Homeಮುಖಪುಟಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು:...

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

- Advertisement -
- Advertisement -

ಅಯೋಧ್ಯೆ ರಾಮ ಮಂದಿರ-ಬಾಬರಿ ಮಸೀದಿ ವಿವಾದದ ಕುರಿತ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಇತ್ತೀಚಿನ ಹೇಳಿಕೆಗಳು, 2019ರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಲು ಸಾಕಷ್ಟು ಆಧಾರಗಳನ್ನು ಒದಗಿಸಬಹುದು ಎಂದು ಕಾನೂನು ತಜ್ಞ ಪ್ರೊಫೆಸರ್ ಡಾ.ಮೋಹನ್ ಜಿ. ಗೋಪಾಲ್ ಹೇಳಿದ್ದಾರೆ.

‘ಬಾಬರಿ ಮಸೀದಿ ನಿರ್ಮಾಣವೇ ಮೂಲಭೂತ ಅಪವಿತ್ರ ಕೃತ್ಯ’ ಎಂಬ ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಭಿಪ್ರಾಯವು 2019ರ ತೀರ್ಪಿಗೆ ವಿರುದ್ಧವಾಗಿದೆ ಎಂದು ಪ್ರೊ. ಗೋಪಾಲ್ ಅಭಿಪ್ರಾಯಪಟ್ಟಿದ್ದು, ಮಸೀದಿ ನಿರ್ಮಿಸಲು ದೇವಾಲಯವನ್ನು ನಾಶಪಡಿಸಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದಿದ್ದಾರೆ.

2019ರ ರಾಮ ಮಂದಿರ-ಬಾಬರಿ ಮಸೀದಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಎಸ್.ಎ ಬೊಬ್ಡೆ, ಡಿ.ವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಝೀರ್ ಅವರನ್ನು ಒಳಗೊಂಡ ಪೀಠ ಪ್ರಕಟಿಸಿತ್ತು.

ಈ ತೀರ್ಪು ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಿಂದೂ ಪಕ್ಷಗಳಿಗೆ ಅನುಮತಿ ನೀಡಿತ್ತು. ಮುಸ್ಲಿಂ ಪಕ್ಷಕಾರರು ವಿವಾದಿತ ಸ್ಥಳದ ಮೇಲೆ ತಮ್ಮ ಸಂಪೂರ್ಣ ಹಕ್ಕನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ತೀರ್ಪು ಹೇಳಿತ್ತು. ಇದೇ ವೇಳೆ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ ಎಂದು ತೀರ್ಪು ಹೇಳಿತ್ತು. ಈ ತೀರ್ಪನ್ನು ಮುಖ್ಯವಾಗಿ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರೇ ಬರೆದಿದ್ದಾರೆ ಎಂದು ನಂಬಲಾಗಿದೆ.

ತೀರ್ಪು ಮತ್ತು ನ್ಯಾಯಮೂರ್ತಿ ಚಂದ್ರಚೂಡ್ ಅವರ ನಂತರದ ಹೇಳಿಕೆಗಳ ನಡುವಿನ ಅಸಂಗತತೆಯು, ತೀರ್ಪಿನ ಮೇಲಿನ ಜನರ ವಿಶ್ವಾಸವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಹೊಂದಿದೆ ಪ್ರೊಫೆಸರ್ ಗೋಪಾಲ್ ಅವರು ಹೇಳಿದ್ದಾರೆ.

“ನ್ಯಾಯಾಲಯದ ಅಂತಿಮ ಜವಾಬ್ದಾರಿಯೆಂದರೆ ಜನರಲ್ಲಿ ವಿಶ್ವಾಸವನ್ನು ಮೂಡಿಸುವ ತೀರ್ಪುಗಳನ್ನು ನೀಡುವುದು. ನ್ಯಾಯ ದೊರೆಯಬೇಕು ಎಂದು ಮಾತ್ರವಲ್ಲ, ಅದು ದೊರೆತಿದೆ ಎಂದು ಎಲ್ಲರಿಗೂ, ವಿಶೇಷವಾಗಿ ಪ್ರಕರಣದಲ್ಲಿ ಸೋತವರಿಗೆ ಕಾಣಿಸಬೇಕು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ಅಯೋಧ್ಯೆ ತೀರ್ಪು ತಪ್ಪಾಗಿ ನೀಡಲಾಗಿದೆ. ಈಗ ಪ್ರಶ್ನೆಯೆಂದರೆ, ನ್ಯಾಯಮೂರ್ತಿ ಚಂದ್ರಚೂಡ್ ಅವರು ಹೇಳಿರುವುದನ್ನು ಗಮನದಲ್ಲಿಟ್ಟುಕೊಂಡು, ನಾವು ಒಟ್ಟಾಗಿ ಕ್ಯುರೇಟಿವ್ ಪಿಟಿಷನ್ ಸಲ್ಲಿಸಬೇಕೇ? ಎಂಬುದು, ಬಹುಶಃ ಸಲ್ಲಿಸಬೇಕು. ಏನಾಗುತ್ತದೆ ಎಂದು ನೋಡೋಣ” ಎಂದು ಪ್ರೊ. ಗೋಪಾಲ್ ಹೇಳಿದ್ದಾರೆ.

ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ನಡೆದ ಸಿ.ಎಚ್ ಮೊಹಮ್ಮದ್ ಕೋಯಾ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ವಕೀಲ ಮತ್ತು ಐಯುಎಂಎಲ್ ಸಂಸದ ಹಾರಿಸ್ ಬೀರನ್ ಕೇಳಿದ ಪ್ರಶ್ನೆಗೆ ಪ್ರೊ. ಗೋಪಾಲ್ ಉತ್ತರಿಸಿದ್ದಾರೆ.

2019ರ ಅಯೋಧ್ಯೆ ತೀರ್ಪನ್ನು “ಕೃತಕ” (contrived) ಮತ್ತು “ತರ್ಕರಹಿತ” (unreasoned) ಎಂದು ವಿವರಿಸಿದ ಪ್ರೊ. ಗೋಪಾಲ್, “ತೀರ್ಪಿಗೆ ಸೇರಿಸಲಾದ ಒಂದು ಭಾಗ (ಅಡೆಂಡಮ್) ಸಂಪೂರ್ಣವಾಗಿ ಧಾರ್ಮಿಕ ಆಡಳಿತದಂತಿತ್ತು (theocracy). ಆ ಭಾಗಕ್ಕೆ ಯಾರೂ ಸಹಿ ಮಾಡಿರಲಿಲ್ಲ. ಇಡೀ ತೀರ್ಪೇ ಶಂಕಾಸ್ಪದವಾಗಿದೆ” ಎಂದಿದ್ದಾರೆ.

“ದಯವಿಟ್ಟು ನೀವು ನ್ಯಾಯಪೀಠದಲ್ಲಿರುವಾಗ ನಿಮ್ಮ ಸೈದ್ಧಾಂತಿಕ ದೃಷ್ಟಿಕೋನದ ಬಗ್ಗೆ ಪಾರದರ್ಶಕವಾಗಿರಿ ಎಂದು ನಾನು ನ್ಯಾಯಾಧೀಶರಲ್ಲಿ ಮನವಿ ಮಾಡುತ್ತೇನೆ” ಎಂದ ಪ್ರೊ. ಗೋಪಾಲ್, ನ್ಯಾಯಮೂರ್ತಿ ಚಿನ್ನಪ್ಪ ರೆಡ್ಡಿ ತಾವು ಮಾರ್ಕ್ಸ್‌ವಾದಿ (ಕಮ್ಯೂನಿಸ್ಟ್ ಆಲೋಚನೆಯವರು) ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಕ್ಕಾಗಿ ಪ್ರೊ. ಉಪೇಂದ್ರ ಬಕ್ಷಿ ಅವರನ್ನು ಪ್ರಶಂಸಿಸಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ. “ಇಡಬ್ಲ್ಯುಎಸ್‌ ಮೀಸಲಾತಿ ಪ್ರಕರಣದಲ್ಲಿ, ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಎಸ್. ರವೀಂದ್ರ ಭಟ್ ಆರಂಭದಲ್ಲಿ ಅರ್ಜಿದಾರರ ವಾದಗಳ ಬಗ್ಗೆ ಸಂಶಯ ಹೊಂದಿದ್ದರು ಎಂದು ಮುಕ್ತವಾಗಿ ಹೇಳಿದ್ದರು. ಆದರೆ, ನಂತರ ಆ ವಾದಗಳಲ್ಲಿ ಒಳಿತು ಕಂಡು ಮೀಸಲಾತಿಯನ್ನು ರದ್ದುಗೊಳಿಸಿದರು. ನ್ಯಾಯಾಧೀಶರಿಗೆ ಯಾವುದೇ ಆಲೋಚನೆಗಳು ಇರಬಹುದು. ಆದರೆ, ಅವರು ಪ್ರಾಮಾಣಿಕರಾಗಿರಬೇಕು, ಸತ್ಯವನ್ನು ಹೇಳಬೇಕು ಮತ್ತು ತಮ್ಮ ದೃಷ್ಟಿಕೋನವನ್ನು ಮರೆಮಾಚದೆ ತಿಳಿಸಬೇಕು “ಎಂದಿದ್ದಾರೆ. 

ನ್ಯಾ. ಚಂದ್ರಚೂಡ್ ಅವರಿಗೆ ಅಯೋಧ್ಯೆ ವಿವಾದದ ಬಗ್ಗೆ ತೀವ್ರವಾದ ವೈಯಕ್ತಿಕ ನಂಬಿಕೆಗಳಿದ್ದರೆ (ಉದಾಹರಣೆಗೆ, ಮಸೀದಿಯನ್ನು ದೇವಾಲಯದ ಮೇಲೆ ಕಟ್ಟಿದ್ದು ‘ಅಪವಿತ್ರ’ ಎಂದು ಭಾವಿಸಿದ್ದರೆ), ಅವರು ಈ ಪ್ರಕರಣದ ತೀರ್ಪಿನಿಂದ ದೂರ ಉಳಿಯಬೇಕಿತ್ತು ಪ್ರೊ. ಗೋಪಾಲ್ ಅಭಿಪ್ರಾಯಪಟ್ಟಿದ್ದಾರೆ.

“ಚಂದ್ರಚೂಡ್ ಅವರು ಒಬ್ಬ ಒಳ್ಳೆಯ ನ್ಯಾಯಾಧೀಶ ಮತ್ತು ನನ್ನ ಸ್ನೇಹಿತರಾಗಿದ್ದರೂ, ಅಯೋಧ್ಯೆ ಪ್ರಕರಣದಲ್ಲಿ ಅವರು ತಮ್ಮ ವೈಯಕ್ತಿಕ ನಂಬಿಕೆಗಳ ಬಗ್ಗೆ (ಉದಾಹರಣೆಗೆ, ಬಾಬರಿ ಮಸೀದಿಯನ್ನು ‘ಅಪವಿತ್ರ’ ಎಂದು ಭಾವಿಸಿದ್ದು) ಪಾರದರ್ಶಕವಾಗಿರಲಿಲ್ಲವೇ?” ಎಂದು ಗೋಪಾಲ್ ಪ್ರಶ್ನಿಸಿದ್ದಾರೆ.

“ನ್ಯಾಯಮೂರ್ತಿ ಚಂದ್ರಚೂಡ್ ಅವರ ಇತ್ತೀಚಿನ ಹೇಳಿಕೆಗಳಿಂದಾಗಿ 2019ರ ಅಯೋಧ್ಯೆ ತೀರ್ಪು ಈಗ ‘ದೋಷಪೂರಿತ’ವಾಗಿದೆ (ಅಂದರೆ, ತಪ್ಪಿತ್ತು ಎಂದು ಪರಿಗಣಿಸಬಹುದು) ಕ್ಯುರೇಟಿವ್ ಪಿಟಿಷನ್ (ಪುನಃಪರಿಶೀಲನಾ ಅರ್ಜಿ) ಸಲ್ಲಿಸುವುದು ಜನರ ಅಭಿಪ್ರಾಯವನ್ನು ರೂಪಿಸಲು ಮತ್ತು ಅಯೋಧ್ಯೆ ಪ್ರಕರಣದಲ್ಲಿ ನಿಜವಾಗಿ ಏನಾಯಿತು ಎಂದು ಜನರಿಗೆ ತಿಳಿಸಲು ಒಂದು ಅವಕಾಶವಾಗಿದೆ” ಎಂದು ಪ್ರೊ. ಗೋಪಾಲ್ ಹೇಳಿದ್ದಾರೆ,

“ನ್ಯಾಯಮೂರ್ತಿ ಚಂದ್ರಚೂಡ್ ಅವರು ಏನು ಹೇಳಿದ್ದಾರೆ ಎಂದು ತಿಳಿದುಕೊಳ್ಳೋಣ ಮತ್ತು ಕ್ಯುರೇಟಿವ್ ಪಿಟಿಷನ್ (ಪುನಃಪರಿಶೀಲನಾ ಅರ್ಜಿ) ಸಲ್ಲಿಸಲು ಕೆಲಸ ಮಾಡೋಣ. ಈ ಇಡೀ ವಿಷಯವನ್ನು ಮತ್ತೆ ವಿಚಾರಣೆ ಮಾಡಬೇಕೆಂದು ಕೋರೋಣ. ಈಗ ಈ ತೀರ್ಪು ದೋಷಪೂರಿತವಾಗಿದೆ. ಈ ರೀತಿಯ ಪ್ರತಿಕ್ರಿಯೆಯ ಮೂಲಕ ನಾವು ಜನರ ಅಭಿಪ್ರಾಯವನ್ನು ರೂಪಿಸಬಹುದು. ಚಂದ್ರಚೂಡ್ ಅವರ ಹೇಳಿಕೆಗಳನ್ನು ಒಂದು ಅವಕಾಶವಾಗಿ ಬಳಸಿಕೊಂಡು, ಈ ಪ್ರಕರಣದಲ್ಲಿ ನಿಜವಾಗಿ ಏನಾಯಿತು ಎಂದು ಜನರಿಗೆ ಮನವರಿಕೆ ಮಾಡೋಣ ಮತ್ತು ಸಾಧ್ಯವಾದರೆ ಕೋರ್ಟ್‌ಗೆ ಹೋಗಿ ಈ ಪ್ರಕರಣವನ್ನು ಮತ್ತೆ ವಿಚಾರಣೆಗೆ ಒಳಪಡಿಸುವಂತೆ ಮಾಡೋಣ” ಎಂದು ಪ್ರೊ. ಮೋಹನ್ ಜಿ. ಗೋಪಾಲ್ ಹೇಳಿದ್ದಾರೆ.

ಇತ್ತೀಚೆಗೆ ದಿ ವೈರ್‌ನ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರಿಗೆ ನೀಡಿದ ಸಂದರ್ಶನದಲ್ಲಿ, ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು “ಬಾಬರಿ ಮಸೀದಿ ನಿರ್ಮಾಣವೇ ಅಪವಿತ್ರ” ಎಂದು ಹೇಳಿದ್ದಾರೆ. ತೀರ್ಪಿನಲ್ಲಿ ದಾಖಲಾದ ಅಂಶಗಳಿಗೆ ವಿರುದ್ಧವಾಗಿರುವ ಈ ಹೇಳಿಕೆ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Now it’s established that the Ayodhya judgement is a chief justice has not followed justice. .He being a Hindu and he was supporter of VHP and BJP he has killed the justice. Even at that time Vajpayee was also felt that justice was denied . He wasn’t happy with the concocted judgement.

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...