Homeಮುಖಪುಟಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಸುಪ್ರೀಂ ನೇತೃತ್ವದಲ್ಲಿ ಸಿಬಿಐ ತನಿಖೆ, ಸಾಕ್ಷಿಗಳ ರಕ್ಷಣೆ ಮತ್ತು ಸಂತ್ರಸ್ತೆಯ ಶವ ದಹನದ ಬಗ್ಗೆ ನ್ಯಾಯಾಂಗ ವಿಚಾರಣೆಗಾಗಿ ಸಿಜೆಪಿ ಮನವಿ ಮಾಡಿದೆ.

- Advertisement -
- Advertisement -

ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಸಂಘಟನೆಯು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು (ಐಎ) ಸಲ್ಲಿಸಿದೆ.

ಇಡೀ ಉತ್ತರ ಪ್ರದೇಶ ಸರ್ಕಾರವೇ ಸಂತ್ರಸ್ತ ಕುಟುಂಬದ ವಿರುದ್ಧವಿದೆ. ಅತ್ಯಾಚಾರವೇ ನಡೆದಿಲ್ಲ ಎಂದು ಹಲವರು ಹೇಳುತ್ತಿದ್ದಾರೆ. ಆರೋಪಿಯೊಬ್ಬ ಪೊಲೀಸರಿಗೆ ಪತ್ರ ಬರೆದು ಆಕೆಯೊಂದಿಗೆ ನನಗೆ ಸಂಬಂಧವಿತ್ತು, ಅವರ ಪೋಷಕರೆ ಕೊಂದಿದ್ದಾರೆ ಎಂದಿದ್ದಾನೆ. ಹಲವರು ಇದನ್ನು ಮರ್ಯಾದಹೀನ ಹತ್ಯೆ ಎಂದು ಕರೆದಿದ್ದಾರೆ. ಕುಟುಂಬಕ್ಕೆ ಹಣ ನೀಡಲಾಗಿದೆ ಎಂದು ಇಡಿ ತನಿಖೆ ನಡೆಸುತ್ತಿದೆ. ಇತರ ಕೆಲ ಸಂಘಟನೆಗಳ ಮೇಲೆ ಪೊಲೀಸರು ಗೂಬೆ ಕೂರಿಸುತ್ತಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಬಲಿಪಶು ಮಾಡುತ್ತಿರುವ ಹುನ್ನಾರದ ಹಿನ್ನೆಲೆಯಲ್ಲಿ ಸಿಜೆಪಿ ಸುಪ್ರೀಂನಲ್ಲಿ ಸಲ್ಲಿಸಿದ ಅರ್ಜಿಗೆ ಮಹತ್ವ ಬಂದಿದೆ.

ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವಲ್ಲಿ ನ್ಯಾಯಾಂಗದಲ್ಲಿ ಮತ್ತು ನ್ಯಾಯಾಂಗದ ಹೊರಗೆ ಹೋರಾಟ ನಡೆಸುತ್ತಿರುವ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಯು ಹತ್ರಾಸ್ ಘಟನೆಯಲ್ಲಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯಕ್ಕಾಗಿ ವಕೀಲರಾದ ಅಪರ್ಣ ಭಟ್‌ರವರ ಮೂಲಕ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹೇಳಿದ್ದಾರೆ. ಆಕೆ ಆರೋಪಿಯೊಂದಿಗೆ ಫೋನ್ ಸಂಪರ್ಕದಲ್ಲಿದ್ದಳು ಎಂದು ಮತ್ತೊಬ್ಬ ಪೊಲೀಸ್ ಹೇಳಿದ್ದಾರೆ. “ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಆ ಮಟ್ಟದ ಅಧಿಕಾರಿಯೊಬ್ಬರು ಈ ರೀತಿ ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿರುವುದು ಆತಂಕಕಾರಿಯಾಗಿದೆ ಮತ್ತು ಇದು ಫಲಿತಾಂಶದ ಮೇಲೆ ಪ್ರಭಾವ ಬೀರುತ್ತದೆ. ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಅತ್ಯಂತ ಸೂಕ್ಷ್ಮತೆಯಿಂದ ನಿರ್ವಹಿಸಬೇಕಾಗಿದೆ ಎಂದು ಈ ಮಾನ್ಯ ನ್ಯಾಯಾಲಯವು ಪದೇ ಪದೇ ಹೇಳಿದಾಗ್ಯೂ, ಈ ರೀತಿಯ ಸಂತ್ರಸ್ತೆಯ ವಿರುದ್ಧದ ಲಜ್ಜೆಗೆಟ್ಟ ಹೇಳಿಕೆಗಳು ಹೊರಬರುತ್ತಿವೆ. ಇದನ್ನು ಸುಪ್ರೀಂ ಕೋರ್ಟ್ ಪರೀಶಿಲಿಸಬೇಕು” ಎಂದು ಸಿಜೆಪಿಯ ಅರ್ಜಿಯಲ್ಲಿ ತಿಳಿಸಿದೆ.

ಇನ್ನು ಈ ಪ್ರಕರಣದಲ್ಲಿ ಸಂತ್ರಸ್ತೆಯ ಶವವನ್ನು ಕುಟುಂಬಕ್ಕೆ ಏಕೆ ನೀಡಲಾಗಿಲ್ಲ? ಪೊಲೀಸರು ಮಧ್ಯರಾತ್ರಿ ಏಕೆ ಪೆಟ್ರೋಲ್ ಹಾಕಿ ಸುಟ್ಟರು? ಇಲ್ಲಿ ಆ ಕುಟುಂಬದ ಹಕ್ಕು ಚ್ಯುತಿಯಾಗಿದೆ. ಕುಟುಂಬವು ಐತಿಹಾಸಿಕವಾಗಿ ತುಳಿತಕ್ಕೊಳಗಾದ ದಲಿತ ಸಮುದಾಯದಕ್ಕೆ ಸೇರಿದ್ದು ಅವರಿಗೆ ಬಲಾಢ್ಯ ಬಹುಸಂಖ್ಯಾತರಾದ ಠಾಕೂರರು ದಿನನಿತ್ಯ ಬೆದರಿಕೆ ಹಾಕುತ್ತಿದ್ದಾರೆ. ಹಲವಾರು ‘ಮೇಲ್ಜಾತಿ’ ಗುಂಪುಗಳು ಸಭೆ ಸೇರಿ ತಮ್ಮ ಪರವಾದ ನಿರೂಪಣೆಯನ್ನು ಹರಿಯಬಿಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕುಟುಂಬದ ಸುರಕ್ಷತೆಯೂ ಸಹ ಮಹತ್ವದ್ದಾಗಿದೆ. ಜೊತೆಗೆ ಪ್ರಕರಣದ ಮತ್ತೊಂದು ಪ್ರಮುಖ ಅಂಶವೆಂದರೆ ಸಾಕ್ಷಿ ರಕ್ಷಣೆ. ಇದಕ್ಕಾಗಿ ಯುಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಿಜೆಪಿ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ಸಂತ್ರಸ್ತ ಕುಟುಂಬದ ನಾರ್ಕೊ ಅನಾಲಿಸಿಸ್ ಪರೀಕ್ಷೆ ಮಾಡಿಸಲು ಯುಪಿ ಸರ್ಕಾರ ಮುಂದಾಗಿದ್ದು ಏಕೆ? ಸಂತ್ರಸ್ತ ಯುವತಿ ಸಾವಿನ ಮುನ್ನ ನೀಡಿದ ಹೇಳಿಕೆಗೆ ಬೆಲೆಯಿಲ್ಲವೇ?
ಅತ್ಯಾಚಾರ ಪ್ರಕರಣಗಳಲ್ಲಿ ವಿಧಿವಿಜ್ಞಾನ ವರದಿಗಳು ಮತ್ತು ಇತರ ವೈದ್ಯಕೀಯ ಸಾಕ್ಷ್ಯಗಳ ಪ್ರಸ್ತುತತೆ ಏನು? ಪುರಾವೆಗಳನ್ನು ಸಂರಕ್ಷಿಸುವುದು ರಾಜ್ಯದ ಕರ್ತವ್ಯವಲ್ಲವೇ? ಮಹಿಳೆಯರ ಮೇಲಿನ ಅಪರಾಧಗಳು ಮತ್ತು ದಲಿತರ ವಿರುದ್ಧದ ಅಪರಾಧಗಳ ಬಗ್ಗೆ ಎನ್‌ಸಿಆರ್‌ಬಿ ದತ್ತಾಂಶಗಳ ಹಿನ್ನೆಲೆಯಲ್ಲಿ ತನಿಖೆಯ ವರ್ಗಾವಣೆ ಆಗಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಸಿಜೆಪಿ ಮೂರು ಪ್ರಮುಖ ವಿಷಯಗಳ ಬಗ್ಗೆ ತನ್ನ ಹಕ್ಕೊತ್ತಾಯ ಮಂಡಿಸಿದೆ.

  1. ಅತ್ಯಾಚಾರ, ಹತ್ಯೆಯ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ನಡೆಸಬೇಕು.
  2. ಕೇಂದ್ರ ಅರೆಸೈನಿಕ ಪಡೆಗಳಿಂದ ಸಾಕ್ಷಿಗಳಿಗೆ ಮತ್ತು ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು.
  3. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ, ಕುಟುಂಬದ ಒಪ್ಪಿಗೆಯಿಲ್ಲದೆ ಸಂತ್ರಸ್ತೆಯ ಶವವನ್ನು ಮಧ್ಯರಾತ್ರಿಯಲ್ಲಿ ಸುಟ್ಟಿದ್ದರ ಬಗ್ಗೆ ನ್ಯಾಯಾಂಗ ವಿಚಾರಣೆ ನಡೆಸಬೇಕು.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...