Homeಮುಖಪುಟಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಐವರು ಆರೋಪಿಗಳು ದೋಷಿ; ನ್ಯಾಯಾಲಯ ತೀರ್ಪು

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಐವರು ಆರೋಪಿಗಳು ದೋಷಿ; ನ್ಯಾಯಾಲಯ ತೀರ್ಪು

- Advertisement -
- Advertisement -

2008ರಲ್ಲಿ ನಡೆದ ದೆಹಲಿಯ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆಯ ಎಲ್ಲಾ ಐವರು ಆರೋಪಿಗಳನ್ನು ಕೃತ್ಯ ನಡೆದ ಸುಮಾರು ಹದಿನೈದು ವರ್ಷಗಳ ನಂತರ ದೆಹಲಿ ನ್ಯಾಯಾಲಯವು ಬುಧವಾರ ದೋಷಿಗಳೆಂದು ತೀರ್ಪು ನೀಡಿದೆ.

ಹೆಡ್‌ಲೈನ್ಸ್ ಟುಡೆ ಸುದ್ದಿ ವಾಹಿನಿಯಲ್ಲಿ ಪತ್ರಕರ್ತರಾಗಿದ್ದ ವಿಶ್ವನಾಥನ್ ಅವರು ಸೆ. 2008ರಲ್ಲಿ ಮನೆಯಿಂದ ಕಚೇರಿಗೆ ತೆರಳುತ್ತಿದ್ದಾಗ ಅವರ ಕಾರನ್ನು ಹಿಂಬಾಲಿಸಿಕೊಂಡು ಬಂದು ಡ್ರೈವಿಂಗ್ ಮಾಡುತ್ತಿದ್ದ ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್, ಬಲ್ಜೀತ್ ಮಲಿಕ್ ಮತ್ತು ಅಜಯ್ ಸೇಥಿಯನ್ನು ಸಾಕೇತ್ ನ್ಯಾಯಾಲಯ ದೋಷಿಗಳೆಂದು ಇಂದು ತೀರ್ಪು ನೀಡಿದೆ.

ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಸೌಮ್ಯ ವಿಶ್ವನಾಥನ್ ಅವರ ತಾಯಿ, ನಮ್ಮ ಮಗಳು ಹೋಗಿದ್ದಾಳೆ. ಆದರೆ ಬೇರೆಯವರಿಗೆ ಈ ರೀತಿಯಾಗಬಾರದು. ತೀರ್ಪು ನಮಗೆ ಆಶಾಭಾವನೆಯನ್ನು ಮೂಡಿಸಿದೆ ಎಂದು ಹೇಳಿದ್ದಾರೆ.

ಯುವ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರು 2008 ಸೆ.30ರಂದು ದಕ್ಷಿಣ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮೊದಲಿಗೆ ಅಪಘಾತವಾಗಿದೆ ಎಂದು ಬಿಂಬಿಸಲಾಗಿತ್ತು. ಆದರೆ ಬಳಿಕ ಫೋರೆನ್ಸಿಕ್ ವರದಿಗಳು ತಲೆಗೆ ಗುಂಡೇಟಿನಿಂದ ಸಾವು ಸಂಭವಿಸಿದೆ ಎಂದು ಹೇಳಿತ್ತು.

ಸಿಸಿಟಿವಿಯಲ್ಲಿ ಸೌಮ್ಯ ವಿಶ್ವನಾಥನ್ ಅವರ ಕಾರನ್ನು ಹಿಂಬಾಲಿಸುವುದು ಪತ್ತೆಯಾಗಿತ್ತು. ಕಾಲ್‌ ಸೆಂಟರ್‌ ಉದ್ಯೋಗಿಯ ಹತ್ಯೆ ಪ್ರಕರಣ ಮತ್ತು ಸೌಮ್ಯ ಪ್ರಕರಣದಲ್ಲಿ ಸಾಮ್ಯತೆ ಕಂಡು ಬಂದಿತ್ತು. ಪ್ರಕರಣದಲ್ಲಿ ಬಂಧಿತ ರವಿ ಕಪೂರ್ ಮತ್ತು ಅಮಿತ್ ಶುಕ್ಲಾ ಅವರು ಸೌಮ್ಯ ಹತ್ಯೆಯ ಬಗ್ಗೆ ಕೂಡ ಬಾಯ್ಬಿಟ್ಟಿದ್ದರು.

ಈ ಕುರಿತು ಚಾರ್ಜ್ ಶೀಟ್‌ನ್ನು ಜೂನ್ 2010ರಲ್ಲಿ ಸಲ್ಲಿಸಲಾಗಿತ್ತು. ನಂತರ ನವೆಂಬರ್ 2010ರಲ್ಲಿ ವಿಚಾರಣೆ ಪ್ರಾರಂಭವಾಗಿತ್ತು. ಜುಲೈ 2016ರಲ್ಲಿ ವಿಚಾರಣೆ ಮುಕ್ತಾಯವಾಗಿತ್ತು.

ಇದನ್ನು ಓದಿ: ಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...