Homeಮುಖಪುಟಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಜಸ್ಟೀಸ್‌ ಡಿ.ವೈ.ಚಂದ್ರಚೂಡ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರ ಸಮ್ಮುಖದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

ಸಿಜೆಐ ಯು.ಯು.ಲಲಿತ್ ಅವರು ಶಿಫಾರಸ್ಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಸಿಜೆಐ ಅವರ ಶಿಫಾರಸನ್ನು ಪರಿಗಣಿಸುವುದರ ಜೊತೆಗೆ, ಮುಂದಿನ ಸಿಜೆಐ ಅನ್ನು ಹೆಸರಿಸುವ ಮೊದಲು ಭಾರತದ ರಾಷ್ಟ್ರಪತಿಯವರಿಗೆ ಪ್ರಧಾನಿ ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್ ಅವರು ಪ್ರಸ್ತುತ ಸಿಜೆಐ ನಂತರದಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಆದ್ದರಿಂದ ಹಿರಿತನದ ಆಧಾರದಲ್ಲಿ ಅವರನ್ನು ಸಂಪ್ರದಾಯದಂತೆ ಸಿಜೆಐ ಆಗಿ ನೇಮಿಸಲು ಶಿಫಾರಸ್ಸು ಮಾಡಲಾಗಿದೆ.

ಸಿಜೆಐ ನೇಮಕವನ್ನು ಸರ್ಕಾರ ಮತ್ತು ನ್ಯಾಯಾಂಗವು ಒಪ್ಪಿಗೆ ನೀಡುವ ಮೆಮೊರಾಂಡಮ್ ಆಫ್ ಪ್ರೊಸೀಜರ್ (ಎಂಒಪಿ) ಮೂಲಕ ನಿರ್ಧರಿಸಲಾಗುತ್ತದೆ. 1981, 1993 ಮತ್ತು 1998ರ ಮೂರು ನ್ಯಾಯಾಧೀಶರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ತಾಳಿದ ನಿರ್ಧಾರಗಳನ್ನು ಆಧರಿಸಿ ಎಂಒಪಿ ರೂಪುಗೊಂಡಿದೆ. ಹಿರಿಯ ನ್ಯಾಯಮೂರ್ತಿಯನ್ನು ನೇಮಿಸುವಂತೆ ಎಂಒಪಿ ಸೂಚಿಸುತ್ತದೆ.

ಸಿಜೆಐ ನೇಮಕಾತಿಯಲ್ಲಿ ಸಾಂಪ್ರದಾಯಿಕವಾಗಿ ಹಿರಿತನವನ್ನು ಪರಿಗಣಿಸಲಾಗುತ್ತದೆ. ಆದರೆ ಹಿರಿತನವನ್ನು ವಯಸ್ಸಿನಿಂದ ನಿರ್ಧರಿಸಲಾಗುವುದಿಲ್ಲ ಎಂಬುದು ಗಮನಾರ್ಹ. ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕವಾದ ದಿನಾಂಕದಿಂದ ಪರಿಗಣಿಸಿ, ಸೇವೆಯ ಅವಧಿಯ ಆಧಾರದಲ್ಲಿ ಹಿರಿತನವನ್ನು ನಿರ್ಧರಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು.ಯು.ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಂಡರು. ಅವರಿಗಿಂತ ಮೊದಲು ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌.ವಿ. ರಮಣ ಅವರು ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿಯವರು ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ 

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...