Homeಕರ್ನಾಟಕಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

- Advertisement -
- Advertisement -

ಕೋವಿಡ್ ವೇಳೆ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್‌ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಮಾಧ್ಯಮದವರನ್ನು ಉದ್ದೇಶಿಸಿ ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, “ಚಾಮರಾಜನಗರ ದುರಂತ ನಡೆದ ವೇಳೆ ನಾನು ಹಾಗೂ ಸಿದ್ದರಾಮಯ್ಯನವರು ಸ್ಥಳಕ್ಕೆ ತೆರಳಿ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೆವು. ಮೃತರ ಕುಟುಂಬ ವರ್ಗದವರನ್ನೂ ಭೇಟಿ ಮಾಡಲಾಗಿತ್ತು. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಯಾರ ತಪ್ಪಿದೆ ಎಂದು ಹೇಳಿದ್ದರು” ಎಂದಿದ್ದಾರೆ.

ವರದಿಯಲ್ಲಿ ಕುನ್ಹಾ ಅವರು ಹೆಸರಿಸಿರುವ ಹಿಂದಿನ ಆರೋಗ್ಯ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ? ಎಂದು ಕೇಳಿದಾಗ, “ಕೋವಿಡ್ ಅಕ್ರಮಗಳ ಬಗ್ಗೆ ಮೈಕೆಲ್ ಕುನ್ಹಾ ಅವರು ಅತ್ಯಂತ ಸಮಗ್ರವಾಗಿ ವರದಿಯನ್ನು ನೀಡಿದ್ದಾರೆ. ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕಾಗುತ್ತದೆ. ಇದರಲ್ಲಿ ಕಾನೂನು ಸಂಬಂಧಿತ, ಕ್ರಿಮಿನಲ್ ಸಂಬಂಧಿತ ವಿಚಾರಗಳನ್ನು ಗಮನಿಸಲು ಸಹಾಯ ತೆಗೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಸುಮಾರು 29 ಜನ ಅಧಿಕಾರಿಗಳು ಸಮಿತಿ ನೀಡಿರುವ ನೋಟಿಸ್‌ಗೆ ಉತ್ತರ ನೀಡಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಕುನ್ಹಾ ಅವರು ವರದಿಯಲ್ಲಿ ಅನೇಕ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದರ ಬಗ್ಗೆ ನಮಗೂ ಅರಿವಿದೆ. ಸೂಕ್ತಕಾಲದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಹೇಳಿದ್ದಾರೆ.

15 ದಿನಗಳಿಗೊಮ್ಮೆ ಸಭೆ, ಸಮಿತಿಗೆ ಹಿರಿಯ ಅಧಿಕಾರಿಗಳ ನೇಮಕ :

“ಮುಂದಿನ ದಿನಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಉಪಸಮಿತಿ ಸಭೆ ನಡೆಸಬೇಕು ಎನ್ನುವ ತೀರ್ಮಾನಕ್ಕೆ ಬರಲಾಗಿದೆ. ಅಧಿಕಾರಿಗಳ ಕೊರತೆ ಇರುವ ಕಾರಣಕ್ಕೆ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಸಮಿತಿಗೆ ನೇಮಕ ಮಾಡಿ ಅವರಿಗೂ ಕೆಲವು ಜವಾಬ್ದಾರಿಗಳನ್ನು ನೀಡಬೇಕು ಎಂದು ತೀರ್ಮಾನ ಮಾಡಲಾಗಿದೆ” ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

“ಆರೋಗ್ಯ ಇಲಾಖೆ ನಡೆಸುವುದು ಪ್ರತಿ ದಿನವೂ ಸವಾಲಿನಿಂದ ಕೂಡಿರುವ ಕೆಲಸ. ಇಲಾಖೆ ಅಡಿಯಲ್ಲಿ 70 ಮೆಡಿಕಲ್ ಕಾಲೇಜುಗಳು ಬರುತ್ತವೆ. ದಿನವು ಹೊಸ ಸವಾಲುಗಳು ಎದುರಾಗುತ್ತವೆ‌. ಆದ ಕಾರಣ ಒಂದಷ್ಟು ಜವಾಬ್ದಾರಿಗಳನ್ನು ಹಿರಿಯ ಅಧಿಕಾರಿಗಳಿಗೆ ನೀಡಲಾಗುವುದು” ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದ ವಕ್ತಾರ :

ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಕಾಂಗ್ರೆಸ್ ಪಕ್ಷದ ವಕ್ತಾರ. ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ ಅವರ ಬಳಿ ಈ ಬಗ್ಗೆ ಚರ್ಚೆ ಮಾಡಿದರೆ ಒಳ್ಳೆಯದು. ದೇಶ, ರಾಜ್ಯ, ವೈಯಕ್ತಿಕ ವಿಚಾರಗಳಿಗೆ ಭೇಟಿಯಾಗಿದ್ದರೋ ತಿಳಿದಿಲ್ಲ. ಇದರ ಬಗ್ಗೆ ಅವರನ್ನೇ ಕೇಳಿದರೆ ಬಹಳ ಉತ್ತಮ” ಎಂದಿದ್ದಾರೆ.

ಯತ್ನಾಳ್ ಉಚ್ಚಾಟನೆ ಬಿಜೆಪಿ ಆಂತರಿಕ ವಿಚಾರ :

ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ಬಗ್ಗೆ ಕೇಳಿದಾಗ, “ಬಿಜೆಪಿಯ ಆಂತರಿಕ ವಿಚಾರಗಳನ್ನು ನಾನು ಏಕೆ ಮಾತನಾಡಲಿ? ಅವರ ಪಕ್ಷದ ಮುತ್ತು ರತ್ನಗಳನ್ನು ಇಟ್ಟುಕೊಳ್ಳಲಿ ಅಥವಾ ಆಚೆಯಾದರೂ ಬಿಸಾಡಲಿ” ಎಂದು‌ ಕುಟುಕಿದರು.

ಯತ್ನಾಳ್ ಅವರು ನಮ್ಮಲ್ಲಿ ಇದ್ದಿದ್ದರೆ ಇಷ್ಟೊತ್ತಿಗಾಗಲೇ ನಾನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, “ಒಂದಷ್ಟು ಜನ ಶೋಭೆಗೆ ಎಂದು ಓಲೆ, ಮೂಗುತಿ, ಹಣೆಗೆ ಕುಂಕುಮ ಇಟ್ಟುಕೊಳ್ಳುತ್ತಾರೆ. ಅದೇ ರೀತಿ ಒಂದಷ್ಟು ಜನ ಪಕ್ಷದಲ್ಲಿ ಇದ್ದರೆ ಒಳ್ಳೆಯದು” ಎಂದು ಮಾರ್ಮಿಕವಾಗಿ ನುಡಿದರು.

ಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ ಸರ್ಕಾರಿ ಶಾಲೆ ಶಿಕ್ಷಕರು; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...