Homeಮುಖಪುಟಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು:...

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

- Advertisement -
- Advertisement -

ಅಯೋಧ್ಯೆ ರಾಮ ಮಂದಿರ-ಬಾಬರಿ ಮಸೀದಿ ವಿವಾದದ ಕುರಿತ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಇತ್ತೀಚಿನ ಹೇಳಿಕೆಗಳು, 2019ರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಲು ಸಾಕಷ್ಟು ಆಧಾರಗಳನ್ನು ಒದಗಿಸಬಹುದು ಎಂದು ಕಾನೂನು ತಜ್ಞ ಪ್ರೊಫೆಸರ್ ಡಾ.ಮೋಹನ್ ಜಿ. ಗೋಪಾಲ್ ಹೇಳಿದ್ದಾರೆ.

‘ಬಾಬರಿ ಮಸೀದಿ ನಿರ್ಮಾಣವೇ ಮೂಲಭೂತ ಅಪವಿತ್ರ ಕೃತ್ಯ’ ಎಂಬ ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಭಿಪ್ರಾಯವು 2019ರ ತೀರ್ಪಿಗೆ ವಿರುದ್ಧವಾಗಿದೆ ಎಂದು ಪ್ರೊ. ಗೋಪಾಲ್ ಅಭಿಪ್ರಾಯಪಟ್ಟಿದ್ದು, ಮಸೀದಿ ನಿರ್ಮಿಸಲು ದೇವಾಲಯವನ್ನು ನಾಶಪಡಿಸಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದಿದ್ದಾರೆ.

2019ರ ರಾಮ ಮಂದಿರ-ಬಾಬರಿ ಮಸೀದಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಎಸ್.ಎ ಬೊಬ್ಡೆ, ಡಿ.ವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಝೀರ್ ಅವರನ್ನು ಒಳಗೊಂಡ ಪೀಠ ಪ್ರಕಟಿಸಿತ್ತು.

ಈ ತೀರ್ಪು ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಿಂದೂ ಪಕ್ಷಗಳಿಗೆ ಅನುಮತಿ ನೀಡಿತ್ತು. ಮುಸ್ಲಿಂ ಪಕ್ಷಕಾರರು ವಿವಾದಿತ ಸ್ಥಳದ ಮೇಲೆ ತಮ್ಮ ಸಂಪೂರ್ಣ ಹಕ್ಕನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ತೀರ್ಪು ಹೇಳಿತ್ತು. ಇದೇ ವೇಳೆ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ ಎಂದು ತೀರ್ಪು ಹೇಳಿತ್ತು. ಈ ತೀರ್ಪನ್ನು ಮುಖ್ಯವಾಗಿ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರೇ ಬರೆದಿದ್ದಾರೆ ಎಂದು ನಂಬಲಾಗಿದೆ.

ತೀರ್ಪು ಮತ್ತು ನ್ಯಾಯಮೂರ್ತಿ ಚಂದ್ರಚೂಡ್ ಅವರ ನಂತರದ ಹೇಳಿಕೆಗಳ ನಡುವಿನ ಅಸಂಗತತೆಯು, ತೀರ್ಪಿನ ಮೇಲಿನ ಜನರ ವಿಶ್ವಾಸವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಹೊಂದಿದೆ ಪ್ರೊಫೆಸರ್ ಗೋಪಾಲ್ ಅವರು ಹೇಳಿದ್ದಾರೆ.

“ನ್ಯಾಯಾಲಯದ ಅಂತಿಮ ಜವಾಬ್ದಾರಿಯೆಂದರೆ ಜನರಲ್ಲಿ ವಿಶ್ವಾಸವನ್ನು ಮೂಡಿಸುವ ತೀರ್ಪುಗಳನ್ನು ನೀಡುವುದು. ನ್ಯಾಯ ದೊರೆಯಬೇಕು ಎಂದು ಮಾತ್ರವಲ್ಲ, ಅದು ದೊರೆತಿದೆ ಎಂದು ಎಲ್ಲರಿಗೂ, ವಿಶೇಷವಾಗಿ ಪ್ರಕರಣದಲ್ಲಿ ಸೋತವರಿಗೆ ಕಾಣಿಸಬೇಕು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ಅಯೋಧ್ಯೆ ತೀರ್ಪು ತಪ್ಪಾಗಿ ನೀಡಲಾಗಿದೆ. ಈಗ ಪ್ರಶ್ನೆಯೆಂದರೆ, ನ್ಯಾಯಮೂರ್ತಿ ಚಂದ್ರಚೂಡ್ ಅವರು ಹೇಳಿರುವುದನ್ನು ಗಮನದಲ್ಲಿಟ್ಟುಕೊಂಡು, ನಾವು ಒಟ್ಟಾಗಿ ಕ್ಯುರೇಟಿವ್ ಪಿಟಿಷನ್ ಸಲ್ಲಿಸಬೇಕೇ? ಎಂಬುದು, ಬಹುಶಃ ಸಲ್ಲಿಸಬೇಕು. ಏನಾಗುತ್ತದೆ ಎಂದು ನೋಡೋಣ” ಎಂದು ಪ್ರೊ. ಗೋಪಾಲ್ ಹೇಳಿದ್ದಾರೆ.

ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ನಡೆದ ಸಿ.ಎಚ್ ಮೊಹಮ್ಮದ್ ಕೋಯಾ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ವಕೀಲ ಮತ್ತು ಐಯುಎಂಎಲ್ ಸಂಸದ ಹಾರಿಸ್ ಬೀರನ್ ಕೇಳಿದ ಪ್ರಶ್ನೆಗೆ ಪ್ರೊ. ಗೋಪಾಲ್ ಉತ್ತರಿಸಿದ್ದಾರೆ.

2019ರ ಅಯೋಧ್ಯೆ ತೀರ್ಪನ್ನು “ಕೃತಕ” (contrived) ಮತ್ತು “ತರ್ಕರಹಿತ” (unreasoned) ಎಂದು ವಿವರಿಸಿದ ಪ್ರೊ. ಗೋಪಾಲ್, “ತೀರ್ಪಿಗೆ ಸೇರಿಸಲಾದ ಒಂದು ಭಾಗ (ಅಡೆಂಡಮ್) ಸಂಪೂರ್ಣವಾಗಿ ಧಾರ್ಮಿಕ ಆಡಳಿತದಂತಿತ್ತು (theocracy). ಆ ಭಾಗಕ್ಕೆ ಯಾರೂ ಸಹಿ ಮಾಡಿರಲಿಲ್ಲ. ಇಡೀ ತೀರ್ಪೇ ಶಂಕಾಸ್ಪದವಾಗಿದೆ” ಎಂದಿದ್ದಾರೆ.

“ದಯವಿಟ್ಟು ನೀವು ನ್ಯಾಯಪೀಠದಲ್ಲಿರುವಾಗ ನಿಮ್ಮ ಸೈದ್ಧಾಂತಿಕ ದೃಷ್ಟಿಕೋನದ ಬಗ್ಗೆ ಪಾರದರ್ಶಕವಾಗಿರಿ ಎಂದು ನಾನು ನ್ಯಾಯಾಧೀಶರಲ್ಲಿ ಮನವಿ ಮಾಡುತ್ತೇನೆ” ಎಂದ ಪ್ರೊ. ಗೋಪಾಲ್, ನ್ಯಾಯಮೂರ್ತಿ ಚಿನ್ನಪ್ಪ ರೆಡ್ಡಿ ತಾವು ಮಾರ್ಕ್ಸ್‌ವಾದಿ (ಕಮ್ಯೂನಿಸ್ಟ್ ಆಲೋಚನೆಯವರು) ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಕ್ಕಾಗಿ ಪ್ರೊ. ಉಪೇಂದ್ರ ಬಕ್ಷಿ ಅವರನ್ನು ಪ್ರಶಂಸಿಸಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ. “ಇಡಬ್ಲ್ಯುಎಸ್‌ ಮೀಸಲಾತಿ ಪ್ರಕರಣದಲ್ಲಿ, ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಎಸ್. ರವೀಂದ್ರ ಭಟ್ ಆರಂಭದಲ್ಲಿ ಅರ್ಜಿದಾರರ ವಾದಗಳ ಬಗ್ಗೆ ಸಂಶಯ ಹೊಂದಿದ್ದರು ಎಂದು ಮುಕ್ತವಾಗಿ ಹೇಳಿದ್ದರು. ಆದರೆ, ನಂತರ ಆ ವಾದಗಳಲ್ಲಿ ಒಳಿತು ಕಂಡು ಮೀಸಲಾತಿಯನ್ನು ರದ್ದುಗೊಳಿಸಿದರು. ನ್ಯಾಯಾಧೀಶರಿಗೆ ಯಾವುದೇ ಆಲೋಚನೆಗಳು ಇರಬಹುದು. ಆದರೆ, ಅವರು ಪ್ರಾಮಾಣಿಕರಾಗಿರಬೇಕು, ಸತ್ಯವನ್ನು ಹೇಳಬೇಕು ಮತ್ತು ತಮ್ಮ ದೃಷ್ಟಿಕೋನವನ್ನು ಮರೆಮಾಚದೆ ತಿಳಿಸಬೇಕು “ಎಂದಿದ್ದಾರೆ. 

ನ್ಯಾ. ಚಂದ್ರಚೂಡ್ ಅವರಿಗೆ ಅಯೋಧ್ಯೆ ವಿವಾದದ ಬಗ್ಗೆ ತೀವ್ರವಾದ ವೈಯಕ್ತಿಕ ನಂಬಿಕೆಗಳಿದ್ದರೆ (ಉದಾಹರಣೆಗೆ, ಮಸೀದಿಯನ್ನು ದೇವಾಲಯದ ಮೇಲೆ ಕಟ್ಟಿದ್ದು ‘ಅಪವಿತ್ರ’ ಎಂದು ಭಾವಿಸಿದ್ದರೆ), ಅವರು ಈ ಪ್ರಕರಣದ ತೀರ್ಪಿನಿಂದ ದೂರ ಉಳಿಯಬೇಕಿತ್ತು ಪ್ರೊ. ಗೋಪಾಲ್ ಅಭಿಪ್ರಾಯಪಟ್ಟಿದ್ದಾರೆ.

“ಚಂದ್ರಚೂಡ್ ಅವರು ಒಬ್ಬ ಒಳ್ಳೆಯ ನ್ಯಾಯಾಧೀಶ ಮತ್ತು ನನ್ನ ಸ್ನೇಹಿತರಾಗಿದ್ದರೂ, ಅಯೋಧ್ಯೆ ಪ್ರಕರಣದಲ್ಲಿ ಅವರು ತಮ್ಮ ವೈಯಕ್ತಿಕ ನಂಬಿಕೆಗಳ ಬಗ್ಗೆ (ಉದಾಹರಣೆಗೆ, ಬಾಬರಿ ಮಸೀದಿಯನ್ನು ‘ಅಪವಿತ್ರ’ ಎಂದು ಭಾವಿಸಿದ್ದು) ಪಾರದರ್ಶಕವಾಗಿರಲಿಲ್ಲವೇ?” ಎಂದು ಗೋಪಾಲ್ ಪ್ರಶ್ನಿಸಿದ್ದಾರೆ.

“ನ್ಯಾಯಮೂರ್ತಿ ಚಂದ್ರಚೂಡ್ ಅವರ ಇತ್ತೀಚಿನ ಹೇಳಿಕೆಗಳಿಂದಾಗಿ 2019ರ ಅಯೋಧ್ಯೆ ತೀರ್ಪು ಈಗ ‘ದೋಷಪೂರಿತ’ವಾಗಿದೆ (ಅಂದರೆ, ತಪ್ಪಿತ್ತು ಎಂದು ಪರಿಗಣಿಸಬಹುದು) ಕ್ಯುರೇಟಿವ್ ಪಿಟಿಷನ್ (ಪುನಃಪರಿಶೀಲನಾ ಅರ್ಜಿ) ಸಲ್ಲಿಸುವುದು ಜನರ ಅಭಿಪ್ರಾಯವನ್ನು ರೂಪಿಸಲು ಮತ್ತು ಅಯೋಧ್ಯೆ ಪ್ರಕರಣದಲ್ಲಿ ನಿಜವಾಗಿ ಏನಾಯಿತು ಎಂದು ಜನರಿಗೆ ತಿಳಿಸಲು ಒಂದು ಅವಕಾಶವಾಗಿದೆ” ಎಂದು ಪ್ರೊ. ಗೋಪಾಲ್ ಹೇಳಿದ್ದಾರೆ,

“ನ್ಯಾಯಮೂರ್ತಿ ಚಂದ್ರಚೂಡ್ ಅವರು ಏನು ಹೇಳಿದ್ದಾರೆ ಎಂದು ತಿಳಿದುಕೊಳ್ಳೋಣ ಮತ್ತು ಕ್ಯುರೇಟಿವ್ ಪಿಟಿಷನ್ (ಪುನಃಪರಿಶೀಲನಾ ಅರ್ಜಿ) ಸಲ್ಲಿಸಲು ಕೆಲಸ ಮಾಡೋಣ. ಈ ಇಡೀ ವಿಷಯವನ್ನು ಮತ್ತೆ ವಿಚಾರಣೆ ಮಾಡಬೇಕೆಂದು ಕೋರೋಣ. ಈಗ ಈ ತೀರ್ಪು ದೋಷಪೂರಿತವಾಗಿದೆ. ಈ ರೀತಿಯ ಪ್ರತಿಕ್ರಿಯೆಯ ಮೂಲಕ ನಾವು ಜನರ ಅಭಿಪ್ರಾಯವನ್ನು ರೂಪಿಸಬಹುದು. ಚಂದ್ರಚೂಡ್ ಅವರ ಹೇಳಿಕೆಗಳನ್ನು ಒಂದು ಅವಕಾಶವಾಗಿ ಬಳಸಿಕೊಂಡು, ಈ ಪ್ರಕರಣದಲ್ಲಿ ನಿಜವಾಗಿ ಏನಾಯಿತು ಎಂದು ಜನರಿಗೆ ಮನವರಿಕೆ ಮಾಡೋಣ ಮತ್ತು ಸಾಧ್ಯವಾದರೆ ಕೋರ್ಟ್‌ಗೆ ಹೋಗಿ ಈ ಪ್ರಕರಣವನ್ನು ಮತ್ತೆ ವಿಚಾರಣೆಗೆ ಒಳಪಡಿಸುವಂತೆ ಮಾಡೋಣ” ಎಂದು ಪ್ರೊ. ಮೋಹನ್ ಜಿ. ಗೋಪಾಲ್ ಹೇಳಿದ್ದಾರೆ.

ಇತ್ತೀಚೆಗೆ ದಿ ವೈರ್‌ನ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರಿಗೆ ನೀಡಿದ ಸಂದರ್ಶನದಲ್ಲಿ, ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು “ಬಾಬರಿ ಮಸೀದಿ ನಿರ್ಮಾಣವೇ ಅಪವಿತ್ರ” ಎಂದು ಹೇಳಿದ್ದಾರೆ. ತೀರ್ಪಿನಲ್ಲಿ ದಾಖಲಾದ ಅಂಶಗಳಿಗೆ ವಿರುದ್ಧವಾಗಿರುವ ಈ ಹೇಳಿಕೆ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Now it’s established that the Ayodhya judgement is a chief justice has not followed justice. .He being a Hindu and he was supporter of VHP and BJP he has killed the justice. Even at that time Vajpayee was also felt that justice was denied . He wasn’t happy with the concocted judgement.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...