Homeಕರ್ನಾಟಕನಾಗಮೋಹನ ದಾಸ್‌ರವರ ’ರೈತರ ಭದ್ರತೆ, ದೇಶದ ಭದ್ರತೆ’ ಪುಸ್ತಕ ಬಿಡುಗಡೆ-ವಿಚಾರ ಗೋಷ್ಠಿ

ನಾಗಮೋಹನ ದಾಸ್‌ರವರ ’ರೈತರ ಭದ್ರತೆ, ದೇಶದ ಭದ್ರತೆ’ ಪುಸ್ತಕ ಬಿಡುಗಡೆ-ವಿಚಾರ ಗೋಷ್ಠಿ

ಪರಿಸರ ತಜ್ಞರಾದ ಡಾ. ಅ.ನಾ. ಯಲ್ಲಪ್ಪ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.

- Advertisement -
- Advertisement -

ಜನಪ್ರಕಾಶನ ಪ್ರಕಟಿಸುತ್ತಿರುವ ಕರ್ನಾಟಕ ಹೈಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಹೆಚ್‌‌. ಎನ್‌. ನಾಗಮೋಹನ ದಾಸ್‌ ಅವರು ಬರೆದಿರುವ ’ರೈತರ ಭದ್ರತೆ ದೇಶದ ಭದ್ರತೆ’ ಪುಸ್ತಕ ಬಿಡುಗಡೆ ಹಾಗೂ ವಿಚಾರ ಗೋಷ್ಠಿ ಸೆಪ್ಟೆಂಬರ್‌ 13 ರ ಭಾನುವಾರ 11 ಗಂಟೆಗೆ ಬೆಂಗಳೂರಿನ ಕುಮಾರ ಕೃಪ ರಸ್ತೆಯ ಗಾಂಧಿ ಭವನದಲ್ಲಿ ನಡೆಯಲಿದೆ.

ಪರಿಸರ ತಜ್ಞರಾದ ಡಾ. ಅ.ನಾ. ಯಲ್ಲಪ್ಪ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ವಿಚಾರ ಗೋಷ್ಠಿಯಲ್ಲಿ ಪುಸ್ತಕದ ಲೇಖಕರಾದ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರು ವಿಚಾರ ಮಂಡನೆ ಮಾಡಲಿದ್ದಾರೆ.

ಇದನ್ನೂ ಓದಿ: ಸಂವಿಧಾನದ ಮುನ್ನುಡಿಯಿಂದ ’ಸಮಾಜವಾದಿ’ ಪದವನ್ನು ಕಿತ್ತೊಗೆಯುವ ನಿರ್ಣಯ ಮಂಡನೆಗೆ ಬಿಜೆಪಿ ಸಜ್ಜು

ಮುಖ್ಯ ಅಥಿತಿಗಳಾಗಿ ಕರ್ನಾಟಕ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾದ ಎಸ್‌. ಆರ್‌. ಪಾಟಿಲ್‌ ಮತ್ತು ಮಾಜಿ ಮುಖ್ಯಮಂತ್ರಿಯಾದ ಹೆಚ್‌.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಅವರು ಸ್ವಾಗತ ಮಾಡಿಲಿದ್ದು, ಪ್ರಸ್ತಾವನೆಯನ್ನು ಕೃಷಿ ಆರ್ಥಿಕ ತಜ್ಞರಾದ ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳೇ ಸಂದೇಶವಾದರೆ ಸಂವಿಧಾನದ ಆಶಯಗಳೇ ಪತನ!

ರಾಜ್ಯ ಕಬ್ಬು ಬೆಳೆಗಾರರ ಸಂಘದ ಕುರುಬೂರು ಶಾಂತಕುಮಾರ್‌, ದಲಿತ ಸಂಘರ್ಷ ಸಮಿತಿಯ ಗುರುಪ್ರಸಾದ್‌ ಕೆರಗೋಡು, ರಾಜ್ಯ ಪ್ರಾಂತ್ಯ ರೈತ ಸಂಘದ ಬಯ್ಯಾರೆಡ್ಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ)ದ ಮಾವಳ್ಳಿ ಶಂಕರ್‌, “ನಮ್ಮೂರ ಭೂಮಿ ನಮಗಿರಲಿ’ ಅಭಿಯಾನದ ವಿ. ಗಾಯತ್ರಿ, ಗ್ರಾಮೀಣ ಕೂಲಿಕಾರರ ಸಂಘಟನೆಯ ಸ್ವರ್ಣ ಭಟ್‌, ಸೆಂಟರ್‌ ಫಾರ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌‌ನ ಮೀನಾಕ್ಷಿ ಸುಂದರಂ ವಿಚಾರ ಮಂಡನೆಗೆ ಪ್ರತಿಕ್ರಿಯೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕಡಿದಾಳು ಶಾಮಣ್ಣ, ಡಾ. ವಿಜಯಮ್ಮ, ಮೈಕೆಲ್‌ ಬಿ ಫರ್ನಾಂಡಿಸ್‌, ಬಿ.ಆರ್‌ ಪಾಟೀಲ್‌, ಚಾಮರಸ ಮಾಲಿಪಾಟೀಲ್‌, ಲಕ್ಷ್ಮೀನಾರಾಯಣ ನಾಗವಾರ, ವಿ. ನಾಗರಾಜ್‌, ಎಂ. ಶಿವಪ್ರಕಾಶ್‌, ನಂದಿನಿ ಜಯರಾಮ್‌, ಬಿ. ರಾಜಶೇಖರ ಮೂರ್ತಿ, ಯಶೋದಮ್ಮ, ಟಿ. ಯಶವಂತ್‌, ಶಾರದ ಗೋಪಾಲ್‌, ನಾಗರತ್ನಮ್ಮ ಬಿ. ಪಾಟೀಲ್‌, ಚಂದ್ರಶೇಖರ ಮೇಟಿ, ವಿನಯ್‌ ಶ್ರೀನಿವಾಸ್‌ ಮುಂತಾದವರು ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮವನ್ನು ಕರ್ನಾಟಕದ ರೈತ, ದಲಿತ, ಕಾರ್ಮಿಕ ಚಳುವಳಿಗಳು ಮತ್ತು ಪ್ರಗತಿಪರ
ಸಂಘಟನೆಗಳ ಐಕ್ಯ ಹೋರಾಟ ವೇದಿಕೆ ಆಯೋಜಿಸಿದೆ.


ಇದನ್ನೂ ಓದಿ: ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...