Homeಮುಖಪುಟಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಸುಪ್ರೀಂ ನೇತೃತ್ವದಲ್ಲಿ ಸಿಬಿಐ ತನಿಖೆ, ಸಾಕ್ಷಿಗಳ ರಕ್ಷಣೆ ಮತ್ತು ಸಂತ್ರಸ್ತೆಯ ಶವ ದಹನದ ಬಗ್ಗೆ ನ್ಯಾಯಾಂಗ ವಿಚಾರಣೆಗಾಗಿ ಸಿಜೆಪಿ ಮನವಿ ಮಾಡಿದೆ.

- Advertisement -
- Advertisement -

ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಸಂಘಟನೆಯು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು (ಐಎ) ಸಲ್ಲಿಸಿದೆ.

ಇಡೀ ಉತ್ತರ ಪ್ರದೇಶ ಸರ್ಕಾರವೇ ಸಂತ್ರಸ್ತ ಕುಟುಂಬದ ವಿರುದ್ಧವಿದೆ. ಅತ್ಯಾಚಾರವೇ ನಡೆದಿಲ್ಲ ಎಂದು ಹಲವರು ಹೇಳುತ್ತಿದ್ದಾರೆ. ಆರೋಪಿಯೊಬ್ಬ ಪೊಲೀಸರಿಗೆ ಪತ್ರ ಬರೆದು ಆಕೆಯೊಂದಿಗೆ ನನಗೆ ಸಂಬಂಧವಿತ್ತು, ಅವರ ಪೋಷಕರೆ ಕೊಂದಿದ್ದಾರೆ ಎಂದಿದ್ದಾನೆ. ಹಲವರು ಇದನ್ನು ಮರ್ಯಾದಹೀನ ಹತ್ಯೆ ಎಂದು ಕರೆದಿದ್ದಾರೆ. ಕುಟುಂಬಕ್ಕೆ ಹಣ ನೀಡಲಾಗಿದೆ ಎಂದು ಇಡಿ ತನಿಖೆ ನಡೆಸುತ್ತಿದೆ. ಇತರ ಕೆಲ ಸಂಘಟನೆಗಳ ಮೇಲೆ ಪೊಲೀಸರು ಗೂಬೆ ಕೂರಿಸುತ್ತಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಬಲಿಪಶು ಮಾಡುತ್ತಿರುವ ಹುನ್ನಾರದ ಹಿನ್ನೆಲೆಯಲ್ಲಿ ಸಿಜೆಪಿ ಸುಪ್ರೀಂನಲ್ಲಿ ಸಲ್ಲಿಸಿದ ಅರ್ಜಿಗೆ ಮಹತ್ವ ಬಂದಿದೆ.

ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವಲ್ಲಿ ನ್ಯಾಯಾಂಗದಲ್ಲಿ ಮತ್ತು ನ್ಯಾಯಾಂಗದ ಹೊರಗೆ ಹೋರಾಟ ನಡೆಸುತ್ತಿರುವ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಯು ಹತ್ರಾಸ್ ಘಟನೆಯಲ್ಲಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯಕ್ಕಾಗಿ ವಕೀಲರಾದ ಅಪರ್ಣ ಭಟ್‌ರವರ ಮೂಲಕ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹೇಳಿದ್ದಾರೆ. ಆಕೆ ಆರೋಪಿಯೊಂದಿಗೆ ಫೋನ್ ಸಂಪರ್ಕದಲ್ಲಿದ್ದಳು ಎಂದು ಮತ್ತೊಬ್ಬ ಪೊಲೀಸ್ ಹೇಳಿದ್ದಾರೆ. “ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಆ ಮಟ್ಟದ ಅಧಿಕಾರಿಯೊಬ್ಬರು ಈ ರೀತಿ ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿರುವುದು ಆತಂಕಕಾರಿಯಾಗಿದೆ ಮತ್ತು ಇದು ಫಲಿತಾಂಶದ ಮೇಲೆ ಪ್ರಭಾವ ಬೀರುತ್ತದೆ. ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಅತ್ಯಂತ ಸೂಕ್ಷ್ಮತೆಯಿಂದ ನಿರ್ವಹಿಸಬೇಕಾಗಿದೆ ಎಂದು ಈ ಮಾನ್ಯ ನ್ಯಾಯಾಲಯವು ಪದೇ ಪದೇ ಹೇಳಿದಾಗ್ಯೂ, ಈ ರೀತಿಯ ಸಂತ್ರಸ್ತೆಯ ವಿರುದ್ಧದ ಲಜ್ಜೆಗೆಟ್ಟ ಹೇಳಿಕೆಗಳು ಹೊರಬರುತ್ತಿವೆ. ಇದನ್ನು ಸುಪ್ರೀಂ ಕೋರ್ಟ್ ಪರೀಶಿಲಿಸಬೇಕು” ಎಂದು ಸಿಜೆಪಿಯ ಅರ್ಜಿಯಲ್ಲಿ ತಿಳಿಸಿದೆ.

ಇನ್ನು ಈ ಪ್ರಕರಣದಲ್ಲಿ ಸಂತ್ರಸ್ತೆಯ ಶವವನ್ನು ಕುಟುಂಬಕ್ಕೆ ಏಕೆ ನೀಡಲಾಗಿಲ್ಲ? ಪೊಲೀಸರು ಮಧ್ಯರಾತ್ರಿ ಏಕೆ ಪೆಟ್ರೋಲ್ ಹಾಕಿ ಸುಟ್ಟರು? ಇಲ್ಲಿ ಆ ಕುಟುಂಬದ ಹಕ್ಕು ಚ್ಯುತಿಯಾಗಿದೆ. ಕುಟುಂಬವು ಐತಿಹಾಸಿಕವಾಗಿ ತುಳಿತಕ್ಕೊಳಗಾದ ದಲಿತ ಸಮುದಾಯದಕ್ಕೆ ಸೇರಿದ್ದು ಅವರಿಗೆ ಬಲಾಢ್ಯ ಬಹುಸಂಖ್ಯಾತರಾದ ಠಾಕೂರರು ದಿನನಿತ್ಯ ಬೆದರಿಕೆ ಹಾಕುತ್ತಿದ್ದಾರೆ. ಹಲವಾರು ‘ಮೇಲ್ಜಾತಿ’ ಗುಂಪುಗಳು ಸಭೆ ಸೇರಿ ತಮ್ಮ ಪರವಾದ ನಿರೂಪಣೆಯನ್ನು ಹರಿಯಬಿಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕುಟುಂಬದ ಸುರಕ್ಷತೆಯೂ ಸಹ ಮಹತ್ವದ್ದಾಗಿದೆ. ಜೊತೆಗೆ ಪ್ರಕರಣದ ಮತ್ತೊಂದು ಪ್ರಮುಖ ಅಂಶವೆಂದರೆ ಸಾಕ್ಷಿ ರಕ್ಷಣೆ. ಇದಕ್ಕಾಗಿ ಯುಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಿಜೆಪಿ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ಸಂತ್ರಸ್ತ ಕುಟುಂಬದ ನಾರ್ಕೊ ಅನಾಲಿಸಿಸ್ ಪರೀಕ್ಷೆ ಮಾಡಿಸಲು ಯುಪಿ ಸರ್ಕಾರ ಮುಂದಾಗಿದ್ದು ಏಕೆ? ಸಂತ್ರಸ್ತ ಯುವತಿ ಸಾವಿನ ಮುನ್ನ ನೀಡಿದ ಹೇಳಿಕೆಗೆ ಬೆಲೆಯಿಲ್ಲವೇ?
ಅತ್ಯಾಚಾರ ಪ್ರಕರಣಗಳಲ್ಲಿ ವಿಧಿವಿಜ್ಞಾನ ವರದಿಗಳು ಮತ್ತು ಇತರ ವೈದ್ಯಕೀಯ ಸಾಕ್ಷ್ಯಗಳ ಪ್ರಸ್ತುತತೆ ಏನು? ಪುರಾವೆಗಳನ್ನು ಸಂರಕ್ಷಿಸುವುದು ರಾಜ್ಯದ ಕರ್ತವ್ಯವಲ್ಲವೇ? ಮಹಿಳೆಯರ ಮೇಲಿನ ಅಪರಾಧಗಳು ಮತ್ತು ದಲಿತರ ವಿರುದ್ಧದ ಅಪರಾಧಗಳ ಬಗ್ಗೆ ಎನ್‌ಸಿಆರ್‌ಬಿ ದತ್ತಾಂಶಗಳ ಹಿನ್ನೆಲೆಯಲ್ಲಿ ತನಿಖೆಯ ವರ್ಗಾವಣೆ ಆಗಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಸಿಜೆಪಿ ಮೂರು ಪ್ರಮುಖ ವಿಷಯಗಳ ಬಗ್ಗೆ ತನ್ನ ಹಕ್ಕೊತ್ತಾಯ ಮಂಡಿಸಿದೆ.

  1. ಅತ್ಯಾಚಾರ, ಹತ್ಯೆಯ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ನಡೆಸಬೇಕು.
  2. ಕೇಂದ್ರ ಅರೆಸೈನಿಕ ಪಡೆಗಳಿಂದ ಸಾಕ್ಷಿಗಳಿಗೆ ಮತ್ತು ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು.
  3. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ, ಕುಟುಂಬದ ಒಪ್ಪಿಗೆಯಿಲ್ಲದೆ ಸಂತ್ರಸ್ತೆಯ ಶವವನ್ನು ಮಧ್ಯರಾತ್ರಿಯಲ್ಲಿ ಸುಟ್ಟಿದ್ದರ ಬಗ್ಗೆ ನ್ಯಾಯಾಂಗ ವಿಚಾರಣೆ ನಡೆಸಬೇಕು.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...