ಅವರು ಸೆಪ್ಟಂಬರ್ ಎರಡರಂದು ನಿವೃತ್ತಿ ಹೊಂದಿದರು. ನ್ಯಾಯಮೂರ್ತಿ ಅರುಣ್ ಮಿಶ್ರ ನೇತೃತ್ವದ ನ್ಯಾಯಪೀಠಗಳು 2019ರ ಆರಂಭದಿಂದ ಮೊನ್ನೆಯ ತನಕ ಅದಾನಿ ಗ್ರೂಪ್ ಪರವಾಗಿ ತೀರ್ಪು ನೀಡಿ ಏಳನೆಯ ಖಟ್ಲೆ ಇದಾಗಿತ್ತು.

ಭಾರತದ ಸರ್ವೋಚ್ಚ ನ್ಯಾಯಾಲಯದ ಕಾರ್ಯವೈಖರಿ ಈಗಿನಷ್ಟು ಟೀಕೆ ಟಿಪ್ಪಣಿಗೆ ಗುರಿಯಾಗಿರುವಷ್ಟು ಕಳೆದ ಎಪ್ಪತ್ತು ವರ್ಷಗಳ ಅಸ್ತಿತ್ವದಲ್ಲಿ ಹಿಂದೆಂದೂ ಆಗಿರಲಿಲ್ಲ. ಆಳುವವರಿಗೆ ಮುಳ್ಳೆನಿಸುವ ಮೊಕದ್ದಮೆಗಳನ್ನು ವಿಚಾರಣೆಗೆ ಎತ್ತಿಕೊಳ್ಳದೆ ಬದಿಗೆ ಸರಿಸುವುದೇ ಅಲ್ಲದೆ, ಇನ್ನೂ ಕೆಲವು ಪ್ರಕರಣಗಳಲ್ಲಿ ಹೊರಬಿದ್ದ ತೀರ್ಪುಗಳೇ ಪ್ರಶ್ನಾರ್ಹ ಎನಿಸಿವೆ.

2018ರ ಜನವರಿಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಸರ್ವೋಚ್ಚ ನ್ಯಾಯಾಲಯದ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದು ಇದೇ ಅಂಶವನ್ನು. ಸುಪ್ರೀಮ್ ಕೋರ್ಟ್ ಆಡಳಿತ ಕೊಳೆತಿದ್ದು, ದೇಶದಲ್ಲಿ ಜನತಂತ್ರ ಉಳಿಯಬೇಕೆಂದಿದ್ದರೆ ಅದನ್ನು ಸರಿಪಡಿಸಬೇಕು ಎಂದು ಹೇಳಿಕೆ ನೀಡಿದ್ದರು.

ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಯಾವ್ಯಾವ ನ್ಯಾಯಮೂರ್ತಿಗೆ ಯಾವ್ಯಾವ ಕೇಸುಗಳನ್ನು ವಿಚಾರಣೆಗೆ ಒಪ್ಪಿಸಬೇಕೆಂಬ ತೀರ್ಮಾನದಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿವೆ ಎಂಬ ಅಪಾದನೆಯನ್ನು ಈ ಹಿರಿಯ ನ್ಯಾಯಮೂರ್ತಿಗಳು ಮಾಡಿದ್ದರು. ನ್ಯಾಯಾಲಯದ ಘನತೆ ಮಣ್ಣುಪಾಲಾಗುತ್ತದೆಂಬ ಕಾರಣದಿಂದ ವಿವರಗಳನ್ನು ಬಹಿರಂಗಗೊಳಿಸುತ್ತಿಲ್ಲ ಎಂದೂ ಸಾರಿದ್ದರು. ಈ ನಾಲ್ವರ ಪೈಕಿ ಒಬ್ಬರಾದ ರಂಜನ್ ಗೊಗೋಯ್ ಮುಖ್ಯ ನ್ಯಾಯಮೂರ್ತಿಯ ಹುದ್ದೆ ಏರಿದರು. ಆದರೆ ಅವರು ಮಿಶ್ರ ಅವರನ್ನೂ ಮೀರಿಸಿದ್ದು ಬಲು ದೊಡ್ಡ ವಿಡಂಬನೆ. ಗೊಗೋಯ್ ಮೇಲಿನ ಆಪಾದನೆಗಳು ದೀಪಕ್ ಮಿಶ್ರ ವಿರುದ್ಧ ಮಾಡಿದ್ದ ಆಪಾದನೆಗಳಿಗಿಂತ ಹೀನ ಸ್ವರೂಪದವು!

’ಅಧಿಕೃತ ತುರ್ತುಪರಿಸ್ಥಿತಿಯನ್ನು ಕೂಡ ಘೋಷಿಸದೆ ಕಳೆದ ಆರು ವರ್ಷಗಳ ಅವಧಿಯಲ್ಲಿ ಭಾರತದ ಜನತಂತ್ರವನ್ನು ಹೇಗೆ ನಾಶ ಮಾಡಲಾಯಿತು ಎಂಬುದನ್ನು ಭವಿಷ್ಯತ್ತಿನಲ್ಲಿ ಇತಿಹಾಸಕಾರರು ಹೊರಳಿ ನೋಡಲಿದ್ದಾರೆ. ಆಗ ಅವರು ಈ ವಿನಾಶದಲ್ಲಿ ಸುಪ್ರೀಮ್ ಕೋರ್ಟಿನ, ಅದರಲ್ಲೂ ವಿಶೇಷವಾಗಿ ಕಳೆದ ನಾಲ್ವರು ಮುಖ್ಯನ್ಯಾಯಮೂರ್ತಿಗಳ ಪಾತ್ರವನ್ನು ರೇಖಾಂಕಿತಗೊಳಿಸಿ ಗುರುತಿಸುವರು. ತಮ್ಮ ಮೂಲಭೂತ ಹಕ್ಕನ್ನು ಉಳಿಸಿಕೊಳ್ಳಲು ಕದ ಬಡಿಯುವ ನಾಗರಿಕರ ಪಾಲಿಗೆ ಸುಪ್ರೀಮ್ ಕೋರ್ಟನ್ನು ಲಾಕ್ ಡೌನ್ ಸ್ಥಿತಿಯಲ್ಲಿ ಇರಿಸಿ ಅವರಿಗೆ ನ್ಯಾಯವನ್ನು ನಿರಾಕರಿಸಿರುವ ಮುಖ್ಯ ನ್ಯಾಯಮೂರ್ತಿಯವರು ನಾಗಪುರದ ರಾಜಭವನದಲ್ಲಿ ಬಿಜೆಪಿ ನಾಯಕರೊಬ್ಬರ ಒಡೆತನದ 50 ಲಕ್ಷ ರು ಬೆಲೆ ಬಾಳುವ ಮೋಟರ್ ಸೈಕಲ್ಲನ್ನು ಏರಿ ಕುಳಿತಿದ್ದಾರೆ. ಮಾಸ್ಕ್ ಮತ್ತು ಹೆಲ್ಮೆಟ್ ಕೂಡ ಧರಿಸಿಲ್ಲ ಎಂಬ ಎರಡು ಟ್ವೀಟ್‌ಗಳಿಗಾಗಿ ಜನಪರ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರನ್ನು ಶಿಕ್ಷಿಸಲಾಗಿದೆ. ಶಿಕ್ಷಿಸಿದ್ದು ಕೂಡ ಅರುಣ್ ಮಿಶ್ರ ನೇತೃತ್ವದ ನ್ಯಾಯಪೀಠವೇ.

ಭೂಷಣ್ ಅವರ ಒಂದು ಟ್ವೀಟ್ ಸುಪ್ರೀಮ್ ಕೋರ್ಟಿನ ಕಳೆದ ನಾಲ್ವರು ಮುಖ್ಯ ನ್ಯಾಯಮೂರ್ತಿಗಳನ್ನು ಕಟಕಟೆಯಲ್ಲಿ ನಿಲ್ಲಿಸುತ್ತದೆ. ಈ ನಾಲ್ವರ ಇಂಗಿತವರಿತು ಕಾರ್ಯನಿರ್ವಹಿಸಿದವರು ಎಂಬ ಅಭಿದಾನ ಅರುಣ್ ಮಿಶ್ರ ಅವರ ಸುತ್ತ ಸುತ್ತುವುದು ಕಂಡುಬರುತ್ತದೆ.


ಇದನ್ನೂ ಓದಿ: ಪ್ರಧಾನಿ ಮೋದಿ ಹೊಗಳಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ವರ್ತನೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಖಂಡನೆ.


ನ್ಯಾಯವಾದಿಯಾಗಿದ್ದ ಅರುಣ್ ಮಿಶ್ರ ಅವರನ್ನು 1999ರಲ್ಲಿ ಮಧ್ಯಪ್ರದೇಶದ ಹೈಕೋರ್ಟಿಗೆ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗುತ್ತದೆ. 2014ರಲ್ಲಿ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುತ್ತಾರೆ.

ಅತಿ ಸೂಕ್ಷ್ಮಸ್ವರೂಪದ ಹಲವು ಪ್ರಕರಣಗಳನ್ನು ಮಿಶ್ರ ನೇತೃತ್ವದ ನ್ಯಾಯಪೀಠ ನಡೆಸುತ್ತದೆ. ಇಂತಿಂತಹ ವ್ಯಾಜ್ಯ-ಪ್ರಕರಣ-ಮೊಕದ್ದಮೆಯನ್ನು ಇಂತಿಂತಹ ನ್ಯಾಯಪೀಠವೇ ನಡೆಸಬೇಕೆಂದು ಅವುಗಳನ್ನು ಹಂಚಿಕೊಡುವ ಅಧಿಕಾರ ಮುಖ್ಯ ನ್ಯಾಯಮೂರ್ತಿಗಳದು ಎಂಬುದನ್ನು ಇಲ್ಲಿ ಮತ್ತೊಮ್ಮೆ ನೆನೆಯುವುದು ಸೂಕ್ತ. 2015 ರಲ್ಲಿ ಗುಜರಾತಿನ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಅವರ ಪ್ರಕರಣ ಮಿಶ್ರ ಅವರ ನ್ಯಾಯಪೀಠದ ಮುಂದೆ ಬರುತ್ತದೆ. ಅಂದಿನ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು. ಗುಜರಾತ್ ಕೋಮುದಂಗೆಗಳಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮುಂತಾದವರ ಪಾತ್ರವಿತ್ತೆಂದು ಆಪಾದಿಸಿದ್ದವರು ಭಟ್. ಅವರೀಗ ಜೈಲಿನಲ್ಲಿದ್ದಾರೆ. ತಮ್ಮ ಮೇಲೆ ಸಲ್ಲಿಸಲಾಗಿರುವ ಎಫ್.ಐ.ಆರ್‌ಗಳ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಿಸುವಂತೆ ಭಟ್ ಸುಪ್ರೀಮ್ ಕೋರ್ಟ್ ಮೊರೆ ಹೋಗಿರುತ್ತಾರೆ. ನ್ಯಾಯಮೂರ್ತಿ ಮಿಶ್ರ ಅವರು ಈ ಮನವಿಯನ್ನು ತಳ್ಳಿಹಾಕಿ ತೀರ್ಪು ನೀಡುತ್ತಾರೆ.

ಗುಜರಾತ್ ಮತ್ತು ಮಧ್ಯಪ್ರದೇಶದ ಅಂದಿನ ಮುಖ್ಯಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಶಿವರಾಜಸಿಂಗ್ ಚೌಹಾಣ್ ಅವರಿಗೆ ನಿಧಿ ಸಂದಾಯವಾಗಿದೆ ಎಂದು ಸೂಚಿಸುವ ಕಾಗದಪತ್ರಗಳನ್ನು ಆದಾಯ ತೆರಿಗೆ ಇಲಾಖೆ ಯಾಕೆ ಮುಚ್ಚಿಟ್ಟಿದೆ ಎಂಬುದಾಗಿ ಪ್ರಶ್ನಿಸಲಾದ ಸಹಾರಾ-ಬಿರ್ಲಾ ಡೈರಿಗಳ ಪ್ರಕರಣದ ವಿಚಾರಣೆಯೂ ಮಿಶ್ರ ಅವರ ಮುಂದೆ ಬರುತ್ತದೆ. ಪ್ರಶ್ನೆಯನ್ನು ಬದಿಗೊತ್ತಿ ತೀರ್ಪು ನೀಡಲಾಗುತ್ತದೆ.

ಗುಜರಾತಿನ ಮಾಜಿ ಗೃಹಮಂತ್ರಿ ಹರೇನ್ ಪಾಂಡ್ಯ ಅವರ ಕೊಲೆ ಪ್ರಕರಣವನ್ನು ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಮರುತನಿಖೆ ನಡೆಸಬೇಕೆಂಬ ಪ್ರಶಾಂತ್ ಭೂಷಣ್ ಅವರ ಮನವಿಯನ್ನೂ ಮಿಶ್ರ ನ್ಯಾಯಪೀಠ ತಿರಸ್ಕರಿಸುತ್ತದೆ. ಅಷ್ಟೇ ಅಲ್ಲದೆ ಅರ್ಜಿದಾರರಿಗೆ 50 ಸಾವಿರ ರುಪಾಯಿಗಳ ದಂಡ ವಿಧಿಸುತ್ತದೆ.

ಸೊಹ್ರಾಬುದ್ದೀನ್ ಶೇಖ್ ಹುಸಿ ಎನ್ಕೌಂಟರ್ ಹತ್ಯೆ ಕುರಿತು ಅಮಿತ್ ಶಾ ಅವರ ಮೇಲಿನ ಆಪಾದನೆಗಳ ವಿಚಾರಣೆ ನಡೆಸುತ್ತಿದ್ದ ಅಧೀನ ನ್ಯಾಯಾಲಯದ ನ್ಯಾಯಾಧೀಶ ಬಿ.ಎಚ್.ಲೋಯಾ ಅವರ ನಿಗೂಢ ಮರಣದ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಅರ್ಜಿಗಳನ್ನು ಸಲ್ಲಿಸಲಾಗಿರುತ್ತದೆ. 2018ರ ಜನವರಿ 11ರಂದು ಈ ಅರ್ಜಿಗಳು ವಿಚಾರಣೆಗೆ ಬಂದಿರುತ್ತವೆ. ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಅವರು ಈ ಅರ್ಜಿಗಳ ವಿಚಾರಣೆಯನ್ನು ಅರುಣ್ ಮಿಶ್ರ ನ್ಯಾಯಪೀಠಕ್ಕೆ ಒಪ್ಪಿಸಿರುತ್ತಾರೆ. ಮರುದಿನ ಈ ಅರ್ಜಿಗಳ ವಿಚಾರಣೆ ನಡೆಯಬೇಕಿರುತ್ತದೆ. ಈ ಹಂತದಲ್ಲೇ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಐತಿಹಾಸಿಕ ಪತ್ರಿಕಾಗೋಷ್ಠಿ ನಡೆಸುತ್ತಾರೆ. ದೇಶದ ಮೇಲೆ ಮತ್ತು ಸುಪ್ರೀಮ್ ಕೋರ್ಟ್ ಮೇಲೆ ದೂರಗಾಮಿ ಸಾಧಕ ಬಾಧಕಗಳನ್ನು ಹೊಂದಿದ ಕೇಸುಗಳನ್ನು ಮುಖ್ಯ ನ್ಯಾಯಮೂರ್ತಿಗಳು ಯಾವುದೇ ಕಾರ್ಯಕಾರಣ ನೀಡದೆ ತಮಗೆ ಬೇಕಾದ ನ್ಯಾಯಪೀಠಗಳಿಗೆ ಒಪ್ಪಿಸುತ್ತಾರೆ ಎಂಬ ಆಪಾದನೆಯನ್ನೂ ಈ ನಾಲ್ವರು ನ್ಯಾಯಮೂರ್ತಿಗಳು ಅಂದು ಮಾಡಿದ್ದರು. ಲೋಯಾ ಕೇಸನ್ನು ಅರುಣ್ ಮಿಶ್ರ ಪೀಠಕ್ಕೆ ಒಪ್ಪಿಸಿದ್ದೇ ಈ ಟೀಕೆಯ ಹಿಂದಿನ ಪ್ರಚೋದನೆ ಎಂದು ವ್ಯಾಖ್ಯಾನಿಸಲಾಗಿತ್ತು. ಈ ಆಪಾದನೆಯ ಹಿನ್ನೆಲೆಯಲ್ಲಿ ಲೋಯಾ ಕೇಸನ್ನು ತಮ್ಮ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿಕೊಂಡರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ. ಸ್ವತಂತ್ರ ತನಿಖೆಯ ಅಹವಾಲನ್ನು ತಳ್ಳಿಹಾಕಿದರೆಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಪತ್ರಿಕಾಗೋಷ್ಠಿ ನಡೆಸಿದ ನಾಲ್ವರು ನ್ಯಾಯಮೂರ್ತಿಗಳ ಪೈಕಿ ಒಬ್ಬರಾಗಿದ್ದ ನ್ಯಾಯಮೂರ್ತಿ ಗೊಗೋಯ್ ಮುಖ್ಯ ನ್ಯಾಯಮೂರ್ತಿಯಾಗುತ್ತಾರೆ. ತಮ್ಮ ಮೇಲೆ ಬಂದ ಲೈಂಗಿಕ ಕಿರುಕುಳದ ಆಪಾದನೆಯ ಮೊಕದ್ದಮೆಯ ವಿಚಾರಣೆಗೆ ಅವರು ನೆಚ್ಚುವುದು ಈ ಹಿಂದೆ ತಾವು ಗುರಿಯಿಟ್ಟಿದ್ದ ಅರುಣ್ ಮಿಶ್ರ ಅವರನ್ನೇ.

ಅದಾನಿ ಕಂಪನಿಗಳಿಗೆ ಸಂಬಂಧಿಸಿದ ನಾಲ್ಕು ಕೇಸುಗಳನ್ನು ಅರುಣ್ ಮಿಶ್ರ ನ್ಯಾಯಪೀಠಕ್ಕೇ ಒಪ್ಪಿಸಿರುವ ಕುರಿತು ಸುಪ್ರೀಮ್ ಕೋರ್ಟಿನ ಹಿರಿಯ ನ್ಯಾಯವಾದಿ ದುಷ್ಯಂತ್ ದವೆ 2009ರ ಆಗಸ್ಟ್ ತಿಂಗಳಲ್ಲೇ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರ ಬರೆದು ದೂರಿದ್ದರು.

ವನ್ಯಜೀವಿ ಸಂರಕ್ಷಣೆಯ ಹೆಸರಿನಲ್ಲಿ 18 ಲಕ್ಷ ಜನರನ್ನು ಅಡವಿಗಳಿಂದ ಒಕ್ಕಲೆಬ್ಬಿಸುವ ಆದೇಶವೊಂದನ್ನು ಮಿಶ್ರ ನೇತೃತ್ವದ ನ್ಯಾಯಪೀಠ 2019ರ ಜನವರಿಯಲ್ಲಿ ನೀಡಿತ್ತು. ಹಾಹಾಕಾರದ ಹಿನ್ನೆಲೆಯಲ್ಲಿ ಈ ಆದೇಶವನ್ನು ತಡೆಹಿಡಿಯಬೇಕಾಯಿತು. ರೇಲ್ವೆ ಹಳಿಗಳ ಇಬ್ಬದಿಯಲ್ಲಿರುವ ೪೮ ಸಾವಿರ ಕೊಳೆಗೇರಿ ವಸತಿಗಳನ್ನು ಕಾಲಮಿತಿಯೊಳಗಾಗಿ ಖಾಲಿ ಮಾಡಿಸುವಂತೆಯೂ ಈ ಕೆಲಸದಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ಸಲ್ಲದು ಎಂಬ ಆದೇಶವನ್ನೂ ಮಿಶ್ರ ಹೊರಡಿಸಿದ್ದರು.

ಇಂತಹ ನಿದರ್ಶನಗಳು ಇನ್ನೂ ಹಲವಾರು. ಈ ಪೈಕಿ ಕಟ್ಟಕಡೆಯವು ಅದಾನಿ ಕಂಪನಿಗೆ ಎಂಟು ಸಾವಿರ ಕೋಟಿ ರುಪಾಯಿಯ ಪರಿಹಾರ ಮತ್ತು ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಎಸಗಿದ್ದಾರೆಂದು ನೀಡಿದ ಆದೇಶಗಳು.

ಅರುಣ್ ಮಿಶ್ರ ಅವರು ಪ್ರಧಾನಿ ಮೋದಿಯವರನ್ನು Versatile Genius (ಬಹುಮಖ ಮೇಧಾವಿ) ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಹೊಗಳಿದ್ದರು. ನ್ಯಾಯಪೀಠದಲ್ಲಿ ಕುಳಿತವರು ಬಹಿರಂಗವಾಗಿ ಇಂತಹ ಟಿಪ್ಪಣಿಗಳನ್ನು ಮಾಡುವುದು ಸರ್ವಥಾ ಸಲ್ಲದು.

ಇತಿಹಾಸ ಎಲ್ಲರಿಗಿಂತ ದೊಡ್ಡ ನ್ಯಾಯಾಧೀಶ. ಅದರ ಮುಂದೆ ಅತಿರಥ ಮಹಾರಥರೂ ಕಾಲಾನುಕ್ರಮದಲ್ಲಿ ಕೈಕಟ್ಟಿ ಕಟಕಟೆಯಲ್ಲಿ ನಿಲ್ಲಬೇಕಾದೀತು – ಸಜೀವವಾಗಿ ಇಲ್ಲವೇ ಮರಣೋತ್ತರವಾಗಿ..


ಇದನ್ನೂ ಓದಿ; ನಿವೃತ್ತಿಯಾದ ನ್ಯಾಯಮೂರ್ತಿ ಅರುಣ್ ಮಿಶ್ರಾರವರ 5 ವಿವಾದಿತ ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...