Homeಮುಖಪುಟಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಸುಪ್ರೀಂ ನೇತೃತ್ವದಲ್ಲಿ ಸಿಬಿಐ ತನಿಖೆ, ಸಾಕ್ಷಿಗಳ ರಕ್ಷಣೆ ಮತ್ತು ಸಂತ್ರಸ್ತೆಯ ಶವ ದಹನದ ಬಗ್ಗೆ ನ್ಯಾಯಾಂಗ ವಿಚಾರಣೆಗಾಗಿ ಸಿಜೆಪಿ ಮನವಿ ಮಾಡಿದೆ.

- Advertisement -
- Advertisement -

ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಸಂಘಟನೆಯು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು (ಐಎ) ಸಲ್ಲಿಸಿದೆ.

ಇಡೀ ಉತ್ತರ ಪ್ರದೇಶ ಸರ್ಕಾರವೇ ಸಂತ್ರಸ್ತ ಕುಟುಂಬದ ವಿರುದ್ಧವಿದೆ. ಅತ್ಯಾಚಾರವೇ ನಡೆದಿಲ್ಲ ಎಂದು ಹಲವರು ಹೇಳುತ್ತಿದ್ದಾರೆ. ಆರೋಪಿಯೊಬ್ಬ ಪೊಲೀಸರಿಗೆ ಪತ್ರ ಬರೆದು ಆಕೆಯೊಂದಿಗೆ ನನಗೆ ಸಂಬಂಧವಿತ್ತು, ಅವರ ಪೋಷಕರೆ ಕೊಂದಿದ್ದಾರೆ ಎಂದಿದ್ದಾನೆ. ಹಲವರು ಇದನ್ನು ಮರ್ಯಾದಹೀನ ಹತ್ಯೆ ಎಂದು ಕರೆದಿದ್ದಾರೆ. ಕುಟುಂಬಕ್ಕೆ ಹಣ ನೀಡಲಾಗಿದೆ ಎಂದು ಇಡಿ ತನಿಖೆ ನಡೆಸುತ್ತಿದೆ. ಇತರ ಕೆಲ ಸಂಘಟನೆಗಳ ಮೇಲೆ ಪೊಲೀಸರು ಗೂಬೆ ಕೂರಿಸುತ್ತಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಬಲಿಪಶು ಮಾಡುತ್ತಿರುವ ಹುನ್ನಾರದ ಹಿನ್ನೆಲೆಯಲ್ಲಿ ಸಿಜೆಪಿ ಸುಪ್ರೀಂನಲ್ಲಿ ಸಲ್ಲಿಸಿದ ಅರ್ಜಿಗೆ ಮಹತ್ವ ಬಂದಿದೆ.

ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವಲ್ಲಿ ನ್ಯಾಯಾಂಗದಲ್ಲಿ ಮತ್ತು ನ್ಯಾಯಾಂಗದ ಹೊರಗೆ ಹೋರಾಟ ನಡೆಸುತ್ತಿರುವ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಯು ಹತ್ರಾಸ್ ಘಟನೆಯಲ್ಲಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯಕ್ಕಾಗಿ ವಕೀಲರಾದ ಅಪರ್ಣ ಭಟ್‌ರವರ ಮೂಲಕ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹೇಳಿದ್ದಾರೆ. ಆಕೆ ಆರೋಪಿಯೊಂದಿಗೆ ಫೋನ್ ಸಂಪರ್ಕದಲ್ಲಿದ್ದಳು ಎಂದು ಮತ್ತೊಬ್ಬ ಪೊಲೀಸ್ ಹೇಳಿದ್ದಾರೆ. “ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಆ ಮಟ್ಟದ ಅಧಿಕಾರಿಯೊಬ್ಬರು ಈ ರೀತಿ ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿರುವುದು ಆತಂಕಕಾರಿಯಾಗಿದೆ ಮತ್ತು ಇದು ಫಲಿತಾಂಶದ ಮೇಲೆ ಪ್ರಭಾವ ಬೀರುತ್ತದೆ. ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಅತ್ಯಂತ ಸೂಕ್ಷ್ಮತೆಯಿಂದ ನಿರ್ವಹಿಸಬೇಕಾಗಿದೆ ಎಂದು ಈ ಮಾನ್ಯ ನ್ಯಾಯಾಲಯವು ಪದೇ ಪದೇ ಹೇಳಿದಾಗ್ಯೂ, ಈ ರೀತಿಯ ಸಂತ್ರಸ್ತೆಯ ವಿರುದ್ಧದ ಲಜ್ಜೆಗೆಟ್ಟ ಹೇಳಿಕೆಗಳು ಹೊರಬರುತ್ತಿವೆ. ಇದನ್ನು ಸುಪ್ರೀಂ ಕೋರ್ಟ್ ಪರೀಶಿಲಿಸಬೇಕು” ಎಂದು ಸಿಜೆಪಿಯ ಅರ್ಜಿಯಲ್ಲಿ ತಿಳಿಸಿದೆ.

ಇನ್ನು ಈ ಪ್ರಕರಣದಲ್ಲಿ ಸಂತ್ರಸ್ತೆಯ ಶವವನ್ನು ಕುಟುಂಬಕ್ಕೆ ಏಕೆ ನೀಡಲಾಗಿಲ್ಲ? ಪೊಲೀಸರು ಮಧ್ಯರಾತ್ರಿ ಏಕೆ ಪೆಟ್ರೋಲ್ ಹಾಕಿ ಸುಟ್ಟರು? ಇಲ್ಲಿ ಆ ಕುಟುಂಬದ ಹಕ್ಕು ಚ್ಯುತಿಯಾಗಿದೆ. ಕುಟುಂಬವು ಐತಿಹಾಸಿಕವಾಗಿ ತುಳಿತಕ್ಕೊಳಗಾದ ದಲಿತ ಸಮುದಾಯದಕ್ಕೆ ಸೇರಿದ್ದು ಅವರಿಗೆ ಬಲಾಢ್ಯ ಬಹುಸಂಖ್ಯಾತರಾದ ಠಾಕೂರರು ದಿನನಿತ್ಯ ಬೆದರಿಕೆ ಹಾಕುತ್ತಿದ್ದಾರೆ. ಹಲವಾರು ‘ಮೇಲ್ಜಾತಿ’ ಗುಂಪುಗಳು ಸಭೆ ಸೇರಿ ತಮ್ಮ ಪರವಾದ ನಿರೂಪಣೆಯನ್ನು ಹರಿಯಬಿಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕುಟುಂಬದ ಸುರಕ್ಷತೆಯೂ ಸಹ ಮಹತ್ವದ್ದಾಗಿದೆ. ಜೊತೆಗೆ ಪ್ರಕರಣದ ಮತ್ತೊಂದು ಪ್ರಮುಖ ಅಂಶವೆಂದರೆ ಸಾಕ್ಷಿ ರಕ್ಷಣೆ. ಇದಕ್ಕಾಗಿ ಯುಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಿಜೆಪಿ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ಸಂತ್ರಸ್ತ ಕುಟುಂಬದ ನಾರ್ಕೊ ಅನಾಲಿಸಿಸ್ ಪರೀಕ್ಷೆ ಮಾಡಿಸಲು ಯುಪಿ ಸರ್ಕಾರ ಮುಂದಾಗಿದ್ದು ಏಕೆ? ಸಂತ್ರಸ್ತ ಯುವತಿ ಸಾವಿನ ಮುನ್ನ ನೀಡಿದ ಹೇಳಿಕೆಗೆ ಬೆಲೆಯಿಲ್ಲವೇ?
ಅತ್ಯಾಚಾರ ಪ್ರಕರಣಗಳಲ್ಲಿ ವಿಧಿವಿಜ್ಞಾನ ವರದಿಗಳು ಮತ್ತು ಇತರ ವೈದ್ಯಕೀಯ ಸಾಕ್ಷ್ಯಗಳ ಪ್ರಸ್ತುತತೆ ಏನು? ಪುರಾವೆಗಳನ್ನು ಸಂರಕ್ಷಿಸುವುದು ರಾಜ್ಯದ ಕರ್ತವ್ಯವಲ್ಲವೇ? ಮಹಿಳೆಯರ ಮೇಲಿನ ಅಪರಾಧಗಳು ಮತ್ತು ದಲಿತರ ವಿರುದ್ಧದ ಅಪರಾಧಗಳ ಬಗ್ಗೆ ಎನ್‌ಸಿಆರ್‌ಬಿ ದತ್ತಾಂಶಗಳ ಹಿನ್ನೆಲೆಯಲ್ಲಿ ತನಿಖೆಯ ವರ್ಗಾವಣೆ ಆಗಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಸಿಜೆಪಿ ಮೂರು ಪ್ರಮುಖ ವಿಷಯಗಳ ಬಗ್ಗೆ ತನ್ನ ಹಕ್ಕೊತ್ತಾಯ ಮಂಡಿಸಿದೆ.

  1. ಅತ್ಯಾಚಾರ, ಹತ್ಯೆಯ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ನಡೆಸಬೇಕು.
  2. ಕೇಂದ್ರ ಅರೆಸೈನಿಕ ಪಡೆಗಳಿಂದ ಸಾಕ್ಷಿಗಳಿಗೆ ಮತ್ತು ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು.
  3. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ, ಕುಟುಂಬದ ಒಪ್ಪಿಗೆಯಿಲ್ಲದೆ ಸಂತ್ರಸ್ತೆಯ ಶವವನ್ನು ಮಧ್ಯರಾತ್ರಿಯಲ್ಲಿ ಸುಟ್ಟಿದ್ದರ ಬಗ್ಗೆ ನ್ಯಾಯಾಂಗ ವಿಚಾರಣೆ ನಡೆಸಬೇಕು.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...