Homeಮುಖಪುಟಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಸುಪ್ರೀಂ ನೇತೃತ್ವದಲ್ಲಿ ಸಿಬಿಐ ತನಿಖೆ, ಸಾಕ್ಷಿಗಳ ರಕ್ಷಣೆ ಮತ್ತು ಸಂತ್ರಸ್ತೆಯ ಶವ ದಹನದ ಬಗ್ಗೆ ನ್ಯಾಯಾಂಗ ವಿಚಾರಣೆಗಾಗಿ ಸಿಜೆಪಿ ಮನವಿ ಮಾಡಿದೆ.

- Advertisement -
- Advertisement -

ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಸಂಘಟನೆಯು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು (ಐಎ) ಸಲ್ಲಿಸಿದೆ.

ಇಡೀ ಉತ್ತರ ಪ್ರದೇಶ ಸರ್ಕಾರವೇ ಸಂತ್ರಸ್ತ ಕುಟುಂಬದ ವಿರುದ್ಧವಿದೆ. ಅತ್ಯಾಚಾರವೇ ನಡೆದಿಲ್ಲ ಎಂದು ಹಲವರು ಹೇಳುತ್ತಿದ್ದಾರೆ. ಆರೋಪಿಯೊಬ್ಬ ಪೊಲೀಸರಿಗೆ ಪತ್ರ ಬರೆದು ಆಕೆಯೊಂದಿಗೆ ನನಗೆ ಸಂಬಂಧವಿತ್ತು, ಅವರ ಪೋಷಕರೆ ಕೊಂದಿದ್ದಾರೆ ಎಂದಿದ್ದಾನೆ. ಹಲವರು ಇದನ್ನು ಮರ್ಯಾದಹೀನ ಹತ್ಯೆ ಎಂದು ಕರೆದಿದ್ದಾರೆ. ಕುಟುಂಬಕ್ಕೆ ಹಣ ನೀಡಲಾಗಿದೆ ಎಂದು ಇಡಿ ತನಿಖೆ ನಡೆಸುತ್ತಿದೆ. ಇತರ ಕೆಲ ಸಂಘಟನೆಗಳ ಮೇಲೆ ಪೊಲೀಸರು ಗೂಬೆ ಕೂರಿಸುತ್ತಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಬಲಿಪಶು ಮಾಡುತ್ತಿರುವ ಹುನ್ನಾರದ ಹಿನ್ನೆಲೆಯಲ್ಲಿ ಸಿಜೆಪಿ ಸುಪ್ರೀಂನಲ್ಲಿ ಸಲ್ಲಿಸಿದ ಅರ್ಜಿಗೆ ಮಹತ್ವ ಬಂದಿದೆ.

ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವಲ್ಲಿ ನ್ಯಾಯಾಂಗದಲ್ಲಿ ಮತ್ತು ನ್ಯಾಯಾಂಗದ ಹೊರಗೆ ಹೋರಾಟ ನಡೆಸುತ್ತಿರುವ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಯು ಹತ್ರಾಸ್ ಘಟನೆಯಲ್ಲಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯಕ್ಕಾಗಿ ವಕೀಲರಾದ ಅಪರ್ಣ ಭಟ್‌ರವರ ಮೂಲಕ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹೇಳಿದ್ದಾರೆ. ಆಕೆ ಆರೋಪಿಯೊಂದಿಗೆ ಫೋನ್ ಸಂಪರ್ಕದಲ್ಲಿದ್ದಳು ಎಂದು ಮತ್ತೊಬ್ಬ ಪೊಲೀಸ್ ಹೇಳಿದ್ದಾರೆ. “ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಆ ಮಟ್ಟದ ಅಧಿಕಾರಿಯೊಬ್ಬರು ಈ ರೀತಿ ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿರುವುದು ಆತಂಕಕಾರಿಯಾಗಿದೆ ಮತ್ತು ಇದು ಫಲಿತಾಂಶದ ಮೇಲೆ ಪ್ರಭಾವ ಬೀರುತ್ತದೆ. ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಅತ್ಯಂತ ಸೂಕ್ಷ್ಮತೆಯಿಂದ ನಿರ್ವಹಿಸಬೇಕಾಗಿದೆ ಎಂದು ಈ ಮಾನ್ಯ ನ್ಯಾಯಾಲಯವು ಪದೇ ಪದೇ ಹೇಳಿದಾಗ್ಯೂ, ಈ ರೀತಿಯ ಸಂತ್ರಸ್ತೆಯ ವಿರುದ್ಧದ ಲಜ್ಜೆಗೆಟ್ಟ ಹೇಳಿಕೆಗಳು ಹೊರಬರುತ್ತಿವೆ. ಇದನ್ನು ಸುಪ್ರೀಂ ಕೋರ್ಟ್ ಪರೀಶಿಲಿಸಬೇಕು” ಎಂದು ಸಿಜೆಪಿಯ ಅರ್ಜಿಯಲ್ಲಿ ತಿಳಿಸಿದೆ.

ಇನ್ನು ಈ ಪ್ರಕರಣದಲ್ಲಿ ಸಂತ್ರಸ್ತೆಯ ಶವವನ್ನು ಕುಟುಂಬಕ್ಕೆ ಏಕೆ ನೀಡಲಾಗಿಲ್ಲ? ಪೊಲೀಸರು ಮಧ್ಯರಾತ್ರಿ ಏಕೆ ಪೆಟ್ರೋಲ್ ಹಾಕಿ ಸುಟ್ಟರು? ಇಲ್ಲಿ ಆ ಕುಟುಂಬದ ಹಕ್ಕು ಚ್ಯುತಿಯಾಗಿದೆ. ಕುಟುಂಬವು ಐತಿಹಾಸಿಕವಾಗಿ ತುಳಿತಕ್ಕೊಳಗಾದ ದಲಿತ ಸಮುದಾಯದಕ್ಕೆ ಸೇರಿದ್ದು ಅವರಿಗೆ ಬಲಾಢ್ಯ ಬಹುಸಂಖ್ಯಾತರಾದ ಠಾಕೂರರು ದಿನನಿತ್ಯ ಬೆದರಿಕೆ ಹಾಕುತ್ತಿದ್ದಾರೆ. ಹಲವಾರು ‘ಮೇಲ್ಜಾತಿ’ ಗುಂಪುಗಳು ಸಭೆ ಸೇರಿ ತಮ್ಮ ಪರವಾದ ನಿರೂಪಣೆಯನ್ನು ಹರಿಯಬಿಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕುಟುಂಬದ ಸುರಕ್ಷತೆಯೂ ಸಹ ಮಹತ್ವದ್ದಾಗಿದೆ. ಜೊತೆಗೆ ಪ್ರಕರಣದ ಮತ್ತೊಂದು ಪ್ರಮುಖ ಅಂಶವೆಂದರೆ ಸಾಕ್ಷಿ ರಕ್ಷಣೆ. ಇದಕ್ಕಾಗಿ ಯುಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಿಜೆಪಿ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ಸಂತ್ರಸ್ತ ಕುಟುಂಬದ ನಾರ್ಕೊ ಅನಾಲಿಸಿಸ್ ಪರೀಕ್ಷೆ ಮಾಡಿಸಲು ಯುಪಿ ಸರ್ಕಾರ ಮುಂದಾಗಿದ್ದು ಏಕೆ? ಸಂತ್ರಸ್ತ ಯುವತಿ ಸಾವಿನ ಮುನ್ನ ನೀಡಿದ ಹೇಳಿಕೆಗೆ ಬೆಲೆಯಿಲ್ಲವೇ?
ಅತ್ಯಾಚಾರ ಪ್ರಕರಣಗಳಲ್ಲಿ ವಿಧಿವಿಜ್ಞಾನ ವರದಿಗಳು ಮತ್ತು ಇತರ ವೈದ್ಯಕೀಯ ಸಾಕ್ಷ್ಯಗಳ ಪ್ರಸ್ತುತತೆ ಏನು? ಪುರಾವೆಗಳನ್ನು ಸಂರಕ್ಷಿಸುವುದು ರಾಜ್ಯದ ಕರ್ತವ್ಯವಲ್ಲವೇ? ಮಹಿಳೆಯರ ಮೇಲಿನ ಅಪರಾಧಗಳು ಮತ್ತು ದಲಿತರ ವಿರುದ್ಧದ ಅಪರಾಧಗಳ ಬಗ್ಗೆ ಎನ್‌ಸಿಆರ್‌ಬಿ ದತ್ತಾಂಶಗಳ ಹಿನ್ನೆಲೆಯಲ್ಲಿ ತನಿಖೆಯ ವರ್ಗಾವಣೆ ಆಗಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಸಿಜೆಪಿ ಮೂರು ಪ್ರಮುಖ ವಿಷಯಗಳ ಬಗ್ಗೆ ತನ್ನ ಹಕ್ಕೊತ್ತಾಯ ಮಂಡಿಸಿದೆ.

  1. ಅತ್ಯಾಚಾರ, ಹತ್ಯೆಯ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ನಡೆಸಬೇಕು.
  2. ಕೇಂದ್ರ ಅರೆಸೈನಿಕ ಪಡೆಗಳಿಂದ ಸಾಕ್ಷಿಗಳಿಗೆ ಮತ್ತು ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು.
  3. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ, ಕುಟುಂಬದ ಒಪ್ಪಿಗೆಯಿಲ್ಲದೆ ಸಂತ್ರಸ್ತೆಯ ಶವವನ್ನು ಮಧ್ಯರಾತ್ರಿಯಲ್ಲಿ ಸುಟ್ಟಿದ್ದರ ಬಗ್ಗೆ ನ್ಯಾಯಾಂಗ ವಿಚಾರಣೆ ನಡೆಸಬೇಕು.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...