Homeಮುಖಪುಟಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಜಸ್ಟೀಸ್‌ ಡಿ.ವೈ.ಚಂದ್ರಚೂಡ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರ ಸಮ್ಮುಖದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

ಸಿಜೆಐ ಯು.ಯು.ಲಲಿತ್ ಅವರು ಶಿಫಾರಸ್ಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಸಿಜೆಐ ಅವರ ಶಿಫಾರಸನ್ನು ಪರಿಗಣಿಸುವುದರ ಜೊತೆಗೆ, ಮುಂದಿನ ಸಿಜೆಐ ಅನ್ನು ಹೆಸರಿಸುವ ಮೊದಲು ಭಾರತದ ರಾಷ್ಟ್ರಪತಿಯವರಿಗೆ ಪ್ರಧಾನಿ ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್ ಅವರು ಪ್ರಸ್ತುತ ಸಿಜೆಐ ನಂತರದಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಆದ್ದರಿಂದ ಹಿರಿತನದ ಆಧಾರದಲ್ಲಿ ಅವರನ್ನು ಸಂಪ್ರದಾಯದಂತೆ ಸಿಜೆಐ ಆಗಿ ನೇಮಿಸಲು ಶಿಫಾರಸ್ಸು ಮಾಡಲಾಗಿದೆ.

ಸಿಜೆಐ ನೇಮಕವನ್ನು ಸರ್ಕಾರ ಮತ್ತು ನ್ಯಾಯಾಂಗವು ಒಪ್ಪಿಗೆ ನೀಡುವ ಮೆಮೊರಾಂಡಮ್ ಆಫ್ ಪ್ರೊಸೀಜರ್ (ಎಂಒಪಿ) ಮೂಲಕ ನಿರ್ಧರಿಸಲಾಗುತ್ತದೆ. 1981, 1993 ಮತ್ತು 1998ರ ಮೂರು ನ್ಯಾಯಾಧೀಶರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ತಾಳಿದ ನಿರ್ಧಾರಗಳನ್ನು ಆಧರಿಸಿ ಎಂಒಪಿ ರೂಪುಗೊಂಡಿದೆ. ಹಿರಿಯ ನ್ಯಾಯಮೂರ್ತಿಯನ್ನು ನೇಮಿಸುವಂತೆ ಎಂಒಪಿ ಸೂಚಿಸುತ್ತದೆ.

ಸಿಜೆಐ ನೇಮಕಾತಿಯಲ್ಲಿ ಸಾಂಪ್ರದಾಯಿಕವಾಗಿ ಹಿರಿತನವನ್ನು ಪರಿಗಣಿಸಲಾಗುತ್ತದೆ. ಆದರೆ ಹಿರಿತನವನ್ನು ವಯಸ್ಸಿನಿಂದ ನಿರ್ಧರಿಸಲಾಗುವುದಿಲ್ಲ ಎಂಬುದು ಗಮನಾರ್ಹ. ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕವಾದ ದಿನಾಂಕದಿಂದ ಪರಿಗಣಿಸಿ, ಸೇವೆಯ ಅವಧಿಯ ಆಧಾರದಲ್ಲಿ ಹಿರಿತನವನ್ನು ನಿರ್ಧರಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು.ಯು.ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಂಡರು. ಅವರಿಗಿಂತ ಮೊದಲು ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌.ವಿ. ರಮಣ ಅವರು ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿಯವರು ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ 

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...