Homeಮುಖಪುಟಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಜಸ್ಟೀಸ್‌ ಡಿ.ವೈ.ಚಂದ್ರಚೂಡ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರ ಸಮ್ಮುಖದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

ಸಿಜೆಐ ಯು.ಯು.ಲಲಿತ್ ಅವರು ಶಿಫಾರಸ್ಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಸಿಜೆಐ ಅವರ ಶಿಫಾರಸನ್ನು ಪರಿಗಣಿಸುವುದರ ಜೊತೆಗೆ, ಮುಂದಿನ ಸಿಜೆಐ ಅನ್ನು ಹೆಸರಿಸುವ ಮೊದಲು ಭಾರತದ ರಾಷ್ಟ್ರಪತಿಯವರಿಗೆ ಪ್ರಧಾನಿ ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್ ಅವರು ಪ್ರಸ್ತುತ ಸಿಜೆಐ ನಂತರದಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಆದ್ದರಿಂದ ಹಿರಿತನದ ಆಧಾರದಲ್ಲಿ ಅವರನ್ನು ಸಂಪ್ರದಾಯದಂತೆ ಸಿಜೆಐ ಆಗಿ ನೇಮಿಸಲು ಶಿಫಾರಸ್ಸು ಮಾಡಲಾಗಿದೆ.

ಸಿಜೆಐ ನೇಮಕವನ್ನು ಸರ್ಕಾರ ಮತ್ತು ನ್ಯಾಯಾಂಗವು ಒಪ್ಪಿಗೆ ನೀಡುವ ಮೆಮೊರಾಂಡಮ್ ಆಫ್ ಪ್ರೊಸೀಜರ್ (ಎಂಒಪಿ) ಮೂಲಕ ನಿರ್ಧರಿಸಲಾಗುತ್ತದೆ. 1981, 1993 ಮತ್ತು 1998ರ ಮೂರು ನ್ಯಾಯಾಧೀಶರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ತಾಳಿದ ನಿರ್ಧಾರಗಳನ್ನು ಆಧರಿಸಿ ಎಂಒಪಿ ರೂಪುಗೊಂಡಿದೆ. ಹಿರಿಯ ನ್ಯಾಯಮೂರ್ತಿಯನ್ನು ನೇಮಿಸುವಂತೆ ಎಂಒಪಿ ಸೂಚಿಸುತ್ತದೆ.

ಸಿಜೆಐ ನೇಮಕಾತಿಯಲ್ಲಿ ಸಾಂಪ್ರದಾಯಿಕವಾಗಿ ಹಿರಿತನವನ್ನು ಪರಿಗಣಿಸಲಾಗುತ್ತದೆ. ಆದರೆ ಹಿರಿತನವನ್ನು ವಯಸ್ಸಿನಿಂದ ನಿರ್ಧರಿಸಲಾಗುವುದಿಲ್ಲ ಎಂಬುದು ಗಮನಾರ್ಹ. ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕವಾದ ದಿನಾಂಕದಿಂದ ಪರಿಗಣಿಸಿ, ಸೇವೆಯ ಅವಧಿಯ ಆಧಾರದಲ್ಲಿ ಹಿರಿತನವನ್ನು ನಿರ್ಧರಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು.ಯು.ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಂಡರು. ಅವರಿಗಿಂತ ಮೊದಲು ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌.ವಿ. ರಮಣ ಅವರು ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿಯವರು ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ 

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...