Homeಮುಖಪುಟನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌...

ನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌ ಗವಾಯಿ

- Advertisement -
- Advertisement -

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರು ಶುಕ್ರವಾರ (ಮೇ.23) ಮುಕ್ತ ನ್ಯಾಯಾಲಯದಲ್ಲಿ ಮಾತನಾಡಿ, “ತಾನು ಮತ್ತು ನಿವೃತ್ತರಾಗುತ್ತಿರುವ ನ್ಯಾಯಮೂರ್ತಿ ಎ.ಎಸ್ ಓಕಾ ಇಬ್ಬರೂ ನಿವೃತ್ತಿಯ ನಂತರದ ಯಾವುದೇ ಹುದ್ದೆಗಳನ್ನು ಸ್ವೀಕರಿಸದಿರಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಇಂದು (ಮೇ.24) ಅಧಿಕೃತವಾಗಿ ನಿವೃತ್ತರಾಗುತ್ತಿರುವ ನ್ಯಾಯಮೂರ್ತಿ ಓಕಾ ಅವರಿಗೆ ವಿದಾಯ ಹೇಳುವ ಸಂದರ್ಭದಲ್ಲಿ ಸಿಜೆಐ ಈ ಹೇಳಿಕೆ ನೀಡಿದ್ದಾರೆ.

“ನಾವಿಬ್ಬರೂ ನಿವೃತ್ತಿಯ ನಂತರದ ಯಾವುದೇ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ ಎಂದು ಈಗಾಗಲೇ ನಿರ್ಧರಿಸಿದ್ದೇವೆ. ಆದ್ದರಿಂದ, (ನಿವೃತ್ತಿಯ ನಂತರ) ಒಟ್ಟಿಗೆ ಕೆಲಸ ಮಾಡುವ ಬಗ್ಗೆ ಯೋಚಿಸಬಹುದು” ಎಂದು ಸಿಜೆಐ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ಓಕಾ ಅವರ ಕೊನೆಯ ಕೆಲಸದ ದಿನದಂದು ಅವರನ್ನು ಗೌರವಿಸಲು ಸಿಜೆಐ ಗವಾಯಿ, ನ್ಯಾಯಮೂರ್ತಿ ಓಕಾ ಮತ್ತು ನ್ಯಾಯಮೂರ್ತಿ ಎ.ಜಿ ಮಸೀಹ್ ಅವರು ಶುಕ್ರವಾರ ಬೆಳಿಗ್ಗೆ ವಿಧ್ಯುಕ್ತ ಪೀಠದಲ್ಲಿ ಕುಳಿತಿದ್ದರು.

ನ್ಯಾಯಮೂರ್ತಿ ಓಕಾ ಅವರು ಕಳೆದ 40 ವರ್ಷಗಳಿಂದ ನನಗೆ ಸ್ನೇಹಿತರಾಗಿದ್ದಾರೆ. ಅವರ ಕೊಡುಗೆಗಳು ಪ್ರಮುಖ ತೀರ್ಪುಗಳನ್ನು ಬರೆಯುವುದನ್ನೂ ಮೀರಿದ್ದು ಎಂದು ಸಿಜೆಐ ಹೇಳಿದ್ದಾರೆ.

“ನ್ಯಾಯಾಲಯದ ಕೊಠಡಿಯ ಒಳಗೆ ನ್ಯಾ. ಓಕಾ ಅವರು ಕಾನೂನು ಮತ್ತು ನೈತಿಕತೆಯ ಪ್ರಾಚಾರ್ಯರಾಗಿದ್ದರು. ವಕೀಲರು ನ್ಯಾಯಾಲಯದ ಮೊದಲ ಅಧಿಕಾರಿಗಳು ಎಂದು ಯಾವಾಗಲೂ ನೆನಪಿಸಿದ್ದಾರೆ. ಅವರ ದೃಢತೆಯ ಹಿಂದೆ ಶಿಕ್ಷಕರ ಸಮರ್ಪಣಾಭಾವ ಇದೆ. ಅವರ ಕೊಠಡಿಯಲ್ಲಿ ನೈತಿಕ ವಕೀಲಿಕೆಗೆ ಆದ್ಯತೆ ದೊರೆತಿದೆ. ಇಷ್ಟು ವರ್ಷಗಳ ಕಾಲ ಅವರು ಅತ್ಯುತ್ಸಾಹದಿಂದ ಕೆಲಸ ಮಾಡಿರುವುದು ಶ್ಲಾಘನೀಯ. ನ್ಯಾಯಮೂರ್ತಿಯಾದಾಗ ಅವರು ಅಧಿಕೃತ ವಾಸದ ಮನೆಯನ್ನು ತೆಗೆದುಕೊಳ್ಳಲಿಲ್ಲ” ಎಂದಿದ್ದಾರೆ.

ಔರಂಗಾಬಾದ್‌ನಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಸ್ಥಾಪನೆಯ ಹಿಂದೆ ನ್ಯಾಯಮೂರ್ತಿ ಓಕಾ ಅವರ ಪ್ರಯತ್ನಗಳು ಪ್ರಮುಖ ಪಾತ್ರ ವಹಿಸಿವೆ ಎಂದು ಸಿಜೆಐ ಶ್ಲಾಘಿಸಿದ್ದಾರೆ.

ನ್ಯಾಯಮೂರ್ತಿ ಓಕಾ ಅವರ ತೀರ್ಪುಗಳ ಕುರಿತು ಮಾತನಾಡುತ್ತಾ, ಪರಿಸರದ ಬಗೆಗಿನ ಅವರ ಬದ್ಧತೆಯನ್ನು ಸಿಜೆಐ ಶ್ಲಾಘಿಸಿದ್ದಾರೆ. ಪರಿಸರಕ್ಕೆ ಸರಿಪಡಿಸಲಾಗದ ಹಾನಿಯನ್ನು ತಡೆಗಟ್ಟಲು ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಓಕಾ ಅವರ ತಾಯಿಯ ನಿಧನಕ್ಕೆ ಸಿಜೆಐ ಗವಾಯಿ ಸಂತಾಪ ಸೂಚಿಸಿದ್ದಾರೆ. ಗಮನಾರ್ಹವಾಗಿ, ಮೇ 21ರಂದು ನಿಧನರಾದ ತಮ್ಮ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಓಕಾ ಅವರು, ಒಂದು ದಿನದ ನಂತರ ಕೆಲಸಕ್ಕೆ ಮರಳಿದ್ದರು. ಕಳೆದ ಎರಡು ದಿನಗಳ ಅವರ ಕಾರ್ಯವೈಖರಿ ನ್ಯಾಯದ ಮೇಲಿನ ಅವರ ಅಚಲ ಬದ್ಧತೆಯನ್ನು ತೋರಿಸುತ್ತದೆ ಎಂದು ಸಿಜೆಐ ಕೊಂಡಾಡಿದ್ದಾರೆ.

ನ್ಯಾಯಮೂರ್ತಿ ಓಕಾ ಅವರು ಕಾನೂನಿಗೆ ನೀಡಿದ ಅವಿಶ್ರಾಂತ ಕೊಡುಗೆ ಮತ್ತು ಸಾಂವಿಧಾನಿಕ ನಿಬಂಧನೆಗಳ ಮೇಲಿನ ಅವರ ನಿಷ್ಠೆಯನ್ನು ಎಲ್ಲರೂ ಸ್ಮರಿಸಬೇಕೆಂದು ಸಿಜೆಐ ಕೋರಿಕೊಂಡಿದ್ದಾರೆ.

“ಸುಪ್ರೀಂ ಕೋರ್ಟ್‌ನಲ್ಲಿ ಓಕಾ ಅವರ ಉಪಸ್ಥಿತಿಯನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ” ಎಂದು ಸಿಜೆಐ ಹೇಳಿದ್ದಾರೆ.

ನ್ಯಾಯಮೂರ್ತಿ ಓಕಾ ಅವರಿಂದ ನ್ಯಾಯಾಲಯವನ್ನು ಹೇಗೆ ನಡೆಸುವುದು ಮತ್ತು ಬಾರ್ ಸದಸ್ಯರೊಂದಿಗೆ ಹೇಗೆ ವ್ಯವಹರಿಸುವುದು ಸೇರಿದಂತೆ ಬಹಳಷ್ಟು ಕಲಿತಿದ್ದೇನೆ ಎಂದು ನ್ಯಾಯಮೂರ್ತಿ ಎ.ಜಿ ಮಸೀಹ್ ಹೇಳಿದ್ದಾರೆ.

ಎಲ್ಲರೂ ಕೋರಿರುವಂತೆ ನಿಮಗೆ ಮತ್ತು ಕುಟುಂಬಕ್ಕೆ ಸ್ವಲ್ಪ ಸಮಯ ನೀಡಿ. ಅತ್ಯಂತ ಕಠಿಣ ಪರಿಶ್ರಮಿಯಾದ ನ್ಯಾ. ಓಕಾ ಅವರು ನಿದ್ರಿಸುವುದೇ ಕಡಿಮೆ. ಅವರಿಗೆ ಎಲ್ಲವೂ ಒಳಿತಾಗಲಿ ಎಂದಿದ್ದಾರೆ.

ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...