Homeಮುಖಪುಟಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು:...

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

- Advertisement -
- Advertisement -

ಅಯೋಧ್ಯೆ ರಾಮ ಮಂದಿರ-ಬಾಬರಿ ಮಸೀದಿ ವಿವಾದದ ಕುರಿತ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಇತ್ತೀಚಿನ ಹೇಳಿಕೆಗಳು, 2019ರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಲು ಸಾಕಷ್ಟು ಆಧಾರಗಳನ್ನು ಒದಗಿಸಬಹುದು ಎಂದು ಕಾನೂನು ತಜ್ಞ ಪ್ರೊಫೆಸರ್ ಡಾ.ಮೋಹನ್ ಜಿ. ಗೋಪಾಲ್ ಹೇಳಿದ್ದಾರೆ.

‘ಬಾಬರಿ ಮಸೀದಿ ನಿರ್ಮಾಣವೇ ಮೂಲಭೂತ ಅಪವಿತ್ರ ಕೃತ್ಯ’ ಎಂಬ ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಭಿಪ್ರಾಯವು 2019ರ ತೀರ್ಪಿಗೆ ವಿರುದ್ಧವಾಗಿದೆ ಎಂದು ಪ್ರೊ. ಗೋಪಾಲ್ ಅಭಿಪ್ರಾಯಪಟ್ಟಿದ್ದು, ಮಸೀದಿ ನಿರ್ಮಿಸಲು ದೇವಾಲಯವನ್ನು ನಾಶಪಡಿಸಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದಿದ್ದಾರೆ.

2019ರ ರಾಮ ಮಂದಿರ-ಬಾಬರಿ ಮಸೀದಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಎಸ್.ಎ ಬೊಬ್ಡೆ, ಡಿ.ವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಝೀರ್ ಅವರನ್ನು ಒಳಗೊಂಡ ಪೀಠ ಪ್ರಕಟಿಸಿತ್ತು.

ಈ ತೀರ್ಪು ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಿಂದೂ ಪಕ್ಷಗಳಿಗೆ ಅನುಮತಿ ನೀಡಿತ್ತು. ಮುಸ್ಲಿಂ ಪಕ್ಷಕಾರರು ವಿವಾದಿತ ಸ್ಥಳದ ಮೇಲೆ ತಮ್ಮ ಸಂಪೂರ್ಣ ಹಕ್ಕನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ತೀರ್ಪು ಹೇಳಿತ್ತು. ಇದೇ ವೇಳೆ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ ಎಂದು ತೀರ್ಪು ಹೇಳಿತ್ತು. ಈ ತೀರ್ಪನ್ನು ಮುಖ್ಯವಾಗಿ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರೇ ಬರೆದಿದ್ದಾರೆ ಎಂದು ನಂಬಲಾಗಿದೆ.

ತೀರ್ಪು ಮತ್ತು ನ್ಯಾಯಮೂರ್ತಿ ಚಂದ್ರಚೂಡ್ ಅವರ ನಂತರದ ಹೇಳಿಕೆಗಳ ನಡುವಿನ ಅಸಂಗತತೆಯು, ತೀರ್ಪಿನ ಮೇಲಿನ ಜನರ ವಿಶ್ವಾಸವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಹೊಂದಿದೆ ಪ್ರೊಫೆಸರ್ ಗೋಪಾಲ್ ಅವರು ಹೇಳಿದ್ದಾರೆ.

“ನ್ಯಾಯಾಲಯದ ಅಂತಿಮ ಜವಾಬ್ದಾರಿಯೆಂದರೆ ಜನರಲ್ಲಿ ವಿಶ್ವಾಸವನ್ನು ಮೂಡಿಸುವ ತೀರ್ಪುಗಳನ್ನು ನೀಡುವುದು. ನ್ಯಾಯ ದೊರೆಯಬೇಕು ಎಂದು ಮಾತ್ರವಲ್ಲ, ಅದು ದೊರೆತಿದೆ ಎಂದು ಎಲ್ಲರಿಗೂ, ವಿಶೇಷವಾಗಿ ಪ್ರಕರಣದಲ್ಲಿ ಸೋತವರಿಗೆ ಕಾಣಿಸಬೇಕು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ಅಯೋಧ್ಯೆ ತೀರ್ಪು ತಪ್ಪಾಗಿ ನೀಡಲಾಗಿದೆ. ಈಗ ಪ್ರಶ್ನೆಯೆಂದರೆ, ನ್ಯಾಯಮೂರ್ತಿ ಚಂದ್ರಚೂಡ್ ಅವರು ಹೇಳಿರುವುದನ್ನು ಗಮನದಲ್ಲಿಟ್ಟುಕೊಂಡು, ನಾವು ಒಟ್ಟಾಗಿ ಕ್ಯುರೇಟಿವ್ ಪಿಟಿಷನ್ ಸಲ್ಲಿಸಬೇಕೇ? ಎಂಬುದು, ಬಹುಶಃ ಸಲ್ಲಿಸಬೇಕು. ಏನಾಗುತ್ತದೆ ಎಂದು ನೋಡೋಣ” ಎಂದು ಪ್ರೊ. ಗೋಪಾಲ್ ಹೇಳಿದ್ದಾರೆ.

ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ನಡೆದ ಸಿ.ಎಚ್ ಮೊಹಮ್ಮದ್ ಕೋಯಾ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ವಕೀಲ ಮತ್ತು ಐಯುಎಂಎಲ್ ಸಂಸದ ಹಾರಿಸ್ ಬೀರನ್ ಕೇಳಿದ ಪ್ರಶ್ನೆಗೆ ಪ್ರೊ. ಗೋಪಾಲ್ ಉತ್ತರಿಸಿದ್ದಾರೆ.

2019ರ ಅಯೋಧ್ಯೆ ತೀರ್ಪನ್ನು “ಕೃತಕ” (contrived) ಮತ್ತು “ತರ್ಕರಹಿತ” (unreasoned) ಎಂದು ವಿವರಿಸಿದ ಪ್ರೊ. ಗೋಪಾಲ್, “ತೀರ್ಪಿಗೆ ಸೇರಿಸಲಾದ ಒಂದು ಭಾಗ (ಅಡೆಂಡಮ್) ಸಂಪೂರ್ಣವಾಗಿ ಧಾರ್ಮಿಕ ಆಡಳಿತದಂತಿತ್ತು (theocracy). ಆ ಭಾಗಕ್ಕೆ ಯಾರೂ ಸಹಿ ಮಾಡಿರಲಿಲ್ಲ. ಇಡೀ ತೀರ್ಪೇ ಶಂಕಾಸ್ಪದವಾಗಿದೆ” ಎಂದಿದ್ದಾರೆ.

“ದಯವಿಟ್ಟು ನೀವು ನ್ಯಾಯಪೀಠದಲ್ಲಿರುವಾಗ ನಿಮ್ಮ ಸೈದ್ಧಾಂತಿಕ ದೃಷ್ಟಿಕೋನದ ಬಗ್ಗೆ ಪಾರದರ್ಶಕವಾಗಿರಿ ಎಂದು ನಾನು ನ್ಯಾಯಾಧೀಶರಲ್ಲಿ ಮನವಿ ಮಾಡುತ್ತೇನೆ” ಎಂದ ಪ್ರೊ. ಗೋಪಾಲ್, ನ್ಯಾಯಮೂರ್ತಿ ಚಿನ್ನಪ್ಪ ರೆಡ್ಡಿ ತಾವು ಮಾರ್ಕ್ಸ್‌ವಾದಿ (ಕಮ್ಯೂನಿಸ್ಟ್ ಆಲೋಚನೆಯವರು) ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಕ್ಕಾಗಿ ಪ್ರೊ. ಉಪೇಂದ್ರ ಬಕ್ಷಿ ಅವರನ್ನು ಪ್ರಶಂಸಿಸಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ. “ಇಡಬ್ಲ್ಯುಎಸ್‌ ಮೀಸಲಾತಿ ಪ್ರಕರಣದಲ್ಲಿ, ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಎಸ್. ರವೀಂದ್ರ ಭಟ್ ಆರಂಭದಲ್ಲಿ ಅರ್ಜಿದಾರರ ವಾದಗಳ ಬಗ್ಗೆ ಸಂಶಯ ಹೊಂದಿದ್ದರು ಎಂದು ಮುಕ್ತವಾಗಿ ಹೇಳಿದ್ದರು. ಆದರೆ, ನಂತರ ಆ ವಾದಗಳಲ್ಲಿ ಒಳಿತು ಕಂಡು ಮೀಸಲಾತಿಯನ್ನು ರದ್ದುಗೊಳಿಸಿದರು. ನ್ಯಾಯಾಧೀಶರಿಗೆ ಯಾವುದೇ ಆಲೋಚನೆಗಳು ಇರಬಹುದು. ಆದರೆ, ಅವರು ಪ್ರಾಮಾಣಿಕರಾಗಿರಬೇಕು, ಸತ್ಯವನ್ನು ಹೇಳಬೇಕು ಮತ್ತು ತಮ್ಮ ದೃಷ್ಟಿಕೋನವನ್ನು ಮರೆಮಾಚದೆ ತಿಳಿಸಬೇಕು “ಎಂದಿದ್ದಾರೆ. 

ನ್ಯಾ. ಚಂದ್ರಚೂಡ್ ಅವರಿಗೆ ಅಯೋಧ್ಯೆ ವಿವಾದದ ಬಗ್ಗೆ ತೀವ್ರವಾದ ವೈಯಕ್ತಿಕ ನಂಬಿಕೆಗಳಿದ್ದರೆ (ಉದಾಹರಣೆಗೆ, ಮಸೀದಿಯನ್ನು ದೇವಾಲಯದ ಮೇಲೆ ಕಟ್ಟಿದ್ದು ‘ಅಪವಿತ್ರ’ ಎಂದು ಭಾವಿಸಿದ್ದರೆ), ಅವರು ಈ ಪ್ರಕರಣದ ತೀರ್ಪಿನಿಂದ ದೂರ ಉಳಿಯಬೇಕಿತ್ತು ಪ್ರೊ. ಗೋಪಾಲ್ ಅಭಿಪ್ರಾಯಪಟ್ಟಿದ್ದಾರೆ.

“ಚಂದ್ರಚೂಡ್ ಅವರು ಒಬ್ಬ ಒಳ್ಳೆಯ ನ್ಯಾಯಾಧೀಶ ಮತ್ತು ನನ್ನ ಸ್ನೇಹಿತರಾಗಿದ್ದರೂ, ಅಯೋಧ್ಯೆ ಪ್ರಕರಣದಲ್ಲಿ ಅವರು ತಮ್ಮ ವೈಯಕ್ತಿಕ ನಂಬಿಕೆಗಳ ಬಗ್ಗೆ (ಉದಾಹರಣೆಗೆ, ಬಾಬರಿ ಮಸೀದಿಯನ್ನು ‘ಅಪವಿತ್ರ’ ಎಂದು ಭಾವಿಸಿದ್ದು) ಪಾರದರ್ಶಕವಾಗಿರಲಿಲ್ಲವೇ?” ಎಂದು ಗೋಪಾಲ್ ಪ್ರಶ್ನಿಸಿದ್ದಾರೆ.

“ನ್ಯಾಯಮೂರ್ತಿ ಚಂದ್ರಚೂಡ್ ಅವರ ಇತ್ತೀಚಿನ ಹೇಳಿಕೆಗಳಿಂದಾಗಿ 2019ರ ಅಯೋಧ್ಯೆ ತೀರ್ಪು ಈಗ ‘ದೋಷಪೂರಿತ’ವಾಗಿದೆ (ಅಂದರೆ, ತಪ್ಪಿತ್ತು ಎಂದು ಪರಿಗಣಿಸಬಹುದು) ಕ್ಯುರೇಟಿವ್ ಪಿಟಿಷನ್ (ಪುನಃಪರಿಶೀಲನಾ ಅರ್ಜಿ) ಸಲ್ಲಿಸುವುದು ಜನರ ಅಭಿಪ್ರಾಯವನ್ನು ರೂಪಿಸಲು ಮತ್ತು ಅಯೋಧ್ಯೆ ಪ್ರಕರಣದಲ್ಲಿ ನಿಜವಾಗಿ ಏನಾಯಿತು ಎಂದು ಜನರಿಗೆ ತಿಳಿಸಲು ಒಂದು ಅವಕಾಶವಾಗಿದೆ” ಎಂದು ಪ್ರೊ. ಗೋಪಾಲ್ ಹೇಳಿದ್ದಾರೆ,

“ನ್ಯಾಯಮೂರ್ತಿ ಚಂದ್ರಚೂಡ್ ಅವರು ಏನು ಹೇಳಿದ್ದಾರೆ ಎಂದು ತಿಳಿದುಕೊಳ್ಳೋಣ ಮತ್ತು ಕ್ಯುರೇಟಿವ್ ಪಿಟಿಷನ್ (ಪುನಃಪರಿಶೀಲನಾ ಅರ್ಜಿ) ಸಲ್ಲಿಸಲು ಕೆಲಸ ಮಾಡೋಣ. ಈ ಇಡೀ ವಿಷಯವನ್ನು ಮತ್ತೆ ವಿಚಾರಣೆ ಮಾಡಬೇಕೆಂದು ಕೋರೋಣ. ಈಗ ಈ ತೀರ್ಪು ದೋಷಪೂರಿತವಾಗಿದೆ. ಈ ರೀತಿಯ ಪ್ರತಿಕ್ರಿಯೆಯ ಮೂಲಕ ನಾವು ಜನರ ಅಭಿಪ್ರಾಯವನ್ನು ರೂಪಿಸಬಹುದು. ಚಂದ್ರಚೂಡ್ ಅವರ ಹೇಳಿಕೆಗಳನ್ನು ಒಂದು ಅವಕಾಶವಾಗಿ ಬಳಸಿಕೊಂಡು, ಈ ಪ್ರಕರಣದಲ್ಲಿ ನಿಜವಾಗಿ ಏನಾಯಿತು ಎಂದು ಜನರಿಗೆ ಮನವರಿಕೆ ಮಾಡೋಣ ಮತ್ತು ಸಾಧ್ಯವಾದರೆ ಕೋರ್ಟ್‌ಗೆ ಹೋಗಿ ಈ ಪ್ರಕರಣವನ್ನು ಮತ್ತೆ ವಿಚಾರಣೆಗೆ ಒಳಪಡಿಸುವಂತೆ ಮಾಡೋಣ” ಎಂದು ಪ್ರೊ. ಮೋಹನ್ ಜಿ. ಗೋಪಾಲ್ ಹೇಳಿದ್ದಾರೆ.

ಇತ್ತೀಚೆಗೆ ದಿ ವೈರ್‌ನ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರಿಗೆ ನೀಡಿದ ಸಂದರ್ಶನದಲ್ಲಿ, ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು “ಬಾಬರಿ ಮಸೀದಿ ನಿರ್ಮಾಣವೇ ಅಪವಿತ್ರ” ಎಂದು ಹೇಳಿದ್ದಾರೆ. ತೀರ್ಪಿನಲ್ಲಿ ದಾಖಲಾದ ಅಂಶಗಳಿಗೆ ವಿರುದ್ಧವಾಗಿರುವ ಈ ಹೇಳಿಕೆ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Now it’s established that the Ayodhya judgement is a chief justice has not followed justice. .He being a Hindu and he was supporter of VHP and BJP he has killed the justice. Even at that time Vajpayee was also felt that justice was denied . He wasn’t happy with the concocted judgement.

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...