Homeಮುಖಪುಟಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಜಸ್ಟೀಸ್‌ ಡಿ.ವೈ.ಚಂದ್ರಚೂಡ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರ ಸಮ್ಮುಖದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

ಸಿಜೆಐ ಯು.ಯು.ಲಲಿತ್ ಅವರು ಶಿಫಾರಸ್ಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಸಿಜೆಐ ಅವರ ಶಿಫಾರಸನ್ನು ಪರಿಗಣಿಸುವುದರ ಜೊತೆಗೆ, ಮುಂದಿನ ಸಿಜೆಐ ಅನ್ನು ಹೆಸರಿಸುವ ಮೊದಲು ಭಾರತದ ರಾಷ್ಟ್ರಪತಿಯವರಿಗೆ ಪ್ರಧಾನಿ ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್ ಅವರು ಪ್ರಸ್ತುತ ಸಿಜೆಐ ನಂತರದಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಆದ್ದರಿಂದ ಹಿರಿತನದ ಆಧಾರದಲ್ಲಿ ಅವರನ್ನು ಸಂಪ್ರದಾಯದಂತೆ ಸಿಜೆಐ ಆಗಿ ನೇಮಿಸಲು ಶಿಫಾರಸ್ಸು ಮಾಡಲಾಗಿದೆ.

ಸಿಜೆಐ ನೇಮಕವನ್ನು ಸರ್ಕಾರ ಮತ್ತು ನ್ಯಾಯಾಂಗವು ಒಪ್ಪಿಗೆ ನೀಡುವ ಮೆಮೊರಾಂಡಮ್ ಆಫ್ ಪ್ರೊಸೀಜರ್ (ಎಂಒಪಿ) ಮೂಲಕ ನಿರ್ಧರಿಸಲಾಗುತ್ತದೆ. 1981, 1993 ಮತ್ತು 1998ರ ಮೂರು ನ್ಯಾಯಾಧೀಶರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ತಾಳಿದ ನಿರ್ಧಾರಗಳನ್ನು ಆಧರಿಸಿ ಎಂಒಪಿ ರೂಪುಗೊಂಡಿದೆ. ಹಿರಿಯ ನ್ಯಾಯಮೂರ್ತಿಯನ್ನು ನೇಮಿಸುವಂತೆ ಎಂಒಪಿ ಸೂಚಿಸುತ್ತದೆ.

ಸಿಜೆಐ ನೇಮಕಾತಿಯಲ್ಲಿ ಸಾಂಪ್ರದಾಯಿಕವಾಗಿ ಹಿರಿತನವನ್ನು ಪರಿಗಣಿಸಲಾಗುತ್ತದೆ. ಆದರೆ ಹಿರಿತನವನ್ನು ವಯಸ್ಸಿನಿಂದ ನಿರ್ಧರಿಸಲಾಗುವುದಿಲ್ಲ ಎಂಬುದು ಗಮನಾರ್ಹ. ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕವಾದ ದಿನಾಂಕದಿಂದ ಪರಿಗಣಿಸಿ, ಸೇವೆಯ ಅವಧಿಯ ಆಧಾರದಲ್ಲಿ ಹಿರಿತನವನ್ನು ನಿರ್ಧರಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು.ಯು.ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಂಡರು. ಅವರಿಗಿಂತ ಮೊದಲು ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌.ವಿ. ರಮಣ ಅವರು ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿಯವರು ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ 

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...