Homeಮುಖಪುಟಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಜಸ್ಟೀಸ್‌ ಡಿ.ವೈ.ಚಂದ್ರಚೂಡ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರ ಸಮ್ಮುಖದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

ಸಿಜೆಐ ಯು.ಯು.ಲಲಿತ್ ಅವರು ಶಿಫಾರಸ್ಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಸಿಜೆಐ ಅವರ ಶಿಫಾರಸನ್ನು ಪರಿಗಣಿಸುವುದರ ಜೊತೆಗೆ, ಮುಂದಿನ ಸಿಜೆಐ ಅನ್ನು ಹೆಸರಿಸುವ ಮೊದಲು ಭಾರತದ ರಾಷ್ಟ್ರಪತಿಯವರಿಗೆ ಪ್ರಧಾನಿ ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್ ಅವರು ಪ್ರಸ್ತುತ ಸಿಜೆಐ ನಂತರದಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಆದ್ದರಿಂದ ಹಿರಿತನದ ಆಧಾರದಲ್ಲಿ ಅವರನ್ನು ಸಂಪ್ರದಾಯದಂತೆ ಸಿಜೆಐ ಆಗಿ ನೇಮಿಸಲು ಶಿಫಾರಸ್ಸು ಮಾಡಲಾಗಿದೆ.

ಸಿಜೆಐ ನೇಮಕವನ್ನು ಸರ್ಕಾರ ಮತ್ತು ನ್ಯಾಯಾಂಗವು ಒಪ್ಪಿಗೆ ನೀಡುವ ಮೆಮೊರಾಂಡಮ್ ಆಫ್ ಪ್ರೊಸೀಜರ್ (ಎಂಒಪಿ) ಮೂಲಕ ನಿರ್ಧರಿಸಲಾಗುತ್ತದೆ. 1981, 1993 ಮತ್ತು 1998ರ ಮೂರು ನ್ಯಾಯಾಧೀಶರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ತಾಳಿದ ನಿರ್ಧಾರಗಳನ್ನು ಆಧರಿಸಿ ಎಂಒಪಿ ರೂಪುಗೊಂಡಿದೆ. ಹಿರಿಯ ನ್ಯಾಯಮೂರ್ತಿಯನ್ನು ನೇಮಿಸುವಂತೆ ಎಂಒಪಿ ಸೂಚಿಸುತ್ತದೆ.

ಸಿಜೆಐ ನೇಮಕಾತಿಯಲ್ಲಿ ಸಾಂಪ್ರದಾಯಿಕವಾಗಿ ಹಿರಿತನವನ್ನು ಪರಿಗಣಿಸಲಾಗುತ್ತದೆ. ಆದರೆ ಹಿರಿತನವನ್ನು ವಯಸ್ಸಿನಿಂದ ನಿರ್ಧರಿಸಲಾಗುವುದಿಲ್ಲ ಎಂಬುದು ಗಮನಾರ್ಹ. ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕವಾದ ದಿನಾಂಕದಿಂದ ಪರಿಗಣಿಸಿ, ಸೇವೆಯ ಅವಧಿಯ ಆಧಾರದಲ್ಲಿ ಹಿರಿತನವನ್ನು ನಿರ್ಧರಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು.ಯು.ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಂಡರು. ಅವರಿಗಿಂತ ಮೊದಲು ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌.ವಿ. ರಮಣ ಅವರು ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿಯವರು ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ 

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...