Homeಮುಖಪುಟಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಜಸ್ಟೀಸ್‌ ಡಿ.ವೈ.ಚಂದ್ರಚೂಡ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರ ಸಮ್ಮುಖದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

ಸಿಜೆಐ ಯು.ಯು.ಲಲಿತ್ ಅವರು ಶಿಫಾರಸ್ಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಸಿಜೆಐ ಅವರ ಶಿಫಾರಸನ್ನು ಪರಿಗಣಿಸುವುದರ ಜೊತೆಗೆ, ಮುಂದಿನ ಸಿಜೆಐ ಅನ್ನು ಹೆಸರಿಸುವ ಮೊದಲು ಭಾರತದ ರಾಷ್ಟ್ರಪತಿಯವರಿಗೆ ಪ್ರಧಾನಿ ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್ ಅವರು ಪ್ರಸ್ತುತ ಸಿಜೆಐ ನಂತರದಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಆದ್ದರಿಂದ ಹಿರಿತನದ ಆಧಾರದಲ್ಲಿ ಅವರನ್ನು ಸಂಪ್ರದಾಯದಂತೆ ಸಿಜೆಐ ಆಗಿ ನೇಮಿಸಲು ಶಿಫಾರಸ್ಸು ಮಾಡಲಾಗಿದೆ.

ಸಿಜೆಐ ನೇಮಕವನ್ನು ಸರ್ಕಾರ ಮತ್ತು ನ್ಯಾಯಾಂಗವು ಒಪ್ಪಿಗೆ ನೀಡುವ ಮೆಮೊರಾಂಡಮ್ ಆಫ್ ಪ್ರೊಸೀಜರ್ (ಎಂಒಪಿ) ಮೂಲಕ ನಿರ್ಧರಿಸಲಾಗುತ್ತದೆ. 1981, 1993 ಮತ್ತು 1998ರ ಮೂರು ನ್ಯಾಯಾಧೀಶರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ತಾಳಿದ ನಿರ್ಧಾರಗಳನ್ನು ಆಧರಿಸಿ ಎಂಒಪಿ ರೂಪುಗೊಂಡಿದೆ. ಹಿರಿಯ ನ್ಯಾಯಮೂರ್ತಿಯನ್ನು ನೇಮಿಸುವಂತೆ ಎಂಒಪಿ ಸೂಚಿಸುತ್ತದೆ.

ಸಿಜೆಐ ನೇಮಕಾತಿಯಲ್ಲಿ ಸಾಂಪ್ರದಾಯಿಕವಾಗಿ ಹಿರಿತನವನ್ನು ಪರಿಗಣಿಸಲಾಗುತ್ತದೆ. ಆದರೆ ಹಿರಿತನವನ್ನು ವಯಸ್ಸಿನಿಂದ ನಿರ್ಧರಿಸಲಾಗುವುದಿಲ್ಲ ಎಂಬುದು ಗಮನಾರ್ಹ. ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕವಾದ ದಿನಾಂಕದಿಂದ ಪರಿಗಣಿಸಿ, ಸೇವೆಯ ಅವಧಿಯ ಆಧಾರದಲ್ಲಿ ಹಿರಿತನವನ್ನು ನಿರ್ಧರಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು.ಯು.ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಂಡರು. ಅವರಿಗಿಂತ ಮೊದಲು ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌.ವಿ. ರಮಣ ಅವರು ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿಯವರು ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ 

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...