Homeಮುಖಪುಟನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌...

ನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌ ಗವಾಯಿ

- Advertisement -
- Advertisement -

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರು ಶುಕ್ರವಾರ (ಮೇ.23) ಮುಕ್ತ ನ್ಯಾಯಾಲಯದಲ್ಲಿ ಮಾತನಾಡಿ, “ತಾನು ಮತ್ತು ನಿವೃತ್ತರಾಗುತ್ತಿರುವ ನ್ಯಾಯಮೂರ್ತಿ ಎ.ಎಸ್ ಓಕಾ ಇಬ್ಬರೂ ನಿವೃತ್ತಿಯ ನಂತರದ ಯಾವುದೇ ಹುದ್ದೆಗಳನ್ನು ಸ್ವೀಕರಿಸದಿರಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಇಂದು (ಮೇ.24) ಅಧಿಕೃತವಾಗಿ ನಿವೃತ್ತರಾಗುತ್ತಿರುವ ನ್ಯಾಯಮೂರ್ತಿ ಓಕಾ ಅವರಿಗೆ ವಿದಾಯ ಹೇಳುವ ಸಂದರ್ಭದಲ್ಲಿ ಸಿಜೆಐ ಈ ಹೇಳಿಕೆ ನೀಡಿದ್ದಾರೆ.

“ನಾವಿಬ್ಬರೂ ನಿವೃತ್ತಿಯ ನಂತರದ ಯಾವುದೇ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ ಎಂದು ಈಗಾಗಲೇ ನಿರ್ಧರಿಸಿದ್ದೇವೆ. ಆದ್ದರಿಂದ, (ನಿವೃತ್ತಿಯ ನಂತರ) ಒಟ್ಟಿಗೆ ಕೆಲಸ ಮಾಡುವ ಬಗ್ಗೆ ಯೋಚಿಸಬಹುದು” ಎಂದು ಸಿಜೆಐ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ಓಕಾ ಅವರ ಕೊನೆಯ ಕೆಲಸದ ದಿನದಂದು ಅವರನ್ನು ಗೌರವಿಸಲು ಸಿಜೆಐ ಗವಾಯಿ, ನ್ಯಾಯಮೂರ್ತಿ ಓಕಾ ಮತ್ತು ನ್ಯಾಯಮೂರ್ತಿ ಎ.ಜಿ ಮಸೀಹ್ ಅವರು ಶುಕ್ರವಾರ ಬೆಳಿಗ್ಗೆ ವಿಧ್ಯುಕ್ತ ಪೀಠದಲ್ಲಿ ಕುಳಿತಿದ್ದರು.

ನ್ಯಾಯಮೂರ್ತಿ ಓಕಾ ಅವರು ಕಳೆದ 40 ವರ್ಷಗಳಿಂದ ನನಗೆ ಸ್ನೇಹಿತರಾಗಿದ್ದಾರೆ. ಅವರ ಕೊಡುಗೆಗಳು ಪ್ರಮುಖ ತೀರ್ಪುಗಳನ್ನು ಬರೆಯುವುದನ್ನೂ ಮೀರಿದ್ದು ಎಂದು ಸಿಜೆಐ ಹೇಳಿದ್ದಾರೆ.

“ನ್ಯಾಯಾಲಯದ ಕೊಠಡಿಯ ಒಳಗೆ ನ್ಯಾ. ಓಕಾ ಅವರು ಕಾನೂನು ಮತ್ತು ನೈತಿಕತೆಯ ಪ್ರಾಚಾರ್ಯರಾಗಿದ್ದರು. ವಕೀಲರು ನ್ಯಾಯಾಲಯದ ಮೊದಲ ಅಧಿಕಾರಿಗಳು ಎಂದು ಯಾವಾಗಲೂ ನೆನಪಿಸಿದ್ದಾರೆ. ಅವರ ದೃಢತೆಯ ಹಿಂದೆ ಶಿಕ್ಷಕರ ಸಮರ್ಪಣಾಭಾವ ಇದೆ. ಅವರ ಕೊಠಡಿಯಲ್ಲಿ ನೈತಿಕ ವಕೀಲಿಕೆಗೆ ಆದ್ಯತೆ ದೊರೆತಿದೆ. ಇಷ್ಟು ವರ್ಷಗಳ ಕಾಲ ಅವರು ಅತ್ಯುತ್ಸಾಹದಿಂದ ಕೆಲಸ ಮಾಡಿರುವುದು ಶ್ಲಾಘನೀಯ. ನ್ಯಾಯಮೂರ್ತಿಯಾದಾಗ ಅವರು ಅಧಿಕೃತ ವಾಸದ ಮನೆಯನ್ನು ತೆಗೆದುಕೊಳ್ಳಲಿಲ್ಲ” ಎಂದಿದ್ದಾರೆ.

ಔರಂಗಾಬಾದ್‌ನಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಸ್ಥಾಪನೆಯ ಹಿಂದೆ ನ್ಯಾಯಮೂರ್ತಿ ಓಕಾ ಅವರ ಪ್ರಯತ್ನಗಳು ಪ್ರಮುಖ ಪಾತ್ರ ವಹಿಸಿವೆ ಎಂದು ಸಿಜೆಐ ಶ್ಲಾಘಿಸಿದ್ದಾರೆ.

ನ್ಯಾಯಮೂರ್ತಿ ಓಕಾ ಅವರ ತೀರ್ಪುಗಳ ಕುರಿತು ಮಾತನಾಡುತ್ತಾ, ಪರಿಸರದ ಬಗೆಗಿನ ಅವರ ಬದ್ಧತೆಯನ್ನು ಸಿಜೆಐ ಶ್ಲಾಘಿಸಿದ್ದಾರೆ. ಪರಿಸರಕ್ಕೆ ಸರಿಪಡಿಸಲಾಗದ ಹಾನಿಯನ್ನು ತಡೆಗಟ್ಟಲು ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಓಕಾ ಅವರ ತಾಯಿಯ ನಿಧನಕ್ಕೆ ಸಿಜೆಐ ಗವಾಯಿ ಸಂತಾಪ ಸೂಚಿಸಿದ್ದಾರೆ. ಗಮನಾರ್ಹವಾಗಿ, ಮೇ 21ರಂದು ನಿಧನರಾದ ತಮ್ಮ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಓಕಾ ಅವರು, ಒಂದು ದಿನದ ನಂತರ ಕೆಲಸಕ್ಕೆ ಮರಳಿದ್ದರು. ಕಳೆದ ಎರಡು ದಿನಗಳ ಅವರ ಕಾರ್ಯವೈಖರಿ ನ್ಯಾಯದ ಮೇಲಿನ ಅವರ ಅಚಲ ಬದ್ಧತೆಯನ್ನು ತೋರಿಸುತ್ತದೆ ಎಂದು ಸಿಜೆಐ ಕೊಂಡಾಡಿದ್ದಾರೆ.

ನ್ಯಾಯಮೂರ್ತಿ ಓಕಾ ಅವರು ಕಾನೂನಿಗೆ ನೀಡಿದ ಅವಿಶ್ರಾಂತ ಕೊಡುಗೆ ಮತ್ತು ಸಾಂವಿಧಾನಿಕ ನಿಬಂಧನೆಗಳ ಮೇಲಿನ ಅವರ ನಿಷ್ಠೆಯನ್ನು ಎಲ್ಲರೂ ಸ್ಮರಿಸಬೇಕೆಂದು ಸಿಜೆಐ ಕೋರಿಕೊಂಡಿದ್ದಾರೆ.

“ಸುಪ್ರೀಂ ಕೋರ್ಟ್‌ನಲ್ಲಿ ಓಕಾ ಅವರ ಉಪಸ್ಥಿತಿಯನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ” ಎಂದು ಸಿಜೆಐ ಹೇಳಿದ್ದಾರೆ.

ನ್ಯಾಯಮೂರ್ತಿ ಓಕಾ ಅವರಿಂದ ನ್ಯಾಯಾಲಯವನ್ನು ಹೇಗೆ ನಡೆಸುವುದು ಮತ್ತು ಬಾರ್ ಸದಸ್ಯರೊಂದಿಗೆ ಹೇಗೆ ವ್ಯವಹರಿಸುವುದು ಸೇರಿದಂತೆ ಬಹಳಷ್ಟು ಕಲಿತಿದ್ದೇನೆ ಎಂದು ನ್ಯಾಯಮೂರ್ತಿ ಎ.ಜಿ ಮಸೀಹ್ ಹೇಳಿದ್ದಾರೆ.

ಎಲ್ಲರೂ ಕೋರಿರುವಂತೆ ನಿಮಗೆ ಮತ್ತು ಕುಟುಂಬಕ್ಕೆ ಸ್ವಲ್ಪ ಸಮಯ ನೀಡಿ. ಅತ್ಯಂತ ಕಠಿಣ ಪರಿಶ್ರಮಿಯಾದ ನ್ಯಾ. ಓಕಾ ಅವರು ನಿದ್ರಿಸುವುದೇ ಕಡಿಮೆ. ಅವರಿಗೆ ಎಲ್ಲವೂ ಒಳಿತಾಗಲಿ ಎಂದಿದ್ದಾರೆ.

ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...