Homeಕರ್ನಾಟಕಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

- Advertisement -
- Advertisement -

ಕೋವಿಡ್ ವೇಳೆ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್‌ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಮಾಧ್ಯಮದವರನ್ನು ಉದ್ದೇಶಿಸಿ ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, “ಚಾಮರಾಜನಗರ ದುರಂತ ನಡೆದ ವೇಳೆ ನಾನು ಹಾಗೂ ಸಿದ್ದರಾಮಯ್ಯನವರು ಸ್ಥಳಕ್ಕೆ ತೆರಳಿ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೆವು. ಮೃತರ ಕುಟುಂಬ ವರ್ಗದವರನ್ನೂ ಭೇಟಿ ಮಾಡಲಾಗಿತ್ತು. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಯಾರ ತಪ್ಪಿದೆ ಎಂದು ಹೇಳಿದ್ದರು” ಎಂದಿದ್ದಾರೆ.

ವರದಿಯಲ್ಲಿ ಕುನ್ಹಾ ಅವರು ಹೆಸರಿಸಿರುವ ಹಿಂದಿನ ಆರೋಗ್ಯ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ? ಎಂದು ಕೇಳಿದಾಗ, “ಕೋವಿಡ್ ಅಕ್ರಮಗಳ ಬಗ್ಗೆ ಮೈಕೆಲ್ ಕುನ್ಹಾ ಅವರು ಅತ್ಯಂತ ಸಮಗ್ರವಾಗಿ ವರದಿಯನ್ನು ನೀಡಿದ್ದಾರೆ. ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕಾಗುತ್ತದೆ. ಇದರಲ್ಲಿ ಕಾನೂನು ಸಂಬಂಧಿತ, ಕ್ರಿಮಿನಲ್ ಸಂಬಂಧಿತ ವಿಚಾರಗಳನ್ನು ಗಮನಿಸಲು ಸಹಾಯ ತೆಗೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಸುಮಾರು 29 ಜನ ಅಧಿಕಾರಿಗಳು ಸಮಿತಿ ನೀಡಿರುವ ನೋಟಿಸ್‌ಗೆ ಉತ್ತರ ನೀಡಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಕುನ್ಹಾ ಅವರು ವರದಿಯಲ್ಲಿ ಅನೇಕ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದರ ಬಗ್ಗೆ ನಮಗೂ ಅರಿವಿದೆ. ಸೂಕ್ತಕಾಲದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಹೇಳಿದ್ದಾರೆ.

15 ದಿನಗಳಿಗೊಮ್ಮೆ ಸಭೆ, ಸಮಿತಿಗೆ ಹಿರಿಯ ಅಧಿಕಾರಿಗಳ ನೇಮಕ :

“ಮುಂದಿನ ದಿನಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಉಪಸಮಿತಿ ಸಭೆ ನಡೆಸಬೇಕು ಎನ್ನುವ ತೀರ್ಮಾನಕ್ಕೆ ಬರಲಾಗಿದೆ. ಅಧಿಕಾರಿಗಳ ಕೊರತೆ ಇರುವ ಕಾರಣಕ್ಕೆ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಸಮಿತಿಗೆ ನೇಮಕ ಮಾಡಿ ಅವರಿಗೂ ಕೆಲವು ಜವಾಬ್ದಾರಿಗಳನ್ನು ನೀಡಬೇಕು ಎಂದು ತೀರ್ಮಾನ ಮಾಡಲಾಗಿದೆ” ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

“ಆರೋಗ್ಯ ಇಲಾಖೆ ನಡೆಸುವುದು ಪ್ರತಿ ದಿನವೂ ಸವಾಲಿನಿಂದ ಕೂಡಿರುವ ಕೆಲಸ. ಇಲಾಖೆ ಅಡಿಯಲ್ಲಿ 70 ಮೆಡಿಕಲ್ ಕಾಲೇಜುಗಳು ಬರುತ್ತವೆ. ದಿನವು ಹೊಸ ಸವಾಲುಗಳು ಎದುರಾಗುತ್ತವೆ‌. ಆದ ಕಾರಣ ಒಂದಷ್ಟು ಜವಾಬ್ದಾರಿಗಳನ್ನು ಹಿರಿಯ ಅಧಿಕಾರಿಗಳಿಗೆ ನೀಡಲಾಗುವುದು” ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದ ವಕ್ತಾರ :

ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಕಾಂಗ್ರೆಸ್ ಪಕ್ಷದ ವಕ್ತಾರ. ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ ಅವರ ಬಳಿ ಈ ಬಗ್ಗೆ ಚರ್ಚೆ ಮಾಡಿದರೆ ಒಳ್ಳೆಯದು. ದೇಶ, ರಾಜ್ಯ, ವೈಯಕ್ತಿಕ ವಿಚಾರಗಳಿಗೆ ಭೇಟಿಯಾಗಿದ್ದರೋ ತಿಳಿದಿಲ್ಲ. ಇದರ ಬಗ್ಗೆ ಅವರನ್ನೇ ಕೇಳಿದರೆ ಬಹಳ ಉತ್ತಮ” ಎಂದಿದ್ದಾರೆ.

ಯತ್ನಾಳ್ ಉಚ್ಚಾಟನೆ ಬಿಜೆಪಿ ಆಂತರಿಕ ವಿಚಾರ :

ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ಬಗ್ಗೆ ಕೇಳಿದಾಗ, “ಬಿಜೆಪಿಯ ಆಂತರಿಕ ವಿಚಾರಗಳನ್ನು ನಾನು ಏಕೆ ಮಾತನಾಡಲಿ? ಅವರ ಪಕ್ಷದ ಮುತ್ತು ರತ್ನಗಳನ್ನು ಇಟ್ಟುಕೊಳ್ಳಲಿ ಅಥವಾ ಆಚೆಯಾದರೂ ಬಿಸಾಡಲಿ” ಎಂದು‌ ಕುಟುಕಿದರು.

ಯತ್ನಾಳ್ ಅವರು ನಮ್ಮಲ್ಲಿ ಇದ್ದಿದ್ದರೆ ಇಷ್ಟೊತ್ತಿಗಾಗಲೇ ನಾನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, “ಒಂದಷ್ಟು ಜನ ಶೋಭೆಗೆ ಎಂದು ಓಲೆ, ಮೂಗುತಿ, ಹಣೆಗೆ ಕುಂಕುಮ ಇಟ್ಟುಕೊಳ್ಳುತ್ತಾರೆ. ಅದೇ ರೀತಿ ಒಂದಷ್ಟು ಜನ ಪಕ್ಷದಲ್ಲಿ ಇದ್ದರೆ ಒಳ್ಳೆಯದು” ಎಂದು ಮಾರ್ಮಿಕವಾಗಿ ನುಡಿದರು.

ಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ ಸರ್ಕಾರಿ ಶಾಲೆ ಶಿಕ್ಷಕರು; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...