Homeಬಹುಜನ ಭಾರತಬಹುಜನ ಭಾರತ: ಇತಿಹಾಸದ ಕಟಕಟೆಯಲ್ಲಿ ಅರುಣ್ ಮಿಶ್ರ ಎಂಬ ನ್ಯಾಯಮೂರ್ತಿ

ಬಹುಜನ ಭಾರತ: ಇತಿಹಾಸದ ಕಟಕಟೆಯಲ್ಲಿ ಅರುಣ್ ಮಿಶ್ರ ಎಂಬ ನ್ಯಾಯಮೂರ್ತಿ

ಭಾರತದ ಸರ್ವೋಚ್ಚ ನ್ಯಾಯಾಲಯದ ಕಾರ್ಯವೈಖರಿ ಈಗಿನಷ್ಟು ಟೀಕೆ ಟಿಪ್ಪಣಿಗೆ ಗುರಿಯಾಗಿರುವಷ್ಟು ಕಳೆದ ಎಪ್ಪತ್ತು ವರ್ಷಗಳ ಅಸ್ತಿತ್ವದಲ್ಲಿ ಹಿಂದೆಂದೂ ಆಗಿರಲಿಲ್ಲ.

- Advertisement -
- Advertisement -

ಮೊನ್ನೆ ಆಗಸ್ಟ್ 31ರಂದು ರಾಜಸ್ತಾನದಲ್ಲಿನ ಅದಾನಿ ವಿದ್ಯುಚ್ಛಕ್ತಿ ಉತ್ಪಾದನಾ ಸ್ಥಾವರಕ್ಕೆ 8000 ಕೋಟಿ ರುಪಾಯಿಯ ಪರಿಹಾರ ನೀಡುವಂತೆ ಸುಪ್ರೀಮ್ ಕೋರ್ಟು ಆದೇಶ ನೀಡಿತು. ಸಂಬಂಧಪಟ್ಟ ನ್ಯಾಯಪೀಠದ ನೇತೃತ್ವ ವಹಿಸಿದ್ದವರು ನ್ಯಾಯಮೂರ್ತಿ ಅರುಣ್ ಮಿಶ್ರ.

ವಿದ್ಯುಚ್ಛಕ್ತಿ ದರಗಳ ಏರಿಕೆಯ ಮುಖಾಂತರ ಸಾವಿರಾರು ಕೋಟಿ ರುಪಾಯಿಗಳ ಈ ಮೊತ್ತವನ್ನು ಚುಕ್ತಾ ಮಾಡುವವರು ರಾಜಸ್ತಾನದ ಜೈಪುರ, ಜೋಧಪುರ ಹಾಗೂ ಅಜ್ಮೇರಿನ ಜನಸಾಮಾನ್ಯರು.

ಮಿಶ್ರ ಅವರು ಸೆಪ್ಟಂಬರ್ ಎರಡರಂದು ನಿವೃತ್ತಿ ಹೊಂದಿದರು. ನ್ಯಾಯಮೂರ್ತಿ ಅರುಣ್ ಮಿಶ್ರ ನೇತೃತ್ವದ ನ್ಯಾಯಪೀಠಗಳು 2019ರ ಆರಂಭದಿಂದ ಮೊನ್ನೆಯ ತನಕ ಅದಾನಿ ಗ್ರೂಪ್ ಪರವಾಗಿ ತೀರ್ಪು ನೀಡಿ ಏಳನೆಯ ಖಟ್ಲೆ ಇದಾಗಿತ್ತು.

ಭಾರತದ ಸರ್ವೋಚ್ಚ ನ್ಯಾಯಾಲಯದ ಕಾರ್ಯವೈಖರಿ ಈಗಿನಷ್ಟು ಟೀಕೆ ಟಿಪ್ಪಣಿಗೆ ಗುರಿಯಾಗಿರುವಷ್ಟು ಕಳೆದ ಎಪ್ಪತ್ತು ವರ್ಷಗಳ ಅಸ್ತಿತ್ವದಲ್ಲಿ ಹಿಂದೆಂದೂ ಆಗಿರಲಿಲ್ಲ. ಆಳುವವರಿಗೆ ಮುಳ್ಳೆನಿಸುವ ಮೊಕದ್ದಮೆಗಳನ್ನು ವಿಚಾರಣೆಗೆ ಎತ್ತಿಕೊಳ್ಳದೆ ಬದಿಗೆ ಸರಿಸುವುದೇ ಅಲ್ಲದೆ, ಇನ್ನೂ ಕೆಲವು ಪ್ರಕರಣಗಳಲ್ಲಿ ಹೊರಬಿದ್ದ ತೀರ್ಪುಗಳೇ ಪ್ರಶ್ನಾರ್ಹ ಎನಿಸಿವೆ.

2018ರ ಜನವರಿಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಸರ್ವೋಚ್ಚ ನ್ಯಾಯಾಲಯದ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದು ಇದೇ ಅಂಶವನ್ನು. ಸುಪ್ರೀಮ್ ಕೋರ್ಟ್ ಆಡಳಿತ ಕೊಳೆತಿದ್ದು, ದೇಶದಲ್ಲಿ ಜನತಂತ್ರ ಉಳಿಯಬೇಕೆಂದಿದ್ದರೆ ಅದನ್ನು ಸರಿಪಡಿಸಬೇಕು ಎಂದು ಹೇಳಿಕೆ ನೀಡಿದ್ದರು.

ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಯಾವ್ಯಾವ ನ್ಯಾಯಮೂರ್ತಿಗೆ ಯಾವ್ಯಾವ ಕೇಸುಗಳನ್ನು ವಿಚಾರಣೆಗೆ ಒಪ್ಪಿಸಬೇಕೆಂಬ ತೀರ್ಮಾನದಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿವೆ ಎಂಬ ಅಪಾದನೆಯನ್ನು ಈ ಹಿರಿಯ ನ್ಯಾಯಮೂರ್ತಿಗಳು ಮಾಡಿದ್ದರು. ನ್ಯಾಯಾಲಯದ ಘನತೆ ಮಣ್ಣುಪಾಲಾಗುತ್ತದೆಂಬ ಕಾರಣದಿಂದ ವಿವರಗಳನ್ನು ಬಹಿರಂಗಗೊಳಿಸುತ್ತಿಲ್ಲ ಎಂದೂ ಸಾರಿದ್ದರು. ಈ ನಾಲ್ವರ ಪೈಕಿ ಒಬ್ಬರಾದ ರಂಜನ್ ಗೊಗೋಯ್ ಮುಖ್ಯ ನ್ಯಾಯಮೂರ್ತಿಯ ಹುದ್ದೆ ಏರಿದರು. ಆದರೆ ಅವರು ಮಿಶ್ರ ಅವರನ್ನೂ ಮೀರಿಸಿದ್ದು ಬಲು ದೊಡ್ಡ ವಿಡಂಬನೆ. ಗೊಗೋಯ್ ಮೇಲಿನ ಆಪಾದನೆಗಳು ದೀಪಕ್ ಮಿಶ್ರ ವಿರುದ್ಧ ಮಾಡಿದ್ದ ಆಪಾದನೆಗಳಿಗಿಂತ ಹೀನ ಸ್ವರೂಪದವು!

’ಅಧಿಕೃತ ತುರ್ತುಪರಿಸ್ಥಿತಿಯನ್ನು ಕೂಡ ಘೋಷಿಸದೆ ಕಳೆದ ಆರು ವರ್ಷಗಳ ಅವಧಿಯಲ್ಲಿ ಭಾರತದ ಜನತಂತ್ರವನ್ನು ಹೇಗೆ ನಾಶ ಮಾಡಲಾಯಿತು ಎಂಬುದನ್ನು ಭವಿಷ್ಯತ್ತಿನಲ್ಲಿ ಇತಿಹಾಸಕಾರರು ಹೊರಳಿ ನೋಡಲಿದ್ದಾರೆ. ಆಗ ಅವರು ಈ ವಿನಾಶದಲ್ಲಿ ಸುಪ್ರೀಮ್ ಕೋರ್ಟಿನ, ಅದರಲ್ಲೂ ವಿಶೇಷವಾಗಿ ಕಳೆದ ನಾಲ್ವರು ಮುಖ್ಯನ್ಯಾಯಮೂರ್ತಿಗಳ ಪಾತ್ರವನ್ನು ರೇಖಾಂಕಿತಗೊಳಿಸಿ ಗುರುತಿಸುವರು. ತಮ್ಮ ಮೂಲಭೂತ ಹಕ್ಕನ್ನು ಉಳಿಸಿಕೊಳ್ಳಲು ಕದ ಬಡಿಯುವ ನಾಗರಿಕರ ಪಾಲಿಗೆ ಸುಪ್ರೀಮ್ ಕೋರ್ಟನ್ನು ಲಾಕ್ ಡೌನ್ ಸ್ಥಿತಿಯಲ್ಲಿ ಇರಿಸಿ ಅವರಿಗೆ ನ್ಯಾಯವನ್ನು ನಿರಾಕರಿಸಿರುವ ಮುಖ್ಯ ನ್ಯಾಯಮೂರ್ತಿಯವರು ನಾಗಪುರದ ರಾಜಭವನದಲ್ಲಿ ಬಿಜೆಪಿ ನಾಯಕರೊಬ್ಬರ ಒಡೆತನದ 50 ಲಕ್ಷ ರು ಬೆಲೆ ಬಾಳುವ ಮೋಟರ್ ಸೈಕಲ್ಲನ್ನು ಏರಿ ಕುಳಿತಿದ್ದಾರೆ. ಮಾಸ್ಕ್ ಮತ್ತು ಹೆಲ್ಮೆಟ್ ಕೂಡ ಧರಿಸಿಲ್ಲ ಎಂಬ ಎರಡು ಟ್ವೀಟ್‌ಗಳಿಗಾಗಿ ಜನಪರ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರನ್ನು ಶಿಕ್ಷಿಸಲಾಗಿದೆ. ಶಿಕ್ಷಿಸಿದ್ದು ಕೂಡ ಅರುಣ್ ಮಿಶ್ರ ನೇತೃತ್ವದ ನ್ಯಾಯಪೀಠವೇ.

ಭೂಷಣ್ ಅವರ ಒಂದು ಟ್ವೀಟ್ ಸುಪ್ರೀಮ್ ಕೋರ್ಟಿನ ಕಳೆದ ನಾಲ್ವರು ಮುಖ್ಯ ನ್ಯಾಯಮೂರ್ತಿಗಳನ್ನು ಕಟಕಟೆಯಲ್ಲಿ ನಿಲ್ಲಿಸುತ್ತದೆ. ಈ ನಾಲ್ವರ ಇಂಗಿತವರಿತು ಕಾರ್ಯನಿರ್ವಹಿಸಿದವರು ಎಂಬ ಅಭಿದಾನ ಅರುಣ್ ಮಿಶ್ರ ಅವರ ಸುತ್ತ ಸುತ್ತುವುದು ಕಂಡುಬರುತ್ತದೆ.


ಇದನ್ನೂ ಓದಿ: ಪ್ರಧಾನಿ ಮೋದಿ ಹೊಗಳಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ವರ್ತನೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಖಂಡನೆ.


ನ್ಯಾಯವಾದಿಯಾಗಿದ್ದ ಅರುಣ್ ಮಿಶ್ರ ಅವರನ್ನು 1999ರಲ್ಲಿ ಮಧ್ಯಪ್ರದೇಶದ ಹೈಕೋರ್ಟಿಗೆ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗುತ್ತದೆ. 2014ರಲ್ಲಿ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುತ್ತಾರೆ.

ಅತಿ ಸೂಕ್ಷ್ಮಸ್ವರೂಪದ ಹಲವು ಪ್ರಕರಣಗಳನ್ನು ಮಿಶ್ರ ನೇತೃತ್ವದ ನ್ಯಾಯಪೀಠ ನಡೆಸುತ್ತದೆ. ಇಂತಿಂತಹ ವ್ಯಾಜ್ಯ-ಪ್ರಕರಣ-ಮೊಕದ್ದಮೆಯನ್ನು ಇಂತಿಂತಹ ನ್ಯಾಯಪೀಠವೇ ನಡೆಸಬೇಕೆಂದು ಅವುಗಳನ್ನು ಹಂಚಿಕೊಡುವ ಅಧಿಕಾರ ಮುಖ್ಯ ನ್ಯಾಯಮೂರ್ತಿಗಳದು ಎಂಬುದನ್ನು ಇಲ್ಲಿ ಮತ್ತೊಮ್ಮೆ ನೆನೆಯುವುದು ಸೂಕ್ತ. 2015 ರಲ್ಲಿ ಗುಜರಾತಿನ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಅವರ ಪ್ರಕರಣ ಮಿಶ್ರ ಅವರ ನ್ಯಾಯಪೀಠದ ಮುಂದೆ ಬರುತ್ತದೆ. ಅಂದಿನ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು. ಗುಜರಾತ್ ಕೋಮುದಂಗೆಗಳಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮುಂತಾದವರ ಪಾತ್ರವಿತ್ತೆಂದು ಆಪಾದಿಸಿದ್ದವರು ಭಟ್. ಅವರೀಗ ಜೈಲಿನಲ್ಲಿದ್ದಾರೆ. ತಮ್ಮ ಮೇಲೆ ಸಲ್ಲಿಸಲಾಗಿರುವ ಎಫ್.ಐ.ಆರ್‌ಗಳ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಿಸುವಂತೆ ಭಟ್ ಸುಪ್ರೀಮ್ ಕೋರ್ಟ್ ಮೊರೆ ಹೋಗಿರುತ್ತಾರೆ. ನ್ಯಾಯಮೂರ್ತಿ ಮಿಶ್ರ ಅವರು ಈ ಮನವಿಯನ್ನು ತಳ್ಳಿಹಾಕಿ ತೀರ್ಪು ನೀಡುತ್ತಾರೆ.

ಗುಜರಾತ್ ಮತ್ತು ಮಧ್ಯಪ್ರದೇಶದ ಅಂದಿನ ಮುಖ್ಯಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಶಿವರಾಜಸಿಂಗ್ ಚೌಹಾಣ್ ಅವರಿಗೆ ನಿಧಿ ಸಂದಾಯವಾಗಿದೆ ಎಂದು ಸೂಚಿಸುವ ಕಾಗದಪತ್ರಗಳನ್ನು ಆದಾಯ ತೆರಿಗೆ ಇಲಾಖೆ ಯಾಕೆ ಮುಚ್ಚಿಟ್ಟಿದೆ ಎಂಬುದಾಗಿ ಪ್ರಶ್ನಿಸಲಾದ ಸಹಾರಾ-ಬಿರ್ಲಾ ಡೈರಿಗಳ ಪ್ರಕರಣದ ವಿಚಾರಣೆಯೂ ಮಿಶ್ರ ಅವರ ಮುಂದೆ ಬರುತ್ತದೆ. ಪ್ರಶ್ನೆಯನ್ನು ಬದಿಗೊತ್ತಿ ತೀರ್ಪು ನೀಡಲಾಗುತ್ತದೆ.

ಗುಜರಾತಿನ ಮಾಜಿ ಗೃಹಮಂತ್ರಿ ಹರೇನ್ ಪಾಂಡ್ಯ ಅವರ ಕೊಲೆ ಪ್ರಕರಣವನ್ನು ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಮರುತನಿಖೆ ನಡೆಸಬೇಕೆಂಬ ಪ್ರಶಾಂತ್ ಭೂಷಣ್ ಅವರ ಮನವಿಯನ್ನೂ ಮಿಶ್ರ ನ್ಯಾಯಪೀಠ ತಿರಸ್ಕರಿಸುತ್ತದೆ. ಅಷ್ಟೇ ಅಲ್ಲದೆ ಅರ್ಜಿದಾರರಿಗೆ 50 ಸಾವಿರ ರುಪಾಯಿಗಳ ದಂಡ ವಿಧಿಸುತ್ತದೆ.

ಸೊಹ್ರಾಬುದ್ದೀನ್ ಶೇಖ್ ಹುಸಿ ಎನ್ಕೌಂಟರ್ ಹತ್ಯೆ ಕುರಿತು ಅಮಿತ್ ಶಾ ಅವರ ಮೇಲಿನ ಆಪಾದನೆಗಳ ವಿಚಾರಣೆ ನಡೆಸುತ್ತಿದ್ದ ಅಧೀನ ನ್ಯಾಯಾಲಯದ ನ್ಯಾಯಾಧೀಶ ಬಿ.ಎಚ್.ಲೋಯಾ ಅವರ ನಿಗೂಢ ಮರಣದ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಅರ್ಜಿಗಳನ್ನು ಸಲ್ಲಿಸಲಾಗಿರುತ್ತದೆ. 2018ರ ಜನವರಿ 11ರಂದು ಈ ಅರ್ಜಿಗಳು ವಿಚಾರಣೆಗೆ ಬಂದಿರುತ್ತವೆ. ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಅವರು ಈ ಅರ್ಜಿಗಳ ವಿಚಾರಣೆಯನ್ನು ಅರುಣ್ ಮಿಶ್ರ ನ್ಯಾಯಪೀಠಕ್ಕೆ ಒಪ್ಪಿಸಿರುತ್ತಾರೆ. ಮರುದಿನ ಈ ಅರ್ಜಿಗಳ ವಿಚಾರಣೆ ನಡೆಯಬೇಕಿರುತ್ತದೆ. ಈ ಹಂತದಲ್ಲೇ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಐತಿಹಾಸಿಕ ಪತ್ರಿಕಾಗೋಷ್ಠಿ ನಡೆಸುತ್ತಾರೆ. ದೇಶದ ಮೇಲೆ ಮತ್ತು ಸುಪ್ರೀಮ್ ಕೋರ್ಟ್ ಮೇಲೆ ದೂರಗಾಮಿ ಸಾಧಕ ಬಾಧಕಗಳನ್ನು ಹೊಂದಿದ ಕೇಸುಗಳನ್ನು ಮುಖ್ಯ ನ್ಯಾಯಮೂರ್ತಿಗಳು ಯಾವುದೇ ಕಾರ್ಯಕಾರಣ ನೀಡದೆ ತಮಗೆ ಬೇಕಾದ ನ್ಯಾಯಪೀಠಗಳಿಗೆ ಒಪ್ಪಿಸುತ್ತಾರೆ ಎಂಬ ಆಪಾದನೆಯನ್ನೂ ಈ ನಾಲ್ವರು ನ್ಯಾಯಮೂರ್ತಿಗಳು ಅಂದು ಮಾಡಿದ್ದರು. ಲೋಯಾ ಕೇಸನ್ನು ಅರುಣ್ ಮಿಶ್ರ ಪೀಠಕ್ಕೆ ಒಪ್ಪಿಸಿದ್ದೇ ಈ ಟೀಕೆಯ ಹಿಂದಿನ ಪ್ರಚೋದನೆ ಎಂದು ವ್ಯಾಖ್ಯಾನಿಸಲಾಗಿತ್ತು. ಈ ಆಪಾದನೆಯ ಹಿನ್ನೆಲೆಯಲ್ಲಿ ಲೋಯಾ ಕೇಸನ್ನು ತಮ್ಮ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿಕೊಂಡರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ. ಸ್ವತಂತ್ರ ತನಿಖೆಯ ಅಹವಾಲನ್ನು ತಳ್ಳಿಹಾಕಿದರೆಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಪತ್ರಿಕಾಗೋಷ್ಠಿ ನಡೆಸಿದ ನಾಲ್ವರು ನ್ಯಾಯಮೂರ್ತಿಗಳ ಪೈಕಿ ಒಬ್ಬರಾಗಿದ್ದ ನ್ಯಾಯಮೂರ್ತಿ ಗೊಗೋಯ್ ಮುಖ್ಯ ನ್ಯಾಯಮೂರ್ತಿಯಾಗುತ್ತಾರೆ. ತಮ್ಮ ಮೇಲೆ ಬಂದ ಲೈಂಗಿಕ ಕಿರುಕುಳದ ಆಪಾದನೆಯ ಮೊಕದ್ದಮೆಯ ವಿಚಾರಣೆಗೆ ಅವರು ನೆಚ್ಚುವುದು ಈ ಹಿಂದೆ ತಾವು ಗುರಿಯಿಟ್ಟಿದ್ದ ಅರುಣ್ ಮಿಶ್ರ ಅವರನ್ನೇ.

ಅದಾನಿ ಕಂಪನಿಗಳಿಗೆ ಸಂಬಂಧಿಸಿದ ನಾಲ್ಕು ಕೇಸುಗಳನ್ನು ಅರುಣ್ ಮಿಶ್ರ ನ್ಯಾಯಪೀಠಕ್ಕೇ ಒಪ್ಪಿಸಿರುವ ಕುರಿತು ಸುಪ್ರೀಮ್ ಕೋರ್ಟಿನ ಹಿರಿಯ ನ್ಯಾಯವಾದಿ ದುಷ್ಯಂತ್ ದವೆ 2009ರ ಆಗಸ್ಟ್ ತಿಂಗಳಲ್ಲೇ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರ ಬರೆದು ದೂರಿದ್ದರು.

ವನ್ಯಜೀವಿ ಸಂರಕ್ಷಣೆಯ ಹೆಸರಿನಲ್ಲಿ 18 ಲಕ್ಷ ಜನರನ್ನು ಅಡವಿಗಳಿಂದ ಒಕ್ಕಲೆಬ್ಬಿಸುವ ಆದೇಶವೊಂದನ್ನು ಮಿಶ್ರ ನೇತೃತ್ವದ ನ್ಯಾಯಪೀಠ 2019ರ ಜನವರಿಯಲ್ಲಿ ನೀಡಿತ್ತು. ಹಾಹಾಕಾರದ ಹಿನ್ನೆಲೆಯಲ್ಲಿ ಈ ಆದೇಶವನ್ನು ತಡೆಹಿಡಿಯಬೇಕಾಯಿತು. ರೇಲ್ವೆ ಹಳಿಗಳ ಇಬ್ಬದಿಯಲ್ಲಿರುವ ೪೮ ಸಾವಿರ ಕೊಳೆಗೇರಿ ವಸತಿಗಳನ್ನು ಕಾಲಮಿತಿಯೊಳಗಾಗಿ ಖಾಲಿ ಮಾಡಿಸುವಂತೆಯೂ ಈ ಕೆಲಸದಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ಸಲ್ಲದು ಎಂಬ ಆದೇಶವನ್ನೂ ಮಿಶ್ರ ಹೊರಡಿಸಿದ್ದರು.

ಇಂತಹ ನಿದರ್ಶನಗಳು ಇನ್ನೂ ಹಲವಾರು. ಈ ಪೈಕಿ ಕಟ್ಟಕಡೆಯವು ಅದಾನಿ ಕಂಪನಿಗೆ ಎಂಟು ಸಾವಿರ ಕೋಟಿ ರುಪಾಯಿಯ ಪರಿಹಾರ ಮತ್ತು ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಎಸಗಿದ್ದಾರೆಂದು ನೀಡಿದ ಆದೇಶಗಳು.

ಅರುಣ್ ಮಿಶ್ರ ಅವರು ಪ್ರಧಾನಿ ಮೋದಿಯವರನ್ನು Versatile Genius (ಬಹುಮಖ ಮೇಧಾವಿ) ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಹೊಗಳಿದ್ದರು. ನ್ಯಾಯಪೀಠದಲ್ಲಿ ಕುಳಿತವರು ಬಹಿರಂಗವಾಗಿ ಇಂತಹ ಟಿಪ್ಪಣಿಗಳನ್ನು ಮಾಡುವುದು ಸರ್ವಥಾ ಸಲ್ಲದು.

ಇತಿಹಾಸ ಎಲ್ಲರಿಗಿಂತ ದೊಡ್ಡ ನ್ಯಾಯಾಧೀಶ. ಅದರ ಮುಂದೆ ಅತಿರಥ ಮಹಾರಥರೂ ಕಾಲಾನುಕ್ರಮದಲ್ಲಿ ಕೈಕಟ್ಟಿ ಕಟಕಟೆಯಲ್ಲಿ ನಿಲ್ಲಬೇಕಾದೀತು – ಸಜೀವವಾಗಿ ಇಲ್ಲವೇ ಮರಣೋತ್ತರವಾಗಿ..


ಇದನ್ನೂ ಓದಿ; ನಿವೃತ್ತಿಯಾದ ನ್ಯಾಯಮೂರ್ತಿ ಅರುಣ್ ಮಿಶ್ರಾರವರ 5 ವಿವಾದಿತ ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...